Homeಮುಖಪುಟಕೋಚಿಂಗ್ ಸೆಂಟರ್‌ಗಳ ದಂಧೆ; ನೀಟ್ ಟಾಪರ್ 3 ಸಂಸ್ಥೆಗಳಲ್ಲಿ ತರಬೇತಿ ಪಡೆದರೆಂದು ಸುಳ್ಳು ಹಂಚಿಕೆ

ಕೋಚಿಂಗ್ ಸೆಂಟರ್‌ಗಳ ದಂಧೆ; ನೀಟ್ ಟಾಪರ್ 3 ಸಂಸ್ಥೆಗಳಲ್ಲಿ ತರಬೇತಿ ಪಡೆದರೆಂದು ಸುಳ್ಳು ಹಂಚಿಕೆ

JEE ಪರೀಕ್ಷೆಯಲ್ಲಿ 11ನೇ ರ್ಯಾಂಕ್ ಪಡೆದ ವಿದ್ಯಾರ್ಥಿಗೆ ನಾವೇ ಕೋಚಿಂಗ್ ನೀಡಿದ್ದು ಎಂದು 5 ಕೋಚಿಂಗ್‌ ಸೆಂಟರ್‌ಗಳು ಜಾಹೀರಾತು ನೀಡಿವೆ!

- Advertisement -
- Advertisement -

2022ರ ಸಾಲಿನ ನೀಟ್ ಮತ್ತು JEE ಪರೀಕ್ಷೆಯಗಳ ಫಲಿತಾಂಶ ಹೊರಬಿದ್ದಿದೆ. ರಾಜಸ್ಥಾನದ ತನಿಷ್ಕ ಎಂಬ ವಿದ್ಯಾರ್ಥಿನಿ ನೀಟ್ ಪರೀಕ್ಷೆಯಲ್ಲಿ ಆಲ್‌ ಇಂಡಿಯಾ ಮೊದಲನೇ ರ್ಯಾಂಕ್ ಪಡೆದು ಟಾಪರ್ ಎನಿಸಿದ್ದಾರೆ. ಆಶ್ಚರ್ಯವೆಂದರೆ ಆ ವಿದ್ಯಾರ್ಥಿನಿಗೆ ಕೋಚಿಂಗ್ ನೀಡಿದ್ದು ನಾವೆ ಎಂದು ಮೂರು ಕೋಚಿಂಗ್ ಸೆಂಟರ್‌ಗಳು ಬಹುಮುಖ್ಯ ಪತ್ರಿಕೆಗಳಲ್ಲಿ ಮುಖಪುಟದ ಜಾಹೀರಾತು ಪ್ರಕಟಿಸಿದ್ದಾರೆ!

ಅದೇ ರೀತಿ JEE ಪರೀಕ್ಷೆಯಲ್ಲಿ 11ನೇ ರ್ಯಾಂಕ್ ಪಡೆದ ದೀವ್ಯಾಂಶು ಮಾಲು ಎಂಬ ವಿದ್ಯಾರ್ಥಿಯ ಭಾವಚಿತ್ರವನ್ನು 5 ಕೋಚಿಂಗ್‌ ಸೆಂಟರ್‌ಗಳ ತಮ್ಮ ಜಾಹೀರಾತಿನಲ್ಲಿ ಪ್ರಕಟಿಸುವ ಮೂಲಕ ನಾವೇ ಕೋಚಿಂಗ್ ನೀಡಿದ್ದು ಎಂದು ಹೇಳಿಕೊಂಡಿದ್ದಾರೆ. ಇದು ನಿಜವೇ? ಒಬ್ಬ ವಿದ್ಯಾರ್ಥಿ 5 ಕೋಚಿಂಗ್ ಸೆಂಟರ್‌ಗಳಲ್ಲಿ ತರಬೇತಿ ಪಡೆಯಲು ಸಾಧ್ಯವೇ ಎಂಬುದುರ ಕುರಿತು ಚರ್ಚಿಸೋಣ.

ನೀಟ್ ಟಾಪರ್ ತನಿಷ್ಕ ನಮ್ಮ ಸಂಸ್ಥೆಯಲ್ಲಿ ಕೋಚಿಂಗ್ ಪಡೆದಿದ್ದಾರೆ ಎಂದು ಅಲೆನ್, ಆಕಾಶ್ ಮತ್ತು ನಾರಾಯಣ ಕೋಚಿಂಗ್ ಸೆಂಟರ್‌ಗಳು ಪತ್ರಿಕೆಗಳ ಮುಖಪುಟದಲ್ಲಿ ಜಾಹೀರಾತು ನೀಡಿದ್ದಾರೆ. ಅದೇ ರೀತಿ JEE ಪರೀಕ್ಷೆಯಲ್ಲಿ 11ನೇ ರ್ಯಾಂಕ್ ಪಡೆದ ದೀವ್ಯಾಂಶು ಮಾಲುರವರು ನಮ್ಮಲ್ಲಿ ಕೋಚಿಂಗ್ ಪಡೆದಿದ್ದು ಎಂದು ಅಲೆನ್, ರೆಸೊನ್ಯಾನ್ಸ್, ಮೋಷನ್, ವೇದಾಂತು ಮತ್ತು FIIT JEE ಕೋಚಿಂಗ್ ಸಂಸ್ಥೆಗಳು ಹೇಳಿಕೊಂಡಿವೆ. ಈ ಕುರಿತು ಟ್ವಿಟರ್‌ನಲ್ಲಿ ಚರ್ಚೆ ಆರಂಭವಾಗಿದ್ದು ಇದು ಸುಳ್ಳು, ನೀಟ್ ತರಬೇತಿ ಆಕಾಂಕ್ಷಿಗಳನ್ನು ಸೆಳೆಯುವುದಕ್ಕಾಗಿ ಈ ಕೋಚಿಂಗ್ ಸೆಂಟರ್‌ಗಳು ಸುಳ್ಳು ಜಾಹೀರಾತುಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ, ಕಳೆದ 19 ವರ್ಷಗಳಿಂದ ವಿದ್ಯಾರ್ಥಿಗಳಿಗೆ ‘ಕರಿಯರ್ ಗೈಡೆನ್ಸ್,’ ‘ಕಲಿಕಾ ಕೌಶಲ,’ ‘ಸಿಇಟಿ/ನೀಟ್ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಮಾಡುತ್ತಿರುವ, ಮಂಗಳೂರಿನ ಕರಿಯರ್ ಗೈಡೆನ್ಸ್ ಆ್ಯಂಡ್ ಇನ್ಫರ್‌ಮೇಶನ್ ಸೆಂಟರ್‌ನ ಸ್ಥಾಪಕರಾದ ಉಮರ್ ಯು.ಎಚ್‌ರವರು, “ನೀಟ್ ಆಗಲಿ ಅಥವಾ JEE ಆಗಲಿ ಒಬ್ಬ ವಿದ್ಯಾರ್ಥಿ ಒಂದು ವರ್ಷದಲ್ಲಿ ಒಂದಕ್ಕಿಂತ ಹೆಚ್ಚು ಕೋಚಿಂಗ್ ಸೆಂಟರ್‌ಗಳಲ್ಲಿ ತರಬೇತಿ ಪಡೆದಿರುವುದಿಲ್ಲ. ಅಲ್ಲದೆ ಒಂದೊಂದು ವಿಷಯಕ್ಕೆ ಒಂದೊಂದು ಕೋಚಿಂಗ್ ಸೆಂಟರ್‌ನಲ್ಲಿ ಕೋಚಿಂಗ್ ಪಡೆಯುವಷ್ಟು ಸಮಯಾವಕಾಶವು ಅವರಿಗೆ ಇರುವುದಿಲ್ಲ. ಬದಲಿಗೆ ಫಲಿತಾಂಶ ಪ್ರಕಟವಾದ ನಂತರ ಟಾಪರ್ ಆದ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ಹಣ ನೀಡುವ ಮೂಲಕ ನಮ್ಮ ಸಂಸ್ಥೆಯಲ್ಲಿ ತರಬೇತಿ ಪಡೆದವೆಂದು ಈ ಕೋಚಿಂಗ್ ಸೆಂಟರ್‌ಗಳು ಹೇಳಿಸುತ್ತಿವೆ. ತಮ್ಮದೇ ಸಂಸ್ಥೆಯ ಟೀ ಶರ್ಟ್ ಹಾಕಿಸಿ ಟಾಪರ್‌ಗಳ ಫೋಟೊ ತೆಗೆಸಿ ಜಾಹೀರಾತು ನೀಡುತ್ತಾರೆ. ಇದು ಮುಂದಿನ ವರ್ಷಕ್ಕೆ ವಿದ್ಯಾರ್ಥಿಗಳನ್ನು ಸೆಳೆಯುವ ಕುತಂತ್ರವಷ್ಟೇ” ಎಂದಿದ್ದಾರೆ.

ನಮ್ಮ ಕರ್ನಾಟಕದ ಉತ್ತಮ ಎನ್ನಬಹುದಾದ ಒಂದು ಕೋಚಿಂಗ್ ಸಂಸ್ಥೆಯ ಉದಾಹರಣೆ ಹೇಳುವುದಾದರೆ, ಎರಡು ವರ್ಷದ ಹಿಂದೆ ಆ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಯೊಬ್ಬ ಆಲ್ ಇಂಡಿಯಾ 9ನೇ ರ್ಯಾಂಕ್ ಪಡೆದ. ತಕ್ಷಣ ಬೇರೆ ಎರಡು ಕೋಚಿಂಗ್ ಸಂಸ್ಥೆಗಳು ಆತನಿಗೆ ಫೋನ್ ಮಾಡಿ ನಮ್ಮ ಸಂಸ್ಥೆಯಲ್ಲಿ ಕೋಚಿಂಗ್ ಪಡೆದ ಎಂದು ಹೇಳಿ, ಒಂದು ಫೋಟೊ ಕಳಿಸಿದರೆ 50 ಲಕ್ಷ ರೂ ನೀಡುವುದಾಗಿ ಆಮಿಷವೊಡ್ಡಿದರು. ಅದನ್ನು ತಡೆಯಲು ನಿಜವಾಗಿ ತರಬೇತಿ ನೀಡಿದ ಸಂಸ್ಥೆಯೇ ಕೊನೆಗೆ ಆ ವಿದ್ಯಾರ್ಥಿಗೆ 20 ಲಕ್ಷ ರೂ ಕೊಡಬೇಕಾಯಿತು ಎನ್ನುತ್ತಾರೆ ಉಮರ್.

ದೈತ್ಯಾಕಾರವಾಗಿ ಬೆಳೆದು ನಿಂತಿರುವ ಕೋಚಿಂಗ್ ಮಾಫಿಯಾ

ಈ ಮೊದಲು ವೈದ್ಯಕೀಯ ಪ್ರವೇಶಾತಿಗೆ ಸಿಇಟಿ ಪರೀಕ್ಷೆ ಇದ್ದಾಗ ಹೆಚ್ಚಿನ ತೊಂದರೆಯಿರುತ್ತಿರಲಿಲ್ಲ. ಆದರೆ ನೀಟ್ ಪರೀಕ್ಷೆ ಶುರುವಾದ ನಂತರ ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ. ಇಲ್ಲಿ ತಪ್ಪು ಉತ್ತರಕ್ಕೆ 1 ಅಂಕ ಕಳೆಯುವ ಮಾದರಿಯಿಂದಾಗಿ ಬಹಳಷ್ಟು ವಿದ್ಯಾರ್ಥಿಗಳು ಕಷ್ಟಪಡುತ್ತಿದ್ದಾರೆ. ಕೋಚಿಂಗ್ ಇಲ್ಲದೆ ಯಾವ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಕೋಚಿಂಗ್ ಹೆಸರಿನಲ್ಲಿ ಹತ್ತಾರು ಸಂಸ್ಥೆಗಳು ಪ್ರತಿ ವಿದ್ಯಾರ್ಥಿಯಿಂದ ಲಕ್ಷಾಂತರ ಶುಲ್ಕ ವಸೂಲಿ ಮಾಡುತ್ತಿವೆ.

ಉಮರ್ ಯು.ಎಚ್

ಪರೀಕ್ಷೆಗೆ 2 ತಿಂಗಳು ಇರುವಾಗ ಕ್ರಾಷ್ ಕೋರ್ಸ್‌ ಹೆಸರಿನಲ್ಲಿ ಮತ್ತೆ ವಿದ್ಯಾರ್ಥಿಗಳಿಂದ ಹಣ ಕಟ್ಟಿಸಿಕೊಳ್ಳಲಾಗುತ್ತಿದೆ. ಈ ರೀತಿಯಲ್ಲಿ ದೊಡ್ಡ ದಂಧೆಯಲ್ಲಿ ಹಲುವು ಸಂಸ್ಥೆಗಳು ನಡೆಯುತ್ತಿವೆ. ಪಿ.ಯು ಕಾಲೇಜು ನಡೆಸುತ್ತೇವೆ ಎಂದು ಪರ್ಮಿಷನ್ ಪಡೆದು ಕೇವಲ ಕೋಚಿಂಗ್ ನಡೆಸುವ ನೂರಾರು ಸಂಸ್ಥೆಗಳಿವೆ. ಜೊತೆಗೆ ಬೈಜುಸ್‌ನಂತಹ ಆನ್‌ಲೈನ್ ಕೋಚಿಂಗ್ ನೀಡುವ ಸಂಸ್ಥೆಗಳು ನುರಾರು ಕೋಟಿ ರೂ ಕೊಟ್ಟು ಕ್ರಿಕೆಟ್‌ ಟೂರ್ನಿಮೆಂಟ್‌ಗಳಿಗೆ ಪ್ರಾಯೋಜಕತ್ವ ವಹಿಸುವ ಮಟ್ಟಿಗೆ ಬೆಳೆದು ನಿಂತಿವೆ ಎಂದರೆ ಅವು ವಿದ್ಯಾರ್ಥಿಗಳಿಂದ ಯಾವ ಮಟ್ಟಿಗೆ ಲೂಟಿ ಮಾಡುತ್ತಿವೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು.

ಖಾಸಗಿ ಶಿಕ್ಷಣ ಸಂಸ್ಥೆಗಳ ಹಾವಳಿ- ಬಡ ಮಧ್ಯಮ ವರ್ಗದ ಮಕ್ಕಳ ಮೇಲೆ ಹಾನಿ

ವೀರಪ್ಪ ಮೊಯ್ಲಿಯವರು ಸಿಎಂ ಆಗಿದ್ದಾಗ ಸಿಇಟಿ ಪ್ರವೇಶ ಪರೀಕ್ಷೆ ಆರಂಭವಾಯಿತು. ಆಗ ಪ್ರತಿ ಖಾಸಗಿ ವೈದ್ಯಕೀಯ ಕಾಲೇಜುಗಳು ಸಹ ಶೇ.85 ರಷ್ಟು ಸರ್ಕಾರಿ ಕೋಟಾವನ್ನು ನೀಡಬೇಕಾಗಿತ್ತು. ಅದು ನಿಧಾನವಾಗಿ 70%, 50%ಗೆ ಇಳಿದು ಈಗ ಕೇವಲ 40% ಸರ್ಕಾರಿ ಕೋಟಾವನ್ನಷ್ಟೆ ನೀಡಲಾಗುತ್ತಿದೆ. ಉಳಿದ 60% ಮ್ಯಾನೇಜ್‌ಮೆಂಟ್‌ ಕೋಟಾವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತ ಸಂಸ್ಥೆಗಳು ಕೇವಲ 25% ಸರ್ಕಾರಿ ಕೋಟ ನಿಗಧಿ ಪಡಿಸುತ್ತಿವೆ. ಡೀಮ್ಡ್ ವಿವಿಗಳು ಕೇವಲ 08% ಸರ್ಕಾರಿ ಕೋಟಾ ನೀಡುತ್ತಿವೆ. ಈ ಮೂಲಕ ಮ್ಯಾನೇಜ್ ಮೆಂಟ್ ಕೋಟಾವನ್ನು ಸತತವಾಗಿ ಹೆಚ್ಚಿಸಿಕೊಂಡು ಅವುಗಳನ್ನು ಕೋಟಿ-ಕೋಟಿ ರೂಗಳಿಗೆ ಮಾರಿಕೊಳ್ಳಲಾಗುತ್ತಿದೆ.

ಇದರಿಂದಾಗಿ ಸರ್ಕಾರಿ ವೈದ್ಯಕೀಯ ಸೀಟುಗಳು ತೀರಾ ಕಡಿಮೆಯಾಗಿರುವುದರಿಂದ ಅವುಗಳಿಗೆ ಪೈಪೋಟಿ ತೀವ್ರವಾಗುತ್ತಿದೆ. ಕೆಲವೇ ಕೆಲವು ಸೀಟುಗಳಿಗಾಗಿ ಲಕ್ಷಾಂತರ ಮಕ್ಕಳು ಪೈಪೋಟಿ ನಡೆಸುತ್ತಿದ್ದು ನೀಟ್ ಪರೀಕ್ಷೆ ಮತ್ತಷ್ಟು ಮಗದಷ್ಟು ಕಠಿಣವಾಗುತ್ತಿದೆ. ದಕ್ಷಿಣ ಭಾರತದ ಮಕ್ಕಳಿಗೆ ನೀಟ್ ಪರೀಕ್ಷೆ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದೆ. ನೀಟ್ ಪರೀಕ್ಷೆಯಲ್ಲಿ ಸರ್ಕಾರಿ ಸೀಟು ಸಿಗದೆ, ಕೋಟ್ಯಾಂತರ ದುಡ್ಡು ಕೊಟ್ಟು ಖಾಸಗಿ ಸೀಟು ಪಡೆಯಲಾಗದೆ ಅದೆಷ್ಟೊ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳಿವೆ. ಆದರೂ ಸರ್ಕಾರ ಈ ಕೋಚಿಂಗ್ ಸೆಂಟರ್‌ಗಳಿಗೆ ಕಡಿವಾಣ ಹಾಕುತ್ತಿಲ್ಲ. ಏಕೆಂದರೆ ಸರ್ಕಾರ ತಮ್ಮ ಸರ್ಕಾರಿ ಕಾಲೇಜುಗಳಲ್ಲಿ ಸರಿಯಾದ ಶಿಕ್ಷಣ ಅಗತ್ಯ ಬಿದ್ದರೆ ಅತ್ಯುತ್ತಮ ಕೋಚಿಂಗ್ ನೀಡಿದರೆ ಈ ಹೊರಗಿನ ಕೋಚಿಂಗ್ ಅಗತ್ಯವಿಲ್ಲ. ಆದರೆ ಸರ್ಕಾರ ದಿನೇ ದಿನೇ ಶಿಕ್ಷಣ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿದು ಖಾಸಗೀಯವರಿಗೆ ವಹಿಸುತ್ತಿದೆ. ದುಡ್ಡಿದ್ದವರಿಗೆ ಮಾತ್ರ ಶಿಕ್ಷಣ ಎಂದಾಗುತ್ತಿದೆ ಎನ್ನುತ್ತಾರೆ ಉಮರ್.

ಖಾಸಗಿ ಕಾಲೇಜುಗಳಿಗೆ ಸರ್ಕಾರದ ಅಭಯ

ಒಂದು ಜವಾಬ್ದಾರಿಯುತ ಸರ್ಕಾರವಾದರೆ ಹೆಚ್ಚು ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆದು ಉಚಿತವಾಗಿ/ಅತಿ ಕಡಿಮೆ ವೆಚ್ಚದಲ್ಲಿ ಬಡ-ಮಧ್ಯಮ ವರ್ಗದ ಮಕ್ಕಳಿಗೆ ವೈದ್ಯಕೀಯ ಶಿಕ್ಷಣ ನೀಡಬೇಕು. ಹೀಗೆ ಶಿಕ್ಷಣ ಪಡೆದು ವೈದ್ಯರಾದವರು ನಿಜವಾಗಿಯೂ ಬಡವರ ಸೇವಾ ಮನೋಭಾವದಿಂದ ಕರ್ತವ್ಯ ಮಾಡಬಹುದು. ಆದರೆ ಇದಕ್ಕೆ ಸಂಪೂರ್ಣ ವ್ಯತಿರಿಕ್ತ ಪರಿಸ್ಥಿತಿಯಿದೆ. ದಿನೇ ದಿನೇ ಸರ್ಕಾರಿ ಕಾಲೇಜುಗಳು ಮತ್ತು ಸರ್ಕಾರಿ ವೈದ್ಯಕೀಯ ಸೀಟುಗಳು ಕಡಿಮೆಯಾಗುತ್ತಿವೆ. ಮ್ಯಾನೇಜ್‌ಮೆಂಟ್ ಕೋಟಾದ ಸೀಟುಗಳು ಹೆಚ್ಚಾಗುತ್ತಾ ಕೋಟ್ಯಾಂತರ ರೂಗಳಿಗೆ ಮಾರಾಟವಾಗುತ್ತಿವೆ. ಈ ರೀತಿ ಕೋಟಿ-ಕೋಟಿ ದುಡ್ಡು ಸುರಿದು ಕಲಿತು ವೈದ್ಯರಾದವರು ನಿಜವಾಗಿಯೂ ಬಡವರ ಸೇವೆ ಮಾಡುತ್ತಾರೆಯೇ? ಕಡಿಮೆ ಬೆಲೆ ಚಿಕಿತ್ಸೆ ಕೊಡುತ್ತಾರೆಯ? ಇಲ್ಲವೇ ಇಲ್ಲ. ಇದರಿಂದ ಆರೋಗ್ಯವೂ ವ್ಯಾಪಾರವಾಗುತ್ತಿದೆ. ದುಡ್ಡಿದ್ದವರಿಗೆ ಮಾತ್ರ ಉತ್ತಮ ಆರೋಗ್ಯ ಸಿಗುತ್ತಿದೆ.

ಈ ಪರಿಸ್ಥಿತಿಯನ್ನು ತಡೆಗಟ್ಟಬೇಕಾದ ಸರ್ಕಾರವೇ ಈ ಪರಿಸ್ಥಿತಿಗೆ ಕಾರಣವಾಗಿದೆ. ಏಕೆಂದರೆ ಎಲ್ಲಾ ರಾಜಕೀಯ ಪಕ್ಷಗಳ ಮತ್ತು ಎಲ್ಲಾ ಸರ್ಕಾರಗಳ ಪ್ರಭಾವಿ ವ್ಯಕ್ತಿಗಳು ಖಾಸಗಿ ಮೆಡಿಕಲ್ ಕಾಲೇಜುಗಳನ್ನು, ಡೀಮ್ಡ್‌ ವಿವಿಗಳನ್ನು ಹೊಂದಿದ್ದಾರೆ. ಇಂತಹ ಸಂದರ್ಭದಲ್ಲಿ ನಿಯಂತ್ರಣದ ಮಾತೆಲ್ಲಿ?

ಒಟ್ಟಿನಲ್ಲಿ ಇಂದು ಶಿಕ್ಷಣ ಮತ್ತು ಆರೋಗ್ಯ ಎರಡು ವ್ಯಾಪಾರೀಕರಣಗೊಂಡಿರುವ ಪರಿಸ್ಥಿತಿಯಲ್ಲಿ, ಕೋಚಿಂಗ್ ಸೆಂಟರ್‌ಗಳ ಅಬ್ಬರದಲ್ಲಿ ಬಡ-ಮಧ್ಯಮ ವರ್ಗದ, ತಳಸಮುದಾಯಗಳ ಮಕ್ಕಳು ವೈದ್ಯಕೀಯ ಶಿಕ್ಷಣದ ಕನಸು ಕಾಣುವುದು ದೂರದ ಮಾತಾಗಿದೆ. ಈ ಪರಿಸ್ಥಿತಿ ಬದಲಾವಣೆಗೆ ದೊಡ್ಡ ಜನಾಂದೋಲನದ ಅಗತ್ಯವಿದೆ.

ಇದನ್ನೂ ಓದಿ: ಪಠ್ಯಪರಿಷ್ಕರಣೆಯ ಬೇರಡಗಿರುವುದು ’ರಾಷ್ಟ್ರೀಯ ಶಿಕ್ಷಣ ನೀತಿ 2020’ರಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...