Homeಕರ್ನಾಟಕಸಿಎಂ ಪುತ್ರನ ವಿರುದ್ಧ ಸುದ್ದಿ ಮಾಡಿದ್ದಕ್ಕೆ ಸ್ಥಗಿತ: ನಾಳೆಯಿಂದ ಆನ್‌ ಏರ್‌ ಆಗಲಿದೆ ಪವರ್‌ ಟಿವಿ

ಸಿಎಂ ಪುತ್ರನ ವಿರುದ್ಧ ಸುದ್ದಿ ಮಾಡಿದ್ದಕ್ಕೆ ಸ್ಥಗಿತ: ನಾಳೆಯಿಂದ ಆನ್‌ ಏರ್‌ ಆಗಲಿದೆ ಪವರ್‌ ಟಿವಿ

ಸಿಸಿಬಿ ಪೊಲೀಸರು ಸರ್ವರ್ ತೆಗೆದುಕೊಂಡು ಹೋಗಿರುವುದರಿಂದ ಪ್ರಸಾರ ನಿಲ್ಲಿಸಲಾಗಿತ್ತು. ಈಗ ಹೊಸ ಸರ್ವರ್ ವ್ಯವಸ್ಥೆ ಆಗಿರುವುದರಿಂದ ನಾಳೆಯಿಂದ ಮತ್ತೆ ಚಾನೆಲ್ ಕಾರ್ಯಾರಂಭವಾಗಲಿದೆ. ಇದು ನ್ಯಾಯಕ್ಕೆ ಸಿಕ್ಕ ಗೆಲುವು ಎಂದು ಉದ್ಯೋಗಿಗಳು ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಪುತ್ರ ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಆರೋಪಿಸಿ ದಾಖಲೆ ಸಹಿತ ವರದಿ ಮಾಡಿದ್ದಕ್ಕೆ ಸ್ಥಗಿತಗೊಂಡಿದ್ದ ಕನ್ನಡದ ಸುದ್ದಿ ಮಾಧ್ಯಮ ಪವರ್‌ ಟಿವಿ ನಾಳೆಯಿಂದ ಮತ್ತೆ ಕಾರ್ಯರಂಭ ಮಾಡಲಿದೆ.

ಸಿಎಂ ಪುತ್ರನ ಭ್ರಷ್ಟಾಚಾರ ಬಯಲು ಮಾಡಿದ ಕಾರಣ ರಾಜ್ಯ ಸರ್ಕಾರ ದ್ವೇಷ ರಾಜಕೀಯ ಮಾಡಿ ನಮ್ಮ ಸಂಸ್ಥೆಯನ್ನು ಮುಚ್ಚಿಸುವ ಹುನ್ನಾರ ಮಾಡಲಾಗುತ್ತಿದೆ ಎಂದು ಪವರ್ ಟಿವಿ ಆರೋಪಿಸಿತ್ತು.

ಸೆ.28ರಂದು ಕನ್ನಡದ ಸುದ್ದಿ ಮಾಧ್ಯಮ ಪವರ್‌ ಟಿವಿ ಮುಖ್ಯಸ್ಥರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ನಂತರ ಚಾನೆಲ್‌ನ ಪ್ರಿನ್ಸಿಪಲ್ ಎಡಿಟರ್‌ ರಹಮಾನ್ ಹಾಸನ್ ಅವರನ್ನು ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿತ್ತು. ಮುಖ್ಯಮಂತ್ರಿ ಕುಟುಂಬ ಭಾರಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಸಾಕ್ಷಿ ಸಮೇತ ನಿರಂತರ ಸುದ್ದಿ ಪ್ರಸಾರ ಮಾಡಿದ್ದಕ್ಕೆ ಪೊಲೀಸರಿಂದ ದಾಳಿ ಮಾಡಿಸಿ ಬೆದರಿಸುವ ಹುನ್ನಾರವಿದು ಎಂದು ಸುದ್ದಿ ಸಂಸ್ಥೆ ಪ್ರತಿಕ್ರಿಯಿಸಿತ್ತು.

ಅದೇ ದಿನ ತಮ್ಮ ಖಾಸಗಿ ಫೇಸ್‌ಬುಕ್‌ನಿಂದ ಲೈವ್ ಬಂದು ಮಾತನಾಡಿದ್ದ ರಹಮಾನ್ ಹಾಸನ್, ’ಸಿಸಿಬಿ ಪೊಲೀಸರು ಕೇಸಿಗೆ ಸಂಬಂಧಪಟ್ಟಂತೆ ಸರ್ಚ್ ವಾರೆಂಟ್ ತಂದು ಪವರ್‌ ಟಿವಿ ಕಚೇರಿಯಲ್ಲಿ ಸರ್ಚ್ ಮಾಡಿದ್ದಾರೆ. ಅವರಿಗೆ ಬೇಕಾಗಿರುವ ಸಿಸ್ಟಂ, ಲ್ಯಾಪ್‌ಟಾಪ್‌, ಹಾರ್ಡ್‌ಡಿಸ್ಕ್‌ ಸಹಿತ ಎಲ್ಲಾ ದಾಖಲೆಗಳನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೆ ಪವರ್‌ ಟಿವಿಯ ಫೇಸ್‌ಬುಕ್ ಲೈವ್‌ ಕೂಡಾ ತಡೆಹಿಡಿಯಲಾಗಿದೆ. ಸುಮಾರು 250  ಉದ್ಯೋಗಿಗಳಿರುವ ಚಾನೆಲನ್ನು ತಡೆಹಿಡಿದಿದ್ದಾರೆ, ಎಲ್ಲರೂ ಬೀದಿಗೆ ಬಂದಿದ್ದಾರೆ ಎಂದು ಭಾವುಕರಾಗಿದ್ದರು.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

’ನಮ್ಮ ಕಚೇರಿಗೆ ಬಂದಿದ್ದ ಸಿಸಿಬಿ ಪೊಲೀಸರು ದಾಖಲೆಗಳನ್ನು ಪಡೆದು ಕೊನೆಗೆ ಚಾನೆಲ್ ಸರ್ವರ್‌‌‌ನ್ನು ಕೂಡಾ ವಶಕ್ಕೆ ಪಡೆದರು. ನಾವು ಚಾನೆಲನ್ನು ಮುಚ್ಚಿಸಬೇಡಿ ಎಂದು ಎಷ್ಟೇ ಕೇಳಿಕೊಂಡರೂ ಸರ್ವರ್‌ ಸಿಸ್ಟಂ ಕೂಡಾ ಪಡೆದರು. ನಮಗೆ ನ್ಯಾಯಾಂಗದ ಮೇಲೆ ವಿಶ್ವಾಸವಿದೆ. ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ” ಎಂದು ರಹಮಾನ್‌ ಹೇಳಿದ್ದರು.

Power TV

ರಾಜ್ಯದಲ್ಲಿ ಅನೇಕ ಸಂಘಟನೆಗಳು ಪವರ್ ಬೆಂಬಲಕ್ಕೆ ನಿಂತಿದ್ದರು. ಸರ್ಕಾರದ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ ಎಂದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ we are with power tv ಟ್ರೆಂಡ್ ಆಗಿತ್ತು. ನೇರ ಪ್ರಸಾರ ತಡೆಹಿಡಿದಿದ್ದರು ಬೇರೆ ಖಾತೆಗಳ ಫೇಸ್‌ಬುಕ್ ಲೈವ್‌ಗಳ ಮೂಲಕ ಸುದ್ದಿ ಪ್ರಸಾರ ಮಾಡುತ್ತಿತ್ತು.

ಸಿಸಿಬಿ ಪೊಲೀಸರು ಸರ್ವರ್ ತೆಗೆದುಕೊಂಡು ಹೋಗಿರುವುದರಿಂದ ಪ್ರಸಾರ ನಿಲ್ಲಿಸಲಾಗಿತ್ತು. ಈಗ ಹೊಸ ಸರ್ವರ್ ವ್ಯವಸ್ಥೆ ಆಗಿರುವುದರಿಂದ ನಾಳೆಯಿಂದ ಮತ್ತೆ ಚಾನೆಲ್ ಕಾರ್ಯಾರಂಭವಾಗಲಿದೆ. ಇದು ನ್ಯಾಯಕ್ಕೆ ಸಿಕ್ಕ ಗೆಲುವು ಎಂದು ಉದ್ಯೋಗಿಗಳು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಪವರ್ ಟಿವಿ ಪ್ರಕರಣ ಎತ್ತುವ ಪ್ರಶ್ನೆಗಳು ಯಾರ ಮನೆ ಬಾಗಿಲೆದುರು ನಿಲ್ಲುತ್ತವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...