Homeಕರೋನಾ ತಲ್ಲಣಕೊರೊನಾ ಮಿಲಿಟರಿ ಕೇಂದ್ರಕ್ಕೆೆ ಸೋನು ಸೂದ್ ಸಹಾಯ ಕೋರಿದ ಕಮಾಂಡರ್‌, ಕೋಪಗೊಂಡ ಹಿರಿಯ ಸೇನಾ ಅಧಿಕಾರಿಗಳು

ಕೊರೊನಾ ಮಿಲಿಟರಿ ಕೇಂದ್ರಕ್ಕೆೆ ಸೋನು ಸೂದ್ ಸಹಾಯ ಕೋರಿದ ಕಮಾಂಡರ್‌, ಕೋಪಗೊಂಡ ಹಿರಿಯ ಸೇನಾ ಅಧಿಕಾರಿಗಳು

- Advertisement -
- Advertisement -

ಬಾಲಿವುಡ್ ನಟ ಮತ್ತು ಕೊರೊನಾ ಸಂಕಷ್ಟದಲ್ಲಿ ಜನರ ಸೇವೆ ಮಾಡುವ ಮೂಲಕ ರಿಯಲ್ ಹೀರೊ ಎನಿಸಿಕೊಂಡಿರುವ ಸೋನು ಸೂದ್ ಅವರ ಸಹಾಯ ಕೋರಿ ಸೇನಾ ಅಧಿಕಾರಿಯೊಬ್ಬರು ಪತ್ರ ಬರೆದಿದ್ದರು. ಇದರ ಪರಿಣಾಮವಾಗಿ ಸೇನೆಯ ಹಿರಿಯ ಅಧಿಕಾರಿಗಳು ಪತ್ರ ಬರೆದ ಕಮಾಂಡಿಂಗ್ ಆಫೀಸರ್‌ ವಿರುದ್ದ ಕೋಪಗೊಂಡಿದ್ದಾರೆ.

ಸಹಾಯ ಕೋರಿ ಜೈಸಲ್ಮೇರ್‌ನಲ್ಲಿ ಬೀಡುಬಿಟ್ಟಿರುವ ಇನ್‌ಫ್ಯಾಂಟ್ರಿ ಬೆಟಾಲಿಯನ್‌ನ ಕಮಾಂಡಿಂಗ್ ಆಫೀಸರ್ ಬರೆದ ಪತ್ರವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು, ಸೇನೆ ಆರಂಭಿಸುತ್ತಿರುವ ಕೊರೊನಾ ಮಿಲಿಟರಿ ಕೇಂದ್ರದ ಸೌಲಭ್ಯಕ್ಕಾಗಿ ಉಪಕರಣಗಳನ್ನು ಖರೀದಿಸಲು ಸಹಾಯ ಮಾಡಲು ಕೋರಿದ್ದರು.

“ಇದು ಅಧಿಕಾರಿಯ ಅತಿಯಾದ ಉತ್ಸಾಹಭರಿತ ನಡವಳಿಕೆಯಾಗಿದೆ. ಅವರ ಉದ್ದೇಶಗಳು ಸರಿಯಾಗಿವೆ. ಕೊರೊನಾ ಕೇಂದ್ರದಲ್ಲಿ ಸೌಲಭ್ಯವನ್ನು ಶೀಘ್ರದಲ್ಲಿಯೇ ಪ್ರಾರಂಭಿಸುವ ಗುರಿಯಿಂದ ಅವರು ಪತ್ರ ಬರೆದಿದ್ದಾರೆ. ಆದರೆ ಇದು ಸರಿಯಾದ ರೀತಿಯಲ್ಲ. ಇಂತಹ ಕೆಲಸ ಮಾಡಬಾರದಾಗಿತ್ತು. ಅವರು ಸರ್ಕಾರದ ನಿಧಿಯ ಮೂಲಕ ಹಣ ಸಂಗ್ರಹಣೆಗಾಗಿ ಕಾಯಬೇಕಾಗಿತ್ತು. ಸಾರ್ವಜನಿಕ ನಿಧಿಯಲ್ಲಿ ಯಾವುದೇ ಕೊರತೆಯಿಲ್ಲ” ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

 

ಸೇನಾ ಕಮಾಂಡರ್‌ ನಟ ಸೋನು ಸೂದ್‌ಗೆ ಸಹಾಯ ಕೋರಿ ಬರೆದಿದ್ದ ಪತ್ರ

ಜೈಸಲ್ಮೇರ್‌ನಲ್ಲಿ ಇರುವ ಮಿಲಿಟರಿ ಕಮಾಂಡರ್‌, ಸೋನು ಸೂದ್‌ಗೆ ಬರೆದ ಪತ್ರದಲ್ಲಿ, “ನಮ್ಮೊಂದಿಗೆ ಲಭ್ಯವಿರುವ ಸೀಮಿತ ಸಂಪನ್ಮೂಲಗಳೊಂದಿಗೆ, ಹೆಚ್ಚುವರಿ ಸಲಕರಣೆಗಳ ಅವಶ್ಯಕತೆಯಿದೆ. ಪತ್ರದಲ್ಲಿ ಉಲ್ಲೇಖಿಸಲಾದ ಉಪಕರಣಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಅಡಿಯಲ್ಲಿ, 04 ಐಸಿಯು ಹಾಸಿಗೆಗಳು, 10 ಆಮ್ಲಜನಕ ಸಾಂದ್ರಕಗಳು, 10 ಜಂಬೊ ಆಮ್ಲಜನಕ ಸಿಲಿಂಡರ್‌ಗಳು (7000 ಲೀಟರ್), 01 ಎಕ್ಸ್-ರೇ ಯಂತ್ರ ಮತ್ತು 02 ಜನರೇಟರ್ ಸೆಟ್‌ಗಳು ಮತ್ತು 1 ಕೆವಿಎ ಸೇರಿವೆ” ಎಂದು ಬರೆಯಲಾಗಿದೆ.

“ಅಧಿಕಾರಿಯು ಸೈನ್ಯದಲ್ಲಿನ ಸಂಪ್ರದಾಯಗಳಿಗೆ ಅನುಗುಣವಾಗಿರದ ಒಂದು ವಿಧಾನವನ್ನು ಅನುಸರಿಸಿದ್ದಾರೆ. ಸಾಮಾನ್ಯವಾಗಿ ಅಂತಹ ಅವಶ್ಯಕತೆಗಳಿಗೆ ಸಂಪನ್ಮೂಲಗಳ ಕೊರತೆಯಿಲ್ಲ” ಆದರೆ, ಕಮಾಂಡರ್‌ ಅವರ ಉದ್ದೇಶಗಳು ಉದಾತ್ತವಾಗಿದ್ದವು ಎಂದು ರಕ್ಷಣಾ ವಿಶ್ಲೇಷಕರ ಮೇಜರ್ ಜನರಲ್ ಎಸ್.ಬಿ.ಅಸ್ತಾನಾ (ನಿವೃತ್ತ)  ಹೇಳಿದ್ದಾರೆ.

“ಇಂತಹ ನಡವಳಿಕೆಗಳು ದೀರ್ಘಾವಧಿಯ ಪರಿಣಾಮವನ್ನು ಬೀರುತ್ತವೆ. ನಾಳೆ ರಾಜಕೀಯ ವ್ಯಕ್ತಿಗಳಿಗೆ ಪತ್ರ ಬರೆಯಬಹುದು ಅಥವಾ ಪ್ರಚಾರ ಪಡೆಯುವ ಉದ್ದೇಶ ಹೊಂದಿರಬಹುದು.  ಸಾಮಾನ್ಯವಾಗಿ ನಾವು, ಶ್ರೇಣಿಯಲ್ಲಿರುವ ಹಿರಿಯ ಅಧಿಕಾರಿಗಳನ್ನು ಹೆಚ್ಚುವರಿ ಸಂಪನ್ಮೂಲಗಳಿಗಾಗಿ ಸಂಪರ್ಕಿಸುತ್ತೇವೆ  ಅವರಿಗೆ ತುರ್ತು ಅವಶ್ಯಕತೆಗಳನ್ನು ಪೂರೈಸಲು ತುರ್ತು ಆರ್ಥಿಕ ಅಧಿಕಾರಗಳು ಇರುತ್ತವೆ” ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಸೋನು ಸೂದ್‌ಗೆ ಸೇನಾ ಅಧಿಕಾರಿ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗಿತ್ತು. ಸೇನೆಗೂ ಕೂಡ ನೆರವು ನೀಡುತ್ತಿಲ್ಲ ಎಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅನೇಕ ಮಂದಿ ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಸೇನೆಯ ಹಿರಿಯ ಅಧಿಕಾರಿಗಳು ಪತ್ರ ಬರೆದಿದ್ದ ಕಮಾಂಡರ್‌ ವಿರುದ್ಧ ಕೋಪಗೊಂಡಿದ್ದಾರೆ.


ಇದನ್ನೂ ಓದಿ: ‘ಇಂಡಿಯನ್ ವೇರಿಯೆಂಟ್’ ಪದವಿರುವ ಪೋಸ್ಟ್‌ಗಳನ್ನು ಕಿತ್ತು ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....