Homeರಾಷ್ಟ್ರೀಯಕಲ್ಲಿದ್ದಲು ಬಿಕ್ಕಟ್ಟು: ವಿದ್ಯುತ್‌‌ ಸರಬರಾಜು ಇಲ್ಲದೆ ಮೆಟ್ರೋ, ಆಸ್ಪತ್ರೆಗಳಿಗೆ ಹಾನಿ ಎಚ್ಚರಿಕೆ

ಕಲ್ಲಿದ್ದಲು ಬಿಕ್ಕಟ್ಟು: ವಿದ್ಯುತ್‌‌ ಸರಬರಾಜು ಇಲ್ಲದೆ ಮೆಟ್ರೋ, ಆಸ್ಪತ್ರೆಗಳಿಗೆ ಹಾನಿ ಎಚ್ಚರಿಕೆ

- Advertisement -
- Advertisement -

ಕಲ್ಲಿದ್ದಲು ಕೊರತೆ ತೀವ್ರಗೊಳ್ಳುತ್ತಿರುವ ಬಿಕ್ಕಟ್ಟಿನ ಮಧ್ಯೆ, ಮೆಟ್ರೋ ರೈಲುಗಳು ಮತ್ತು ಆಸ್ಪತ್ರೆಗಳು ಸೇರಿದಂತೆ ದೆಹಲಿಯ ಪ್ರಮುಖ ಸಂಸ್ಥೆಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವಲ್ಲಿ ಹಿನ್ನಡೆ ಸಂಭವಿಸುವ ಸಾಧ್ಯತೆ ಇದೆ ಎಂದು ದೆಹಲಿ ಸರ್ಕಾರ ಎಚ್ಚರಿಕೆ ನೀಡಿದೆ.

ದೆಹಲಿಯ ವಿದ್ಯುತ್ ಸಚಿವ ಸತ್ಯೇಂದ್ರ ಜೈನ್ ಅವರು ಪರಿಸ್ಥಿತಿಯನ್ನು ನಿಭಾಯಿಸಲು ತುರ್ತು ಸಭೆ ನಡೆಸಿದ್ದು, ರಾಷ್ಟ್ರದ ರಾಜಧಾನಿಗೆ ವಿದ್ಯುತ್ ಸರಬರಾಜು ಮಾಡುವ ವಿದ್ಯುತ್ ಸ್ಥಾವರಗಳಿಗೆ ಸಾಕಷ್ಟು ಕಲ್ಲಿದ್ದಲು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದಾದ್ರಿ-II ಮತ್ತು ಉಂಚಹಾರ್ ವಿದ್ಯುತ್ ಸ್ಥಾವರಗಳಿಂದ ವಿದ್ಯುತ್ ಸರಬರಾಜಿನಲ್ಲಿ ಅಡಚಣೆಯಿಂದಾಗಿ, ದೆಹಲಿ ಮೆಟ್ರೋ ಮತ್ತು ದೆಹಲಿ ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಅನೇಕ ಅತ್ಯಗತ್ಯ ಸಂಸ್ಥೆಗಳಿಗೆ 24 ಗಂಟೆಗಳ ವಿದ್ಯುತ್ ಸರಬರಾಜಿನಲ್ಲಿ ಸಮಸ್ಯೆ ಉಂಟಾಗಬಹುದು” ಎಂದು ಸರ್ಕಾರದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

ಪ್ರಸ್ತುತ, ದೆಹಲಿಯ ವಿದ್ಯುತ್ ಬೇಡಿಕೆಯ 25% ದಿಂದ 30% ದಷ್ಟು ಈ ವಿದ್ಯುತ್ ಕೇಂದ್ರಗಳ ಮೂಲಕ ಪೂರೈಸಲಾಗುತ್ತಿದೆ. ಅಲ್ಲಿ ಕಲ್ಲಿದ್ದಲಿನ ಕೊರತೆ ಉಂಟಾಗಿದೆ ಎಂದು ಸತ್ಯೇಂದ್ರ ಜೈನ್‌ ಹೇಳಿದ್ದಾರೆ.

ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ರಾಜಧಾನಿಯ ಕೆಲವು ಪ್ರದೇಶಗಳಲ್ಲಿ ಜನರು ವಿದ್ಯುತ್ ಕಡಿತವನ್ನು ಎದುರಿಸದಂತೆ ನೋಡಿಕೊಳ್ಳಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

“ಈ ವಿದ್ಯುತ್ ಕೇಂದ್ರಗಳು ದೆಹಲಿಯ ಕೆಲವು ಭಾಗಗಳಲ್ಲಿ ಬ್ಲ್ಯಾಕ್‌ಔಟ್‌ಗಳನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಮುಂಬರುವ ಬೇಸಿಗೆಯಲ್ಲಿ ದೆಹಲಿ ಮೆಟ್ರೋ ರೈಲು ನಿಗಮ, ಆಸ್ಪತ್ರೆಗಳು ಮತ್ತು ಜನರಿಗೆ ನಿರಂತರ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಈ ಕೇಂದ್ರ ಅತ್ಯಗತ್ಯ” ಎಂದು ಸಚಿವರು ಹೇಳಿದ್ದಾರೆ.

ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ (NTPC) ನ ದಾದ್ರಿ-II ಮತ್ತು ಝಜ್ಜರ್ (ಅರಾವಲಿ) ಅನ್ನು ಪ್ರಾಥಮಿಕವಾಗಿ ದೆಹಲಿಗೆ ಬೇಕಾಗಿರುವ ವಿದ್ಯುತ್‌‌‌ ಅನ್ನು ಪೂರೈಸಲು ಸ್ಥಾಪಿಸಲಾಯಿತು. ಆದರೆ ಈ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲಿನ ದಾಸ್ತಾನು ಬಹಳ ಕಡಿಮೆ ಇದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

ದಾದ್ರಿ-II, ಉಂಚಹಾರ್, ಕಹಲ್ಗಾಂವ್, ಫರಕ್ಕಾ ಮತ್ತು ಝಜ್ಜರ್ ವಿದ್ಯುತ್ ಸ್ಥಾವರಗಳು ದೆಹಲಿಗೆ ದಿನಕ್ಕೆ 1,751 ಮೆಗಾವ್ಯಾಟ್ (MW) ವಿದ್ಯುತ್ ಪೂರೈಸುತ್ತವೆ. ದಾದ್ರಿ-II ವಿದ್ಯುತ್ ಕೇಂದ್ರದಿಂದ ಗರಿಷ್ಠ 728 ಮೆಗಾವ್ಯಾಟ್ ಪೂರೈಕೆಯನ್ನು ದೆಹಲಿ ಪಡೆಯುತ್ತಿದ್ದು, ಉಂಚಹಾರ್ ಕೇಂದ್ರದಿಂದ 100 ಮೆಗಾವ್ಯಾಟ್ ಪಡೆಯುತ್ತದೆ.

ನ್ಯಾಷನಲ್ ಪವರ್ ಪೋರ್ಟಲ್‌ನ ದೈನಂದಿನ ಕಲ್ಲಿದ್ದಲು ವರದಿಯ ಪ್ರಕಾರ, ಈ ಎಲ್ಲಾ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲಿನ ತೀವ್ರ ಕೊರತೆಯನ್ನು ಎದುರಿಸುತ್ತಿವೆ.

ಸುಡು ಬೇಸಿಗೆಯ ನಡುವೆ, ವಿದ್ಯುತ್‌ಗಾಗಿ ದಾಖಲೆಯ ಬೇಡಿಕೆಯನ್ನು ನಿರ್ವಹಿಸಲು ರಾಜ್ಯಗಳು ಹೆಣಗಾಡುತ್ತಿವೆ. ಈಗಾಗಲೆ ದೇಶದ ಹಲವು ಭಾಗಗಳಲ್ಲಿ ಬ್ಲ್ಯಾಕ್‌ಔಟ್‌(ಕರೆಂಟ್‌‌ ಕಟ್)ಗಳನ್ನು ಮಾಡಲಾಗುತ್ತಿದೆ.

ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಸುವ ಕ್ರಮಗಳ ಜೊತೆಗೆ, ದಾಸ್ತಾನುಗಳನ್ನು ನಿರ್ಮಿಸಲು ಬೇಕಾಗಿ ಮುಂದಿನ ಮೂರು ವರ್ಷಗಳವರೆಗೆ ಕಲ್ಲಿದ್ದಲಿನ ಆಮದುಗಳನ್ನು ಹೆಚ್ಚಿಸಲು ಒಕ್ಕೂಟ ಸರ್ಕಾರವು ರಾಜ್ಯಗಳನ್ನು ಕೇಳಿದೆ.

ಇದನ್ನೂ ಓದಿ: ಪಿಎಸ್‌ಐ ಹಗರಣದ ಕಿಂಗ್‌ ಪಿನ್‌, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನ

ದೇಶಾದ್ಯಂತ ಉಷ್ಣ ಸ್ಥಾವರಗಳು ಕಲ್ಲಿದ್ದಲು ಕೊರತೆಯನ್ನು ಎದುರಿಸುತ್ತಿವೆ. ಇದು ದೇಶದಲ್ಲಿ ವಿದ್ಯುತ್ ಬಿಕ್ಕಟ್ಟನ್ನು ಸೂಚಿಸುತ್ತದೆ ಎಂದು ಆಲ್ ಇಂಡಿಯಾ ಪವರ್ ಇಂಜಿನಿಯರ್ಸ್ ಫೆಡರೇಶನ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...