Homeಕರೋನಾ ತಲ್ಲಣಕೊರೊನಾ ಮಿಲಿಟರಿ ಕೇಂದ್ರಕ್ಕೆೆ ಸೋನು ಸೂದ್ ಸಹಾಯ ಕೋರಿದ ಕಮಾಂಡರ್‌, ಕೋಪಗೊಂಡ ಹಿರಿಯ ಸೇನಾ ಅಧಿಕಾರಿಗಳು

ಕೊರೊನಾ ಮಿಲಿಟರಿ ಕೇಂದ್ರಕ್ಕೆೆ ಸೋನು ಸೂದ್ ಸಹಾಯ ಕೋರಿದ ಕಮಾಂಡರ್‌, ಕೋಪಗೊಂಡ ಹಿರಿಯ ಸೇನಾ ಅಧಿಕಾರಿಗಳು

- Advertisement -
- Advertisement -

ಬಾಲಿವುಡ್ ನಟ ಮತ್ತು ಕೊರೊನಾ ಸಂಕಷ್ಟದಲ್ಲಿ ಜನರ ಸೇವೆ ಮಾಡುವ ಮೂಲಕ ರಿಯಲ್ ಹೀರೊ ಎನಿಸಿಕೊಂಡಿರುವ ಸೋನು ಸೂದ್ ಅವರ ಸಹಾಯ ಕೋರಿ ಸೇನಾ ಅಧಿಕಾರಿಯೊಬ್ಬರು ಪತ್ರ ಬರೆದಿದ್ದರು. ಇದರ ಪರಿಣಾಮವಾಗಿ ಸೇನೆಯ ಹಿರಿಯ ಅಧಿಕಾರಿಗಳು ಪತ್ರ ಬರೆದ ಕಮಾಂಡಿಂಗ್ ಆಫೀಸರ್‌ ವಿರುದ್ದ ಕೋಪಗೊಂಡಿದ್ದಾರೆ.

ಸಹಾಯ ಕೋರಿ ಜೈಸಲ್ಮೇರ್‌ನಲ್ಲಿ ಬೀಡುಬಿಟ್ಟಿರುವ ಇನ್‌ಫ್ಯಾಂಟ್ರಿ ಬೆಟಾಲಿಯನ್‌ನ ಕಮಾಂಡಿಂಗ್ ಆಫೀಸರ್ ಬರೆದ ಪತ್ರವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು, ಸೇನೆ ಆರಂಭಿಸುತ್ತಿರುವ ಕೊರೊನಾ ಮಿಲಿಟರಿ ಕೇಂದ್ರದ ಸೌಲಭ್ಯಕ್ಕಾಗಿ ಉಪಕರಣಗಳನ್ನು ಖರೀದಿಸಲು ಸಹಾಯ ಮಾಡಲು ಕೋರಿದ್ದರು.

“ಇದು ಅಧಿಕಾರಿಯ ಅತಿಯಾದ ಉತ್ಸಾಹಭರಿತ ನಡವಳಿಕೆಯಾಗಿದೆ. ಅವರ ಉದ್ದೇಶಗಳು ಸರಿಯಾಗಿವೆ. ಕೊರೊನಾ ಕೇಂದ್ರದಲ್ಲಿ ಸೌಲಭ್ಯವನ್ನು ಶೀಘ್ರದಲ್ಲಿಯೇ ಪ್ರಾರಂಭಿಸುವ ಗುರಿಯಿಂದ ಅವರು ಪತ್ರ ಬರೆದಿದ್ದಾರೆ. ಆದರೆ ಇದು ಸರಿಯಾದ ರೀತಿಯಲ್ಲ. ಇಂತಹ ಕೆಲಸ ಮಾಡಬಾರದಾಗಿತ್ತು. ಅವರು ಸರ್ಕಾರದ ನಿಧಿಯ ಮೂಲಕ ಹಣ ಸಂಗ್ರಹಣೆಗಾಗಿ ಕಾಯಬೇಕಾಗಿತ್ತು. ಸಾರ್ವಜನಿಕ ನಿಧಿಯಲ್ಲಿ ಯಾವುದೇ ಕೊರತೆಯಿಲ್ಲ” ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

 

ಸೇನಾ ಕಮಾಂಡರ್‌ ನಟ ಸೋನು ಸೂದ್‌ಗೆ ಸಹಾಯ ಕೋರಿ ಬರೆದಿದ್ದ ಪತ್ರ

ಜೈಸಲ್ಮೇರ್‌ನಲ್ಲಿ ಇರುವ ಮಿಲಿಟರಿ ಕಮಾಂಡರ್‌, ಸೋನು ಸೂದ್‌ಗೆ ಬರೆದ ಪತ್ರದಲ್ಲಿ, “ನಮ್ಮೊಂದಿಗೆ ಲಭ್ಯವಿರುವ ಸೀಮಿತ ಸಂಪನ್ಮೂಲಗಳೊಂದಿಗೆ, ಹೆಚ್ಚುವರಿ ಸಲಕರಣೆಗಳ ಅವಶ್ಯಕತೆಯಿದೆ. ಪತ್ರದಲ್ಲಿ ಉಲ್ಲೇಖಿಸಲಾದ ಉಪಕರಣಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಅಡಿಯಲ್ಲಿ, 04 ಐಸಿಯು ಹಾಸಿಗೆಗಳು, 10 ಆಮ್ಲಜನಕ ಸಾಂದ್ರಕಗಳು, 10 ಜಂಬೊ ಆಮ್ಲಜನಕ ಸಿಲಿಂಡರ್‌ಗಳು (7000 ಲೀಟರ್), 01 ಎಕ್ಸ್-ರೇ ಯಂತ್ರ ಮತ್ತು 02 ಜನರೇಟರ್ ಸೆಟ್‌ಗಳು ಮತ್ತು 1 ಕೆವಿಎ ಸೇರಿವೆ” ಎಂದು ಬರೆಯಲಾಗಿದೆ.

“ಅಧಿಕಾರಿಯು ಸೈನ್ಯದಲ್ಲಿನ ಸಂಪ್ರದಾಯಗಳಿಗೆ ಅನುಗುಣವಾಗಿರದ ಒಂದು ವಿಧಾನವನ್ನು ಅನುಸರಿಸಿದ್ದಾರೆ. ಸಾಮಾನ್ಯವಾಗಿ ಅಂತಹ ಅವಶ್ಯಕತೆಗಳಿಗೆ ಸಂಪನ್ಮೂಲಗಳ ಕೊರತೆಯಿಲ್ಲ” ಆದರೆ, ಕಮಾಂಡರ್‌ ಅವರ ಉದ್ದೇಶಗಳು ಉದಾತ್ತವಾಗಿದ್ದವು ಎಂದು ರಕ್ಷಣಾ ವಿಶ್ಲೇಷಕರ ಮೇಜರ್ ಜನರಲ್ ಎಸ್.ಬಿ.ಅಸ್ತಾನಾ (ನಿವೃತ್ತ)  ಹೇಳಿದ್ದಾರೆ.

“ಇಂತಹ ನಡವಳಿಕೆಗಳು ದೀರ್ಘಾವಧಿಯ ಪರಿಣಾಮವನ್ನು ಬೀರುತ್ತವೆ. ನಾಳೆ ರಾಜಕೀಯ ವ್ಯಕ್ತಿಗಳಿಗೆ ಪತ್ರ ಬರೆಯಬಹುದು ಅಥವಾ ಪ್ರಚಾರ ಪಡೆಯುವ ಉದ್ದೇಶ ಹೊಂದಿರಬಹುದು.  ಸಾಮಾನ್ಯವಾಗಿ ನಾವು, ಶ್ರೇಣಿಯಲ್ಲಿರುವ ಹಿರಿಯ ಅಧಿಕಾರಿಗಳನ್ನು ಹೆಚ್ಚುವರಿ ಸಂಪನ್ಮೂಲಗಳಿಗಾಗಿ ಸಂಪರ್ಕಿಸುತ್ತೇವೆ  ಅವರಿಗೆ ತುರ್ತು ಅವಶ್ಯಕತೆಗಳನ್ನು ಪೂರೈಸಲು ತುರ್ತು ಆರ್ಥಿಕ ಅಧಿಕಾರಗಳು ಇರುತ್ತವೆ” ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಸೋನು ಸೂದ್‌ಗೆ ಸೇನಾ ಅಧಿಕಾರಿ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗಿತ್ತು. ಸೇನೆಗೂ ಕೂಡ ನೆರವು ನೀಡುತ್ತಿಲ್ಲ ಎಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅನೇಕ ಮಂದಿ ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಸೇನೆಯ ಹಿರಿಯ ಅಧಿಕಾರಿಗಳು ಪತ್ರ ಬರೆದಿದ್ದ ಕಮಾಂಡರ್‌ ವಿರುದ್ಧ ಕೋಪಗೊಂಡಿದ್ದಾರೆ.


ಇದನ್ನೂ ಓದಿ: ‘ಇಂಡಿಯನ್ ವೇರಿಯೆಂಟ್’ ಪದವಿರುವ ಪೋಸ್ಟ್‌ಗಳನ್ನು ಕಿತ್ತು ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...