Homeರಾಜಕೀಯಕಲ್ಲಿದ್ದಲು ಹಗರಣ: ಅಭಿಷೇಕ್ ಬ್ಯಾನರ್ಜಿ ಪತ್ನಿ ರುಜಿರಾ ಬ್ಯಾನರ್ಜಿ ವಿರುದ್ಧ ವಾರೆಂಟ್

ಕಲ್ಲಿದ್ದಲು ಹಗರಣ: ಅಭಿಷೇಕ್ ಬ್ಯಾನರ್ಜಿ ಪತ್ನಿ ರುಜಿರಾ ಬ್ಯಾನರ್ಜಿ ವಿರುದ್ಧ ವಾರೆಂಟ್

- Advertisement -
- Advertisement -

ಕಲ್ಲಿದ್ದಲು ಹಗರಣ ಸಂಬಂಧಿಸಿ ತೃಣಮೂಲ ಕಾಂಗ್ರೆಸ್‌‌‌ ನಾಯಕ ಅಭಿಷೇಕ್‌ ಬ್ಯಾನರ್ಜಿ ಅವರ ಪತ್ನಿ ರುಜಿರಾ ಬ್ಯಾನರ್ಜಿ ವಿರುದ್ಧ ದೆಹಲಿ ನ್ಯಾಯಾಲಯ ಶನಿವಾರ ವಾರಂಟ್ ಹೊರಡಿಸಿದೆ. ಪ್ರಕರಣದ ತನಿಖೆಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ಯಿಂದ ತನಿಖೆಗೆ ಹಾಜರಾಗಲು ಅವರಿಗೆ ಸಮನ್ಸ್ ನೀಡಲಾಗಿತ್ತು, ಆದರೆ ಅವರು ತನಿಖೆಗೆ ಹಾಜರಾಗದ ಕಾರಣ ಅವರಿಗೆ ವಾರಂಟ್‌ ಹೊರಡಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಆಪಾದಿತ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅವರಿಗೆ ಸಮನ್ಸ್ ನೀಡಿತ್ತು. ಆದರೆ ಅವರು ಹಾಜರಾಗಿರಲಿಲ್ಲ, ಹೀಗಾಗಿ ಅವರಿಗೆ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧಾ ಸರ್ವರಿಯಾ ಅವರು ವಾರಂಟ್ ಹೊರಡಿಸಿದ್ದಾರೆ. ನ್ಯಾಯಾಲಯವು ಅವರ ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಜಾರಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರುಜಿರಾ ಬ್ಯಾನರ್ಜಿ‌ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್‌ ಬ್ಯಾನರ್ಜಿ ಅವರ ಪತ್ನಿ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 20 ರಂದು ನಡೆಯಲಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಪಕ್ಷ ತನ್ನ ಹಿಂದಿನ ವೈಭವಕ್ಕೆ ಮರಳಲಿದೆ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನಿತೇಶ್ ರಾಣಾ ಅವರು ಇಡಿಯನ್ನು ಪ್ರತಿನಿಧಿಸಿ, ಆರೋಪಿಗಳು ಅನೇಕ ಸಮನ್ಸ್‌ಗಳನ್ನು ನೀಡಿದ್ದರೂ ನ್ಯಾಯಾಲಯ ಅಥವಾ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲಿಲ್ಲ ಎಂದು ಐಎಎನ್‌ಎಸ್‌ನ ವರದಿ ಮಾಡಿದೆ.

ಕಳೆದ ತಿಂಗಳು, ಪ್ರಕರಣದಲ್ಲಿ ಇಡಿ ಸಮನ್ಸ್ ಅನ್ನು ಪ್ರಶ್ನಿಸಿ ದಂಪತಿಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಮಾರ್ಚ್ 21 ಮತ್ತು 22 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ದಂಪತಿಗೆ ಸಮನ್ಸ್ ನೀಡಿದೆ.

ಅಭಿಷೇಕ್ ಮತ್ತು ರುಜಿರಾ ಬ್ಯಾನರ್ಜಿ ಅವರು ಈ ಹಿಂದೆ ಇಡಿ ಸಮನ್ಸ್‌ನ ವಿರುದ್ಧ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಇಬ್ಬರೂ ಪಶ್ಚಿಮ ಬಂಗಾಳದ ನಿವಾಸಿಗಳಾಗಿರುವುದರಿಂದ, ದೆಹಲಿಯಲ್ಲಿ ವಿಚಾರಣೆಗೆ ಕರೆಯಬಾರದು ಎಂದು ಪ್ರತಿಪಾದಿಸಿದ್ದರು. ಆದರೆ ಮಾರ್ಚ್ 11 ರಂದು ಹೈಕೋರ್ಟ್ ಅವರ ಮನವಿಯನ್ನು ವಜಾಗೊಳಿಸಿತ್ತು.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಹಿಂಸಾಚಾರದಲ್ಲಿ ಎಂಟು ಮಂದಿ ಸಾವು; ರಾಜಕೀಯ ಕೆಸರೆರಚಾಟ

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದಂಪತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್‌‌ಗೆ ಸಲ್ಲಿಸಿದ ಮನವಿಯಲ್ಲಿ ಅವರು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಸೋಲಿಸಿ ಕಾರಣಕ್ಕೆ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಅವರನ್ನು ಗುರಿ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.

ಕೋಲ್ಕತ್ತಾದಲ್ಲಿ ಮೊದಲು ಅರ್ಜಿದಾರರನ್ನು ವಿಚಾರಣೆಗೆ ಒಳಪಡಿಸಲು ಇಡಿ ಪ್ರಯತ್ನಿಸಲಿಲ್ಲ ಮತ್ತು ನಗರದಲ್ಲಿರುವ ಅವರ ಪೂರ್ಣ ಪ್ರಮಾಣದ ಕಚೇರಿಯಲ್ಲಿ ಅವರನ್ನು ವಿಚಾರಣೆ ನಡೆಸಿದರೆ ಇಡಿ ಎದುರಿಸುವ ಅಡೆತಡೆಗಳೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...