Homeಮುಖಪುಟವಿವಾಹವಾದ ಕಾರಣಕ್ಕೆ ಸೇನಾ ಮಹಿಳಾ ಅಧಿಕಾರಿಯ ವಜಾ; 'ಲಿಂಗ ತಾರತಮ್ಯ' ಎಂದ ಸುಪ್ರೀಂಕೋರ್ಟ್‌

ವಿವಾಹವಾದ ಕಾರಣಕ್ಕೆ ಸೇನಾ ಮಹಿಳಾ ಅಧಿಕಾರಿಯ ವಜಾ; ‘ಲಿಂಗ ತಾರತಮ್ಯ’ ಎಂದ ಸುಪ್ರೀಂಕೋರ್ಟ್‌

- Advertisement -
- Advertisement -

ವಿವಾಹವಾದ ಕಾರಣಕ್ಕೆ ಮಿಲಿಟರಿ ನರ್ಸಿಂಗ್ ಸೇವೆಯಲ್ಲಿ ಖಾಯಂ ನಿಯೋಜಿತ ಅಧಿಕಾರಿಯನ್ನು ವಜಾ ಮಾಡಿರುವುದು ಸ್ವೇಚ್ಛೆಯ ಹಾಗೂ ಸೂಕ್ಷ್ಮತೆ ಇಲ್ಲದ ಲಿಂಗ ತಾರತಮ್ಯ ಹಾಗೂ ಅಸಮಾನತೆಯನ್ನು ಬಿಂಬಿಸುತ್ತದೆ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗ‌ಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್‌ ದತ್ತಾ ಅವರಿದ್ದ ನ್ಯಾಯಪೀಠವು ಈ ಕುರಿತ ಅರ್ಜಿ ವಿಚಾರಣೆ ನಡೆಸಿದ್ದು, ಮಾಜಿ ಲೆಫ್ಟಿನೆಂಟ್ ಸೆಲಿನಾ ಜಾನ್‌ಗೆ 8 ವಾರಗಳಲ್ಲಿ 60 ಲಕ್ಷ ರೂಪಾಯಿಗಳನ್ನು ಪೂರ್ಣ ಮತ್ತು ಅಂತಿಮ ಪರಿಹಾರವಾಗಿ ಪಾವತಿಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ. ನಿಯಮದ ಪ್ರಕಾರ  ವಿವಾಹದ ಕಾರಣದಿಂದ ಅವರ ಬಿಡುಗಡೆಯು ಕಾನೂನುಬಾಹಿರವಾಗಿದೆ. ನಿಗದಿತ ಅವಧಿ ಒಳಗಾಗಿ ಪರಿಹಾರ ಪಾವತಿಸದಿದ್ದಲ್ಲಿ, ಈ ಆದೇಶ ಪ್ರಕಟವಾದ ದಿನಾಂ‌ಕದಿಂದ ಪೂರ್ತಿ ಹಣ ಸಂದಾಯವಾಗುವವರೆಗೆ ವಾರ್ಷಿಕ ಶೇ 12ರಷ್ಟು ಬಡ್ಡಿಯೊಂದಿಗೆ ಪರಿಹಾರಧನವನ್ನು ಪಾವತಿಸಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

ನಿಯಮಗಳ ಕಾರಣ ನೀಡಿ ಮಹಿಳಾ ಅಧಿಕಾರಿಯೊಬ್ಬರನ್ನು ಉದ್ಯೋಗದಿಂದ ತೆಗೆದು ಹಾಕುವುದು ಲಿಂಗ ತಾರತಮ್ಯವನ್ನು ಬಿಂಬಿಸುತ್ತದೆ. ಇಂತಹ ಹಳೆಯ ನಿಯಮಗಳನ್ನು ಒಪ್ಪಿಕೊಳ್ಳುವುದೆಂದರೆ ಮಾನವನ ಘನತೆಯನ್ನು ಹಾಗೂ ತಾರತಮ್ಯ ರಹಿತ ಮತ್ತು ನ್ಯಾಯಯುತವಾಗಿ ನಡೆಸಿಕೊಳ್ಳಬೇಕು ಎಂಬ ಪ್ರತಿಪಾದನೆಯನ್ನು ಕಡೆಗಣಿಸಿದಂತೆ ಎಂದೂ ನ್ಯಾಯಪೀಠವು ಹೇಳಿದೆ.

ನಿವೃತ್ತ ಲಿಫ್ಟಿನೆಂಟ್ ಸೆಲಿನಾ ಅವರನ್ನು ವೃತ್ತಿಗೆ ಸಂಬಂಧಿಸಿದ ಎಲ್ಲ ಪ್ರಯೋಜನಗಳೊಂದಿಗೆ ಹುದ್ದೆಯಲ್ಲಿ ‌ಮರುಸ್ಥಾಪಿಸಬೇಕು ಎಂದು ಲಖನೌದ ಸಶಸ್ತ್ರ ಪಡೆಗಳ ನ್ಯಾಯಮಂಡಳಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಸೆಲಿನಾ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿ ನ್ಯಾಯಮಂಡಳಿ ನೀಡಿದ್ದ ಆದೇಶ ತಪ್ಪು ಹಾಗೂ ಕಾನೂನುಬಾಹಿರವಾಗಿದೆ, ಈ ವಿಷಯದಲ್ಲಿ ಸುಪ್ರೀಂಕೋರ್ಟ್‌ ಮಧ್ಯಪ್ರವೇಶಿಸುವ ಅಗ‌ತ್ಯವೇ ಇಲ್ಲ ಎಂದು ಹೇಳಿದೆ.

ಮಿಲಿಟರಿ ನರ್ಸಿಂಗ್ ಸೇವೆಯಲ್ಲಿ ಶಾಶ್ವತ ಆಯೋಗಗಳ ಮಂಜೂರಾತಿಗಾಗಿ ಸೇವಾ ನಿಯಮಗಳು ಮತ್ತು ಷರತ್ತುಗಳು ಎಂಬ ಶೀರ್ಷಿಕೆಯ 1977ರ ಆರ್ಮಿ ಸೂಚನೆ ಸಂಖ್ಯೆ 61ನ್ನು ನಂತರದ ಪತ್ರದ ಮೂಲಕ ಆಗಸ್ಟ್ 29, 1995ರಂದು ಹಿಂಪಡೆಯಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಲಿಂಗ ಆಧರಿಸಿ ಪಕ್ಷಪಾತ ಮಾಡುವ ಕಾನೂನುಗಳು ಮತ್ತು ನಿಯಮಗಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲ. ಅಲ್ಲದೇ ಮಹಿಳಾ ಉದ್ಯೋಗಿಗಳು ಮದುವೆ ಮಾಡಿಕೊಳ್ಳುವುದು ಹಾಗೂ ಕೌಟುಂಬಿಕ ಜವಾಬ್ದಾರಿ ನಿರ್ವಹಣೆ‌ಯಲ್ಲಿ ತೊಡಗಿರುವುದನ್ನು ಅವರನ್ನು ಉದ್ಯೋಗದಿಂದ ಅನರ್ಹಗೊಳಿಸುವುದಕ್ಕೆ ಕಾರಣ ಎಂದು ಆಧಾರ ಎಂದು ಪರಿ‌ಗಣಿಸುವುದು ಕೂಡ ಅಸಾಂವಿಧಾನಿಕ ಎಂದು ಪೀಠ ಹೇಳಿದೆ.

ಇದನ್ನು ಓದಿ: ಹೆಚ್ಚುವರಿ ಹಣ ಬೇಕಾದರೆ ಸುಪ್ರೀಂಕೋರ್ಟ್‌ನಿಂದ ಮೊಕದ್ದಮೆ ಹಿಂಪಡೆಯಿರಿ: ಕೇರಳ ಸರಕಾರಕ್ಕೆ ಹೇಳಿದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...