Homeಮುಖಪುಟಲಸಿಕೆ ತೆಗೆದುಕೊಳ್ಳದ ಮೂವರು ಉದ್ಯೋಗಿಗಳನ್ನು ವಜಾಗೊಳಿಸಿದ ಸಿಎನ್‌ಎನ್‌

ಲಸಿಕೆ ತೆಗೆದುಕೊಳ್ಳದ ಮೂವರು ಉದ್ಯೋಗಿಗಳನ್ನು ವಜಾಗೊಳಿಸಿದ ಸಿಎನ್‌ಎನ್‌

- Advertisement -
- Advertisement -

ಲಸಿಕೆ ತೆಗೆದುಕೊಳ್ಳದೆ ಕಚೇರಿಗೆ ಬರುತ್ತಿದ್ದ ಮೂವರು ಉದ್ಯೋಗಿಗಳನ್ನು ಸಿಎನ್‌ಎನ್‌ ಕೆಲಸದಿಂದ ತೆಗೆದು ಹಾಕಿದೆ. ಕಳೆದ ವಾರದಿಂದ ಮೂವರು ಉದ್ಯೋಗಿಗಳು ಲಸಿಕೆ ತೆಗೆದುಕೊಳ್ಳದೆ ಕಚೇರಿಗೆ ಬರುತ್ತಿರುವುದು ನಮ್ಮ ಗಮನಕ್ಕೆ ಬಂದಿತು. ಮೂವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಚಾನೆಲ್ ಹೊರಡಿಸಿರುವ ಆದೇಶದಲ್ಲಿ ಹೇಳಲಾಗಿದೆ.

ಗುರುವಾರ CNN ನ ಹಿರಿಯ ಮಾಧ್ಯಮ ವರದಿಗಾರ ಒಲಿವರ್ ಡಾರ್ಸಿ, ತಮ್ಮ ಟ್ವಿಟರ್‌ ಖಾತೆಯಲ್ಲಿ, “ಕಳೆದ ವಾರದಿಂದ ಕಛೇರಿಗೆ ಲಸಿಕೆ ತೆಗೆದುಕೊಳ್ಳದೆ ಬರುತ್ತಿದ್ದ ಮೂವರು ಉದ್ಯೋಗಿಗಳ ಬಗ್ಗೆ ನಮಗೆ ತಿಳಿದು ಬಂತು. ಮೂವರನ್ನು ಕೆಲಸದಿಂದ ವಜಾ ಮಾಡಲಾಗಿದೆ ” ಎಂದಿದ್ದಾರೆ.

ಇದನ್ನೂ ಓದಿ: ಸಾಮಾನ್ಯ ಲಸಿಕೆ ಪಡೆಯದ 30 ಲಕ್ಷ ಮಕ್ಕಳು ಭಾರತದಲ್ಲಿದ್ದಾರೆಂದ ವಿಶ್ವಸಂಸ್ಥೆ; ನಿರಾಕರಿಸಿದ ಸರ್ಕಾರ

’ಅಕ್ಟೋಬರ್ ಮಧ್ಯದಲ್ಲಿ ಎಲ್ಲರು ಕಚೇರಿಗೆ ಹಿಂತಿರುಗುವ ದಿನಾಂಕವನ್ನು ನಿಗದಿಯಾಗಿಸಲಾಗಿತ್ತು. ಆದರೆ ಅದನ್ನು ಸೆಪ್ಟೆಂಬರ್ 7ಕ್ಕೆ ನಿಗದಿ ಮಾಡಲಾಯಿತು. ಈಗ ಅದನ್ನೂ ಕೂಡ ಮುಂದೂಡಲಾಗಿದೆ ಎಂದು  ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಸಿಎನ್‌ಎನ್‌ ನೆಟ್ವರ್ಕ್ ಮುಖ್ಯಸ್ಥರು, ಎಲ್ಲಾ ಉದ್ಯೋಗಿಗಳಿಗೂ ತಮ್ಮ ಬಗ್ಗೆ ಕಾಳಜಿ ವಹಿಸುವಂತೆ ಕೇಳಿಕೊಂಡಿದ್ದಾರೆ. “ನಾವೆಲ್ಲರೂ ನಿರೀಕ್ಷೆ, ಆತಂಕ, ಹತಾಶೆ, ಗೊಂದಲದ ಮಿಶ್ರಣವನ್ನು ಅನುಭವಿಸುತ್ತಿದ್ದೇವೆ. ನನಗೆ ಅರ್ಥವಾಗುತ್ತಿದೆ. ನಿಮ್ಮ ಬಗ್ಗೆ ಕಾಳಜಿ ವಹಿಸುವುದನ್ನು ಮುಂದುವರೆಸಿ ಎಂದಿದ್ದಾರೆ.

ಇನ್ನು ಮೆಮೋನಾ ಕೊನೆಯಲ್ಲಿ”ನೀವು ಕಚೇರಿಗೆ ಬರಲು ಲಸಿಕೆ ಹಾಕಿಸಿಕೊಳ್ಳಬೇಕು. ನೀವು ಇತರ ಉದ್ಯೋಗಿಗಳೊಂದಿಗೆ ಒಂದು ಕ್ಷೇತ್ರದಲ್ಲಿ ಕೆಲಸ ಮಾಡಲು ಲಸಿಕೆ ಹಾಕಿಸಿಕೊಳ್ಳುವುದು ಮುಖ್ಯ” ಎನ್ನಲಾಗಿದೆ.

ಇತ್ತ, ಗೂಗಲ್ ಮತ್ತು ಫೇಸ್‌ಬುಕ್ ಕೂಡ ಕಚೇರಿಗೆ ಮರಳುವ ಕೆಲಸಗಾರರಿಗೆ  ಲಸಿಕೆಯನ್ನು ಕಡ್ಡಾಯಗೊಳಿಸಿದೆ.


ಇದನ್ನೂ ಓದಿ: ಪೆಟ್ರೋಲಿಯಂ ಸೆಸ್‌ನ 3.4 ಲಕ್ಷ ಕೋಟಿ ರೂಗಳನ್ನು ಉಚಿತ ಲಸಿಕೆ, ಪಡಿತರಕ್ಕಾಗಿ ಬಳಸಲಾಗಿದೆ: ಸಚಿವ ಹರ್ದೀಪ್ ಪುರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...