Homeಕರ್ನಾಟಕಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಬಿಜೆಪಿ ಮುಂದಿನ ಚುನಾವಣೆಗೆ ಸಜ್ಜಾಗುತ್ತಿದೆ, ಜನರು ಎಚ್ಚರದಿಂದ ಇರಬೇಕು ಎಂದು ಜನಪರ ಸಂಘಟನೆಗಳು ಎಚ್ಚರಿಸಿವೆ

- Advertisement -
- Advertisement -

ಮುಖ್ಯಮಂತ್ರಿ ಬೊಮ್ಮಾಯಿ ಅವರು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥನೆ ಮಾಡಿ, ಭಾವನಾತ್ಮಕ ವಿಚಾರಗಳು ಮತ್ತು ನೈತಿಕತೆಯ ಬಗ್ಗೆ ಉಲ್ಲೇಖ ಮಾಡಿದ್ದರು. ಅದಾಗಿ ಒಂದರೆಡು ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಪುತ್ತೂರು ಮತ್ತು ಉಡುಪಿ ಜಿಲ್ಲೆಯ ಮಲ್ಪೆ, ಕುಂದಾಪುರದಲ್ಲಿ, ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗದಳ ಮತ್ತು ವಿಎಚ್‌ಪಿ ಯುವಕ-ಯುವತಿಯರ ಕೈಗೆ ತ್ರಿಶೂಲದಂತಹ ಶಸ್ತ್ರಗಳನ್ನು ಹಂಚಿದೆ.

ನವರಾತ್ರಿಯ ಪೂಜೆಯ ದಿನದಂದು ‘ತ್ರಿಶೂಲ ದೀಕ್ಷೆ’ ಹೆಸರಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು ತಮ್ಮ ಕಾರ್ಯಕರ್ತರಿಗೆ ಮಾರಕ ಶಸ್ತ್ರಗಳನ್ನು ಹಂಚಿದೆ. ಇದರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಬೊಮ್ಮಾಯಿ ‘ಕೇಶವ ಕೃಪಾ’ದ ಗುಲಾಮ: ಮಾವಳ್ಳಿ ಶಂಕರ್‌ ಆಕ್ರೋಶ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕದ್ರಿ ವಿಹೆಚ್‌ಪಿ ಕಚೇರಿಯಲ್ಲಿ, ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿ, ಸಂಘಟನೆಯ ನಾಯಕ ಶರಣ್ ಪಂಪ್‌ವೆಲ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದೆ. ಜೊತೆಗೆ ಜಿಲ್ಲೆಯ ಪುತ್ತೂರಿನಲ್ಲೂ ಇದು ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಇಷ್ಟೇ ಅಲ್ಲದೆ, ಉಡುಪಿಯ ಮಲ್ಪೆ ವಡಭಾಂಡೇಶ್ವರ ಬಲರಾಮ ದೇವಸ್ಥಾನದಲ್ಲಿ ಕೂಡಾ ತ್ರಿಶೂಲ ದೀಕ್ಷೆ ನಡೆದಿದೆ. ಅಲ್ಲದೆ ಜಿಲ್ಲೆಯ ಕುಂದಾಪುರದಲ್ಲೂ ಮಹಿಳೆಯಗೆ ತ್ರಿಶೂಲ ದೀಕ್ಷೆ ನೀಡಲಾಗಿದೆ.

ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಹಿಂದೂಗಳ ಆತ್ಮ ರಕ್ಷಣೆ, ಗೋಹತ್ಯೆ, ಭಯೋತ್ಪಾದನೆ, ಮತಾಂತರ, ಲವ್‌ ಜಿಹಾದ್ ಮತ್ತು ಲ್ಯಾಂಡ್ ಜಿಹಾದ್ ವಿರುದ್ದ ಹೋರಾಟ ಮಾಡಲು ತ್ರಿಶೂಲ ದೀಕ್ಷೆಯನ್ನು ಮಾಡಲಾಗಿದೆ ಎಂದು ಸಂಘಟನೆಗಳು ಹೇಳಿಕೊಂಡಿದ್ದು, ಯುವಕರಿಗೆ ಶಪಥವನ್ನು ಮಾಡಿಸಿಕೊಂಡಿದ್ದಾರೆ.

ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥನೆ ಮಾಡಿದ್ದರು. ಅದಾಗಿ ಒಂದರೆಡು ದಿನಗಳಲ್ಲಿ ಕರಾವಳಿಯಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೊಶ ಹೆಚ್ಚಿದೆ. ಹಲವಾರು ಜನರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

May be an image of 11 people, people standing and text that says "Lm ಸೇವಾ ಸಂಸ್ಕಾರ।। ವಿಶ್ವ ಹಿಂದು ಪರಿಷದ್ ಬಜರಂಗ ದಳ ಸುರಕಾ ಮಾತೃಶಕ್ತಿ ದುರ್ಗಾವಾಹಿನಿ, ಕುಂದಾಪುರ ಪ್ರಖಂಡ අವප ದತಿಯಬಂದ ನವರಾತ್ರಿಯ ಶುಭ ದಿನದಂದು ದುಗ ಗವಮಿ ಕಾರ್ಯ ದಿನಾಂ4-10 4-10 ದಿನಾಂ é"

ನಾನುಗೌರಿ.ಕಾಂ ಜೊತೆ ಮಾತನಾಡಿದ ದ.ಕ ಜಿಲ್ಲಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್‌, “ಇಂತಹ ಸಂಘಟನೆಗಳಿಂದ ಬೇರೇನೂ ನಿರೀಕ್ಷಿಸಲು ಸಾಧ್ಯವಿಲ್ಲ, ಅವರಿಂದ ಇದು ಸಾಮಾನ್ಯ. ಬಿಜೆಪಿಯ ಮುಖ್ಯಮಂತ್ರಿ, ಸಂಸದರು, ಸಚಿವರು ಮತ್ತು ಸೇರಿದಂತೆ ಕೊಲೆ ಮಾಡಲು, ಸಂವಿದಾನ ಬದಲಾವಣೆ ಮಾಡುವ ಬಗ್ಗೆ ಹೇಳಿಕೆ ನೀಡುತ್ತಲೆ ಇದ್ದಾರೆ. ಗಾಂಧೀ ಕೊಂದವರನ್ನು ಇವರು ವಿಜ್ರಂಭಿಸುತ್ತಾರೆ. ಇದು ಅವರ ಹುಟ್ಟು ಗುಣ, ಇಂತಹ ಘಟನೆಗಳು ಅನಿರೀಕ್ಷಿತ ಅಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

“ಈ ರೀತಿಯಾಗಿ ಭಯ ಹುಟ್ಟಿಸುವಂತದ್ದು, ದೇವರ ಹೆಸರನ್ನು ಬಳಸಿ ಹಿಂದೂಗಳನ್ನು ಭಾವನಾತ್ಮಕವಾಗಿ ಕೆರಳಿಸಿ ಮತ ಪಡೆಯುವಂತಹದ್ದು, ಇದೆಲ್ಲಾ ಅವರಿಗೆ ಕರಗತವಾಗಿ ಬಂದಿದೆ. ಅವರಿಗೆ ದೇಶದ ಬಗ್ಗೆ ಚಿಂತೆಯಿಲ್ಲ, ಆಡಳಿತ ಮತ್ತು ದುಡ್ಡಷ್ಟೇ ಅವರ ಉದ್ದೇಶ. ಮುಂದೆ ಚುನಾವಣೆ ಬರುತ್ತಿದೆ ಅದಕ್ಕಾಗಿ ಅವರು ತಯಾರಿ ಮಾಡುತ್ತಿದ್ದಾರೆ. ಆದರೆ ಬೆಲೆ ಏರಿಕೆ, ಉದ್ಯೋಗ ನಷ್ಟ, ಕೊರನಾದಿಂದ ಜನರ ಸಂಕಷ್ಟಪಡುತ್ತಿದ್ದಾರೆ ಆದರೆ ಇವುಗಳನ್ನು ಕೇಳುವವರಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕಾಂಗ್ರೆಸ್‌ಗೆ ಮತ ನೀಡಿದರೆ ಶಾಲೆಗೆ ಹೊರಟ ನಿಮ್ಮ ಮಕ್ಕಳು ಮನೆಗೆ ವಾಪಾಸು ಬರಲು ಸಾಧ್ಯವಿಲ್ಲ ಎಂದು ಪ್ರಚಾರ ಮಾಡಿದ್ದರು. ಆದರೆ ಇತ್ತೀಚೆಗೆ ಸುರತ್ಕಲ್‌ನಲ್ಲಿ ಕಾಲೇಜ್‌ನ ಮಕ್ಕಳನ್ನು ಹಿಡಿದು ಹಲ್ಲೆ ಮಾಡಿದ್ದಾರೆ. ಚುನಾವಣೆ ಸಮಯದಲ್ಲಿ ಇವರು ಹಿಂದೂ ಧರ್ಮವನ್ನು ಬಳಸಿಕೊಳ್ಳುತ್ತಾರೆ. ಇದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಇದರ ವಿರುದ್ದ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡುತ್ತಿದೆ. ಈ ಘಟನೆಯ ಬಗ್ಗೆಯು ಕಾನೂನಾತ್ಮಕವಾಗಿಯು ಹೋರಾಟ ಮಾಡುತ್ತದೆ” ಎಂದು ಹರೀಶ್ ಕುಮಾರ್‌ ಹೇಳಿದ್ದಾರೆ.

May be an image of text that says "विश्व हिन्दू परिषट ವಿಶ್ವ ಹಿಂದೂ ಪರಿಷದ್ धर्मो रक्षति रकित: ಬಜರಂಗದಳ ಉಡುಪಿ ವಿಜಯ ದಶಮಿಯ ಅಂಗವಾಗಿ ಶಸ್ತ್ರ ಪೂಜೆ ತ್ರಿಶೂಲ ದೀಕ್ಷೆ ಸಮಾರಂಭ ದಿನಾಂಕ: 13 ಬುಧವಾರ ಸಂಜೆ 4:00 ಗಂಟೆಗೆ ಸ್ಥಳ: ವಡಭಾಂಡ ಬಲರಾಮ ದೇವಸ್ಥಾನ, ಮಲ್ಪೆ- ವಡಭಾಂಡೇಶ್ವರ ದುಷ್ಟರ ದಮನಕ್ಕೆ ಶಸ್ತವ ಹಿಡಿಯಲು ರಾಮನ ಬಂಟರು ಸದಾ ಸನ್ನದ್ಧ.."

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಮಾತನಾಡಿ, “ಇದು ವ್ಯವಸ್ಥಿತ ಕಾರ್ಯಸೂಚಿಯ ಭಾಗ. ಮುಂಬರುವ ಚುನಾನಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಇದೆಲ್ಲ ನಡೆಯುತ್ತಿದೆ. ಕರಾವಳಿಯಲ್ಲಿ ನಿರುದ್ಯೋಗ, ಬೆಲೆಯೇರಿಕೆ ಮುಂತಾದ ಜ್ವಲಂತ ಸಮಸ್ಯೆಗಳಿಂದ ಜನ ದಿಕ್ಕೆಟ್ಟಿದ್ದಾರೆ. ಸಹಜವಾಗಿಯೇ ಇದು ಸರಕಾರದ ವಿರುದ್ದ ಅತೃಪ್ತಿಯಾಗಿ ಪರಿವರ್ತನೆಗೊಳ್ಳುತ್ತಿದೆ. ಇದರ ಅಪಾಯವನ್ನು ಮನಗಂಡಿರುವ ಬಿಜೆಪಿ ಮತೀಯ ಧ್ರುವೀಕರಣದ ತನ್ನ ಹಳೆಯ ಅಜೆಂಡಾವನ್ನು ಮುನ್ನಲೆಗೆ ತಂದು ಆಡಳಿತ ವಿರೋಧಿ ಅಲೆಯಿಂದ ಪಾರಾಗುವುದು, ಮುಂಬರುವ ಚುನಾವಣೆಯನ್ನು ಗೆಲ್ಲುವುದು ಗುರಿಯಾಗಿ ಇರಿಸಿಕೊಂಡಿದೆ” ಎಂದು ಹೇಳಿದ್ದಾರೆ.

“ಈ ಎಲ್ಲಾ ವಿಚಾರಕ್ಕಾಗಿ ಸಂಘ ಪರಿವಾರದ ಸಂಘಟನೆಗಳಿಂದ ವಿವಿಧ ರೀತಿಯ ಪ್ರಚೋದಕ ಕಾರ್ಯಗಳು ನಡೆಯುತ್ತಿವೆ. ಅನೈತಿಕ ಪೊಲೀಸ್ ಗಿರಿ, ದ್ವೇಷ ಭಾಷಣ, ಮುಖ್ಯಮಂತ್ರಿಯ ಕ್ರಿಯೆ, ಪ್ರತಿಕ್ರಿಯೆ ಹೇಳಿಕೆ ಎಲ್ಲವೂ ಯೋಜಿತ ರೀತಿಯಲ್ಲಿ ನಡೆಯುತ್ತಿದೆ. ಈಗ ಆಯುಧ ಪೂಜೆಯ ದಿನ ನಡೆದಿರುವ ತ್ರಿಶೂಲ ಧೀಕ್ಷೆ ಅದರ ಒಂದು ಭಾಗ. ಸರಕಾರ ನಡೆಸುತ್ತಿರುವ ಪಕ್ಷ ಸ್ವತಹ ಇಂತಹ ಸಂವಿಧಾನ ವಿರೋಧಿ, ಕಾನೂನು ವಿರೋಧಿ ಕೃತ್ಯಗಳನ್ನು ಹಮ್ಮಿಕೊಳ್ಳುತ್ತಿರುವುದರ ಹಿಂದಿನ ಹುನ್ನಾರಗಳನ್ನು ಜನ ಅರ್ಥ ಮಾಡಿಕೊಳ್ಳದಿದ್ದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ” ಎಂದು ಎಚ್ಚರಿಕೆ ನೀಡಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯೆಗಾಗಿ ಮಂಗಳೂರು ಕಮಿಷನರ್‌ ಶಶಿಕುಮಾರ್‌ ಅವರಿಗೆ ನಾನುಗೌರಿ.ಕಾಂ ಕರೆ ಮಾಡಿದ್ದು ಅವರು ಕರೆಯನ್ನು ಸ್ವೀಕರಿಸಿಲ್ಲ. ಅವರು ಪ್ರತಿಕ್ರಿಯೆ ನೀಡಿದ ಕೂಡಲೇ ಸುದ್ದಿಯನ್ನು ಅಪ್‌ಡೇಟ್ ಮಾಡಲಾಗುವುದು.

ಇದನ್ನೂ ಓದಿ: ನೈತಿಕತೆ ಮತ್ತು ಪೊಲೀಸ್‌ಗಿರಿ ಕೂಡಿಕೊಂಡರೆ ಅದು ಅನೈತಿಕ ಮನಸ್ಥಿತಿಗಳ ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...