Homeಕರ್ನಾಟಕಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಬಿಜೆಪಿ ಮುಂದಿನ ಚುನಾವಣೆಗೆ ಸಜ್ಜಾಗುತ್ತಿದೆ, ಜನರು ಎಚ್ಚರದಿಂದ ಇರಬೇಕು ಎಂದು ಜನಪರ ಸಂಘಟನೆಗಳು ಎಚ್ಚರಿಸಿವೆ

- Advertisement -
- Advertisement -

ಮುಖ್ಯಮಂತ್ರಿ ಬೊಮ್ಮಾಯಿ ಅವರು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥನೆ ಮಾಡಿ, ಭಾವನಾತ್ಮಕ ವಿಚಾರಗಳು ಮತ್ತು ನೈತಿಕತೆಯ ಬಗ್ಗೆ ಉಲ್ಲೇಖ ಮಾಡಿದ್ದರು. ಅದಾಗಿ ಒಂದರೆಡು ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಪುತ್ತೂರು ಮತ್ತು ಉಡುಪಿ ಜಿಲ್ಲೆಯ ಮಲ್ಪೆ, ಕುಂದಾಪುರದಲ್ಲಿ, ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗದಳ ಮತ್ತು ವಿಎಚ್‌ಪಿ ಯುವಕ-ಯುವತಿಯರ ಕೈಗೆ ತ್ರಿಶೂಲದಂತಹ ಶಸ್ತ್ರಗಳನ್ನು ಹಂಚಿದೆ.

ನವರಾತ್ರಿಯ ಪೂಜೆಯ ದಿನದಂದು ‘ತ್ರಿಶೂಲ ದೀಕ್ಷೆ’ ಹೆಸರಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು ತಮ್ಮ ಕಾರ್ಯಕರ್ತರಿಗೆ ಮಾರಕ ಶಸ್ತ್ರಗಳನ್ನು ಹಂಚಿದೆ. ಇದರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಬೊಮ್ಮಾಯಿ ‘ಕೇಶವ ಕೃಪಾ’ದ ಗುಲಾಮ: ಮಾವಳ್ಳಿ ಶಂಕರ್‌ ಆಕ್ರೋಶ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕದ್ರಿ ವಿಹೆಚ್‌ಪಿ ಕಚೇರಿಯಲ್ಲಿ, ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿ, ಸಂಘಟನೆಯ ನಾಯಕ ಶರಣ್ ಪಂಪ್‌ವೆಲ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದೆ. ಜೊತೆಗೆ ಜಿಲ್ಲೆಯ ಪುತ್ತೂರಿನಲ್ಲೂ ಇದು ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಇಷ್ಟೇ ಅಲ್ಲದೆ, ಉಡುಪಿಯ ಮಲ್ಪೆ ವಡಭಾಂಡೇಶ್ವರ ಬಲರಾಮ ದೇವಸ್ಥಾನದಲ್ಲಿ ಕೂಡಾ ತ್ರಿಶೂಲ ದೀಕ್ಷೆ ನಡೆದಿದೆ. ಅಲ್ಲದೆ ಜಿಲ್ಲೆಯ ಕುಂದಾಪುರದಲ್ಲೂ ಮಹಿಳೆಯಗೆ ತ್ರಿಶೂಲ ದೀಕ್ಷೆ ನೀಡಲಾಗಿದೆ.

ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಹಿಂದೂಗಳ ಆತ್ಮ ರಕ್ಷಣೆ, ಗೋಹತ್ಯೆ, ಭಯೋತ್ಪಾದನೆ, ಮತಾಂತರ, ಲವ್‌ ಜಿಹಾದ್ ಮತ್ತು ಲ್ಯಾಂಡ್ ಜಿಹಾದ್ ವಿರುದ್ದ ಹೋರಾಟ ಮಾಡಲು ತ್ರಿಶೂಲ ದೀಕ್ಷೆಯನ್ನು ಮಾಡಲಾಗಿದೆ ಎಂದು ಸಂಘಟನೆಗಳು ಹೇಳಿಕೊಂಡಿದ್ದು, ಯುವಕರಿಗೆ ಶಪಥವನ್ನು ಮಾಡಿಸಿಕೊಂಡಿದ್ದಾರೆ.

ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥನೆ ಮಾಡಿದ್ದರು. ಅದಾಗಿ ಒಂದರೆಡು ದಿನಗಳಲ್ಲಿ ಕರಾವಳಿಯಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೊಶ ಹೆಚ್ಚಿದೆ. ಹಲವಾರು ಜನರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

May be an image of 11 people, people standing and text that says "Lm ಸೇವಾ ಸಂಸ್ಕಾರ।। ವಿಶ್ವ ಹಿಂದು ಪರಿಷದ್ ಬಜರಂಗ ದಳ ಸುರಕಾ ಮಾತೃಶಕ್ತಿ ದುರ್ಗಾವಾಹಿನಿ, ಕುಂದಾಪುರ ಪ್ರಖಂಡ අವප ದತಿಯಬಂದ ನವರಾತ್ರಿಯ ಶುಭ ದಿನದಂದು ದುಗ ಗವಮಿ ಕಾರ್ಯ ದಿನಾಂ4-10 4-10 ದಿನಾಂ é"

ನಾನುಗೌರಿ.ಕಾಂ ಜೊತೆ ಮಾತನಾಡಿದ ದ.ಕ ಜಿಲ್ಲಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್‌, “ಇಂತಹ ಸಂಘಟನೆಗಳಿಂದ ಬೇರೇನೂ ನಿರೀಕ್ಷಿಸಲು ಸಾಧ್ಯವಿಲ್ಲ, ಅವರಿಂದ ಇದು ಸಾಮಾನ್ಯ. ಬಿಜೆಪಿಯ ಮುಖ್ಯಮಂತ್ರಿ, ಸಂಸದರು, ಸಚಿವರು ಮತ್ತು ಸೇರಿದಂತೆ ಕೊಲೆ ಮಾಡಲು, ಸಂವಿದಾನ ಬದಲಾವಣೆ ಮಾಡುವ ಬಗ್ಗೆ ಹೇಳಿಕೆ ನೀಡುತ್ತಲೆ ಇದ್ದಾರೆ. ಗಾಂಧೀ ಕೊಂದವರನ್ನು ಇವರು ವಿಜ್ರಂಭಿಸುತ್ತಾರೆ. ಇದು ಅವರ ಹುಟ್ಟು ಗುಣ, ಇಂತಹ ಘಟನೆಗಳು ಅನಿರೀಕ್ಷಿತ ಅಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

“ಈ ರೀತಿಯಾಗಿ ಭಯ ಹುಟ್ಟಿಸುವಂತದ್ದು, ದೇವರ ಹೆಸರನ್ನು ಬಳಸಿ ಹಿಂದೂಗಳನ್ನು ಭಾವನಾತ್ಮಕವಾಗಿ ಕೆರಳಿಸಿ ಮತ ಪಡೆಯುವಂತಹದ್ದು, ಇದೆಲ್ಲಾ ಅವರಿಗೆ ಕರಗತವಾಗಿ ಬಂದಿದೆ. ಅವರಿಗೆ ದೇಶದ ಬಗ್ಗೆ ಚಿಂತೆಯಿಲ್ಲ, ಆಡಳಿತ ಮತ್ತು ದುಡ್ಡಷ್ಟೇ ಅವರ ಉದ್ದೇಶ. ಮುಂದೆ ಚುನಾವಣೆ ಬರುತ್ತಿದೆ ಅದಕ್ಕಾಗಿ ಅವರು ತಯಾರಿ ಮಾಡುತ್ತಿದ್ದಾರೆ. ಆದರೆ ಬೆಲೆ ಏರಿಕೆ, ಉದ್ಯೋಗ ನಷ್ಟ, ಕೊರನಾದಿಂದ ಜನರ ಸಂಕಷ್ಟಪಡುತ್ತಿದ್ದಾರೆ ಆದರೆ ಇವುಗಳನ್ನು ಕೇಳುವವರಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕಾಂಗ್ರೆಸ್‌ಗೆ ಮತ ನೀಡಿದರೆ ಶಾಲೆಗೆ ಹೊರಟ ನಿಮ್ಮ ಮಕ್ಕಳು ಮನೆಗೆ ವಾಪಾಸು ಬರಲು ಸಾಧ್ಯವಿಲ್ಲ ಎಂದು ಪ್ರಚಾರ ಮಾಡಿದ್ದರು. ಆದರೆ ಇತ್ತೀಚೆಗೆ ಸುರತ್ಕಲ್‌ನಲ್ಲಿ ಕಾಲೇಜ್‌ನ ಮಕ್ಕಳನ್ನು ಹಿಡಿದು ಹಲ್ಲೆ ಮಾಡಿದ್ದಾರೆ. ಚುನಾವಣೆ ಸಮಯದಲ್ಲಿ ಇವರು ಹಿಂದೂ ಧರ್ಮವನ್ನು ಬಳಸಿಕೊಳ್ಳುತ್ತಾರೆ. ಇದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಇದರ ವಿರುದ್ದ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡುತ್ತಿದೆ. ಈ ಘಟನೆಯ ಬಗ್ಗೆಯು ಕಾನೂನಾತ್ಮಕವಾಗಿಯು ಹೋರಾಟ ಮಾಡುತ್ತದೆ” ಎಂದು ಹರೀಶ್ ಕುಮಾರ್‌ ಹೇಳಿದ್ದಾರೆ.

May be an image of text that says "विश्व हिन्दू परिषट ವಿಶ್ವ ಹಿಂದೂ ಪರಿಷದ್ धर्मो रक्षति रकित: ಬಜರಂಗದಳ ಉಡುಪಿ ವಿಜಯ ದಶಮಿಯ ಅಂಗವಾಗಿ ಶಸ್ತ್ರ ಪೂಜೆ ತ್ರಿಶೂಲ ದೀಕ್ಷೆ ಸಮಾರಂಭ ದಿನಾಂಕ: 13 ಬುಧವಾರ ಸಂಜೆ 4:00 ಗಂಟೆಗೆ ಸ್ಥಳ: ವಡಭಾಂಡ ಬಲರಾಮ ದೇವಸ್ಥಾನ, ಮಲ್ಪೆ- ವಡಭಾಂಡೇಶ್ವರ ದುಷ್ಟರ ದಮನಕ್ಕೆ ಶಸ್ತವ ಹಿಡಿಯಲು ರಾಮನ ಬಂಟರು ಸದಾ ಸನ್ನದ್ಧ.."

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಮಾತನಾಡಿ, “ಇದು ವ್ಯವಸ್ಥಿತ ಕಾರ್ಯಸೂಚಿಯ ಭಾಗ. ಮುಂಬರುವ ಚುನಾನಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಇದೆಲ್ಲ ನಡೆಯುತ್ತಿದೆ. ಕರಾವಳಿಯಲ್ಲಿ ನಿರುದ್ಯೋಗ, ಬೆಲೆಯೇರಿಕೆ ಮುಂತಾದ ಜ್ವಲಂತ ಸಮಸ್ಯೆಗಳಿಂದ ಜನ ದಿಕ್ಕೆಟ್ಟಿದ್ದಾರೆ. ಸಹಜವಾಗಿಯೇ ಇದು ಸರಕಾರದ ವಿರುದ್ದ ಅತೃಪ್ತಿಯಾಗಿ ಪರಿವರ್ತನೆಗೊಳ್ಳುತ್ತಿದೆ. ಇದರ ಅಪಾಯವನ್ನು ಮನಗಂಡಿರುವ ಬಿಜೆಪಿ ಮತೀಯ ಧ್ರುವೀಕರಣದ ತನ್ನ ಹಳೆಯ ಅಜೆಂಡಾವನ್ನು ಮುನ್ನಲೆಗೆ ತಂದು ಆಡಳಿತ ವಿರೋಧಿ ಅಲೆಯಿಂದ ಪಾರಾಗುವುದು, ಮುಂಬರುವ ಚುನಾವಣೆಯನ್ನು ಗೆಲ್ಲುವುದು ಗುರಿಯಾಗಿ ಇರಿಸಿಕೊಂಡಿದೆ” ಎಂದು ಹೇಳಿದ್ದಾರೆ.

“ಈ ಎಲ್ಲಾ ವಿಚಾರಕ್ಕಾಗಿ ಸಂಘ ಪರಿವಾರದ ಸಂಘಟನೆಗಳಿಂದ ವಿವಿಧ ರೀತಿಯ ಪ್ರಚೋದಕ ಕಾರ್ಯಗಳು ನಡೆಯುತ್ತಿವೆ. ಅನೈತಿಕ ಪೊಲೀಸ್ ಗಿರಿ, ದ್ವೇಷ ಭಾಷಣ, ಮುಖ್ಯಮಂತ್ರಿಯ ಕ್ರಿಯೆ, ಪ್ರತಿಕ್ರಿಯೆ ಹೇಳಿಕೆ ಎಲ್ಲವೂ ಯೋಜಿತ ರೀತಿಯಲ್ಲಿ ನಡೆಯುತ್ತಿದೆ. ಈಗ ಆಯುಧ ಪೂಜೆಯ ದಿನ ನಡೆದಿರುವ ತ್ರಿಶೂಲ ಧೀಕ್ಷೆ ಅದರ ಒಂದು ಭಾಗ. ಸರಕಾರ ನಡೆಸುತ್ತಿರುವ ಪಕ್ಷ ಸ್ವತಹ ಇಂತಹ ಸಂವಿಧಾನ ವಿರೋಧಿ, ಕಾನೂನು ವಿರೋಧಿ ಕೃತ್ಯಗಳನ್ನು ಹಮ್ಮಿಕೊಳ್ಳುತ್ತಿರುವುದರ ಹಿಂದಿನ ಹುನ್ನಾರಗಳನ್ನು ಜನ ಅರ್ಥ ಮಾಡಿಕೊಳ್ಳದಿದ್ದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ” ಎಂದು ಎಚ್ಚರಿಕೆ ನೀಡಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯೆಗಾಗಿ ಮಂಗಳೂರು ಕಮಿಷನರ್‌ ಶಶಿಕುಮಾರ್‌ ಅವರಿಗೆ ನಾನುಗೌರಿ.ಕಾಂ ಕರೆ ಮಾಡಿದ್ದು ಅವರು ಕರೆಯನ್ನು ಸ್ವೀಕರಿಸಿಲ್ಲ. ಅವರು ಪ್ರತಿಕ್ರಿಯೆ ನೀಡಿದ ಕೂಡಲೇ ಸುದ್ದಿಯನ್ನು ಅಪ್‌ಡೇಟ್ ಮಾಡಲಾಗುವುದು.

ಇದನ್ನೂ ಓದಿ: ನೈತಿಕತೆ ಮತ್ತು ಪೊಲೀಸ್‌ಗಿರಿ ಕೂಡಿಕೊಂಡರೆ ಅದು ಅನೈತಿಕ ಮನಸ್ಥಿತಿಗಳ ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...