Homeರಾಷ್ಟ್ರೀಯಕಲ್ಲಿದ್ದಲು ಬಿಕ್ಕಟ್ಟು: ವಿದ್ಯುತ್‌‌ ಸರಬರಾಜು ಇಲ್ಲದೆ ಮೆಟ್ರೋ, ಆಸ್ಪತ್ರೆಗಳಿಗೆ ಹಾನಿ ಎಚ್ಚರಿಕೆ

ಕಲ್ಲಿದ್ದಲು ಬಿಕ್ಕಟ್ಟು: ವಿದ್ಯುತ್‌‌ ಸರಬರಾಜು ಇಲ್ಲದೆ ಮೆಟ್ರೋ, ಆಸ್ಪತ್ರೆಗಳಿಗೆ ಹಾನಿ ಎಚ್ಚರಿಕೆ

- Advertisement -
- Advertisement -

ಕಲ್ಲಿದ್ದಲು ಕೊರತೆ ತೀವ್ರಗೊಳ್ಳುತ್ತಿರುವ ಬಿಕ್ಕಟ್ಟಿನ ಮಧ್ಯೆ, ಮೆಟ್ರೋ ರೈಲುಗಳು ಮತ್ತು ಆಸ್ಪತ್ರೆಗಳು ಸೇರಿದಂತೆ ದೆಹಲಿಯ ಪ್ರಮುಖ ಸಂಸ್ಥೆಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವಲ್ಲಿ ಹಿನ್ನಡೆ ಸಂಭವಿಸುವ ಸಾಧ್ಯತೆ ಇದೆ ಎಂದು ದೆಹಲಿ ಸರ್ಕಾರ ಎಚ್ಚರಿಕೆ ನೀಡಿದೆ.

ದೆಹಲಿಯ ವಿದ್ಯುತ್ ಸಚಿವ ಸತ್ಯೇಂದ್ರ ಜೈನ್ ಅವರು ಪರಿಸ್ಥಿತಿಯನ್ನು ನಿಭಾಯಿಸಲು ತುರ್ತು ಸಭೆ ನಡೆಸಿದ್ದು, ರಾಷ್ಟ್ರದ ರಾಜಧಾನಿಗೆ ವಿದ್ಯುತ್ ಸರಬರಾಜು ಮಾಡುವ ವಿದ್ಯುತ್ ಸ್ಥಾವರಗಳಿಗೆ ಸಾಕಷ್ಟು ಕಲ್ಲಿದ್ದಲು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದಾದ್ರಿ-II ಮತ್ತು ಉಂಚಹಾರ್ ವಿದ್ಯುತ್ ಸ್ಥಾವರಗಳಿಂದ ವಿದ್ಯುತ್ ಸರಬರಾಜಿನಲ್ಲಿ ಅಡಚಣೆಯಿಂದಾಗಿ, ದೆಹಲಿ ಮೆಟ್ರೋ ಮತ್ತು ದೆಹಲಿ ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಅನೇಕ ಅತ್ಯಗತ್ಯ ಸಂಸ್ಥೆಗಳಿಗೆ 24 ಗಂಟೆಗಳ ವಿದ್ಯುತ್ ಸರಬರಾಜಿನಲ್ಲಿ ಸಮಸ್ಯೆ ಉಂಟಾಗಬಹುದು” ಎಂದು ಸರ್ಕಾರದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

ಪ್ರಸ್ತುತ, ದೆಹಲಿಯ ವಿದ್ಯುತ್ ಬೇಡಿಕೆಯ 25% ದಿಂದ 30% ದಷ್ಟು ಈ ವಿದ್ಯುತ್ ಕೇಂದ್ರಗಳ ಮೂಲಕ ಪೂರೈಸಲಾಗುತ್ತಿದೆ. ಅಲ್ಲಿ ಕಲ್ಲಿದ್ದಲಿನ ಕೊರತೆ ಉಂಟಾಗಿದೆ ಎಂದು ಸತ್ಯೇಂದ್ರ ಜೈನ್‌ ಹೇಳಿದ್ದಾರೆ.

ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ರಾಜಧಾನಿಯ ಕೆಲವು ಪ್ರದೇಶಗಳಲ್ಲಿ ಜನರು ವಿದ್ಯುತ್ ಕಡಿತವನ್ನು ಎದುರಿಸದಂತೆ ನೋಡಿಕೊಳ್ಳಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

“ಈ ವಿದ್ಯುತ್ ಕೇಂದ್ರಗಳು ದೆಹಲಿಯ ಕೆಲವು ಭಾಗಗಳಲ್ಲಿ ಬ್ಲ್ಯಾಕ್‌ಔಟ್‌ಗಳನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಮುಂಬರುವ ಬೇಸಿಗೆಯಲ್ಲಿ ದೆಹಲಿ ಮೆಟ್ರೋ ರೈಲು ನಿಗಮ, ಆಸ್ಪತ್ರೆಗಳು ಮತ್ತು ಜನರಿಗೆ ನಿರಂತರ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಈ ಕೇಂದ್ರ ಅತ್ಯಗತ್ಯ” ಎಂದು ಸಚಿವರು ಹೇಳಿದ್ದಾರೆ.

ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ (NTPC) ನ ದಾದ್ರಿ-II ಮತ್ತು ಝಜ್ಜರ್ (ಅರಾವಲಿ) ಅನ್ನು ಪ್ರಾಥಮಿಕವಾಗಿ ದೆಹಲಿಗೆ ಬೇಕಾಗಿರುವ ವಿದ್ಯುತ್‌‌‌ ಅನ್ನು ಪೂರೈಸಲು ಸ್ಥಾಪಿಸಲಾಯಿತು. ಆದರೆ ಈ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲಿನ ದಾಸ್ತಾನು ಬಹಳ ಕಡಿಮೆ ಇದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

ದಾದ್ರಿ-II, ಉಂಚಹಾರ್, ಕಹಲ್ಗಾಂವ್, ಫರಕ್ಕಾ ಮತ್ತು ಝಜ್ಜರ್ ವಿದ್ಯುತ್ ಸ್ಥಾವರಗಳು ದೆಹಲಿಗೆ ದಿನಕ್ಕೆ 1,751 ಮೆಗಾವ್ಯಾಟ್ (MW) ವಿದ್ಯುತ್ ಪೂರೈಸುತ್ತವೆ. ದಾದ್ರಿ-II ವಿದ್ಯುತ್ ಕೇಂದ್ರದಿಂದ ಗರಿಷ್ಠ 728 ಮೆಗಾವ್ಯಾಟ್ ಪೂರೈಕೆಯನ್ನು ದೆಹಲಿ ಪಡೆಯುತ್ತಿದ್ದು, ಉಂಚಹಾರ್ ಕೇಂದ್ರದಿಂದ 100 ಮೆಗಾವ್ಯಾಟ್ ಪಡೆಯುತ್ತದೆ.

ನ್ಯಾಷನಲ್ ಪವರ್ ಪೋರ್ಟಲ್‌ನ ದೈನಂದಿನ ಕಲ್ಲಿದ್ದಲು ವರದಿಯ ಪ್ರಕಾರ, ಈ ಎಲ್ಲಾ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲಿನ ತೀವ್ರ ಕೊರತೆಯನ್ನು ಎದುರಿಸುತ್ತಿವೆ.

ಸುಡು ಬೇಸಿಗೆಯ ನಡುವೆ, ವಿದ್ಯುತ್‌ಗಾಗಿ ದಾಖಲೆಯ ಬೇಡಿಕೆಯನ್ನು ನಿರ್ವಹಿಸಲು ರಾಜ್ಯಗಳು ಹೆಣಗಾಡುತ್ತಿವೆ. ಈಗಾಗಲೆ ದೇಶದ ಹಲವು ಭಾಗಗಳಲ್ಲಿ ಬ್ಲ್ಯಾಕ್‌ಔಟ್‌(ಕರೆಂಟ್‌‌ ಕಟ್)ಗಳನ್ನು ಮಾಡಲಾಗುತ್ತಿದೆ.

ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಸುವ ಕ್ರಮಗಳ ಜೊತೆಗೆ, ದಾಸ್ತಾನುಗಳನ್ನು ನಿರ್ಮಿಸಲು ಬೇಕಾಗಿ ಮುಂದಿನ ಮೂರು ವರ್ಷಗಳವರೆಗೆ ಕಲ್ಲಿದ್ದಲಿನ ಆಮದುಗಳನ್ನು ಹೆಚ್ಚಿಸಲು ಒಕ್ಕೂಟ ಸರ್ಕಾರವು ರಾಜ್ಯಗಳನ್ನು ಕೇಳಿದೆ.

ಇದನ್ನೂ ಓದಿ: ಪಿಎಸ್‌ಐ ಹಗರಣದ ಕಿಂಗ್‌ ಪಿನ್‌, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನ

ದೇಶಾದ್ಯಂತ ಉಷ್ಣ ಸ್ಥಾವರಗಳು ಕಲ್ಲಿದ್ದಲು ಕೊರತೆಯನ್ನು ಎದುರಿಸುತ್ತಿವೆ. ಇದು ದೇಶದಲ್ಲಿ ವಿದ್ಯುತ್ ಬಿಕ್ಕಟ್ಟನ್ನು ಸೂಚಿಸುತ್ತದೆ ಎಂದು ಆಲ್ ಇಂಡಿಯಾ ಪವರ್ ಇಂಜಿನಿಯರ್ಸ್ ಫೆಡರೇಶನ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...