Homeಕರ್ನಾಟಕಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ನಮ್ಮನ್ನು ಶೂನ್ಯಕ್ಕೆ ತಂದಿದ್ದೀರಿ, ಆದರೆ ನಾವು ಖಂಡಿತವಾಗಿಯು ಎದೆಗುಂದುದಿಲ್ಲ. ನಾವು ಮತ್ತೇ ಬೆಳೆಯುತ್ತೇವೆ, ಹೋರಾಟ ಮುಂದುವರೆಯುತ್ತದೆ ಎಂದು ಚಾನೆಲ್‌ನ ಪ್ರಿನ್ಸಿಪಲ್‌ ಎಡಿಟರ್‌ ರಹಮಾನ್ ಹಾಸನ್ ಹೇಳಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಪುತ್ರ ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಕಳೆದ ಹಲವು ದಿನಗಳಿಂದ ದಾಖಲೆ ಸಹಿತ ಸತತವಾಗಿ ವರದಿ ಮಾಡಿ ರಾಜ್ಯದ ಗಮನ ಸೆಳೆದಿದ್ದ ಕನ್ನಡದ ಸುದ್ದಿ ಮಾಧ್ಯಮ “ಪವರ್‌ ಟಿವಿ”ಯ ಪ್ರಸಾರವನ್ನು ತಡೆಹಿಡಿಯಲಾಗಿದೆ ಎಂದು ಮಾಧ್ಯಮದ ಪ್ರಿನ್ಸಿಪಲ್ ಎಡಿಟರ್‌ ರಹಮಾನ್ ಹಾಸನ್ ಹೇಳಿದ್ದಾರೆ.

ನಿನ್ನೆ ರಾತ್ರಿ 10:45 ಕ್ಕೆ ತಮ್ಮ ಫೇಸ್‌‌ಬುಕ್ ಖಾತೆಯಿಂದ ಲೈವ್‌ ಮೂಲಕ ಮಾತನಾಡಿದ ರಹಮಾನ್ ಹಾಸನ್, “ಸಿಸಿಬಿ ಪೊಲೀಸರು ಕೇಸಿಗೆ ಸಂಬಂಧಪಟ್ಟಂತೆ ಸರ್ಚ್ ವಾರೆಂಟ್ ತಂದು ಪವರ್‌ ಟಿವಿ ಕಚೇರಿಯಲ್ಲಿ ಸರ್ಚ್ ಮಾಡಿದ್ದಾರೆ. ಅವರಿಗೆ ಬೇಕಾಗಿರುವ ಸಿಸ್ಟಂ, ಲ್ಯಾಪ್‌ಟಾಪ್‌, ಹಾರ್ಡ್‌ಡಿಸ್ಕ್‌ ಸಹಿತ ಎಲ್ಲಾ ದಾಖಲೆಗಳನ್ನು ಪಡೆದಿದ್ದಾರೆ, ಆದರೆ ಯಾಕೆ ಎಂದು ಗೊತ್ತಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಅಷ್ಟೇ ಅಲ್ಲದೆ ಪವರ್‌ ಟಿವಿಯ ಫೇಸ್‌ಬುಕ್ ಲೈವ್‌ ಕೂಡಾ ತಡೆಹಿಡಿಯಲಾಗಿದೆ. ಸುಮಾರು 250  ಉದ್ಯೋಗಿಗಳಿರುವ ಚಾನೆಲನ್ನು ತಡೆಹಿಡಿದಿದ್ದಾರೆ, ಎಲ್ಲರೂ ಬೀದಿಗೆ ಬಂದಿದ್ದಾರೆ ಎಂದು ಭಾವುಕರಾದ ರಹಮಾನ್, “ಇದು ಮಾಧ್ಯಮ ಲೋಕದಲ್ಲಿ ಕರಾಳ ದಿನ” ಎಂದು ಹೇಳಿದ್ದಾರೆ.

ಟಿವಿಯು ದಾಖಲೆಗಳನ್ನು ಇಟ್ಟುಕೊಂಡು ಸರ್ಕಾರದ ವಿರುದ್ದ ಧ್ವನಿ ಎತ್ತುತ್ತಿದೆ. ಅದಕ್ಕಾಗಿ ಚಾನೆಲ್ ಎಂ.ಡಿ ಮೇಲೆ ಕೇಸು ಹಾಕುವುದು ಹಾಗೂ ತನಿಖೆ ನಡೆಸುವುದು ನಿಮ್ಮ ಸ್ವಾತಂತ್ಯ್ರ, ಆದರೆ ಒಂದು ಸಂಸ್ಥೆಯನ್ನು ಕಟ್ಟುವುದು ತುಂಬಾ ಕಷ್ಟದ ಕೆಲಸ, ಈಗ ಎಲ್ಲರೂ ಬೀದಿಗೆ ಬಂದಿದ್ದೇವೆ. ಇದು ಸರಿಯಲ್ಲ ಯಡಿಯೂರಪ್ಪನವರೇ ಎಂದು ರಹಮಾನ್ ತಮ್ಮ ಫೇಸ್‌ಬುಕ್ ಲೈವ್‌ನಲ್ಲಿ ಹೇಳಿದ್ದಾರೆ.

“ಆದರೆ ನಮ್ಮ ಕೆಲಸ ಸತ್ಯಕ್ಕಾಗಿ ಧ್ವನಿ ಎತ್ತಿರುವಂತದ್ದು. ವಿಜಯೇಂದ್ರ ಅವರ ಭ್ರಷ್ಟಾಚಾರ ಸಂಬಂಧಪಟ್ಟಂತೆ ಮಾಡಿರುವ ವರದಿ ಮುಂದುವರೆಯುತ್ತದೆ. ನಮ್ಮ ಚಾನೆಲ್‌ ಅನ್ನು ನೀವು ಮುಗಿಸಿರಬಹುದು, ಫೇಸ್‌ಬುಕ್ ಖಾತೆಯನ್ನು ಮುಗಿಸಿರಬಹುದು. ಆದರೆ ನಮ್ಮದೆ ವೈಯಕ್ತಿಕ ಫೇಸ್‌ಬುಕ್‌ ಖಾತೆಗಳಿವೆ. ಅದನ್ನು ಮುಗಿಸಿದರೆ ನಾವು ಇನ್ನೊಂದು ಖಾತೆಯನ್ನು ತೆರೆಯುತ್ತೇವೆ ಆದರೆ ನಾವು ಸುಮ್ಮನಿರುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!

“ನಿಮ್ಮ ರಾಜಾಹುಲಿ ಎಂಬ ಬಿರುದು ನಾವು ಮಾಧ್ಯಮವೇ ಕೊಟ್ಟಿರುವುದು, ಆದರೆ ಇದು ರಾಜಾಹುಲಿ ಮಾಡುವ ಕೆಲಸವೇ ಯಡಿಯೂರಪ್ಪನವರೇ? ನಿಮ್ಮಲ್ಲಿ ಅಧಿಕಾರ ಇರಬಹುದು, ಪೊಲೀಸರು ಇರಬಹುದು. ನೀವು ಏನು ಬೇಕಾದರೂ ಮಾಡಬಹುದು ಅಲ್ಲವೆ” ಎಂದು ಪ್ರಶ್ನಿಸಿದ್ದಾರೆ.

“ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ದ ಸುದ್ದಿ ಮಾಡಬಾರದು ಎಂದು ಕೋರ್ಟ್‌ನಿಂದ ಇಂಜೆಕ್ಷನ್ ಬಂದಿದೆ. ಆದರೆ ನಾವು ಸುಖಾಸುಮ್ಮನೆ ಇಲ್ಲಸಲ್ಲದ ಸುದ್ದಿ ಮಾಡಿಲ್ಲ. ನಮ್ಮಲ್ಲಿ ಎಲ್ಲಾ ದಾಖಲೆ ಇದೆ. ಸಿಸಿಬಿ ತನಿಖೆಗೂ ನಾವು ಸಹಕಾರ ಕೊಟ್ಟಿದ್ದೇವೆ. ಆದರೆ ಚಾನೆಲ್ ಯಾಕೆ ಬಂದ್ ಮಾಡಿದ್ದೀರಿ” ಎಂದು ಮುಖ್ಯಮಂತ್ರಿಯವರಿಗೆ ಪ್ರಶ್ನಿಸಿದ್ದಾರೆ.

“ಇವತ್ತು ನಮ್ಮ ಚಾನೆಲನ್ನು ಮುಗಿಸಿದ್ದಾರೆ. ಮುಂದೊಂದು ದಿನ ಬೇರೆ ಚಾನೆಲ್‌ಗೂ ಇಂತಹ ಪರಿಸ್ಥಿತಿ ಬರಬಹುದು. ಇದು ಪತ್ರಕರ್ತರು ಒಗ್ಗಟ್ಟಾಗುವ ಸಮಯ ಇದು. ರಾಜ್ಯದಲ್ಲಿ ಬೇಕಾದಷ್ಟು ಚಾನೆಲ್ ಬೇರೆ ಬೇರೆ ಕಾರಣಗಳಿಗೆ ಮುಚ್ಚಿಹೋಗಿದೆ. ಆದರೆ ಇಂತಹ ಕಾರಕ್ಕೆ ಯಾವ ಚಾನೆಲ್‌ಗಳು ಕೂಡಾ ಮುಚ್ಚಿರಲಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

Posted by Rahman Hassan on Monday, September 28, 2020

“ನಾವು ಮಾಡಿರುವ ಕೆಲಸಕ್ಕೆ ನಮಗೆ ಹೆಮ್ಮೆಯಿದೆ. ಆದರೆ ಯಡಿಯೂರಪ್ಪನವರೆ ನಿಮ್ಮ ಕೆಲಸ ನಾಚಿಗೇಡು. ಒಂದು ಚಾನೆಲ್‌ ಅನ್ನು ಮುಚ್ಚಿಸುವಷ್ಟು ಕೆಳಹಂತಕ್ಕೆ ಹೋಗುತ್ತೀರಿ ಎಂದು ಭಾವಿಸಿರಲಿಲ್ಲ. ನಮ್ಮನ್ನು ಶೂನ್ಯಕ್ಕೆ ತಂದಿದ್ದೀರಿ, ಆದರೆ ನಾವು ಖಂಡಿತವಾಗಿಯು ಎದೆಗುಂದುದಿಲ್ಲ, ನಾವು ಮತ್ತೇ ಬೆಳೆಯುತ್ತೇವೆ” ಎಂದು ರಹಮಾನ್ ಹೇಳಿದ್ದಾರೆ.

“ನಮ್ಮ ಕಚೇರಿಗೆ ಬಂದಿದ್ದ ಸಿಸಿಬಿ ಪೊಲೀಸರು ದಾಖಲೆಗಳನ್ನು ಪಡೆದು ಕೊನೆಗೆ ಚಾನೆಲ್ ಸರ್ವರ್‌‌‌ನ್ನು ಕೂಡಾ ವಶಕ್ಕೆ ಪಡೆದರು. ನಾವು ಚಾನೆಲನ್ನು ಮುಚ್ಚಿಸಬೇಡಿ ಎಂದು ಎಷ್ಟೇ ಕೇಳಿಕೊಂಡರೂ ಸರ್ವರ್‌ ಸಿಸ್ಟಂ ಕೂಡಾ ಪಡೆದರು. ನಮಗೆ ನ್ಯಾಯಾಂಗದ ಮೇಲೆ ವಿಶ್ವಾಸವಿದೆ. ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ” ಎಂದು ರಹಮಾನ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈಯಿಂದ ಪಕ್ಷದ ಗೌರವ ಹಾಳಾಗುತ್ತಿದೆ, ಅವರ ವಿರುದ್ದ ಕ್ರಮ ಕೈಗೊಳ್ಳಿ: ಶಂಕರ್‌ ಬಿದರಿ

ವಿಡಿಯೋ ನೋಡಿ:

ರೈತ ಹೋರಾಟಕ್ಕೆ ಬೆಂಬಲ ನೀಡಿ ವಿದ್ಯಾರ್ಥಿ ನಾಯಕ ಸರೋವರ್ ಬೆಂಕಿಕೆರೆಯ ಕಿಡಿನುಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...