Homeಕರ್ನಾಟಕಸಿಎಂ ಪುತ್ರನ ವಿರುದ್ಧ ಸುದ್ದಿ ಮಾಡಿದ್ದಕ್ಕೆ ಸ್ಥಗಿತ: ನಾಳೆಯಿಂದ ಆನ್‌ ಏರ್‌ ಆಗಲಿದೆ ಪವರ್‌ ಟಿವಿ

ಸಿಎಂ ಪುತ್ರನ ವಿರುದ್ಧ ಸುದ್ದಿ ಮಾಡಿದ್ದಕ್ಕೆ ಸ್ಥಗಿತ: ನಾಳೆಯಿಂದ ಆನ್‌ ಏರ್‌ ಆಗಲಿದೆ ಪವರ್‌ ಟಿವಿ

ಸಿಸಿಬಿ ಪೊಲೀಸರು ಸರ್ವರ್ ತೆಗೆದುಕೊಂಡು ಹೋಗಿರುವುದರಿಂದ ಪ್ರಸಾರ ನಿಲ್ಲಿಸಲಾಗಿತ್ತು. ಈಗ ಹೊಸ ಸರ್ವರ್ ವ್ಯವಸ್ಥೆ ಆಗಿರುವುದರಿಂದ ನಾಳೆಯಿಂದ ಮತ್ತೆ ಚಾನೆಲ್ ಕಾರ್ಯಾರಂಭವಾಗಲಿದೆ. ಇದು ನ್ಯಾಯಕ್ಕೆ ಸಿಕ್ಕ ಗೆಲುವು ಎಂದು ಉದ್ಯೋಗಿಗಳು ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಪುತ್ರ ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಆರೋಪಿಸಿ ದಾಖಲೆ ಸಹಿತ ವರದಿ ಮಾಡಿದ್ದಕ್ಕೆ ಸ್ಥಗಿತಗೊಂಡಿದ್ದ ಕನ್ನಡದ ಸುದ್ದಿ ಮಾಧ್ಯಮ ಪವರ್‌ ಟಿವಿ ನಾಳೆಯಿಂದ ಮತ್ತೆ ಕಾರ್ಯರಂಭ ಮಾಡಲಿದೆ.

ಸಿಎಂ ಪುತ್ರನ ಭ್ರಷ್ಟಾಚಾರ ಬಯಲು ಮಾಡಿದ ಕಾರಣ ರಾಜ್ಯ ಸರ್ಕಾರ ದ್ವೇಷ ರಾಜಕೀಯ ಮಾಡಿ ನಮ್ಮ ಸಂಸ್ಥೆಯನ್ನು ಮುಚ್ಚಿಸುವ ಹುನ್ನಾರ ಮಾಡಲಾಗುತ್ತಿದೆ ಎಂದು ಪವರ್ ಟಿವಿ ಆರೋಪಿಸಿತ್ತು.

ಸೆ.28ರಂದು ಕನ್ನಡದ ಸುದ್ದಿ ಮಾಧ್ಯಮ ಪವರ್‌ ಟಿವಿ ಮುಖ್ಯಸ್ಥರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ನಂತರ ಚಾನೆಲ್‌ನ ಪ್ರಿನ್ಸಿಪಲ್ ಎಡಿಟರ್‌ ರಹಮಾನ್ ಹಾಸನ್ ಅವರನ್ನು ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿತ್ತು. ಮುಖ್ಯಮಂತ್ರಿ ಕುಟುಂಬ ಭಾರಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಸಾಕ್ಷಿ ಸಮೇತ ನಿರಂತರ ಸುದ್ದಿ ಪ್ರಸಾರ ಮಾಡಿದ್ದಕ್ಕೆ ಪೊಲೀಸರಿಂದ ದಾಳಿ ಮಾಡಿಸಿ ಬೆದರಿಸುವ ಹುನ್ನಾರವಿದು ಎಂದು ಸುದ್ದಿ ಸಂಸ್ಥೆ ಪ್ರತಿಕ್ರಿಯಿಸಿತ್ತು.

ಅದೇ ದಿನ ತಮ್ಮ ಖಾಸಗಿ ಫೇಸ್‌ಬುಕ್‌ನಿಂದ ಲೈವ್ ಬಂದು ಮಾತನಾಡಿದ್ದ ರಹಮಾನ್ ಹಾಸನ್, ’ಸಿಸಿಬಿ ಪೊಲೀಸರು ಕೇಸಿಗೆ ಸಂಬಂಧಪಟ್ಟಂತೆ ಸರ್ಚ್ ವಾರೆಂಟ್ ತಂದು ಪವರ್‌ ಟಿವಿ ಕಚೇರಿಯಲ್ಲಿ ಸರ್ಚ್ ಮಾಡಿದ್ದಾರೆ. ಅವರಿಗೆ ಬೇಕಾಗಿರುವ ಸಿಸ್ಟಂ, ಲ್ಯಾಪ್‌ಟಾಪ್‌, ಹಾರ್ಡ್‌ಡಿಸ್ಕ್‌ ಸಹಿತ ಎಲ್ಲಾ ದಾಖಲೆಗಳನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೆ ಪವರ್‌ ಟಿವಿಯ ಫೇಸ್‌ಬುಕ್ ಲೈವ್‌ ಕೂಡಾ ತಡೆಹಿಡಿಯಲಾಗಿದೆ. ಸುಮಾರು 250  ಉದ್ಯೋಗಿಗಳಿರುವ ಚಾನೆಲನ್ನು ತಡೆಹಿಡಿದಿದ್ದಾರೆ, ಎಲ್ಲರೂ ಬೀದಿಗೆ ಬಂದಿದ್ದಾರೆ ಎಂದು ಭಾವುಕರಾಗಿದ್ದರು.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

’ನಮ್ಮ ಕಚೇರಿಗೆ ಬಂದಿದ್ದ ಸಿಸಿಬಿ ಪೊಲೀಸರು ದಾಖಲೆಗಳನ್ನು ಪಡೆದು ಕೊನೆಗೆ ಚಾನೆಲ್ ಸರ್ವರ್‌‌‌ನ್ನು ಕೂಡಾ ವಶಕ್ಕೆ ಪಡೆದರು. ನಾವು ಚಾನೆಲನ್ನು ಮುಚ್ಚಿಸಬೇಡಿ ಎಂದು ಎಷ್ಟೇ ಕೇಳಿಕೊಂಡರೂ ಸರ್ವರ್‌ ಸಿಸ್ಟಂ ಕೂಡಾ ಪಡೆದರು. ನಮಗೆ ನ್ಯಾಯಾಂಗದ ಮೇಲೆ ವಿಶ್ವಾಸವಿದೆ. ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ” ಎಂದು ರಹಮಾನ್‌ ಹೇಳಿದ್ದರು.

Power TV

ರಾಜ್ಯದಲ್ಲಿ ಅನೇಕ ಸಂಘಟನೆಗಳು ಪವರ್ ಬೆಂಬಲಕ್ಕೆ ನಿಂತಿದ್ದರು. ಸರ್ಕಾರದ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ ಎಂದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ we are with power tv ಟ್ರೆಂಡ್ ಆಗಿತ್ತು. ನೇರ ಪ್ರಸಾರ ತಡೆಹಿಡಿದಿದ್ದರು ಬೇರೆ ಖಾತೆಗಳ ಫೇಸ್‌ಬುಕ್ ಲೈವ್‌ಗಳ ಮೂಲಕ ಸುದ್ದಿ ಪ್ರಸಾರ ಮಾಡುತ್ತಿತ್ತು.

ಸಿಸಿಬಿ ಪೊಲೀಸರು ಸರ್ವರ್ ತೆಗೆದುಕೊಂಡು ಹೋಗಿರುವುದರಿಂದ ಪ್ರಸಾರ ನಿಲ್ಲಿಸಲಾಗಿತ್ತು. ಈಗ ಹೊಸ ಸರ್ವರ್ ವ್ಯವಸ್ಥೆ ಆಗಿರುವುದರಿಂದ ನಾಳೆಯಿಂದ ಮತ್ತೆ ಚಾನೆಲ್ ಕಾರ್ಯಾರಂಭವಾಗಲಿದೆ. ಇದು ನ್ಯಾಯಕ್ಕೆ ಸಿಕ್ಕ ಗೆಲುವು ಎಂದು ಉದ್ಯೋಗಿಗಳು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಪವರ್ ಟಿವಿ ಪ್ರಕರಣ ಎತ್ತುವ ಪ್ರಶ್ನೆಗಳು ಯಾರ ಮನೆ ಬಾಗಿಲೆದುರು ನಿಲ್ಲುತ್ತವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...