Homeಅಂತರಾಷ್ಟ್ರೀಯಕೊರೊನಾ ಎದುರಿಸಲು ಸಿದ್ಧರಾಗಿದ್ದೇವೆ ; ಮೋದಿ ಮನವಿಗೆ ಪಾಕ್‌ ಪ್ರತಿಕ್ರಿಯೆ

ಕೊರೊನಾ ಎದುರಿಸಲು ಸಿದ್ಧರಾಗಿದ್ದೇವೆ ; ಮೋದಿ ಮನವಿಗೆ ಪಾಕ್‌ ಪ್ರತಿಕ್ರಿಯೆ

ಕರೋನ ವೈರಸ್ ವಿರುದ್ಧ ಹೋರಾಡಲು "ಸಾರ್ಕ್" ದೇಶಗಳ ಒಗ್ಗಟ್ಟು..

- Advertisement -
- Advertisement -

ಕರೋನ ವೈರಸ್ ಹಾಗೂ ಸಾಂಕ್ರಾಮಿಕ ರೋಗಗಳ ವಿರುದ್ಧ ಒಟ್ಟಾಗಿ ಕೆಲಸ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ಕ್ ರಾಷ್ಟ್ರಗಳಿಗೆ ಕರೆ ನೀಡಿದ ಒಂದು ದಿನದ ನಂತರ, ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರ ಟ್ವೀಟ್ಟರ್‌ನಲ್ಲಿ  “ಕೊರೋನ ವೈರಸ್ ವಿರುದ್ಧ ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಸಂಘಟಿತ ಪ್ರಯತ್ನಗಳ ಅಗತ್ಯವಿದೆ. ಈ ವಿಷಯದ ಬಗ್ಗೆ ಸಾರ್ಕ್ ಸದಸ್ಯ ರಾಷ್ಟ್ರಗಳ ವೀಡಿಯೊ ಸಮ್ಮೇಳನದಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿಯ ವಿಶೇಷ ಸಹಾಯಕ ಇರಲಿದ್ದಾರೆ” ಎಂದು ಟ್ವೀಟ್ ಮಾಡಲಾಗಿದೆ.

ಪಾಕಿಸ್ತಾನ ತನ್ನ ನೆರೆಹೊರೆಯವರಿಗೆ ನೆರವು ನೀಡಲು ಸಿದ್ಧವಾಗಿದೆ ಎಂದು ವಕ್ತಾರರು ಈ ಹಿಂದೆ ಹೇಳಿದ್ದರು.  ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಈಗಾಗಲೇ ಕರೋನ ವೈರಸ್ ವಿರುದ್ಧ ರಾಷ್ಟ್ರೀಯ ಭದ್ರತೆಯ ಕುರಿತು ತುರ್ತು ಸಭೆಯನ್ನು ನಡೆಸಿದ್ದಾರೆ ಎಂದು ತಿಳಿಸಲಾಗಿದೆ.

ವಿಶ್ವಾದ್ಯಂತ 5,000 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡ ಹಾಗೂ 1.3 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ ಕರೋನ ವೈರಸ್ ವಿರುದ್ದ ಹೋರಾಡಲು ಭಾರತದ ನೆರೆಹೊರೆಯವರು ಕೈಜೋಡಿಸಬೇಕೆಂದು ಶುಕ್ರವಾರ ಪ್ರಧಾನಿ ಮೋದಿ ಒತ್ತಾಯಿಸಿದ್ದರು.

“ಸಾರ್ಕ್ ರಾಷ್ಟ್ರಗಳ ನಾಯಕತ್ವವು ಕರೋನವೈರಸ್ ವಿರುದ್ಧ ಹೋರಾಡಲು ಬಲವಾದ ಕಾರ್ಯತಂತ್ರವನ್ನು ರೂಪಿಸುತ್ತದೆ ಎಂದು ನಾನು ಪ್ರಸ್ತಾಪಿಸಲು ಬಯಸುತ್ತೇನೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಾಗರಿಕರನ್ನು ಆರೋಗ್ಯವಾಗಿಡುವ ಮಾರ್ಗಗಳ ಬಗ್ಗೆ ನಾವು ಚರ್ಚಿಸಬಹುದು” ಎಂದು ಪ್ರಧಾನಿ ಟ್ವೀಟ್ ಮಾಡಿದ್ದರು.

ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ ಮತ್ತು ಶ್ರೀಲಂಕಾ ದೇಶಗಳು “ಸಾರ್ಕ್” ಸದಸ್ಯರಾಗಿದ್ದಾರೆ.

ಪ್ರಧಾನ ಮಂತ್ರಿಯ ಕರೆಗೆ ಭೂತಾನ್‌ನ ಪ್ರಧಾನ ಮಂತ್ರಿ ಲೋಟೇ ತ್ಸೆರಿಂಗ್ ಉತ್ತರಿಸುತ್ತಾ: ” ಇಂತಹ ಕಾಲದಲ್ಲಿ ನಾವು ಒಗ್ಗೂಡಬೇಕು. ಸಣ್ಣ ಆರ್ಥಿಕತೆಗಳಿಗೆ ತೀವ್ರ ಹೊಡೆತ ಬಿದ್ದಿದೆ, ಆದ್ದರಿಂದ ವೀಡಿಯೋ ಕಾನ್ಫ್ರೆನ್ಸ್ ಗಾಗಿ ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.

ಶ್ರೀಲಂಕಾ ಅಧ್ಯಕ್ಷೆ ಗೋಟಬಯಾ ರಾಜಪಕ್ಸೆ ಕೂಡ ಪ್ರತಿಕ್ರಿಯಿಸಿ “ಶ್ರೀ ನರೇಂದ್ರ ಮೋದಿಯವರ ಆಹ್ವಾನಕ್ಕೆ ಧನ್ಯವಾದಗಳು. ಶ್ರೀಲಂಕಾ ಚರ್ಚೆಗೆ ಸೇರಲು, ಕಲಿಕೆಗಳನ್ನು ಮತ್ತು ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಮತ್ತು  ಕಲಿಯಲು ಸಿದ್ಧರಿದ್ದೇವೆ. ಈ ಪ್ರಯತ್ನದ ಸಮಯದಲ್ಲಿ ಒಗ್ಗಟ್ಟಿನಲ್ಲಿರೋಣ ಮತ್ತು ನಮ್ಮ ನಾಗರಿಕರನ್ನು ಸುರಕ್ಷಿತವಾಗಿರಿಸೋಣ” ಎಂದು ಟ್ವೀಟ್ ಮಾಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ ಸಾರ್ಕ್ ಪ್ರದೇಶದಲ್ಲಿ 126 ಪ್ರಕರಣಗಳಿವೆ; ಭಾರತದಲ್ಲಿ 82 ಮತ್ತು ಪಾಕಿಸ್ತಾನದಲ್ಲಿ 20 ಕರೋನ ವೈರಸ್ ಪ್ರಕರಣಗಳಿವೆ. ಭಾರತ ತನ್ನ ಮೊದಲ ವೈರಸ್ ಸಂಬಂಧಿತ ಸಾವನ್ನು ಗುರುವಾರ ಕರ್ನಾಟಕದಲ್ಲಿ ವರದಿ ಮಾಡಿತ್ತು ಮತ್ತು ಎರಡನೇ ಸಾವು ಶುಕ್ರವಾರ ರಾತ್ರಿ ದೆಹಲಿಯಲ್ಲಿ ವರದಿಯಾಗಿದೆ. ಇತರ ಸಾರ್ಕ್ ದೇಶಗಳಿಂದ ಈವರೆಗೆ ಯಾವುದೇ ಸಾವುಗಳು ವರದಿಯಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...