Homeಕರೋನಾ ತಲ್ಲಣಕೊರೊನಾ ಮಿಲಿಟರಿ ಕೇಂದ್ರಕ್ಕೆೆ ಸೋನು ಸೂದ್ ಸಹಾಯ ಕೋರಿದ ಕಮಾಂಡರ್‌, ಕೋಪಗೊಂಡ ಹಿರಿಯ ಸೇನಾ ಅಧಿಕಾರಿಗಳು

ಕೊರೊನಾ ಮಿಲಿಟರಿ ಕೇಂದ್ರಕ್ಕೆೆ ಸೋನು ಸೂದ್ ಸಹಾಯ ಕೋರಿದ ಕಮಾಂಡರ್‌, ಕೋಪಗೊಂಡ ಹಿರಿಯ ಸೇನಾ ಅಧಿಕಾರಿಗಳು

- Advertisement -
- Advertisement -

ಬಾಲಿವುಡ್ ನಟ ಮತ್ತು ಕೊರೊನಾ ಸಂಕಷ್ಟದಲ್ಲಿ ಜನರ ಸೇವೆ ಮಾಡುವ ಮೂಲಕ ರಿಯಲ್ ಹೀರೊ ಎನಿಸಿಕೊಂಡಿರುವ ಸೋನು ಸೂದ್ ಅವರ ಸಹಾಯ ಕೋರಿ ಸೇನಾ ಅಧಿಕಾರಿಯೊಬ್ಬರು ಪತ್ರ ಬರೆದಿದ್ದರು. ಇದರ ಪರಿಣಾಮವಾಗಿ ಸೇನೆಯ ಹಿರಿಯ ಅಧಿಕಾರಿಗಳು ಪತ್ರ ಬರೆದ ಕಮಾಂಡಿಂಗ್ ಆಫೀಸರ್‌ ವಿರುದ್ದ ಕೋಪಗೊಂಡಿದ್ದಾರೆ.

ಸಹಾಯ ಕೋರಿ ಜೈಸಲ್ಮೇರ್‌ನಲ್ಲಿ ಬೀಡುಬಿಟ್ಟಿರುವ ಇನ್‌ಫ್ಯಾಂಟ್ರಿ ಬೆಟಾಲಿಯನ್‌ನ ಕಮಾಂಡಿಂಗ್ ಆಫೀಸರ್ ಬರೆದ ಪತ್ರವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು, ಸೇನೆ ಆರಂಭಿಸುತ್ತಿರುವ ಕೊರೊನಾ ಮಿಲಿಟರಿ ಕೇಂದ್ರದ ಸೌಲಭ್ಯಕ್ಕಾಗಿ ಉಪಕರಣಗಳನ್ನು ಖರೀದಿಸಲು ಸಹಾಯ ಮಾಡಲು ಕೋರಿದ್ದರು.

“ಇದು ಅಧಿಕಾರಿಯ ಅತಿಯಾದ ಉತ್ಸಾಹಭರಿತ ನಡವಳಿಕೆಯಾಗಿದೆ. ಅವರ ಉದ್ದೇಶಗಳು ಸರಿಯಾಗಿವೆ. ಕೊರೊನಾ ಕೇಂದ್ರದಲ್ಲಿ ಸೌಲಭ್ಯವನ್ನು ಶೀಘ್ರದಲ್ಲಿಯೇ ಪ್ರಾರಂಭಿಸುವ ಗುರಿಯಿಂದ ಅವರು ಪತ್ರ ಬರೆದಿದ್ದಾರೆ. ಆದರೆ ಇದು ಸರಿಯಾದ ರೀತಿಯಲ್ಲ. ಇಂತಹ ಕೆಲಸ ಮಾಡಬಾರದಾಗಿತ್ತು. ಅವರು ಸರ್ಕಾರದ ನಿಧಿಯ ಮೂಲಕ ಹಣ ಸಂಗ್ರಹಣೆಗಾಗಿ ಕಾಯಬೇಕಾಗಿತ್ತು. ಸಾರ್ವಜನಿಕ ನಿಧಿಯಲ್ಲಿ ಯಾವುದೇ ಕೊರತೆಯಿಲ್ಲ” ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

 

ಸೇನಾ ಕಮಾಂಡರ್‌ ನಟ ಸೋನು ಸೂದ್‌ಗೆ ಸಹಾಯ ಕೋರಿ ಬರೆದಿದ್ದ ಪತ್ರ

ಜೈಸಲ್ಮೇರ್‌ನಲ್ಲಿ ಇರುವ ಮಿಲಿಟರಿ ಕಮಾಂಡರ್‌, ಸೋನು ಸೂದ್‌ಗೆ ಬರೆದ ಪತ್ರದಲ್ಲಿ, “ನಮ್ಮೊಂದಿಗೆ ಲಭ್ಯವಿರುವ ಸೀಮಿತ ಸಂಪನ್ಮೂಲಗಳೊಂದಿಗೆ, ಹೆಚ್ಚುವರಿ ಸಲಕರಣೆಗಳ ಅವಶ್ಯಕತೆಯಿದೆ. ಪತ್ರದಲ್ಲಿ ಉಲ್ಲೇಖಿಸಲಾದ ಉಪಕರಣಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಅಡಿಯಲ್ಲಿ, 04 ಐಸಿಯು ಹಾಸಿಗೆಗಳು, 10 ಆಮ್ಲಜನಕ ಸಾಂದ್ರಕಗಳು, 10 ಜಂಬೊ ಆಮ್ಲಜನಕ ಸಿಲಿಂಡರ್‌ಗಳು (7000 ಲೀಟರ್), 01 ಎಕ್ಸ್-ರೇ ಯಂತ್ರ ಮತ್ತು 02 ಜನರೇಟರ್ ಸೆಟ್‌ಗಳು ಮತ್ತು 1 ಕೆವಿಎ ಸೇರಿವೆ” ಎಂದು ಬರೆಯಲಾಗಿದೆ.

“ಅಧಿಕಾರಿಯು ಸೈನ್ಯದಲ್ಲಿನ ಸಂಪ್ರದಾಯಗಳಿಗೆ ಅನುಗುಣವಾಗಿರದ ಒಂದು ವಿಧಾನವನ್ನು ಅನುಸರಿಸಿದ್ದಾರೆ. ಸಾಮಾನ್ಯವಾಗಿ ಅಂತಹ ಅವಶ್ಯಕತೆಗಳಿಗೆ ಸಂಪನ್ಮೂಲಗಳ ಕೊರತೆಯಿಲ್ಲ” ಆದರೆ, ಕಮಾಂಡರ್‌ ಅವರ ಉದ್ದೇಶಗಳು ಉದಾತ್ತವಾಗಿದ್ದವು ಎಂದು ರಕ್ಷಣಾ ವಿಶ್ಲೇಷಕರ ಮೇಜರ್ ಜನರಲ್ ಎಸ್.ಬಿ.ಅಸ್ತಾನಾ (ನಿವೃತ್ತ)  ಹೇಳಿದ್ದಾರೆ.

“ಇಂತಹ ನಡವಳಿಕೆಗಳು ದೀರ್ಘಾವಧಿಯ ಪರಿಣಾಮವನ್ನು ಬೀರುತ್ತವೆ. ನಾಳೆ ರಾಜಕೀಯ ವ್ಯಕ್ತಿಗಳಿಗೆ ಪತ್ರ ಬರೆಯಬಹುದು ಅಥವಾ ಪ್ರಚಾರ ಪಡೆಯುವ ಉದ್ದೇಶ ಹೊಂದಿರಬಹುದು.  ಸಾಮಾನ್ಯವಾಗಿ ನಾವು, ಶ್ರೇಣಿಯಲ್ಲಿರುವ ಹಿರಿಯ ಅಧಿಕಾರಿಗಳನ್ನು ಹೆಚ್ಚುವರಿ ಸಂಪನ್ಮೂಲಗಳಿಗಾಗಿ ಸಂಪರ್ಕಿಸುತ್ತೇವೆ  ಅವರಿಗೆ ತುರ್ತು ಅವಶ್ಯಕತೆಗಳನ್ನು ಪೂರೈಸಲು ತುರ್ತು ಆರ್ಥಿಕ ಅಧಿಕಾರಗಳು ಇರುತ್ತವೆ” ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಸೋನು ಸೂದ್‌ಗೆ ಸೇನಾ ಅಧಿಕಾರಿ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗಿತ್ತು. ಸೇನೆಗೂ ಕೂಡ ನೆರವು ನೀಡುತ್ತಿಲ್ಲ ಎಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅನೇಕ ಮಂದಿ ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಸೇನೆಯ ಹಿರಿಯ ಅಧಿಕಾರಿಗಳು ಪತ್ರ ಬರೆದಿದ್ದ ಕಮಾಂಡರ್‌ ವಿರುದ್ಧ ಕೋಪಗೊಂಡಿದ್ದಾರೆ.


ಇದನ್ನೂ ಓದಿ: ‘ಇಂಡಿಯನ್ ವೇರಿಯೆಂಟ್’ ಪದವಿರುವ ಪೋಸ್ಟ್‌ಗಳನ್ನು ಕಿತ್ತು ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...