Homeಅಂತರಾಷ್ಟ್ರೀಯಕೊರೊನಾ ಎದುರಿಸಲು ಸಿದ್ಧರಾಗಿದ್ದೇವೆ ; ಮೋದಿ ಮನವಿಗೆ ಪಾಕ್‌ ಪ್ರತಿಕ್ರಿಯೆ

ಕೊರೊನಾ ಎದುರಿಸಲು ಸಿದ್ಧರಾಗಿದ್ದೇವೆ ; ಮೋದಿ ಮನವಿಗೆ ಪಾಕ್‌ ಪ್ರತಿಕ್ರಿಯೆ

ಕರೋನ ವೈರಸ್ ವಿರುದ್ಧ ಹೋರಾಡಲು "ಸಾರ್ಕ್" ದೇಶಗಳ ಒಗ್ಗಟ್ಟು..

- Advertisement -
- Advertisement -

ಕರೋನ ವೈರಸ್ ಹಾಗೂ ಸಾಂಕ್ರಾಮಿಕ ರೋಗಗಳ ವಿರುದ್ಧ ಒಟ್ಟಾಗಿ ಕೆಲಸ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ಕ್ ರಾಷ್ಟ್ರಗಳಿಗೆ ಕರೆ ನೀಡಿದ ಒಂದು ದಿನದ ನಂತರ, ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರ ಟ್ವೀಟ್ಟರ್‌ನಲ್ಲಿ  “ಕೊರೋನ ವೈರಸ್ ವಿರುದ್ಧ ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಸಂಘಟಿತ ಪ್ರಯತ್ನಗಳ ಅಗತ್ಯವಿದೆ. ಈ ವಿಷಯದ ಬಗ್ಗೆ ಸಾರ್ಕ್ ಸದಸ್ಯ ರಾಷ್ಟ್ರಗಳ ವೀಡಿಯೊ ಸಮ್ಮೇಳನದಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿಯ ವಿಶೇಷ ಸಹಾಯಕ ಇರಲಿದ್ದಾರೆ” ಎಂದು ಟ್ವೀಟ್ ಮಾಡಲಾಗಿದೆ.

ಪಾಕಿಸ್ತಾನ ತನ್ನ ನೆರೆಹೊರೆಯವರಿಗೆ ನೆರವು ನೀಡಲು ಸಿದ್ಧವಾಗಿದೆ ಎಂದು ವಕ್ತಾರರು ಈ ಹಿಂದೆ ಹೇಳಿದ್ದರು.  ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಈಗಾಗಲೇ ಕರೋನ ವೈರಸ್ ವಿರುದ್ಧ ರಾಷ್ಟ್ರೀಯ ಭದ್ರತೆಯ ಕುರಿತು ತುರ್ತು ಸಭೆಯನ್ನು ನಡೆಸಿದ್ದಾರೆ ಎಂದು ತಿಳಿಸಲಾಗಿದೆ.

ವಿಶ್ವಾದ್ಯಂತ 5,000 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡ ಹಾಗೂ 1.3 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ ಕರೋನ ವೈರಸ್ ವಿರುದ್ದ ಹೋರಾಡಲು ಭಾರತದ ನೆರೆಹೊರೆಯವರು ಕೈಜೋಡಿಸಬೇಕೆಂದು ಶುಕ್ರವಾರ ಪ್ರಧಾನಿ ಮೋದಿ ಒತ್ತಾಯಿಸಿದ್ದರು.

“ಸಾರ್ಕ್ ರಾಷ್ಟ್ರಗಳ ನಾಯಕತ್ವವು ಕರೋನವೈರಸ್ ವಿರುದ್ಧ ಹೋರಾಡಲು ಬಲವಾದ ಕಾರ್ಯತಂತ್ರವನ್ನು ರೂಪಿಸುತ್ತದೆ ಎಂದು ನಾನು ಪ್ರಸ್ತಾಪಿಸಲು ಬಯಸುತ್ತೇನೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಾಗರಿಕರನ್ನು ಆರೋಗ್ಯವಾಗಿಡುವ ಮಾರ್ಗಗಳ ಬಗ್ಗೆ ನಾವು ಚರ್ಚಿಸಬಹುದು” ಎಂದು ಪ್ರಧಾನಿ ಟ್ವೀಟ್ ಮಾಡಿದ್ದರು.

ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ ಮತ್ತು ಶ್ರೀಲಂಕಾ ದೇಶಗಳು “ಸಾರ್ಕ್” ಸದಸ್ಯರಾಗಿದ್ದಾರೆ.

ಪ್ರಧಾನ ಮಂತ್ರಿಯ ಕರೆಗೆ ಭೂತಾನ್‌ನ ಪ್ರಧಾನ ಮಂತ್ರಿ ಲೋಟೇ ತ್ಸೆರಿಂಗ್ ಉತ್ತರಿಸುತ್ತಾ: ” ಇಂತಹ ಕಾಲದಲ್ಲಿ ನಾವು ಒಗ್ಗೂಡಬೇಕು. ಸಣ್ಣ ಆರ್ಥಿಕತೆಗಳಿಗೆ ತೀವ್ರ ಹೊಡೆತ ಬಿದ್ದಿದೆ, ಆದ್ದರಿಂದ ವೀಡಿಯೋ ಕಾನ್ಫ್ರೆನ್ಸ್ ಗಾಗಿ ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.

ಶ್ರೀಲಂಕಾ ಅಧ್ಯಕ್ಷೆ ಗೋಟಬಯಾ ರಾಜಪಕ್ಸೆ ಕೂಡ ಪ್ರತಿಕ್ರಿಯಿಸಿ “ಶ್ರೀ ನರೇಂದ್ರ ಮೋದಿಯವರ ಆಹ್ವಾನಕ್ಕೆ ಧನ್ಯವಾದಗಳು. ಶ್ರೀಲಂಕಾ ಚರ್ಚೆಗೆ ಸೇರಲು, ಕಲಿಕೆಗಳನ್ನು ಮತ್ತು ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಮತ್ತು  ಕಲಿಯಲು ಸಿದ್ಧರಿದ್ದೇವೆ. ಈ ಪ್ರಯತ್ನದ ಸಮಯದಲ್ಲಿ ಒಗ್ಗಟ್ಟಿನಲ್ಲಿರೋಣ ಮತ್ತು ನಮ್ಮ ನಾಗರಿಕರನ್ನು ಸುರಕ್ಷಿತವಾಗಿರಿಸೋಣ” ಎಂದು ಟ್ವೀಟ್ ಮಾಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ ಸಾರ್ಕ್ ಪ್ರದೇಶದಲ್ಲಿ 126 ಪ್ರಕರಣಗಳಿವೆ; ಭಾರತದಲ್ಲಿ 82 ಮತ್ತು ಪಾಕಿಸ್ತಾನದಲ್ಲಿ 20 ಕರೋನ ವೈರಸ್ ಪ್ರಕರಣಗಳಿವೆ. ಭಾರತ ತನ್ನ ಮೊದಲ ವೈರಸ್ ಸಂಬಂಧಿತ ಸಾವನ್ನು ಗುರುವಾರ ಕರ್ನಾಟಕದಲ್ಲಿ ವರದಿ ಮಾಡಿತ್ತು ಮತ್ತು ಎರಡನೇ ಸಾವು ಶುಕ್ರವಾರ ರಾತ್ರಿ ದೆಹಲಿಯಲ್ಲಿ ವರದಿಯಾಗಿದೆ. ಇತರ ಸಾರ್ಕ್ ದೇಶಗಳಿಂದ ಈವರೆಗೆ ಯಾವುದೇ ಸಾವುಗಳು ವರದಿಯಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...