Homeಕರ್ನಾಟಕಸಿಎಂ ಪುತ್ರನ ವಿರುದ್ಧ ಸುದ್ದಿ ಮಾಡಿದ್ದಕ್ಕೆ ಸ್ಥಗಿತ: ನಾಳೆಯಿಂದ ಆನ್‌ ಏರ್‌ ಆಗಲಿದೆ ಪವರ್‌ ಟಿವಿ

ಸಿಎಂ ಪುತ್ರನ ವಿರುದ್ಧ ಸುದ್ದಿ ಮಾಡಿದ್ದಕ್ಕೆ ಸ್ಥಗಿತ: ನಾಳೆಯಿಂದ ಆನ್‌ ಏರ್‌ ಆಗಲಿದೆ ಪವರ್‌ ಟಿವಿ

ಸಿಸಿಬಿ ಪೊಲೀಸರು ಸರ್ವರ್ ತೆಗೆದುಕೊಂಡು ಹೋಗಿರುವುದರಿಂದ ಪ್ರಸಾರ ನಿಲ್ಲಿಸಲಾಗಿತ್ತು. ಈಗ ಹೊಸ ಸರ್ವರ್ ವ್ಯವಸ್ಥೆ ಆಗಿರುವುದರಿಂದ ನಾಳೆಯಿಂದ ಮತ್ತೆ ಚಾನೆಲ್ ಕಾರ್ಯಾರಂಭವಾಗಲಿದೆ. ಇದು ನ್ಯಾಯಕ್ಕೆ ಸಿಕ್ಕ ಗೆಲುವು ಎಂದು ಉದ್ಯೋಗಿಗಳು ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಪುತ್ರ ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಆರೋಪಿಸಿ ದಾಖಲೆ ಸಹಿತ ವರದಿ ಮಾಡಿದ್ದಕ್ಕೆ ಸ್ಥಗಿತಗೊಂಡಿದ್ದ ಕನ್ನಡದ ಸುದ್ದಿ ಮಾಧ್ಯಮ ಪವರ್‌ ಟಿವಿ ನಾಳೆಯಿಂದ ಮತ್ತೆ ಕಾರ್ಯರಂಭ ಮಾಡಲಿದೆ.

ಸಿಎಂ ಪುತ್ರನ ಭ್ರಷ್ಟಾಚಾರ ಬಯಲು ಮಾಡಿದ ಕಾರಣ ರಾಜ್ಯ ಸರ್ಕಾರ ದ್ವೇಷ ರಾಜಕೀಯ ಮಾಡಿ ನಮ್ಮ ಸಂಸ್ಥೆಯನ್ನು ಮುಚ್ಚಿಸುವ ಹುನ್ನಾರ ಮಾಡಲಾಗುತ್ತಿದೆ ಎಂದು ಪವರ್ ಟಿವಿ ಆರೋಪಿಸಿತ್ತು.

ಸೆ.28ರಂದು ಕನ್ನಡದ ಸುದ್ದಿ ಮಾಧ್ಯಮ ಪವರ್‌ ಟಿವಿ ಮುಖ್ಯಸ್ಥರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ನಂತರ ಚಾನೆಲ್‌ನ ಪ್ರಿನ್ಸಿಪಲ್ ಎಡಿಟರ್‌ ರಹಮಾನ್ ಹಾಸನ್ ಅವರನ್ನು ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿತ್ತು. ಮುಖ್ಯಮಂತ್ರಿ ಕುಟುಂಬ ಭಾರಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಸಾಕ್ಷಿ ಸಮೇತ ನಿರಂತರ ಸುದ್ದಿ ಪ್ರಸಾರ ಮಾಡಿದ್ದಕ್ಕೆ ಪೊಲೀಸರಿಂದ ದಾಳಿ ಮಾಡಿಸಿ ಬೆದರಿಸುವ ಹುನ್ನಾರವಿದು ಎಂದು ಸುದ್ದಿ ಸಂಸ್ಥೆ ಪ್ರತಿಕ್ರಿಯಿಸಿತ್ತು.

ಅದೇ ದಿನ ತಮ್ಮ ಖಾಸಗಿ ಫೇಸ್‌ಬುಕ್‌ನಿಂದ ಲೈವ್ ಬಂದು ಮಾತನಾಡಿದ್ದ ರಹಮಾನ್ ಹಾಸನ್, ’ಸಿಸಿಬಿ ಪೊಲೀಸರು ಕೇಸಿಗೆ ಸಂಬಂಧಪಟ್ಟಂತೆ ಸರ್ಚ್ ವಾರೆಂಟ್ ತಂದು ಪವರ್‌ ಟಿವಿ ಕಚೇರಿಯಲ್ಲಿ ಸರ್ಚ್ ಮಾಡಿದ್ದಾರೆ. ಅವರಿಗೆ ಬೇಕಾಗಿರುವ ಸಿಸ್ಟಂ, ಲ್ಯಾಪ್‌ಟಾಪ್‌, ಹಾರ್ಡ್‌ಡಿಸ್ಕ್‌ ಸಹಿತ ಎಲ್ಲಾ ದಾಖಲೆಗಳನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೆ ಪವರ್‌ ಟಿವಿಯ ಫೇಸ್‌ಬುಕ್ ಲೈವ್‌ ಕೂಡಾ ತಡೆಹಿಡಿಯಲಾಗಿದೆ. ಸುಮಾರು 250  ಉದ್ಯೋಗಿಗಳಿರುವ ಚಾನೆಲನ್ನು ತಡೆಹಿಡಿದಿದ್ದಾರೆ, ಎಲ್ಲರೂ ಬೀದಿಗೆ ಬಂದಿದ್ದಾರೆ ಎಂದು ಭಾವುಕರಾಗಿದ್ದರು.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

’ನಮ್ಮ ಕಚೇರಿಗೆ ಬಂದಿದ್ದ ಸಿಸಿಬಿ ಪೊಲೀಸರು ದಾಖಲೆಗಳನ್ನು ಪಡೆದು ಕೊನೆಗೆ ಚಾನೆಲ್ ಸರ್ವರ್‌‌‌ನ್ನು ಕೂಡಾ ವಶಕ್ಕೆ ಪಡೆದರು. ನಾವು ಚಾನೆಲನ್ನು ಮುಚ್ಚಿಸಬೇಡಿ ಎಂದು ಎಷ್ಟೇ ಕೇಳಿಕೊಂಡರೂ ಸರ್ವರ್‌ ಸಿಸ್ಟಂ ಕೂಡಾ ಪಡೆದರು. ನಮಗೆ ನ್ಯಾಯಾಂಗದ ಮೇಲೆ ವಿಶ್ವಾಸವಿದೆ. ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ” ಎಂದು ರಹಮಾನ್‌ ಹೇಳಿದ್ದರು.

Power TV

ರಾಜ್ಯದಲ್ಲಿ ಅನೇಕ ಸಂಘಟನೆಗಳು ಪವರ್ ಬೆಂಬಲಕ್ಕೆ ನಿಂತಿದ್ದರು. ಸರ್ಕಾರದ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ ಎಂದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ we are with power tv ಟ್ರೆಂಡ್ ಆಗಿತ್ತು. ನೇರ ಪ್ರಸಾರ ತಡೆಹಿಡಿದಿದ್ದರು ಬೇರೆ ಖಾತೆಗಳ ಫೇಸ್‌ಬುಕ್ ಲೈವ್‌ಗಳ ಮೂಲಕ ಸುದ್ದಿ ಪ್ರಸಾರ ಮಾಡುತ್ತಿತ್ತು.

ಸಿಸಿಬಿ ಪೊಲೀಸರು ಸರ್ವರ್ ತೆಗೆದುಕೊಂಡು ಹೋಗಿರುವುದರಿಂದ ಪ್ರಸಾರ ನಿಲ್ಲಿಸಲಾಗಿತ್ತು. ಈಗ ಹೊಸ ಸರ್ವರ್ ವ್ಯವಸ್ಥೆ ಆಗಿರುವುದರಿಂದ ನಾಳೆಯಿಂದ ಮತ್ತೆ ಚಾನೆಲ್ ಕಾರ್ಯಾರಂಭವಾಗಲಿದೆ. ಇದು ನ್ಯಾಯಕ್ಕೆ ಸಿಕ್ಕ ಗೆಲುವು ಎಂದು ಉದ್ಯೋಗಿಗಳು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಪವರ್ ಟಿವಿ ಪ್ರಕರಣ ಎತ್ತುವ ಪ್ರಶ್ನೆಗಳು ಯಾರ ಮನೆ ಬಾಗಿಲೆದುರು ನಿಲ್ಲುತ್ತವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...