Homeರಾಷ್ಟ್ರೀಯಕಲ್ಲಿದ್ದಲು ಬಿಕ್ಕಟ್ಟು: ವಿದ್ಯುತ್‌‌ ಸರಬರಾಜು ಇಲ್ಲದೆ ಮೆಟ್ರೋ, ಆಸ್ಪತ್ರೆಗಳಿಗೆ ಹಾನಿ ಎಚ್ಚರಿಕೆ

ಕಲ್ಲಿದ್ದಲು ಬಿಕ್ಕಟ್ಟು: ವಿದ್ಯುತ್‌‌ ಸರಬರಾಜು ಇಲ್ಲದೆ ಮೆಟ್ರೋ, ಆಸ್ಪತ್ರೆಗಳಿಗೆ ಹಾನಿ ಎಚ್ಚರಿಕೆ

- Advertisement -
- Advertisement -

ಕಲ್ಲಿದ್ದಲು ಕೊರತೆ ತೀವ್ರಗೊಳ್ಳುತ್ತಿರುವ ಬಿಕ್ಕಟ್ಟಿನ ಮಧ್ಯೆ, ಮೆಟ್ರೋ ರೈಲುಗಳು ಮತ್ತು ಆಸ್ಪತ್ರೆಗಳು ಸೇರಿದಂತೆ ದೆಹಲಿಯ ಪ್ರಮುಖ ಸಂಸ್ಥೆಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವಲ್ಲಿ ಹಿನ್ನಡೆ ಸಂಭವಿಸುವ ಸಾಧ್ಯತೆ ಇದೆ ಎಂದು ದೆಹಲಿ ಸರ್ಕಾರ ಎಚ್ಚರಿಕೆ ನೀಡಿದೆ.

ದೆಹಲಿಯ ವಿದ್ಯುತ್ ಸಚಿವ ಸತ್ಯೇಂದ್ರ ಜೈನ್ ಅವರು ಪರಿಸ್ಥಿತಿಯನ್ನು ನಿಭಾಯಿಸಲು ತುರ್ತು ಸಭೆ ನಡೆಸಿದ್ದು, ರಾಷ್ಟ್ರದ ರಾಜಧಾನಿಗೆ ವಿದ್ಯುತ್ ಸರಬರಾಜು ಮಾಡುವ ವಿದ್ಯುತ್ ಸ್ಥಾವರಗಳಿಗೆ ಸಾಕಷ್ಟು ಕಲ್ಲಿದ್ದಲು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದಾದ್ರಿ-II ಮತ್ತು ಉಂಚಹಾರ್ ವಿದ್ಯುತ್ ಸ್ಥಾವರಗಳಿಂದ ವಿದ್ಯುತ್ ಸರಬರಾಜಿನಲ್ಲಿ ಅಡಚಣೆಯಿಂದಾಗಿ, ದೆಹಲಿ ಮೆಟ್ರೋ ಮತ್ತು ದೆಹಲಿ ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಅನೇಕ ಅತ್ಯಗತ್ಯ ಸಂಸ್ಥೆಗಳಿಗೆ 24 ಗಂಟೆಗಳ ವಿದ್ಯುತ್ ಸರಬರಾಜಿನಲ್ಲಿ ಸಮಸ್ಯೆ ಉಂಟಾಗಬಹುದು” ಎಂದು ಸರ್ಕಾರದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

ಪ್ರಸ್ತುತ, ದೆಹಲಿಯ ವಿದ್ಯುತ್ ಬೇಡಿಕೆಯ 25% ದಿಂದ 30% ದಷ್ಟು ಈ ವಿದ್ಯುತ್ ಕೇಂದ್ರಗಳ ಮೂಲಕ ಪೂರೈಸಲಾಗುತ್ತಿದೆ. ಅಲ್ಲಿ ಕಲ್ಲಿದ್ದಲಿನ ಕೊರತೆ ಉಂಟಾಗಿದೆ ಎಂದು ಸತ್ಯೇಂದ್ರ ಜೈನ್‌ ಹೇಳಿದ್ದಾರೆ.

ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ರಾಜಧಾನಿಯ ಕೆಲವು ಪ್ರದೇಶಗಳಲ್ಲಿ ಜನರು ವಿದ್ಯುತ್ ಕಡಿತವನ್ನು ಎದುರಿಸದಂತೆ ನೋಡಿಕೊಳ್ಳಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

“ಈ ವಿದ್ಯುತ್ ಕೇಂದ್ರಗಳು ದೆಹಲಿಯ ಕೆಲವು ಭಾಗಗಳಲ್ಲಿ ಬ್ಲ್ಯಾಕ್‌ಔಟ್‌ಗಳನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಮುಂಬರುವ ಬೇಸಿಗೆಯಲ್ಲಿ ದೆಹಲಿ ಮೆಟ್ರೋ ರೈಲು ನಿಗಮ, ಆಸ್ಪತ್ರೆಗಳು ಮತ್ತು ಜನರಿಗೆ ನಿರಂತರ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಈ ಕೇಂದ್ರ ಅತ್ಯಗತ್ಯ” ಎಂದು ಸಚಿವರು ಹೇಳಿದ್ದಾರೆ.

ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ (NTPC) ನ ದಾದ್ರಿ-II ಮತ್ತು ಝಜ್ಜರ್ (ಅರಾವಲಿ) ಅನ್ನು ಪ್ರಾಥಮಿಕವಾಗಿ ದೆಹಲಿಗೆ ಬೇಕಾಗಿರುವ ವಿದ್ಯುತ್‌‌‌ ಅನ್ನು ಪೂರೈಸಲು ಸ್ಥಾಪಿಸಲಾಯಿತು. ಆದರೆ ಈ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲಿನ ದಾಸ್ತಾನು ಬಹಳ ಕಡಿಮೆ ಇದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

ದಾದ್ರಿ-II, ಉಂಚಹಾರ್, ಕಹಲ್ಗಾಂವ್, ಫರಕ್ಕಾ ಮತ್ತು ಝಜ್ಜರ್ ವಿದ್ಯುತ್ ಸ್ಥಾವರಗಳು ದೆಹಲಿಗೆ ದಿನಕ್ಕೆ 1,751 ಮೆಗಾವ್ಯಾಟ್ (MW) ವಿದ್ಯುತ್ ಪೂರೈಸುತ್ತವೆ. ದಾದ್ರಿ-II ವಿದ್ಯುತ್ ಕೇಂದ್ರದಿಂದ ಗರಿಷ್ಠ 728 ಮೆಗಾವ್ಯಾಟ್ ಪೂರೈಕೆಯನ್ನು ದೆಹಲಿ ಪಡೆಯುತ್ತಿದ್ದು, ಉಂಚಹಾರ್ ಕೇಂದ್ರದಿಂದ 100 ಮೆಗಾವ್ಯಾಟ್ ಪಡೆಯುತ್ತದೆ.

ನ್ಯಾಷನಲ್ ಪವರ್ ಪೋರ್ಟಲ್‌ನ ದೈನಂದಿನ ಕಲ್ಲಿದ್ದಲು ವರದಿಯ ಪ್ರಕಾರ, ಈ ಎಲ್ಲಾ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲಿನ ತೀವ್ರ ಕೊರತೆಯನ್ನು ಎದುರಿಸುತ್ತಿವೆ.

ಸುಡು ಬೇಸಿಗೆಯ ನಡುವೆ, ವಿದ್ಯುತ್‌ಗಾಗಿ ದಾಖಲೆಯ ಬೇಡಿಕೆಯನ್ನು ನಿರ್ವಹಿಸಲು ರಾಜ್ಯಗಳು ಹೆಣಗಾಡುತ್ತಿವೆ. ಈಗಾಗಲೆ ದೇಶದ ಹಲವು ಭಾಗಗಳಲ್ಲಿ ಬ್ಲ್ಯಾಕ್‌ಔಟ್‌(ಕರೆಂಟ್‌‌ ಕಟ್)ಗಳನ್ನು ಮಾಡಲಾಗುತ್ತಿದೆ.

ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಸುವ ಕ್ರಮಗಳ ಜೊತೆಗೆ, ದಾಸ್ತಾನುಗಳನ್ನು ನಿರ್ಮಿಸಲು ಬೇಕಾಗಿ ಮುಂದಿನ ಮೂರು ವರ್ಷಗಳವರೆಗೆ ಕಲ್ಲಿದ್ದಲಿನ ಆಮದುಗಳನ್ನು ಹೆಚ್ಚಿಸಲು ಒಕ್ಕೂಟ ಸರ್ಕಾರವು ರಾಜ್ಯಗಳನ್ನು ಕೇಳಿದೆ.

ಇದನ್ನೂ ಓದಿ: ಪಿಎಸ್‌ಐ ಹಗರಣದ ಕಿಂಗ್‌ ಪಿನ್‌, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನ

ದೇಶಾದ್ಯಂತ ಉಷ್ಣ ಸ್ಥಾವರಗಳು ಕಲ್ಲಿದ್ದಲು ಕೊರತೆಯನ್ನು ಎದುರಿಸುತ್ತಿವೆ. ಇದು ದೇಶದಲ್ಲಿ ವಿದ್ಯುತ್ ಬಿಕ್ಕಟ್ಟನ್ನು ಸೂಚಿಸುತ್ತದೆ ಎಂದು ಆಲ್ ಇಂಡಿಯಾ ಪವರ್ ಇಂಜಿನಿಯರ್ಸ್ ಫೆಡರೇಶನ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...