Homeಕರೋನಾ ತಲ್ಲಣಕೊರೊನಾ ಮಿಲಿಟರಿ ಕೇಂದ್ರಕ್ಕೆೆ ಸೋನು ಸೂದ್ ಸಹಾಯ ಕೋರಿದ ಕಮಾಂಡರ್‌, ಕೋಪಗೊಂಡ ಹಿರಿಯ ಸೇನಾ ಅಧಿಕಾರಿಗಳು

ಕೊರೊನಾ ಮಿಲಿಟರಿ ಕೇಂದ್ರಕ್ಕೆೆ ಸೋನು ಸೂದ್ ಸಹಾಯ ಕೋರಿದ ಕಮಾಂಡರ್‌, ಕೋಪಗೊಂಡ ಹಿರಿಯ ಸೇನಾ ಅಧಿಕಾರಿಗಳು

- Advertisement -
- Advertisement -

ಬಾಲಿವುಡ್ ನಟ ಮತ್ತು ಕೊರೊನಾ ಸಂಕಷ್ಟದಲ್ಲಿ ಜನರ ಸೇವೆ ಮಾಡುವ ಮೂಲಕ ರಿಯಲ್ ಹೀರೊ ಎನಿಸಿಕೊಂಡಿರುವ ಸೋನು ಸೂದ್ ಅವರ ಸಹಾಯ ಕೋರಿ ಸೇನಾ ಅಧಿಕಾರಿಯೊಬ್ಬರು ಪತ್ರ ಬರೆದಿದ್ದರು. ಇದರ ಪರಿಣಾಮವಾಗಿ ಸೇನೆಯ ಹಿರಿಯ ಅಧಿಕಾರಿಗಳು ಪತ್ರ ಬರೆದ ಕಮಾಂಡಿಂಗ್ ಆಫೀಸರ್‌ ವಿರುದ್ದ ಕೋಪಗೊಂಡಿದ್ದಾರೆ.

ಸಹಾಯ ಕೋರಿ ಜೈಸಲ್ಮೇರ್‌ನಲ್ಲಿ ಬೀಡುಬಿಟ್ಟಿರುವ ಇನ್‌ಫ್ಯಾಂಟ್ರಿ ಬೆಟಾಲಿಯನ್‌ನ ಕಮಾಂಡಿಂಗ್ ಆಫೀಸರ್ ಬರೆದ ಪತ್ರವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು, ಸೇನೆ ಆರಂಭಿಸುತ್ತಿರುವ ಕೊರೊನಾ ಮಿಲಿಟರಿ ಕೇಂದ್ರದ ಸೌಲಭ್ಯಕ್ಕಾಗಿ ಉಪಕರಣಗಳನ್ನು ಖರೀದಿಸಲು ಸಹಾಯ ಮಾಡಲು ಕೋರಿದ್ದರು.

“ಇದು ಅಧಿಕಾರಿಯ ಅತಿಯಾದ ಉತ್ಸಾಹಭರಿತ ನಡವಳಿಕೆಯಾಗಿದೆ. ಅವರ ಉದ್ದೇಶಗಳು ಸರಿಯಾಗಿವೆ. ಕೊರೊನಾ ಕೇಂದ್ರದಲ್ಲಿ ಸೌಲಭ್ಯವನ್ನು ಶೀಘ್ರದಲ್ಲಿಯೇ ಪ್ರಾರಂಭಿಸುವ ಗುರಿಯಿಂದ ಅವರು ಪತ್ರ ಬರೆದಿದ್ದಾರೆ. ಆದರೆ ಇದು ಸರಿಯಾದ ರೀತಿಯಲ್ಲ. ಇಂತಹ ಕೆಲಸ ಮಾಡಬಾರದಾಗಿತ್ತು. ಅವರು ಸರ್ಕಾರದ ನಿಧಿಯ ಮೂಲಕ ಹಣ ಸಂಗ್ರಹಣೆಗಾಗಿ ಕಾಯಬೇಕಾಗಿತ್ತು. ಸಾರ್ವಜನಿಕ ನಿಧಿಯಲ್ಲಿ ಯಾವುದೇ ಕೊರತೆಯಿಲ್ಲ” ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

 

ಸೇನಾ ಕಮಾಂಡರ್‌ ನಟ ಸೋನು ಸೂದ್‌ಗೆ ಸಹಾಯ ಕೋರಿ ಬರೆದಿದ್ದ ಪತ್ರ

ಜೈಸಲ್ಮೇರ್‌ನಲ್ಲಿ ಇರುವ ಮಿಲಿಟರಿ ಕಮಾಂಡರ್‌, ಸೋನು ಸೂದ್‌ಗೆ ಬರೆದ ಪತ್ರದಲ್ಲಿ, “ನಮ್ಮೊಂದಿಗೆ ಲಭ್ಯವಿರುವ ಸೀಮಿತ ಸಂಪನ್ಮೂಲಗಳೊಂದಿಗೆ, ಹೆಚ್ಚುವರಿ ಸಲಕರಣೆಗಳ ಅವಶ್ಯಕತೆಯಿದೆ. ಪತ್ರದಲ್ಲಿ ಉಲ್ಲೇಖಿಸಲಾದ ಉಪಕರಣಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಅಡಿಯಲ್ಲಿ, 04 ಐಸಿಯು ಹಾಸಿಗೆಗಳು, 10 ಆಮ್ಲಜನಕ ಸಾಂದ್ರಕಗಳು, 10 ಜಂಬೊ ಆಮ್ಲಜನಕ ಸಿಲಿಂಡರ್‌ಗಳು (7000 ಲೀಟರ್), 01 ಎಕ್ಸ್-ರೇ ಯಂತ್ರ ಮತ್ತು 02 ಜನರೇಟರ್ ಸೆಟ್‌ಗಳು ಮತ್ತು 1 ಕೆವಿಎ ಸೇರಿವೆ” ಎಂದು ಬರೆಯಲಾಗಿದೆ.

“ಅಧಿಕಾರಿಯು ಸೈನ್ಯದಲ್ಲಿನ ಸಂಪ್ರದಾಯಗಳಿಗೆ ಅನುಗುಣವಾಗಿರದ ಒಂದು ವಿಧಾನವನ್ನು ಅನುಸರಿಸಿದ್ದಾರೆ. ಸಾಮಾನ್ಯವಾಗಿ ಅಂತಹ ಅವಶ್ಯಕತೆಗಳಿಗೆ ಸಂಪನ್ಮೂಲಗಳ ಕೊರತೆಯಿಲ್ಲ” ಆದರೆ, ಕಮಾಂಡರ್‌ ಅವರ ಉದ್ದೇಶಗಳು ಉದಾತ್ತವಾಗಿದ್ದವು ಎಂದು ರಕ್ಷಣಾ ವಿಶ್ಲೇಷಕರ ಮೇಜರ್ ಜನರಲ್ ಎಸ್.ಬಿ.ಅಸ್ತಾನಾ (ನಿವೃತ್ತ)  ಹೇಳಿದ್ದಾರೆ.

“ಇಂತಹ ನಡವಳಿಕೆಗಳು ದೀರ್ಘಾವಧಿಯ ಪರಿಣಾಮವನ್ನು ಬೀರುತ್ತವೆ. ನಾಳೆ ರಾಜಕೀಯ ವ್ಯಕ್ತಿಗಳಿಗೆ ಪತ್ರ ಬರೆಯಬಹುದು ಅಥವಾ ಪ್ರಚಾರ ಪಡೆಯುವ ಉದ್ದೇಶ ಹೊಂದಿರಬಹುದು.  ಸಾಮಾನ್ಯವಾಗಿ ನಾವು, ಶ್ರೇಣಿಯಲ್ಲಿರುವ ಹಿರಿಯ ಅಧಿಕಾರಿಗಳನ್ನು ಹೆಚ್ಚುವರಿ ಸಂಪನ್ಮೂಲಗಳಿಗಾಗಿ ಸಂಪರ್ಕಿಸುತ್ತೇವೆ  ಅವರಿಗೆ ತುರ್ತು ಅವಶ್ಯಕತೆಗಳನ್ನು ಪೂರೈಸಲು ತುರ್ತು ಆರ್ಥಿಕ ಅಧಿಕಾರಗಳು ಇರುತ್ತವೆ” ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಸೋನು ಸೂದ್‌ಗೆ ಸೇನಾ ಅಧಿಕಾರಿ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗಿತ್ತು. ಸೇನೆಗೂ ಕೂಡ ನೆರವು ನೀಡುತ್ತಿಲ್ಲ ಎಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅನೇಕ ಮಂದಿ ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಸೇನೆಯ ಹಿರಿಯ ಅಧಿಕಾರಿಗಳು ಪತ್ರ ಬರೆದಿದ್ದ ಕಮಾಂಡರ್‌ ವಿರುದ್ಧ ಕೋಪಗೊಂಡಿದ್ದಾರೆ.


ಇದನ್ನೂ ಓದಿ: ‘ಇಂಡಿಯನ್ ವೇರಿಯೆಂಟ್’ ಪದವಿರುವ ಪೋಸ್ಟ್‌ಗಳನ್ನು ಕಿತ್ತು ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...