Homeಅಂತರಾಷ್ಟ್ರೀಯಕೊರೊನಾ ಎದುರಿಸಲು ಸಿದ್ಧರಾಗಿದ್ದೇವೆ ; ಮೋದಿ ಮನವಿಗೆ ಪಾಕ್‌ ಪ್ರತಿಕ್ರಿಯೆ

ಕೊರೊನಾ ಎದುರಿಸಲು ಸಿದ್ಧರಾಗಿದ್ದೇವೆ ; ಮೋದಿ ಮನವಿಗೆ ಪಾಕ್‌ ಪ್ರತಿಕ್ರಿಯೆ

ಕರೋನ ವೈರಸ್ ವಿರುದ್ಧ ಹೋರಾಡಲು "ಸಾರ್ಕ್" ದೇಶಗಳ ಒಗ್ಗಟ್ಟು..

- Advertisement -
- Advertisement -

ಕರೋನ ವೈರಸ್ ಹಾಗೂ ಸಾಂಕ್ರಾಮಿಕ ರೋಗಗಳ ವಿರುದ್ಧ ಒಟ್ಟಾಗಿ ಕೆಲಸ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ಕ್ ರಾಷ್ಟ್ರಗಳಿಗೆ ಕರೆ ನೀಡಿದ ಒಂದು ದಿನದ ನಂತರ, ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರ ಟ್ವೀಟ್ಟರ್‌ನಲ್ಲಿ  “ಕೊರೋನ ವೈರಸ್ ವಿರುದ್ಧ ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಸಂಘಟಿತ ಪ್ರಯತ್ನಗಳ ಅಗತ್ಯವಿದೆ. ಈ ವಿಷಯದ ಬಗ್ಗೆ ಸಾರ್ಕ್ ಸದಸ್ಯ ರಾಷ್ಟ್ರಗಳ ವೀಡಿಯೊ ಸಮ್ಮೇಳನದಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿಯ ವಿಶೇಷ ಸಹಾಯಕ ಇರಲಿದ್ದಾರೆ” ಎಂದು ಟ್ವೀಟ್ ಮಾಡಲಾಗಿದೆ.

ಪಾಕಿಸ್ತಾನ ತನ್ನ ನೆರೆಹೊರೆಯವರಿಗೆ ನೆರವು ನೀಡಲು ಸಿದ್ಧವಾಗಿದೆ ಎಂದು ವಕ್ತಾರರು ಈ ಹಿಂದೆ ಹೇಳಿದ್ದರು.  ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಈಗಾಗಲೇ ಕರೋನ ವೈರಸ್ ವಿರುದ್ಧ ರಾಷ್ಟ್ರೀಯ ಭದ್ರತೆಯ ಕುರಿತು ತುರ್ತು ಸಭೆಯನ್ನು ನಡೆಸಿದ್ದಾರೆ ಎಂದು ತಿಳಿಸಲಾಗಿದೆ.

ವಿಶ್ವಾದ್ಯಂತ 5,000 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡ ಹಾಗೂ 1.3 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ ಕರೋನ ವೈರಸ್ ವಿರುದ್ದ ಹೋರಾಡಲು ಭಾರತದ ನೆರೆಹೊರೆಯವರು ಕೈಜೋಡಿಸಬೇಕೆಂದು ಶುಕ್ರವಾರ ಪ್ರಧಾನಿ ಮೋದಿ ಒತ್ತಾಯಿಸಿದ್ದರು.

“ಸಾರ್ಕ್ ರಾಷ್ಟ್ರಗಳ ನಾಯಕತ್ವವು ಕರೋನವೈರಸ್ ವಿರುದ್ಧ ಹೋರಾಡಲು ಬಲವಾದ ಕಾರ್ಯತಂತ್ರವನ್ನು ರೂಪಿಸುತ್ತದೆ ಎಂದು ನಾನು ಪ್ರಸ್ತಾಪಿಸಲು ಬಯಸುತ್ತೇನೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಾಗರಿಕರನ್ನು ಆರೋಗ್ಯವಾಗಿಡುವ ಮಾರ್ಗಗಳ ಬಗ್ಗೆ ನಾವು ಚರ್ಚಿಸಬಹುದು” ಎಂದು ಪ್ರಧಾನಿ ಟ್ವೀಟ್ ಮಾಡಿದ್ದರು.

ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ ಮತ್ತು ಶ್ರೀಲಂಕಾ ದೇಶಗಳು “ಸಾರ್ಕ್” ಸದಸ್ಯರಾಗಿದ್ದಾರೆ.

ಪ್ರಧಾನ ಮಂತ್ರಿಯ ಕರೆಗೆ ಭೂತಾನ್‌ನ ಪ್ರಧಾನ ಮಂತ್ರಿ ಲೋಟೇ ತ್ಸೆರಿಂಗ್ ಉತ್ತರಿಸುತ್ತಾ: ” ಇಂತಹ ಕಾಲದಲ್ಲಿ ನಾವು ಒಗ್ಗೂಡಬೇಕು. ಸಣ್ಣ ಆರ್ಥಿಕತೆಗಳಿಗೆ ತೀವ್ರ ಹೊಡೆತ ಬಿದ್ದಿದೆ, ಆದ್ದರಿಂದ ವೀಡಿಯೋ ಕಾನ್ಫ್ರೆನ್ಸ್ ಗಾಗಿ ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.

ಶ್ರೀಲಂಕಾ ಅಧ್ಯಕ್ಷೆ ಗೋಟಬಯಾ ರಾಜಪಕ್ಸೆ ಕೂಡ ಪ್ರತಿಕ್ರಿಯಿಸಿ “ಶ್ರೀ ನರೇಂದ್ರ ಮೋದಿಯವರ ಆಹ್ವಾನಕ್ಕೆ ಧನ್ಯವಾದಗಳು. ಶ್ರೀಲಂಕಾ ಚರ್ಚೆಗೆ ಸೇರಲು, ಕಲಿಕೆಗಳನ್ನು ಮತ್ತು ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಮತ್ತು  ಕಲಿಯಲು ಸಿದ್ಧರಿದ್ದೇವೆ. ಈ ಪ್ರಯತ್ನದ ಸಮಯದಲ್ಲಿ ಒಗ್ಗಟ್ಟಿನಲ್ಲಿರೋಣ ಮತ್ತು ನಮ್ಮ ನಾಗರಿಕರನ್ನು ಸುರಕ್ಷಿತವಾಗಿರಿಸೋಣ” ಎಂದು ಟ್ವೀಟ್ ಮಾಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ ಸಾರ್ಕ್ ಪ್ರದೇಶದಲ್ಲಿ 126 ಪ್ರಕರಣಗಳಿವೆ; ಭಾರತದಲ್ಲಿ 82 ಮತ್ತು ಪಾಕಿಸ್ತಾನದಲ್ಲಿ 20 ಕರೋನ ವೈರಸ್ ಪ್ರಕರಣಗಳಿವೆ. ಭಾರತ ತನ್ನ ಮೊದಲ ವೈರಸ್ ಸಂಬಂಧಿತ ಸಾವನ್ನು ಗುರುವಾರ ಕರ್ನಾಟಕದಲ್ಲಿ ವರದಿ ಮಾಡಿತ್ತು ಮತ್ತು ಎರಡನೇ ಸಾವು ಶುಕ್ರವಾರ ರಾತ್ರಿ ದೆಹಲಿಯಲ್ಲಿ ವರದಿಯಾಗಿದೆ. ಇತರ ಸಾರ್ಕ್ ದೇಶಗಳಿಂದ ಈವರೆಗೆ ಯಾವುದೇ ಸಾವುಗಳು ವರದಿಯಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...