Homeಅಂತರಾಷ್ಟ್ರೀಯಕೊರೊನಾ ಎದುರಿಸಲು ಸಿದ್ಧರಾಗಿದ್ದೇವೆ ; ಮೋದಿ ಮನವಿಗೆ ಪಾಕ್‌ ಪ್ರತಿಕ್ರಿಯೆ

ಕೊರೊನಾ ಎದುರಿಸಲು ಸಿದ್ಧರಾಗಿದ್ದೇವೆ ; ಮೋದಿ ಮನವಿಗೆ ಪಾಕ್‌ ಪ್ರತಿಕ್ರಿಯೆ

ಕರೋನ ವೈರಸ್ ವಿರುದ್ಧ ಹೋರಾಡಲು "ಸಾರ್ಕ್" ದೇಶಗಳ ಒಗ್ಗಟ್ಟು..

- Advertisement -
- Advertisement -

ಕರೋನ ವೈರಸ್ ಹಾಗೂ ಸಾಂಕ್ರಾಮಿಕ ರೋಗಗಳ ವಿರುದ್ಧ ಒಟ್ಟಾಗಿ ಕೆಲಸ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ಕ್ ರಾಷ್ಟ್ರಗಳಿಗೆ ಕರೆ ನೀಡಿದ ಒಂದು ದಿನದ ನಂತರ, ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರ ಟ್ವೀಟ್ಟರ್‌ನಲ್ಲಿ  “ಕೊರೋನ ವೈರಸ್ ವಿರುದ್ಧ ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಸಂಘಟಿತ ಪ್ರಯತ್ನಗಳ ಅಗತ್ಯವಿದೆ. ಈ ವಿಷಯದ ಬಗ್ಗೆ ಸಾರ್ಕ್ ಸದಸ್ಯ ರಾಷ್ಟ್ರಗಳ ವೀಡಿಯೊ ಸಮ್ಮೇಳನದಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿಯ ವಿಶೇಷ ಸಹಾಯಕ ಇರಲಿದ್ದಾರೆ” ಎಂದು ಟ್ವೀಟ್ ಮಾಡಲಾಗಿದೆ.

ಪಾಕಿಸ್ತಾನ ತನ್ನ ನೆರೆಹೊರೆಯವರಿಗೆ ನೆರವು ನೀಡಲು ಸಿದ್ಧವಾಗಿದೆ ಎಂದು ವಕ್ತಾರರು ಈ ಹಿಂದೆ ಹೇಳಿದ್ದರು.  ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಈಗಾಗಲೇ ಕರೋನ ವೈರಸ್ ವಿರುದ್ಧ ರಾಷ್ಟ್ರೀಯ ಭದ್ರತೆಯ ಕುರಿತು ತುರ್ತು ಸಭೆಯನ್ನು ನಡೆಸಿದ್ದಾರೆ ಎಂದು ತಿಳಿಸಲಾಗಿದೆ.

ವಿಶ್ವಾದ್ಯಂತ 5,000 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡ ಹಾಗೂ 1.3 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ ಕರೋನ ವೈರಸ್ ವಿರುದ್ದ ಹೋರಾಡಲು ಭಾರತದ ನೆರೆಹೊರೆಯವರು ಕೈಜೋಡಿಸಬೇಕೆಂದು ಶುಕ್ರವಾರ ಪ್ರಧಾನಿ ಮೋದಿ ಒತ್ತಾಯಿಸಿದ್ದರು.

“ಸಾರ್ಕ್ ರಾಷ್ಟ್ರಗಳ ನಾಯಕತ್ವವು ಕರೋನವೈರಸ್ ವಿರುದ್ಧ ಹೋರಾಡಲು ಬಲವಾದ ಕಾರ್ಯತಂತ್ರವನ್ನು ರೂಪಿಸುತ್ತದೆ ಎಂದು ನಾನು ಪ್ರಸ್ತಾಪಿಸಲು ಬಯಸುತ್ತೇನೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಾಗರಿಕರನ್ನು ಆರೋಗ್ಯವಾಗಿಡುವ ಮಾರ್ಗಗಳ ಬಗ್ಗೆ ನಾವು ಚರ್ಚಿಸಬಹುದು” ಎಂದು ಪ್ರಧಾನಿ ಟ್ವೀಟ್ ಮಾಡಿದ್ದರು.

ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ ಮತ್ತು ಶ್ರೀಲಂಕಾ ದೇಶಗಳು “ಸಾರ್ಕ್” ಸದಸ್ಯರಾಗಿದ್ದಾರೆ.

ಪ್ರಧಾನ ಮಂತ್ರಿಯ ಕರೆಗೆ ಭೂತಾನ್‌ನ ಪ್ರಧಾನ ಮಂತ್ರಿ ಲೋಟೇ ತ್ಸೆರಿಂಗ್ ಉತ್ತರಿಸುತ್ತಾ: ” ಇಂತಹ ಕಾಲದಲ್ಲಿ ನಾವು ಒಗ್ಗೂಡಬೇಕು. ಸಣ್ಣ ಆರ್ಥಿಕತೆಗಳಿಗೆ ತೀವ್ರ ಹೊಡೆತ ಬಿದ್ದಿದೆ, ಆದ್ದರಿಂದ ವೀಡಿಯೋ ಕಾನ್ಫ್ರೆನ್ಸ್ ಗಾಗಿ ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.

ಶ್ರೀಲಂಕಾ ಅಧ್ಯಕ್ಷೆ ಗೋಟಬಯಾ ರಾಜಪಕ್ಸೆ ಕೂಡ ಪ್ರತಿಕ್ರಿಯಿಸಿ “ಶ್ರೀ ನರೇಂದ್ರ ಮೋದಿಯವರ ಆಹ್ವಾನಕ್ಕೆ ಧನ್ಯವಾದಗಳು. ಶ್ರೀಲಂಕಾ ಚರ್ಚೆಗೆ ಸೇರಲು, ಕಲಿಕೆಗಳನ್ನು ಮತ್ತು ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಮತ್ತು  ಕಲಿಯಲು ಸಿದ್ಧರಿದ್ದೇವೆ. ಈ ಪ್ರಯತ್ನದ ಸಮಯದಲ್ಲಿ ಒಗ್ಗಟ್ಟಿನಲ್ಲಿರೋಣ ಮತ್ತು ನಮ್ಮ ನಾಗರಿಕರನ್ನು ಸುರಕ್ಷಿತವಾಗಿರಿಸೋಣ” ಎಂದು ಟ್ವೀಟ್ ಮಾಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ ಸಾರ್ಕ್ ಪ್ರದೇಶದಲ್ಲಿ 126 ಪ್ರಕರಣಗಳಿವೆ; ಭಾರತದಲ್ಲಿ 82 ಮತ್ತು ಪಾಕಿಸ್ತಾನದಲ್ಲಿ 20 ಕರೋನ ವೈರಸ್ ಪ್ರಕರಣಗಳಿವೆ. ಭಾರತ ತನ್ನ ಮೊದಲ ವೈರಸ್ ಸಂಬಂಧಿತ ಸಾವನ್ನು ಗುರುವಾರ ಕರ್ನಾಟಕದಲ್ಲಿ ವರದಿ ಮಾಡಿತ್ತು ಮತ್ತು ಎರಡನೇ ಸಾವು ಶುಕ್ರವಾರ ರಾತ್ರಿ ದೆಹಲಿಯಲ್ಲಿ ವರದಿಯಾಗಿದೆ. ಇತರ ಸಾರ್ಕ್ ದೇಶಗಳಿಂದ ಈವರೆಗೆ ಯಾವುದೇ ಸಾವುಗಳು ವರದಿಯಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...