Homeಮುಖಪುಟವಿವಾಹವಾದ ಕಾರಣಕ್ಕೆ ಸೇನಾ ಮಹಿಳಾ ಅಧಿಕಾರಿಯ ವಜಾ; 'ಲಿಂಗ ತಾರತಮ್ಯ' ಎಂದ ಸುಪ್ರೀಂಕೋರ್ಟ್‌

ವಿವಾಹವಾದ ಕಾರಣಕ್ಕೆ ಸೇನಾ ಮಹಿಳಾ ಅಧಿಕಾರಿಯ ವಜಾ; ‘ಲಿಂಗ ತಾರತಮ್ಯ’ ಎಂದ ಸುಪ್ರೀಂಕೋರ್ಟ್‌

- Advertisement -
- Advertisement -

ವಿವಾಹವಾದ ಕಾರಣಕ್ಕೆ ಮಿಲಿಟರಿ ನರ್ಸಿಂಗ್ ಸೇವೆಯಲ್ಲಿ ಖಾಯಂ ನಿಯೋಜಿತ ಅಧಿಕಾರಿಯನ್ನು ವಜಾ ಮಾಡಿರುವುದು ಸ್ವೇಚ್ಛೆಯ ಹಾಗೂ ಸೂಕ್ಷ್ಮತೆ ಇಲ್ಲದ ಲಿಂಗ ತಾರತಮ್ಯ ಹಾಗೂ ಅಸಮಾನತೆಯನ್ನು ಬಿಂಬಿಸುತ್ತದೆ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗ‌ಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್‌ ದತ್ತಾ ಅವರಿದ್ದ ನ್ಯಾಯಪೀಠವು ಈ ಕುರಿತ ಅರ್ಜಿ ವಿಚಾರಣೆ ನಡೆಸಿದ್ದು, ಮಾಜಿ ಲೆಫ್ಟಿನೆಂಟ್ ಸೆಲಿನಾ ಜಾನ್‌ಗೆ 8 ವಾರಗಳಲ್ಲಿ 60 ಲಕ್ಷ ರೂಪಾಯಿಗಳನ್ನು ಪೂರ್ಣ ಮತ್ತು ಅಂತಿಮ ಪರಿಹಾರವಾಗಿ ಪಾವತಿಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ. ನಿಯಮದ ಪ್ರಕಾರ  ವಿವಾಹದ ಕಾರಣದಿಂದ ಅವರ ಬಿಡುಗಡೆಯು ಕಾನೂನುಬಾಹಿರವಾಗಿದೆ. ನಿಗದಿತ ಅವಧಿ ಒಳಗಾಗಿ ಪರಿಹಾರ ಪಾವತಿಸದಿದ್ದಲ್ಲಿ, ಈ ಆದೇಶ ಪ್ರಕಟವಾದ ದಿನಾಂ‌ಕದಿಂದ ಪೂರ್ತಿ ಹಣ ಸಂದಾಯವಾಗುವವರೆಗೆ ವಾರ್ಷಿಕ ಶೇ 12ರಷ್ಟು ಬಡ್ಡಿಯೊಂದಿಗೆ ಪರಿಹಾರಧನವನ್ನು ಪಾವತಿಸಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

ನಿಯಮಗಳ ಕಾರಣ ನೀಡಿ ಮಹಿಳಾ ಅಧಿಕಾರಿಯೊಬ್ಬರನ್ನು ಉದ್ಯೋಗದಿಂದ ತೆಗೆದು ಹಾಕುವುದು ಲಿಂಗ ತಾರತಮ್ಯವನ್ನು ಬಿಂಬಿಸುತ್ತದೆ. ಇಂತಹ ಹಳೆಯ ನಿಯಮಗಳನ್ನು ಒಪ್ಪಿಕೊಳ್ಳುವುದೆಂದರೆ ಮಾನವನ ಘನತೆಯನ್ನು ಹಾಗೂ ತಾರತಮ್ಯ ರಹಿತ ಮತ್ತು ನ್ಯಾಯಯುತವಾಗಿ ನಡೆಸಿಕೊಳ್ಳಬೇಕು ಎಂಬ ಪ್ರತಿಪಾದನೆಯನ್ನು ಕಡೆಗಣಿಸಿದಂತೆ ಎಂದೂ ನ್ಯಾಯಪೀಠವು ಹೇಳಿದೆ.

ನಿವೃತ್ತ ಲಿಫ್ಟಿನೆಂಟ್ ಸೆಲಿನಾ ಅವರನ್ನು ವೃತ್ತಿಗೆ ಸಂಬಂಧಿಸಿದ ಎಲ್ಲ ಪ್ರಯೋಜನಗಳೊಂದಿಗೆ ಹುದ್ದೆಯಲ್ಲಿ ‌ಮರುಸ್ಥಾಪಿಸಬೇಕು ಎಂದು ಲಖನೌದ ಸಶಸ್ತ್ರ ಪಡೆಗಳ ನ್ಯಾಯಮಂಡಳಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಸೆಲಿನಾ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿ ನ್ಯಾಯಮಂಡಳಿ ನೀಡಿದ್ದ ಆದೇಶ ತಪ್ಪು ಹಾಗೂ ಕಾನೂನುಬಾಹಿರವಾಗಿದೆ, ಈ ವಿಷಯದಲ್ಲಿ ಸುಪ್ರೀಂಕೋರ್ಟ್‌ ಮಧ್ಯಪ್ರವೇಶಿಸುವ ಅಗ‌ತ್ಯವೇ ಇಲ್ಲ ಎಂದು ಹೇಳಿದೆ.

ಮಿಲಿಟರಿ ನರ್ಸಿಂಗ್ ಸೇವೆಯಲ್ಲಿ ಶಾಶ್ವತ ಆಯೋಗಗಳ ಮಂಜೂರಾತಿಗಾಗಿ ಸೇವಾ ನಿಯಮಗಳು ಮತ್ತು ಷರತ್ತುಗಳು ಎಂಬ ಶೀರ್ಷಿಕೆಯ 1977ರ ಆರ್ಮಿ ಸೂಚನೆ ಸಂಖ್ಯೆ 61ನ್ನು ನಂತರದ ಪತ್ರದ ಮೂಲಕ ಆಗಸ್ಟ್ 29, 1995ರಂದು ಹಿಂಪಡೆಯಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಲಿಂಗ ಆಧರಿಸಿ ಪಕ್ಷಪಾತ ಮಾಡುವ ಕಾನೂನುಗಳು ಮತ್ತು ನಿಯಮಗಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲ. ಅಲ್ಲದೇ ಮಹಿಳಾ ಉದ್ಯೋಗಿಗಳು ಮದುವೆ ಮಾಡಿಕೊಳ್ಳುವುದು ಹಾಗೂ ಕೌಟುಂಬಿಕ ಜವಾಬ್ದಾರಿ ನಿರ್ವಹಣೆ‌ಯಲ್ಲಿ ತೊಡಗಿರುವುದನ್ನು ಅವರನ್ನು ಉದ್ಯೋಗದಿಂದ ಅನರ್ಹಗೊಳಿಸುವುದಕ್ಕೆ ಕಾರಣ ಎಂದು ಆಧಾರ ಎಂದು ಪರಿ‌ಗಣಿಸುವುದು ಕೂಡ ಅಸಾಂವಿಧಾನಿಕ ಎಂದು ಪೀಠ ಹೇಳಿದೆ.

ಇದನ್ನು ಓದಿ: ಹೆಚ್ಚುವರಿ ಹಣ ಬೇಕಾದರೆ ಸುಪ್ರೀಂಕೋರ್ಟ್‌ನಿಂದ ಮೊಕದ್ದಮೆ ಹಿಂಪಡೆಯಿರಿ: ಕೇರಳ ಸರಕಾರಕ್ಕೆ ಹೇಳಿದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...