Homeಕರ್ನಾಟಕಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಬಿಜೆಪಿ ಮುಂದಿನ ಚುನಾವಣೆಗೆ ಸಜ್ಜಾಗುತ್ತಿದೆ, ಜನರು ಎಚ್ಚರದಿಂದ ಇರಬೇಕು ಎಂದು ಜನಪರ ಸಂಘಟನೆಗಳು ಎಚ್ಚರಿಸಿವೆ

- Advertisement -
- Advertisement -

ಮುಖ್ಯಮಂತ್ರಿ ಬೊಮ್ಮಾಯಿ ಅವರು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥನೆ ಮಾಡಿ, ಭಾವನಾತ್ಮಕ ವಿಚಾರಗಳು ಮತ್ತು ನೈತಿಕತೆಯ ಬಗ್ಗೆ ಉಲ್ಲೇಖ ಮಾಡಿದ್ದರು. ಅದಾಗಿ ಒಂದರೆಡು ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಪುತ್ತೂರು ಮತ್ತು ಉಡುಪಿ ಜಿಲ್ಲೆಯ ಮಲ್ಪೆ, ಕುಂದಾಪುರದಲ್ಲಿ, ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗದಳ ಮತ್ತು ವಿಎಚ್‌ಪಿ ಯುವಕ-ಯುವತಿಯರ ಕೈಗೆ ತ್ರಿಶೂಲದಂತಹ ಶಸ್ತ್ರಗಳನ್ನು ಹಂಚಿದೆ.

ನವರಾತ್ರಿಯ ಪೂಜೆಯ ದಿನದಂದು ‘ತ್ರಿಶೂಲ ದೀಕ್ಷೆ’ ಹೆಸರಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು ತಮ್ಮ ಕಾರ್ಯಕರ್ತರಿಗೆ ಮಾರಕ ಶಸ್ತ್ರಗಳನ್ನು ಹಂಚಿದೆ. ಇದರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಬೊಮ್ಮಾಯಿ ‘ಕೇಶವ ಕೃಪಾ’ದ ಗುಲಾಮ: ಮಾವಳ್ಳಿ ಶಂಕರ್‌ ಆಕ್ರೋಶ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕದ್ರಿ ವಿಹೆಚ್‌ಪಿ ಕಚೇರಿಯಲ್ಲಿ, ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿ, ಸಂಘಟನೆಯ ನಾಯಕ ಶರಣ್ ಪಂಪ್‌ವೆಲ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದೆ. ಜೊತೆಗೆ ಜಿಲ್ಲೆಯ ಪುತ್ತೂರಿನಲ್ಲೂ ಇದು ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಇಷ್ಟೇ ಅಲ್ಲದೆ, ಉಡುಪಿಯ ಮಲ್ಪೆ ವಡಭಾಂಡೇಶ್ವರ ಬಲರಾಮ ದೇವಸ್ಥಾನದಲ್ಲಿ ಕೂಡಾ ತ್ರಿಶೂಲ ದೀಕ್ಷೆ ನಡೆದಿದೆ. ಅಲ್ಲದೆ ಜಿಲ್ಲೆಯ ಕುಂದಾಪುರದಲ್ಲೂ ಮಹಿಳೆಯಗೆ ತ್ರಿಶೂಲ ದೀಕ್ಷೆ ನೀಡಲಾಗಿದೆ.

ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಹಿಂದೂಗಳ ಆತ್ಮ ರಕ್ಷಣೆ, ಗೋಹತ್ಯೆ, ಭಯೋತ್ಪಾದನೆ, ಮತಾಂತರ, ಲವ್‌ ಜಿಹಾದ್ ಮತ್ತು ಲ್ಯಾಂಡ್ ಜಿಹಾದ್ ವಿರುದ್ದ ಹೋರಾಟ ಮಾಡಲು ತ್ರಿಶೂಲ ದೀಕ್ಷೆಯನ್ನು ಮಾಡಲಾಗಿದೆ ಎಂದು ಸಂಘಟನೆಗಳು ಹೇಳಿಕೊಂಡಿದ್ದು, ಯುವಕರಿಗೆ ಶಪಥವನ್ನು ಮಾಡಿಸಿಕೊಂಡಿದ್ದಾರೆ.

ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥನೆ ಮಾಡಿದ್ದರು. ಅದಾಗಿ ಒಂದರೆಡು ದಿನಗಳಲ್ಲಿ ಕರಾವಳಿಯಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೊಶ ಹೆಚ್ಚಿದೆ. ಹಲವಾರು ಜನರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

May be an image of 11 people, people standing and text that says "Lm ಸೇವಾ ಸಂಸ್ಕಾರ।। ವಿಶ್ವ ಹಿಂದು ಪರಿಷದ್ ಬಜರಂಗ ದಳ ಸುರಕಾ ಮಾತೃಶಕ್ತಿ ದುರ್ಗಾವಾಹಿನಿ, ಕುಂದಾಪುರ ಪ್ರಖಂಡ අವප ದತಿಯಬಂದ ನವರಾತ್ರಿಯ ಶುಭ ದಿನದಂದು ದುಗ ಗವಮಿ ಕಾರ್ಯ ದಿನಾಂ4-10 4-10 ದಿನಾಂ é"

ನಾನುಗೌರಿ.ಕಾಂ ಜೊತೆ ಮಾತನಾಡಿದ ದ.ಕ ಜಿಲ್ಲಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್‌, “ಇಂತಹ ಸಂಘಟನೆಗಳಿಂದ ಬೇರೇನೂ ನಿರೀಕ್ಷಿಸಲು ಸಾಧ್ಯವಿಲ್ಲ, ಅವರಿಂದ ಇದು ಸಾಮಾನ್ಯ. ಬಿಜೆಪಿಯ ಮುಖ್ಯಮಂತ್ರಿ, ಸಂಸದರು, ಸಚಿವರು ಮತ್ತು ಸೇರಿದಂತೆ ಕೊಲೆ ಮಾಡಲು, ಸಂವಿದಾನ ಬದಲಾವಣೆ ಮಾಡುವ ಬಗ್ಗೆ ಹೇಳಿಕೆ ನೀಡುತ್ತಲೆ ಇದ್ದಾರೆ. ಗಾಂಧೀ ಕೊಂದವರನ್ನು ಇವರು ವಿಜ್ರಂಭಿಸುತ್ತಾರೆ. ಇದು ಅವರ ಹುಟ್ಟು ಗುಣ, ಇಂತಹ ಘಟನೆಗಳು ಅನಿರೀಕ್ಷಿತ ಅಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

“ಈ ರೀತಿಯಾಗಿ ಭಯ ಹುಟ್ಟಿಸುವಂತದ್ದು, ದೇವರ ಹೆಸರನ್ನು ಬಳಸಿ ಹಿಂದೂಗಳನ್ನು ಭಾವನಾತ್ಮಕವಾಗಿ ಕೆರಳಿಸಿ ಮತ ಪಡೆಯುವಂತಹದ್ದು, ಇದೆಲ್ಲಾ ಅವರಿಗೆ ಕರಗತವಾಗಿ ಬಂದಿದೆ. ಅವರಿಗೆ ದೇಶದ ಬಗ್ಗೆ ಚಿಂತೆಯಿಲ್ಲ, ಆಡಳಿತ ಮತ್ತು ದುಡ್ಡಷ್ಟೇ ಅವರ ಉದ್ದೇಶ. ಮುಂದೆ ಚುನಾವಣೆ ಬರುತ್ತಿದೆ ಅದಕ್ಕಾಗಿ ಅವರು ತಯಾರಿ ಮಾಡುತ್ತಿದ್ದಾರೆ. ಆದರೆ ಬೆಲೆ ಏರಿಕೆ, ಉದ್ಯೋಗ ನಷ್ಟ, ಕೊರನಾದಿಂದ ಜನರ ಸಂಕಷ್ಟಪಡುತ್ತಿದ್ದಾರೆ ಆದರೆ ಇವುಗಳನ್ನು ಕೇಳುವವರಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕಾಂಗ್ರೆಸ್‌ಗೆ ಮತ ನೀಡಿದರೆ ಶಾಲೆಗೆ ಹೊರಟ ನಿಮ್ಮ ಮಕ್ಕಳು ಮನೆಗೆ ವಾಪಾಸು ಬರಲು ಸಾಧ್ಯವಿಲ್ಲ ಎಂದು ಪ್ರಚಾರ ಮಾಡಿದ್ದರು. ಆದರೆ ಇತ್ತೀಚೆಗೆ ಸುರತ್ಕಲ್‌ನಲ್ಲಿ ಕಾಲೇಜ್‌ನ ಮಕ್ಕಳನ್ನು ಹಿಡಿದು ಹಲ್ಲೆ ಮಾಡಿದ್ದಾರೆ. ಚುನಾವಣೆ ಸಮಯದಲ್ಲಿ ಇವರು ಹಿಂದೂ ಧರ್ಮವನ್ನು ಬಳಸಿಕೊಳ್ಳುತ್ತಾರೆ. ಇದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಇದರ ವಿರುದ್ದ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡುತ್ತಿದೆ. ಈ ಘಟನೆಯ ಬಗ್ಗೆಯು ಕಾನೂನಾತ್ಮಕವಾಗಿಯು ಹೋರಾಟ ಮಾಡುತ್ತದೆ” ಎಂದು ಹರೀಶ್ ಕುಮಾರ್‌ ಹೇಳಿದ್ದಾರೆ.

May be an image of text that says "विश्व हिन्दू परिषट ವಿಶ್ವ ಹಿಂದೂ ಪರಿಷದ್ धर्मो रक्षति रकित: ಬಜರಂಗದಳ ಉಡುಪಿ ವಿಜಯ ದಶಮಿಯ ಅಂಗವಾಗಿ ಶಸ್ತ್ರ ಪೂಜೆ ತ್ರಿಶೂಲ ದೀಕ್ಷೆ ಸಮಾರಂಭ ದಿನಾಂಕ: 13 ಬುಧವಾರ ಸಂಜೆ 4:00 ಗಂಟೆಗೆ ಸ್ಥಳ: ವಡಭಾಂಡ ಬಲರಾಮ ದೇವಸ್ಥಾನ, ಮಲ್ಪೆ- ವಡಭಾಂಡೇಶ್ವರ ದುಷ್ಟರ ದಮನಕ್ಕೆ ಶಸ್ತವ ಹಿಡಿಯಲು ರಾಮನ ಬಂಟರು ಸದಾ ಸನ್ನದ್ಧ.."

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಮಾತನಾಡಿ, “ಇದು ವ್ಯವಸ್ಥಿತ ಕಾರ್ಯಸೂಚಿಯ ಭಾಗ. ಮುಂಬರುವ ಚುನಾನಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಇದೆಲ್ಲ ನಡೆಯುತ್ತಿದೆ. ಕರಾವಳಿಯಲ್ಲಿ ನಿರುದ್ಯೋಗ, ಬೆಲೆಯೇರಿಕೆ ಮುಂತಾದ ಜ್ವಲಂತ ಸಮಸ್ಯೆಗಳಿಂದ ಜನ ದಿಕ್ಕೆಟ್ಟಿದ್ದಾರೆ. ಸಹಜವಾಗಿಯೇ ಇದು ಸರಕಾರದ ವಿರುದ್ದ ಅತೃಪ್ತಿಯಾಗಿ ಪರಿವರ್ತನೆಗೊಳ್ಳುತ್ತಿದೆ. ಇದರ ಅಪಾಯವನ್ನು ಮನಗಂಡಿರುವ ಬಿಜೆಪಿ ಮತೀಯ ಧ್ರುವೀಕರಣದ ತನ್ನ ಹಳೆಯ ಅಜೆಂಡಾವನ್ನು ಮುನ್ನಲೆಗೆ ತಂದು ಆಡಳಿತ ವಿರೋಧಿ ಅಲೆಯಿಂದ ಪಾರಾಗುವುದು, ಮುಂಬರುವ ಚುನಾವಣೆಯನ್ನು ಗೆಲ್ಲುವುದು ಗುರಿಯಾಗಿ ಇರಿಸಿಕೊಂಡಿದೆ” ಎಂದು ಹೇಳಿದ್ದಾರೆ.

“ಈ ಎಲ್ಲಾ ವಿಚಾರಕ್ಕಾಗಿ ಸಂಘ ಪರಿವಾರದ ಸಂಘಟನೆಗಳಿಂದ ವಿವಿಧ ರೀತಿಯ ಪ್ರಚೋದಕ ಕಾರ್ಯಗಳು ನಡೆಯುತ್ತಿವೆ. ಅನೈತಿಕ ಪೊಲೀಸ್ ಗಿರಿ, ದ್ವೇಷ ಭಾಷಣ, ಮುಖ್ಯಮಂತ್ರಿಯ ಕ್ರಿಯೆ, ಪ್ರತಿಕ್ರಿಯೆ ಹೇಳಿಕೆ ಎಲ್ಲವೂ ಯೋಜಿತ ರೀತಿಯಲ್ಲಿ ನಡೆಯುತ್ತಿದೆ. ಈಗ ಆಯುಧ ಪೂಜೆಯ ದಿನ ನಡೆದಿರುವ ತ್ರಿಶೂಲ ಧೀಕ್ಷೆ ಅದರ ಒಂದು ಭಾಗ. ಸರಕಾರ ನಡೆಸುತ್ತಿರುವ ಪಕ್ಷ ಸ್ವತಹ ಇಂತಹ ಸಂವಿಧಾನ ವಿರೋಧಿ, ಕಾನೂನು ವಿರೋಧಿ ಕೃತ್ಯಗಳನ್ನು ಹಮ್ಮಿಕೊಳ್ಳುತ್ತಿರುವುದರ ಹಿಂದಿನ ಹುನ್ನಾರಗಳನ್ನು ಜನ ಅರ್ಥ ಮಾಡಿಕೊಳ್ಳದಿದ್ದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ” ಎಂದು ಎಚ್ಚರಿಕೆ ನೀಡಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯೆಗಾಗಿ ಮಂಗಳೂರು ಕಮಿಷನರ್‌ ಶಶಿಕುಮಾರ್‌ ಅವರಿಗೆ ನಾನುಗೌರಿ.ಕಾಂ ಕರೆ ಮಾಡಿದ್ದು ಅವರು ಕರೆಯನ್ನು ಸ್ವೀಕರಿಸಿಲ್ಲ. ಅವರು ಪ್ರತಿಕ್ರಿಯೆ ನೀಡಿದ ಕೂಡಲೇ ಸುದ್ದಿಯನ್ನು ಅಪ್‌ಡೇಟ್ ಮಾಡಲಾಗುವುದು.

ಇದನ್ನೂ ಓದಿ: ನೈತಿಕತೆ ಮತ್ತು ಪೊಲೀಸ್‌ಗಿರಿ ಕೂಡಿಕೊಂಡರೆ ಅದು ಅನೈತಿಕ ಮನಸ್ಥಿತಿಗಳ ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...