Homeಕರ್ನಾಟಕಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಬಿಜೆಪಿ ಮುಂದಿನ ಚುನಾವಣೆಗೆ ಸಜ್ಜಾಗುತ್ತಿದೆ, ಜನರು ಎಚ್ಚರದಿಂದ ಇರಬೇಕು ಎಂದು ಜನಪರ ಸಂಘಟನೆಗಳು ಎಚ್ಚರಿಸಿವೆ

- Advertisement -
- Advertisement -

ಮುಖ್ಯಮಂತ್ರಿ ಬೊಮ್ಮಾಯಿ ಅವರು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥನೆ ಮಾಡಿ, ಭಾವನಾತ್ಮಕ ವಿಚಾರಗಳು ಮತ್ತು ನೈತಿಕತೆಯ ಬಗ್ಗೆ ಉಲ್ಲೇಖ ಮಾಡಿದ್ದರು. ಅದಾಗಿ ಒಂದರೆಡು ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಪುತ್ತೂರು ಮತ್ತು ಉಡುಪಿ ಜಿಲ್ಲೆಯ ಮಲ್ಪೆ, ಕುಂದಾಪುರದಲ್ಲಿ, ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗದಳ ಮತ್ತು ವಿಎಚ್‌ಪಿ ಯುವಕ-ಯುವತಿಯರ ಕೈಗೆ ತ್ರಿಶೂಲದಂತಹ ಶಸ್ತ್ರಗಳನ್ನು ಹಂಚಿದೆ.

ನವರಾತ್ರಿಯ ಪೂಜೆಯ ದಿನದಂದು ‘ತ್ರಿಶೂಲ ದೀಕ್ಷೆ’ ಹೆಸರಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು ತಮ್ಮ ಕಾರ್ಯಕರ್ತರಿಗೆ ಮಾರಕ ಶಸ್ತ್ರಗಳನ್ನು ಹಂಚಿದೆ. ಇದರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಬೊಮ್ಮಾಯಿ ‘ಕೇಶವ ಕೃಪಾ’ದ ಗುಲಾಮ: ಮಾವಳ್ಳಿ ಶಂಕರ್‌ ಆಕ್ರೋಶ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕದ್ರಿ ವಿಹೆಚ್‌ಪಿ ಕಚೇರಿಯಲ್ಲಿ, ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿ, ಸಂಘಟನೆಯ ನಾಯಕ ಶರಣ್ ಪಂಪ್‌ವೆಲ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದೆ. ಜೊತೆಗೆ ಜಿಲ್ಲೆಯ ಪುತ್ತೂರಿನಲ್ಲೂ ಇದು ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಇಷ್ಟೇ ಅಲ್ಲದೆ, ಉಡುಪಿಯ ಮಲ್ಪೆ ವಡಭಾಂಡೇಶ್ವರ ಬಲರಾಮ ದೇವಸ್ಥಾನದಲ್ಲಿ ಕೂಡಾ ತ್ರಿಶೂಲ ದೀಕ್ಷೆ ನಡೆದಿದೆ. ಅಲ್ಲದೆ ಜಿಲ್ಲೆಯ ಕುಂದಾಪುರದಲ್ಲೂ ಮಹಿಳೆಯಗೆ ತ್ರಿಶೂಲ ದೀಕ್ಷೆ ನೀಡಲಾಗಿದೆ.

ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಹಿಂದೂಗಳ ಆತ್ಮ ರಕ್ಷಣೆ, ಗೋಹತ್ಯೆ, ಭಯೋತ್ಪಾದನೆ, ಮತಾಂತರ, ಲವ್‌ ಜಿಹಾದ್ ಮತ್ತು ಲ್ಯಾಂಡ್ ಜಿಹಾದ್ ವಿರುದ್ದ ಹೋರಾಟ ಮಾಡಲು ತ್ರಿಶೂಲ ದೀಕ್ಷೆಯನ್ನು ಮಾಡಲಾಗಿದೆ ಎಂದು ಸಂಘಟನೆಗಳು ಹೇಳಿಕೊಂಡಿದ್ದು, ಯುವಕರಿಗೆ ಶಪಥವನ್ನು ಮಾಡಿಸಿಕೊಂಡಿದ್ದಾರೆ.

ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥನೆ ಮಾಡಿದ್ದರು. ಅದಾಗಿ ಒಂದರೆಡು ದಿನಗಳಲ್ಲಿ ಕರಾವಳಿಯಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೊಶ ಹೆಚ್ಚಿದೆ. ಹಲವಾರು ಜನರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

May be an image of 11 people, people standing and text that says "Lm ಸೇವಾ ಸಂಸ್ಕಾರ।। ವಿಶ್ವ ಹಿಂದು ಪರಿಷದ್ ಬಜರಂಗ ದಳ ಸುರಕಾ ಮಾತೃಶಕ್ತಿ ದುರ್ಗಾವಾಹಿನಿ, ಕುಂದಾಪುರ ಪ್ರಖಂಡ අವප ದತಿಯಬಂದ ನವರಾತ್ರಿಯ ಶುಭ ದಿನದಂದು ದುಗ ಗವಮಿ ಕಾರ್ಯ ದಿನಾಂ4-10 4-10 ದಿನಾಂ é"

ನಾನುಗೌರಿ.ಕಾಂ ಜೊತೆ ಮಾತನಾಡಿದ ದ.ಕ ಜಿಲ್ಲಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್‌, “ಇಂತಹ ಸಂಘಟನೆಗಳಿಂದ ಬೇರೇನೂ ನಿರೀಕ್ಷಿಸಲು ಸಾಧ್ಯವಿಲ್ಲ, ಅವರಿಂದ ಇದು ಸಾಮಾನ್ಯ. ಬಿಜೆಪಿಯ ಮುಖ್ಯಮಂತ್ರಿ, ಸಂಸದರು, ಸಚಿವರು ಮತ್ತು ಸೇರಿದಂತೆ ಕೊಲೆ ಮಾಡಲು, ಸಂವಿದಾನ ಬದಲಾವಣೆ ಮಾಡುವ ಬಗ್ಗೆ ಹೇಳಿಕೆ ನೀಡುತ್ತಲೆ ಇದ್ದಾರೆ. ಗಾಂಧೀ ಕೊಂದವರನ್ನು ಇವರು ವಿಜ್ರಂಭಿಸುತ್ತಾರೆ. ಇದು ಅವರ ಹುಟ್ಟು ಗುಣ, ಇಂತಹ ಘಟನೆಗಳು ಅನಿರೀಕ್ಷಿತ ಅಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

“ಈ ರೀತಿಯಾಗಿ ಭಯ ಹುಟ್ಟಿಸುವಂತದ್ದು, ದೇವರ ಹೆಸರನ್ನು ಬಳಸಿ ಹಿಂದೂಗಳನ್ನು ಭಾವನಾತ್ಮಕವಾಗಿ ಕೆರಳಿಸಿ ಮತ ಪಡೆಯುವಂತಹದ್ದು, ಇದೆಲ್ಲಾ ಅವರಿಗೆ ಕರಗತವಾಗಿ ಬಂದಿದೆ. ಅವರಿಗೆ ದೇಶದ ಬಗ್ಗೆ ಚಿಂತೆಯಿಲ್ಲ, ಆಡಳಿತ ಮತ್ತು ದುಡ್ಡಷ್ಟೇ ಅವರ ಉದ್ದೇಶ. ಮುಂದೆ ಚುನಾವಣೆ ಬರುತ್ತಿದೆ ಅದಕ್ಕಾಗಿ ಅವರು ತಯಾರಿ ಮಾಡುತ್ತಿದ್ದಾರೆ. ಆದರೆ ಬೆಲೆ ಏರಿಕೆ, ಉದ್ಯೋಗ ನಷ್ಟ, ಕೊರನಾದಿಂದ ಜನರ ಸಂಕಷ್ಟಪಡುತ್ತಿದ್ದಾರೆ ಆದರೆ ಇವುಗಳನ್ನು ಕೇಳುವವರಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕಾಂಗ್ರೆಸ್‌ಗೆ ಮತ ನೀಡಿದರೆ ಶಾಲೆಗೆ ಹೊರಟ ನಿಮ್ಮ ಮಕ್ಕಳು ಮನೆಗೆ ವಾಪಾಸು ಬರಲು ಸಾಧ್ಯವಿಲ್ಲ ಎಂದು ಪ್ರಚಾರ ಮಾಡಿದ್ದರು. ಆದರೆ ಇತ್ತೀಚೆಗೆ ಸುರತ್ಕಲ್‌ನಲ್ಲಿ ಕಾಲೇಜ್‌ನ ಮಕ್ಕಳನ್ನು ಹಿಡಿದು ಹಲ್ಲೆ ಮಾಡಿದ್ದಾರೆ. ಚುನಾವಣೆ ಸಮಯದಲ್ಲಿ ಇವರು ಹಿಂದೂ ಧರ್ಮವನ್ನು ಬಳಸಿಕೊಳ್ಳುತ್ತಾರೆ. ಇದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಇದರ ವಿರುದ್ದ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡುತ್ತಿದೆ. ಈ ಘಟನೆಯ ಬಗ್ಗೆಯು ಕಾನೂನಾತ್ಮಕವಾಗಿಯು ಹೋರಾಟ ಮಾಡುತ್ತದೆ” ಎಂದು ಹರೀಶ್ ಕುಮಾರ್‌ ಹೇಳಿದ್ದಾರೆ.

May be an image of text that says "विश्व हिन्दू परिषट ವಿಶ್ವ ಹಿಂದೂ ಪರಿಷದ್ धर्मो रक्षति रकित: ಬಜರಂಗದಳ ಉಡುಪಿ ವಿಜಯ ದಶಮಿಯ ಅಂಗವಾಗಿ ಶಸ್ತ್ರ ಪೂಜೆ ತ್ರಿಶೂಲ ದೀಕ್ಷೆ ಸಮಾರಂಭ ದಿನಾಂಕ: 13 ಬುಧವಾರ ಸಂಜೆ 4:00 ಗಂಟೆಗೆ ಸ್ಥಳ: ವಡಭಾಂಡ ಬಲರಾಮ ದೇವಸ್ಥಾನ, ಮಲ್ಪೆ- ವಡಭಾಂಡೇಶ್ವರ ದುಷ್ಟರ ದಮನಕ್ಕೆ ಶಸ್ತವ ಹಿಡಿಯಲು ರಾಮನ ಬಂಟರು ಸದಾ ಸನ್ನದ್ಧ.."

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಮಾತನಾಡಿ, “ಇದು ವ್ಯವಸ್ಥಿತ ಕಾರ್ಯಸೂಚಿಯ ಭಾಗ. ಮುಂಬರುವ ಚುನಾನಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಇದೆಲ್ಲ ನಡೆಯುತ್ತಿದೆ. ಕರಾವಳಿಯಲ್ಲಿ ನಿರುದ್ಯೋಗ, ಬೆಲೆಯೇರಿಕೆ ಮುಂತಾದ ಜ್ವಲಂತ ಸಮಸ್ಯೆಗಳಿಂದ ಜನ ದಿಕ್ಕೆಟ್ಟಿದ್ದಾರೆ. ಸಹಜವಾಗಿಯೇ ಇದು ಸರಕಾರದ ವಿರುದ್ದ ಅತೃಪ್ತಿಯಾಗಿ ಪರಿವರ್ತನೆಗೊಳ್ಳುತ್ತಿದೆ. ಇದರ ಅಪಾಯವನ್ನು ಮನಗಂಡಿರುವ ಬಿಜೆಪಿ ಮತೀಯ ಧ್ರುವೀಕರಣದ ತನ್ನ ಹಳೆಯ ಅಜೆಂಡಾವನ್ನು ಮುನ್ನಲೆಗೆ ತಂದು ಆಡಳಿತ ವಿರೋಧಿ ಅಲೆಯಿಂದ ಪಾರಾಗುವುದು, ಮುಂಬರುವ ಚುನಾವಣೆಯನ್ನು ಗೆಲ್ಲುವುದು ಗುರಿಯಾಗಿ ಇರಿಸಿಕೊಂಡಿದೆ” ಎಂದು ಹೇಳಿದ್ದಾರೆ.

“ಈ ಎಲ್ಲಾ ವಿಚಾರಕ್ಕಾಗಿ ಸಂಘ ಪರಿವಾರದ ಸಂಘಟನೆಗಳಿಂದ ವಿವಿಧ ರೀತಿಯ ಪ್ರಚೋದಕ ಕಾರ್ಯಗಳು ನಡೆಯುತ್ತಿವೆ. ಅನೈತಿಕ ಪೊಲೀಸ್ ಗಿರಿ, ದ್ವೇಷ ಭಾಷಣ, ಮುಖ್ಯಮಂತ್ರಿಯ ಕ್ರಿಯೆ, ಪ್ರತಿಕ್ರಿಯೆ ಹೇಳಿಕೆ ಎಲ್ಲವೂ ಯೋಜಿತ ರೀತಿಯಲ್ಲಿ ನಡೆಯುತ್ತಿದೆ. ಈಗ ಆಯುಧ ಪೂಜೆಯ ದಿನ ನಡೆದಿರುವ ತ್ರಿಶೂಲ ಧೀಕ್ಷೆ ಅದರ ಒಂದು ಭಾಗ. ಸರಕಾರ ನಡೆಸುತ್ತಿರುವ ಪಕ್ಷ ಸ್ವತಹ ಇಂತಹ ಸಂವಿಧಾನ ವಿರೋಧಿ, ಕಾನೂನು ವಿರೋಧಿ ಕೃತ್ಯಗಳನ್ನು ಹಮ್ಮಿಕೊಳ್ಳುತ್ತಿರುವುದರ ಹಿಂದಿನ ಹುನ್ನಾರಗಳನ್ನು ಜನ ಅರ್ಥ ಮಾಡಿಕೊಳ್ಳದಿದ್ದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ” ಎಂದು ಎಚ್ಚರಿಕೆ ನೀಡಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯೆಗಾಗಿ ಮಂಗಳೂರು ಕಮಿಷನರ್‌ ಶಶಿಕುಮಾರ್‌ ಅವರಿಗೆ ನಾನುಗೌರಿ.ಕಾಂ ಕರೆ ಮಾಡಿದ್ದು ಅವರು ಕರೆಯನ್ನು ಸ್ವೀಕರಿಸಿಲ್ಲ. ಅವರು ಪ್ರತಿಕ್ರಿಯೆ ನೀಡಿದ ಕೂಡಲೇ ಸುದ್ದಿಯನ್ನು ಅಪ್‌ಡೇಟ್ ಮಾಡಲಾಗುವುದು.

ಇದನ್ನೂ ಓದಿ: ನೈತಿಕತೆ ಮತ್ತು ಪೊಲೀಸ್‌ಗಿರಿ ಕೂಡಿಕೊಂಡರೆ ಅದು ಅನೈತಿಕ ಮನಸ್ಥಿತಿಗಳ ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...