Homeಮುಖಪುಟಕೋಚಿಂಗ್ ಸೆಂಟರ್‌ಗಳ ದಂಧೆ; ನೀಟ್ ಟಾಪರ್ 3 ಸಂಸ್ಥೆಗಳಲ್ಲಿ ತರಬೇತಿ ಪಡೆದರೆಂದು ಸುಳ್ಳು ಹಂಚಿಕೆ

ಕೋಚಿಂಗ್ ಸೆಂಟರ್‌ಗಳ ದಂಧೆ; ನೀಟ್ ಟಾಪರ್ 3 ಸಂಸ್ಥೆಗಳಲ್ಲಿ ತರಬೇತಿ ಪಡೆದರೆಂದು ಸುಳ್ಳು ಹಂಚಿಕೆ

JEE ಪರೀಕ್ಷೆಯಲ್ಲಿ 11ನೇ ರ್ಯಾಂಕ್ ಪಡೆದ ವಿದ್ಯಾರ್ಥಿಗೆ ನಾವೇ ಕೋಚಿಂಗ್ ನೀಡಿದ್ದು ಎಂದು 5 ಕೋಚಿಂಗ್‌ ಸೆಂಟರ್‌ಗಳು ಜಾಹೀರಾತು ನೀಡಿವೆ!

- Advertisement -
- Advertisement -

2022ರ ಸಾಲಿನ ನೀಟ್ ಮತ್ತು JEE ಪರೀಕ್ಷೆಯಗಳ ಫಲಿತಾಂಶ ಹೊರಬಿದ್ದಿದೆ. ರಾಜಸ್ಥಾನದ ತನಿಷ್ಕ ಎಂಬ ವಿದ್ಯಾರ್ಥಿನಿ ನೀಟ್ ಪರೀಕ್ಷೆಯಲ್ಲಿ ಆಲ್‌ ಇಂಡಿಯಾ ಮೊದಲನೇ ರ್ಯಾಂಕ್ ಪಡೆದು ಟಾಪರ್ ಎನಿಸಿದ್ದಾರೆ. ಆಶ್ಚರ್ಯವೆಂದರೆ ಆ ವಿದ್ಯಾರ್ಥಿನಿಗೆ ಕೋಚಿಂಗ್ ನೀಡಿದ್ದು ನಾವೆ ಎಂದು ಮೂರು ಕೋಚಿಂಗ್ ಸೆಂಟರ್‌ಗಳು ಬಹುಮುಖ್ಯ ಪತ್ರಿಕೆಗಳಲ್ಲಿ ಮುಖಪುಟದ ಜಾಹೀರಾತು ಪ್ರಕಟಿಸಿದ್ದಾರೆ!

ಅದೇ ರೀತಿ JEE ಪರೀಕ್ಷೆಯಲ್ಲಿ 11ನೇ ರ್ಯಾಂಕ್ ಪಡೆದ ದೀವ್ಯಾಂಶು ಮಾಲು ಎಂಬ ವಿದ್ಯಾರ್ಥಿಯ ಭಾವಚಿತ್ರವನ್ನು 5 ಕೋಚಿಂಗ್‌ ಸೆಂಟರ್‌ಗಳ ತಮ್ಮ ಜಾಹೀರಾತಿನಲ್ಲಿ ಪ್ರಕಟಿಸುವ ಮೂಲಕ ನಾವೇ ಕೋಚಿಂಗ್ ನೀಡಿದ್ದು ಎಂದು ಹೇಳಿಕೊಂಡಿದ್ದಾರೆ. ಇದು ನಿಜವೇ? ಒಬ್ಬ ವಿದ್ಯಾರ್ಥಿ 5 ಕೋಚಿಂಗ್ ಸೆಂಟರ್‌ಗಳಲ್ಲಿ ತರಬೇತಿ ಪಡೆಯಲು ಸಾಧ್ಯವೇ ಎಂಬುದುರ ಕುರಿತು ಚರ್ಚಿಸೋಣ.

ನೀಟ್ ಟಾಪರ್ ತನಿಷ್ಕ ನಮ್ಮ ಸಂಸ್ಥೆಯಲ್ಲಿ ಕೋಚಿಂಗ್ ಪಡೆದಿದ್ದಾರೆ ಎಂದು ಅಲೆನ್, ಆಕಾಶ್ ಮತ್ತು ನಾರಾಯಣ ಕೋಚಿಂಗ್ ಸೆಂಟರ್‌ಗಳು ಪತ್ರಿಕೆಗಳ ಮುಖಪುಟದಲ್ಲಿ ಜಾಹೀರಾತು ನೀಡಿದ್ದಾರೆ. ಅದೇ ರೀತಿ JEE ಪರೀಕ್ಷೆಯಲ್ಲಿ 11ನೇ ರ್ಯಾಂಕ್ ಪಡೆದ ದೀವ್ಯಾಂಶು ಮಾಲುರವರು ನಮ್ಮಲ್ಲಿ ಕೋಚಿಂಗ್ ಪಡೆದಿದ್ದು ಎಂದು ಅಲೆನ್, ರೆಸೊನ್ಯಾನ್ಸ್, ಮೋಷನ್, ವೇದಾಂತು ಮತ್ತು FIIT JEE ಕೋಚಿಂಗ್ ಸಂಸ್ಥೆಗಳು ಹೇಳಿಕೊಂಡಿವೆ. ಈ ಕುರಿತು ಟ್ವಿಟರ್‌ನಲ್ಲಿ ಚರ್ಚೆ ಆರಂಭವಾಗಿದ್ದು ಇದು ಸುಳ್ಳು, ನೀಟ್ ತರಬೇತಿ ಆಕಾಂಕ್ಷಿಗಳನ್ನು ಸೆಳೆಯುವುದಕ್ಕಾಗಿ ಈ ಕೋಚಿಂಗ್ ಸೆಂಟರ್‌ಗಳು ಸುಳ್ಳು ಜಾಹೀರಾತುಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ, ಕಳೆದ 19 ವರ್ಷಗಳಿಂದ ವಿದ್ಯಾರ್ಥಿಗಳಿಗೆ ‘ಕರಿಯರ್ ಗೈಡೆನ್ಸ್,’ ‘ಕಲಿಕಾ ಕೌಶಲ,’ ‘ಸಿಇಟಿ/ನೀಟ್ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಮಾಡುತ್ತಿರುವ, ಮಂಗಳೂರಿನ ಕರಿಯರ್ ಗೈಡೆನ್ಸ್ ಆ್ಯಂಡ್ ಇನ್ಫರ್‌ಮೇಶನ್ ಸೆಂಟರ್‌ನ ಸ್ಥಾಪಕರಾದ ಉಮರ್ ಯು.ಎಚ್‌ರವರು, “ನೀಟ್ ಆಗಲಿ ಅಥವಾ JEE ಆಗಲಿ ಒಬ್ಬ ವಿದ್ಯಾರ್ಥಿ ಒಂದು ವರ್ಷದಲ್ಲಿ ಒಂದಕ್ಕಿಂತ ಹೆಚ್ಚು ಕೋಚಿಂಗ್ ಸೆಂಟರ್‌ಗಳಲ್ಲಿ ತರಬೇತಿ ಪಡೆದಿರುವುದಿಲ್ಲ. ಅಲ್ಲದೆ ಒಂದೊಂದು ವಿಷಯಕ್ಕೆ ಒಂದೊಂದು ಕೋಚಿಂಗ್ ಸೆಂಟರ್‌ನಲ್ಲಿ ಕೋಚಿಂಗ್ ಪಡೆಯುವಷ್ಟು ಸಮಯಾವಕಾಶವು ಅವರಿಗೆ ಇರುವುದಿಲ್ಲ. ಬದಲಿಗೆ ಫಲಿತಾಂಶ ಪ್ರಕಟವಾದ ನಂತರ ಟಾಪರ್ ಆದ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ಹಣ ನೀಡುವ ಮೂಲಕ ನಮ್ಮ ಸಂಸ್ಥೆಯಲ್ಲಿ ತರಬೇತಿ ಪಡೆದವೆಂದು ಈ ಕೋಚಿಂಗ್ ಸೆಂಟರ್‌ಗಳು ಹೇಳಿಸುತ್ತಿವೆ. ತಮ್ಮದೇ ಸಂಸ್ಥೆಯ ಟೀ ಶರ್ಟ್ ಹಾಕಿಸಿ ಟಾಪರ್‌ಗಳ ಫೋಟೊ ತೆಗೆಸಿ ಜಾಹೀರಾತು ನೀಡುತ್ತಾರೆ. ಇದು ಮುಂದಿನ ವರ್ಷಕ್ಕೆ ವಿದ್ಯಾರ್ಥಿಗಳನ್ನು ಸೆಳೆಯುವ ಕುತಂತ್ರವಷ್ಟೇ” ಎಂದಿದ್ದಾರೆ.

ನಮ್ಮ ಕರ್ನಾಟಕದ ಉತ್ತಮ ಎನ್ನಬಹುದಾದ ಒಂದು ಕೋಚಿಂಗ್ ಸಂಸ್ಥೆಯ ಉದಾಹರಣೆ ಹೇಳುವುದಾದರೆ, ಎರಡು ವರ್ಷದ ಹಿಂದೆ ಆ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಯೊಬ್ಬ ಆಲ್ ಇಂಡಿಯಾ 9ನೇ ರ್ಯಾಂಕ್ ಪಡೆದ. ತಕ್ಷಣ ಬೇರೆ ಎರಡು ಕೋಚಿಂಗ್ ಸಂಸ್ಥೆಗಳು ಆತನಿಗೆ ಫೋನ್ ಮಾಡಿ ನಮ್ಮ ಸಂಸ್ಥೆಯಲ್ಲಿ ಕೋಚಿಂಗ್ ಪಡೆದ ಎಂದು ಹೇಳಿ, ಒಂದು ಫೋಟೊ ಕಳಿಸಿದರೆ 50 ಲಕ್ಷ ರೂ ನೀಡುವುದಾಗಿ ಆಮಿಷವೊಡ್ಡಿದರು. ಅದನ್ನು ತಡೆಯಲು ನಿಜವಾಗಿ ತರಬೇತಿ ನೀಡಿದ ಸಂಸ್ಥೆಯೇ ಕೊನೆಗೆ ಆ ವಿದ್ಯಾರ್ಥಿಗೆ 20 ಲಕ್ಷ ರೂ ಕೊಡಬೇಕಾಯಿತು ಎನ್ನುತ್ತಾರೆ ಉಮರ್.

ದೈತ್ಯಾಕಾರವಾಗಿ ಬೆಳೆದು ನಿಂತಿರುವ ಕೋಚಿಂಗ್ ಮಾಫಿಯಾ

ಈ ಮೊದಲು ವೈದ್ಯಕೀಯ ಪ್ರವೇಶಾತಿಗೆ ಸಿಇಟಿ ಪರೀಕ್ಷೆ ಇದ್ದಾಗ ಹೆಚ್ಚಿನ ತೊಂದರೆಯಿರುತ್ತಿರಲಿಲ್ಲ. ಆದರೆ ನೀಟ್ ಪರೀಕ್ಷೆ ಶುರುವಾದ ನಂತರ ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ. ಇಲ್ಲಿ ತಪ್ಪು ಉತ್ತರಕ್ಕೆ 1 ಅಂಕ ಕಳೆಯುವ ಮಾದರಿಯಿಂದಾಗಿ ಬಹಳಷ್ಟು ವಿದ್ಯಾರ್ಥಿಗಳು ಕಷ್ಟಪಡುತ್ತಿದ್ದಾರೆ. ಕೋಚಿಂಗ್ ಇಲ್ಲದೆ ಯಾವ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಕೋಚಿಂಗ್ ಹೆಸರಿನಲ್ಲಿ ಹತ್ತಾರು ಸಂಸ್ಥೆಗಳು ಪ್ರತಿ ವಿದ್ಯಾರ್ಥಿಯಿಂದ ಲಕ್ಷಾಂತರ ಶುಲ್ಕ ವಸೂಲಿ ಮಾಡುತ್ತಿವೆ.

ಉಮರ್ ಯು.ಎಚ್

ಪರೀಕ್ಷೆಗೆ 2 ತಿಂಗಳು ಇರುವಾಗ ಕ್ರಾಷ್ ಕೋರ್ಸ್‌ ಹೆಸರಿನಲ್ಲಿ ಮತ್ತೆ ವಿದ್ಯಾರ್ಥಿಗಳಿಂದ ಹಣ ಕಟ್ಟಿಸಿಕೊಳ್ಳಲಾಗುತ್ತಿದೆ. ಈ ರೀತಿಯಲ್ಲಿ ದೊಡ್ಡ ದಂಧೆಯಲ್ಲಿ ಹಲುವು ಸಂಸ್ಥೆಗಳು ನಡೆಯುತ್ತಿವೆ. ಪಿ.ಯು ಕಾಲೇಜು ನಡೆಸುತ್ತೇವೆ ಎಂದು ಪರ್ಮಿಷನ್ ಪಡೆದು ಕೇವಲ ಕೋಚಿಂಗ್ ನಡೆಸುವ ನೂರಾರು ಸಂಸ್ಥೆಗಳಿವೆ. ಜೊತೆಗೆ ಬೈಜುಸ್‌ನಂತಹ ಆನ್‌ಲೈನ್ ಕೋಚಿಂಗ್ ನೀಡುವ ಸಂಸ್ಥೆಗಳು ನುರಾರು ಕೋಟಿ ರೂ ಕೊಟ್ಟು ಕ್ರಿಕೆಟ್‌ ಟೂರ್ನಿಮೆಂಟ್‌ಗಳಿಗೆ ಪ್ರಾಯೋಜಕತ್ವ ವಹಿಸುವ ಮಟ್ಟಿಗೆ ಬೆಳೆದು ನಿಂತಿವೆ ಎಂದರೆ ಅವು ವಿದ್ಯಾರ್ಥಿಗಳಿಂದ ಯಾವ ಮಟ್ಟಿಗೆ ಲೂಟಿ ಮಾಡುತ್ತಿವೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು.

ಖಾಸಗಿ ಶಿಕ್ಷಣ ಸಂಸ್ಥೆಗಳ ಹಾವಳಿ- ಬಡ ಮಧ್ಯಮ ವರ್ಗದ ಮಕ್ಕಳ ಮೇಲೆ ಹಾನಿ

ವೀರಪ್ಪ ಮೊಯ್ಲಿಯವರು ಸಿಎಂ ಆಗಿದ್ದಾಗ ಸಿಇಟಿ ಪ್ರವೇಶ ಪರೀಕ್ಷೆ ಆರಂಭವಾಯಿತು. ಆಗ ಪ್ರತಿ ಖಾಸಗಿ ವೈದ್ಯಕೀಯ ಕಾಲೇಜುಗಳು ಸಹ ಶೇ.85 ರಷ್ಟು ಸರ್ಕಾರಿ ಕೋಟಾವನ್ನು ನೀಡಬೇಕಾಗಿತ್ತು. ಅದು ನಿಧಾನವಾಗಿ 70%, 50%ಗೆ ಇಳಿದು ಈಗ ಕೇವಲ 40% ಸರ್ಕಾರಿ ಕೋಟಾವನ್ನಷ್ಟೆ ನೀಡಲಾಗುತ್ತಿದೆ. ಉಳಿದ 60% ಮ್ಯಾನೇಜ್‌ಮೆಂಟ್‌ ಕೋಟಾವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತ ಸಂಸ್ಥೆಗಳು ಕೇವಲ 25% ಸರ್ಕಾರಿ ಕೋಟ ನಿಗಧಿ ಪಡಿಸುತ್ತಿವೆ. ಡೀಮ್ಡ್ ವಿವಿಗಳು ಕೇವಲ 08% ಸರ್ಕಾರಿ ಕೋಟಾ ನೀಡುತ್ತಿವೆ. ಈ ಮೂಲಕ ಮ್ಯಾನೇಜ್ ಮೆಂಟ್ ಕೋಟಾವನ್ನು ಸತತವಾಗಿ ಹೆಚ್ಚಿಸಿಕೊಂಡು ಅವುಗಳನ್ನು ಕೋಟಿ-ಕೋಟಿ ರೂಗಳಿಗೆ ಮಾರಿಕೊಳ್ಳಲಾಗುತ್ತಿದೆ.

ಇದರಿಂದಾಗಿ ಸರ್ಕಾರಿ ವೈದ್ಯಕೀಯ ಸೀಟುಗಳು ತೀರಾ ಕಡಿಮೆಯಾಗಿರುವುದರಿಂದ ಅವುಗಳಿಗೆ ಪೈಪೋಟಿ ತೀವ್ರವಾಗುತ್ತಿದೆ. ಕೆಲವೇ ಕೆಲವು ಸೀಟುಗಳಿಗಾಗಿ ಲಕ್ಷಾಂತರ ಮಕ್ಕಳು ಪೈಪೋಟಿ ನಡೆಸುತ್ತಿದ್ದು ನೀಟ್ ಪರೀಕ್ಷೆ ಮತ್ತಷ್ಟು ಮಗದಷ್ಟು ಕಠಿಣವಾಗುತ್ತಿದೆ. ದಕ್ಷಿಣ ಭಾರತದ ಮಕ್ಕಳಿಗೆ ನೀಟ್ ಪರೀಕ್ಷೆ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದೆ. ನೀಟ್ ಪರೀಕ್ಷೆಯಲ್ಲಿ ಸರ್ಕಾರಿ ಸೀಟು ಸಿಗದೆ, ಕೋಟ್ಯಾಂತರ ದುಡ್ಡು ಕೊಟ್ಟು ಖಾಸಗಿ ಸೀಟು ಪಡೆಯಲಾಗದೆ ಅದೆಷ್ಟೊ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳಿವೆ. ಆದರೂ ಸರ್ಕಾರ ಈ ಕೋಚಿಂಗ್ ಸೆಂಟರ್‌ಗಳಿಗೆ ಕಡಿವಾಣ ಹಾಕುತ್ತಿಲ್ಲ. ಏಕೆಂದರೆ ಸರ್ಕಾರ ತಮ್ಮ ಸರ್ಕಾರಿ ಕಾಲೇಜುಗಳಲ್ಲಿ ಸರಿಯಾದ ಶಿಕ್ಷಣ ಅಗತ್ಯ ಬಿದ್ದರೆ ಅತ್ಯುತ್ತಮ ಕೋಚಿಂಗ್ ನೀಡಿದರೆ ಈ ಹೊರಗಿನ ಕೋಚಿಂಗ್ ಅಗತ್ಯವಿಲ್ಲ. ಆದರೆ ಸರ್ಕಾರ ದಿನೇ ದಿನೇ ಶಿಕ್ಷಣ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿದು ಖಾಸಗೀಯವರಿಗೆ ವಹಿಸುತ್ತಿದೆ. ದುಡ್ಡಿದ್ದವರಿಗೆ ಮಾತ್ರ ಶಿಕ್ಷಣ ಎಂದಾಗುತ್ತಿದೆ ಎನ್ನುತ್ತಾರೆ ಉಮರ್.

ಖಾಸಗಿ ಕಾಲೇಜುಗಳಿಗೆ ಸರ್ಕಾರದ ಅಭಯ

ಒಂದು ಜವಾಬ್ದಾರಿಯುತ ಸರ್ಕಾರವಾದರೆ ಹೆಚ್ಚು ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆದು ಉಚಿತವಾಗಿ/ಅತಿ ಕಡಿಮೆ ವೆಚ್ಚದಲ್ಲಿ ಬಡ-ಮಧ್ಯಮ ವರ್ಗದ ಮಕ್ಕಳಿಗೆ ವೈದ್ಯಕೀಯ ಶಿಕ್ಷಣ ನೀಡಬೇಕು. ಹೀಗೆ ಶಿಕ್ಷಣ ಪಡೆದು ವೈದ್ಯರಾದವರು ನಿಜವಾಗಿಯೂ ಬಡವರ ಸೇವಾ ಮನೋಭಾವದಿಂದ ಕರ್ತವ್ಯ ಮಾಡಬಹುದು. ಆದರೆ ಇದಕ್ಕೆ ಸಂಪೂರ್ಣ ವ್ಯತಿರಿಕ್ತ ಪರಿಸ್ಥಿತಿಯಿದೆ. ದಿನೇ ದಿನೇ ಸರ್ಕಾರಿ ಕಾಲೇಜುಗಳು ಮತ್ತು ಸರ್ಕಾರಿ ವೈದ್ಯಕೀಯ ಸೀಟುಗಳು ಕಡಿಮೆಯಾಗುತ್ತಿವೆ. ಮ್ಯಾನೇಜ್‌ಮೆಂಟ್ ಕೋಟಾದ ಸೀಟುಗಳು ಹೆಚ್ಚಾಗುತ್ತಾ ಕೋಟ್ಯಾಂತರ ರೂಗಳಿಗೆ ಮಾರಾಟವಾಗುತ್ತಿವೆ. ಈ ರೀತಿ ಕೋಟಿ-ಕೋಟಿ ದುಡ್ಡು ಸುರಿದು ಕಲಿತು ವೈದ್ಯರಾದವರು ನಿಜವಾಗಿಯೂ ಬಡವರ ಸೇವೆ ಮಾಡುತ್ತಾರೆಯೇ? ಕಡಿಮೆ ಬೆಲೆ ಚಿಕಿತ್ಸೆ ಕೊಡುತ್ತಾರೆಯ? ಇಲ್ಲವೇ ಇಲ್ಲ. ಇದರಿಂದ ಆರೋಗ್ಯವೂ ವ್ಯಾಪಾರವಾಗುತ್ತಿದೆ. ದುಡ್ಡಿದ್ದವರಿಗೆ ಮಾತ್ರ ಉತ್ತಮ ಆರೋಗ್ಯ ಸಿಗುತ್ತಿದೆ.

ಈ ಪರಿಸ್ಥಿತಿಯನ್ನು ತಡೆಗಟ್ಟಬೇಕಾದ ಸರ್ಕಾರವೇ ಈ ಪರಿಸ್ಥಿತಿಗೆ ಕಾರಣವಾಗಿದೆ. ಏಕೆಂದರೆ ಎಲ್ಲಾ ರಾಜಕೀಯ ಪಕ್ಷಗಳ ಮತ್ತು ಎಲ್ಲಾ ಸರ್ಕಾರಗಳ ಪ್ರಭಾವಿ ವ್ಯಕ್ತಿಗಳು ಖಾಸಗಿ ಮೆಡಿಕಲ್ ಕಾಲೇಜುಗಳನ್ನು, ಡೀಮ್ಡ್‌ ವಿವಿಗಳನ್ನು ಹೊಂದಿದ್ದಾರೆ. ಇಂತಹ ಸಂದರ್ಭದಲ್ಲಿ ನಿಯಂತ್ರಣದ ಮಾತೆಲ್ಲಿ?

ಒಟ್ಟಿನಲ್ಲಿ ಇಂದು ಶಿಕ್ಷಣ ಮತ್ತು ಆರೋಗ್ಯ ಎರಡು ವ್ಯಾಪಾರೀಕರಣಗೊಂಡಿರುವ ಪರಿಸ್ಥಿತಿಯಲ್ಲಿ, ಕೋಚಿಂಗ್ ಸೆಂಟರ್‌ಗಳ ಅಬ್ಬರದಲ್ಲಿ ಬಡ-ಮಧ್ಯಮ ವರ್ಗದ, ತಳಸಮುದಾಯಗಳ ಮಕ್ಕಳು ವೈದ್ಯಕೀಯ ಶಿಕ್ಷಣದ ಕನಸು ಕಾಣುವುದು ದೂರದ ಮಾತಾಗಿದೆ. ಈ ಪರಿಸ್ಥಿತಿ ಬದಲಾವಣೆಗೆ ದೊಡ್ಡ ಜನಾಂದೋಲನದ ಅಗತ್ಯವಿದೆ.

ಇದನ್ನೂ ಓದಿ: ಪಠ್ಯಪರಿಷ್ಕರಣೆಯ ಬೇರಡಗಿರುವುದು ’ರಾಷ್ಟ್ರೀಯ ಶಿಕ್ಷಣ ನೀತಿ 2020’ರಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...