Homeರಾಜಕೀಯಕಲ್ಲಿದ್ದಲು ಹಗರಣ: ಅಭಿಷೇಕ್ ಬ್ಯಾನರ್ಜಿ ಪತ್ನಿ ರುಜಿರಾ ಬ್ಯಾನರ್ಜಿ ವಿರುದ್ಧ ವಾರೆಂಟ್

ಕಲ್ಲಿದ್ದಲು ಹಗರಣ: ಅಭಿಷೇಕ್ ಬ್ಯಾನರ್ಜಿ ಪತ್ನಿ ರುಜಿರಾ ಬ್ಯಾನರ್ಜಿ ವಿರುದ್ಧ ವಾರೆಂಟ್

- Advertisement -
- Advertisement -

ಕಲ್ಲಿದ್ದಲು ಹಗರಣ ಸಂಬಂಧಿಸಿ ತೃಣಮೂಲ ಕಾಂಗ್ರೆಸ್‌‌‌ ನಾಯಕ ಅಭಿಷೇಕ್‌ ಬ್ಯಾನರ್ಜಿ ಅವರ ಪತ್ನಿ ರುಜಿರಾ ಬ್ಯಾನರ್ಜಿ ವಿರುದ್ಧ ದೆಹಲಿ ನ್ಯಾಯಾಲಯ ಶನಿವಾರ ವಾರಂಟ್ ಹೊರಡಿಸಿದೆ. ಪ್ರಕರಣದ ತನಿಖೆಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ಯಿಂದ ತನಿಖೆಗೆ ಹಾಜರಾಗಲು ಅವರಿಗೆ ಸಮನ್ಸ್ ನೀಡಲಾಗಿತ್ತು, ಆದರೆ ಅವರು ತನಿಖೆಗೆ ಹಾಜರಾಗದ ಕಾರಣ ಅವರಿಗೆ ವಾರಂಟ್‌ ಹೊರಡಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಆಪಾದಿತ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅವರಿಗೆ ಸಮನ್ಸ್ ನೀಡಿತ್ತು. ಆದರೆ ಅವರು ಹಾಜರಾಗಿರಲಿಲ್ಲ, ಹೀಗಾಗಿ ಅವರಿಗೆ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧಾ ಸರ್ವರಿಯಾ ಅವರು ವಾರಂಟ್ ಹೊರಡಿಸಿದ್ದಾರೆ. ನ್ಯಾಯಾಲಯವು ಅವರ ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಜಾರಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರುಜಿರಾ ಬ್ಯಾನರ್ಜಿ‌ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್‌ ಬ್ಯಾನರ್ಜಿ ಅವರ ಪತ್ನಿ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 20 ರಂದು ನಡೆಯಲಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಪಕ್ಷ ತನ್ನ ಹಿಂದಿನ ವೈಭವಕ್ಕೆ ಮರಳಲಿದೆ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನಿತೇಶ್ ರಾಣಾ ಅವರು ಇಡಿಯನ್ನು ಪ್ರತಿನಿಧಿಸಿ, ಆರೋಪಿಗಳು ಅನೇಕ ಸಮನ್ಸ್‌ಗಳನ್ನು ನೀಡಿದ್ದರೂ ನ್ಯಾಯಾಲಯ ಅಥವಾ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲಿಲ್ಲ ಎಂದು ಐಎಎನ್‌ಎಸ್‌ನ ವರದಿ ಮಾಡಿದೆ.

ಕಳೆದ ತಿಂಗಳು, ಪ್ರಕರಣದಲ್ಲಿ ಇಡಿ ಸಮನ್ಸ್ ಅನ್ನು ಪ್ರಶ್ನಿಸಿ ದಂಪತಿಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಮಾರ್ಚ್ 21 ಮತ್ತು 22 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ದಂಪತಿಗೆ ಸಮನ್ಸ್ ನೀಡಿದೆ.

ಅಭಿಷೇಕ್ ಮತ್ತು ರುಜಿರಾ ಬ್ಯಾನರ್ಜಿ ಅವರು ಈ ಹಿಂದೆ ಇಡಿ ಸಮನ್ಸ್‌ನ ವಿರುದ್ಧ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಇಬ್ಬರೂ ಪಶ್ಚಿಮ ಬಂಗಾಳದ ನಿವಾಸಿಗಳಾಗಿರುವುದರಿಂದ, ದೆಹಲಿಯಲ್ಲಿ ವಿಚಾರಣೆಗೆ ಕರೆಯಬಾರದು ಎಂದು ಪ್ರತಿಪಾದಿಸಿದ್ದರು. ಆದರೆ ಮಾರ್ಚ್ 11 ರಂದು ಹೈಕೋರ್ಟ್ ಅವರ ಮನವಿಯನ್ನು ವಜಾಗೊಳಿಸಿತ್ತು.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಹಿಂಸಾಚಾರದಲ್ಲಿ ಎಂಟು ಮಂದಿ ಸಾವು; ರಾಜಕೀಯ ಕೆಸರೆರಚಾಟ

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದಂಪತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್‌‌ಗೆ ಸಲ್ಲಿಸಿದ ಮನವಿಯಲ್ಲಿ ಅವರು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಸೋಲಿಸಿ ಕಾರಣಕ್ಕೆ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಅವರನ್ನು ಗುರಿ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.

ಕೋಲ್ಕತ್ತಾದಲ್ಲಿ ಮೊದಲು ಅರ್ಜಿದಾರರನ್ನು ವಿಚಾರಣೆಗೆ ಒಳಪಡಿಸಲು ಇಡಿ ಪ್ರಯತ್ನಿಸಲಿಲ್ಲ ಮತ್ತು ನಗರದಲ್ಲಿರುವ ಅವರ ಪೂರ್ಣ ಪ್ರಮಾಣದ ಕಚೇರಿಯಲ್ಲಿ ಅವರನ್ನು ವಿಚಾರಣೆ ನಡೆಸಿದರೆ ಇಡಿ ಎದುರಿಸುವ ಅಡೆತಡೆಗಳೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...