Homeಕರ್ನಾಟಕಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಬಿಜೆಪಿ ಮುಂದಿನ ಚುನಾವಣೆಗೆ ಸಜ್ಜಾಗುತ್ತಿದೆ, ಜನರು ಎಚ್ಚರದಿಂದ ಇರಬೇಕು ಎಂದು ಜನಪರ ಸಂಘಟನೆಗಳು ಎಚ್ಚರಿಸಿವೆ

- Advertisement -
- Advertisement -

ಮುಖ್ಯಮಂತ್ರಿ ಬೊಮ್ಮಾಯಿ ಅವರು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥನೆ ಮಾಡಿ, ಭಾವನಾತ್ಮಕ ವಿಚಾರಗಳು ಮತ್ತು ನೈತಿಕತೆಯ ಬಗ್ಗೆ ಉಲ್ಲೇಖ ಮಾಡಿದ್ದರು. ಅದಾಗಿ ಒಂದರೆಡು ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಪುತ್ತೂರು ಮತ್ತು ಉಡುಪಿ ಜಿಲ್ಲೆಯ ಮಲ್ಪೆ, ಕುಂದಾಪುರದಲ್ಲಿ, ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗದಳ ಮತ್ತು ವಿಎಚ್‌ಪಿ ಯುವಕ-ಯುವತಿಯರ ಕೈಗೆ ತ್ರಿಶೂಲದಂತಹ ಶಸ್ತ್ರಗಳನ್ನು ಹಂಚಿದೆ.

ನವರಾತ್ರಿಯ ಪೂಜೆಯ ದಿನದಂದು ‘ತ್ರಿಶೂಲ ದೀಕ್ಷೆ’ ಹೆಸರಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು ತಮ್ಮ ಕಾರ್ಯಕರ್ತರಿಗೆ ಮಾರಕ ಶಸ್ತ್ರಗಳನ್ನು ಹಂಚಿದೆ. ಇದರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಬೊಮ್ಮಾಯಿ ‘ಕೇಶವ ಕೃಪಾ’ದ ಗುಲಾಮ: ಮಾವಳ್ಳಿ ಶಂಕರ್‌ ಆಕ್ರೋಶ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕದ್ರಿ ವಿಹೆಚ್‌ಪಿ ಕಚೇರಿಯಲ್ಲಿ, ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿ, ಸಂಘಟನೆಯ ನಾಯಕ ಶರಣ್ ಪಂಪ್‌ವೆಲ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದೆ. ಜೊತೆಗೆ ಜಿಲ್ಲೆಯ ಪುತ್ತೂರಿನಲ್ಲೂ ಇದು ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಇಷ್ಟೇ ಅಲ್ಲದೆ, ಉಡುಪಿಯ ಮಲ್ಪೆ ವಡಭಾಂಡೇಶ್ವರ ಬಲರಾಮ ದೇವಸ್ಥಾನದಲ್ಲಿ ಕೂಡಾ ತ್ರಿಶೂಲ ದೀಕ್ಷೆ ನಡೆದಿದೆ. ಅಲ್ಲದೆ ಜಿಲ್ಲೆಯ ಕುಂದಾಪುರದಲ್ಲೂ ಮಹಿಳೆಯಗೆ ತ್ರಿಶೂಲ ದೀಕ್ಷೆ ನೀಡಲಾಗಿದೆ.

ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಹಿಂದೂಗಳ ಆತ್ಮ ರಕ್ಷಣೆ, ಗೋಹತ್ಯೆ, ಭಯೋತ್ಪಾದನೆ, ಮತಾಂತರ, ಲವ್‌ ಜಿಹಾದ್ ಮತ್ತು ಲ್ಯಾಂಡ್ ಜಿಹಾದ್ ವಿರುದ್ದ ಹೋರಾಟ ಮಾಡಲು ತ್ರಿಶೂಲ ದೀಕ್ಷೆಯನ್ನು ಮಾಡಲಾಗಿದೆ ಎಂದು ಸಂಘಟನೆಗಳು ಹೇಳಿಕೊಂಡಿದ್ದು, ಯುವಕರಿಗೆ ಶಪಥವನ್ನು ಮಾಡಿಸಿಕೊಂಡಿದ್ದಾರೆ.

ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥನೆ ಮಾಡಿದ್ದರು. ಅದಾಗಿ ಒಂದರೆಡು ದಿನಗಳಲ್ಲಿ ಕರಾವಳಿಯಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೊಶ ಹೆಚ್ಚಿದೆ. ಹಲವಾರು ಜನರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

May be an image of 11 people, people standing and text that says "Lm ಸೇವಾ ಸಂಸ್ಕಾರ।। ವಿಶ್ವ ಹಿಂದು ಪರಿಷದ್ ಬಜರಂಗ ದಳ ಸುರಕಾ ಮಾತೃಶಕ್ತಿ ದುರ್ಗಾವಾಹಿನಿ, ಕುಂದಾಪುರ ಪ್ರಖಂಡ අವප ದತಿಯಬಂದ ನವರಾತ್ರಿಯ ಶುಭ ದಿನದಂದು ದುಗ ಗವಮಿ ಕಾರ್ಯ ದಿನಾಂ4-10 4-10 ದಿನಾಂ é"

ನಾನುಗೌರಿ.ಕಾಂ ಜೊತೆ ಮಾತನಾಡಿದ ದ.ಕ ಜಿಲ್ಲಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್‌, “ಇಂತಹ ಸಂಘಟನೆಗಳಿಂದ ಬೇರೇನೂ ನಿರೀಕ್ಷಿಸಲು ಸಾಧ್ಯವಿಲ್ಲ, ಅವರಿಂದ ಇದು ಸಾಮಾನ್ಯ. ಬಿಜೆಪಿಯ ಮುಖ್ಯಮಂತ್ರಿ, ಸಂಸದರು, ಸಚಿವರು ಮತ್ತು ಸೇರಿದಂತೆ ಕೊಲೆ ಮಾಡಲು, ಸಂವಿದಾನ ಬದಲಾವಣೆ ಮಾಡುವ ಬಗ್ಗೆ ಹೇಳಿಕೆ ನೀಡುತ್ತಲೆ ಇದ್ದಾರೆ. ಗಾಂಧೀ ಕೊಂದವರನ್ನು ಇವರು ವಿಜ್ರಂಭಿಸುತ್ತಾರೆ. ಇದು ಅವರ ಹುಟ್ಟು ಗುಣ, ಇಂತಹ ಘಟನೆಗಳು ಅನಿರೀಕ್ಷಿತ ಅಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

“ಈ ರೀತಿಯಾಗಿ ಭಯ ಹುಟ್ಟಿಸುವಂತದ್ದು, ದೇವರ ಹೆಸರನ್ನು ಬಳಸಿ ಹಿಂದೂಗಳನ್ನು ಭಾವನಾತ್ಮಕವಾಗಿ ಕೆರಳಿಸಿ ಮತ ಪಡೆಯುವಂತಹದ್ದು, ಇದೆಲ್ಲಾ ಅವರಿಗೆ ಕರಗತವಾಗಿ ಬಂದಿದೆ. ಅವರಿಗೆ ದೇಶದ ಬಗ್ಗೆ ಚಿಂತೆಯಿಲ್ಲ, ಆಡಳಿತ ಮತ್ತು ದುಡ್ಡಷ್ಟೇ ಅವರ ಉದ್ದೇಶ. ಮುಂದೆ ಚುನಾವಣೆ ಬರುತ್ತಿದೆ ಅದಕ್ಕಾಗಿ ಅವರು ತಯಾರಿ ಮಾಡುತ್ತಿದ್ದಾರೆ. ಆದರೆ ಬೆಲೆ ಏರಿಕೆ, ಉದ್ಯೋಗ ನಷ್ಟ, ಕೊರನಾದಿಂದ ಜನರ ಸಂಕಷ್ಟಪಡುತ್ತಿದ್ದಾರೆ ಆದರೆ ಇವುಗಳನ್ನು ಕೇಳುವವರಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕಾಂಗ್ರೆಸ್‌ಗೆ ಮತ ನೀಡಿದರೆ ಶಾಲೆಗೆ ಹೊರಟ ನಿಮ್ಮ ಮಕ್ಕಳು ಮನೆಗೆ ವಾಪಾಸು ಬರಲು ಸಾಧ್ಯವಿಲ್ಲ ಎಂದು ಪ್ರಚಾರ ಮಾಡಿದ್ದರು. ಆದರೆ ಇತ್ತೀಚೆಗೆ ಸುರತ್ಕಲ್‌ನಲ್ಲಿ ಕಾಲೇಜ್‌ನ ಮಕ್ಕಳನ್ನು ಹಿಡಿದು ಹಲ್ಲೆ ಮಾಡಿದ್ದಾರೆ. ಚುನಾವಣೆ ಸಮಯದಲ್ಲಿ ಇವರು ಹಿಂದೂ ಧರ್ಮವನ್ನು ಬಳಸಿಕೊಳ್ಳುತ್ತಾರೆ. ಇದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಇದರ ವಿರುದ್ದ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡುತ್ತಿದೆ. ಈ ಘಟನೆಯ ಬಗ್ಗೆಯು ಕಾನೂನಾತ್ಮಕವಾಗಿಯು ಹೋರಾಟ ಮಾಡುತ್ತದೆ” ಎಂದು ಹರೀಶ್ ಕುಮಾರ್‌ ಹೇಳಿದ್ದಾರೆ.

May be an image of text that says "विश्व हिन्दू परिषट ವಿಶ್ವ ಹಿಂದೂ ಪರಿಷದ್ धर्मो रक्षति रकित: ಬಜರಂಗದಳ ಉಡುಪಿ ವಿಜಯ ದಶಮಿಯ ಅಂಗವಾಗಿ ಶಸ್ತ್ರ ಪೂಜೆ ತ್ರಿಶೂಲ ದೀಕ್ಷೆ ಸಮಾರಂಭ ದಿನಾಂಕ: 13 ಬುಧವಾರ ಸಂಜೆ 4:00 ಗಂಟೆಗೆ ಸ್ಥಳ: ವಡಭಾಂಡ ಬಲರಾಮ ದೇವಸ್ಥಾನ, ಮಲ್ಪೆ- ವಡಭಾಂಡೇಶ್ವರ ದುಷ್ಟರ ದಮನಕ್ಕೆ ಶಸ್ತವ ಹಿಡಿಯಲು ರಾಮನ ಬಂಟರು ಸದಾ ಸನ್ನದ್ಧ.."

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಮಾತನಾಡಿ, “ಇದು ವ್ಯವಸ್ಥಿತ ಕಾರ್ಯಸೂಚಿಯ ಭಾಗ. ಮುಂಬರುವ ಚುನಾನಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಇದೆಲ್ಲ ನಡೆಯುತ್ತಿದೆ. ಕರಾವಳಿಯಲ್ಲಿ ನಿರುದ್ಯೋಗ, ಬೆಲೆಯೇರಿಕೆ ಮುಂತಾದ ಜ್ವಲಂತ ಸಮಸ್ಯೆಗಳಿಂದ ಜನ ದಿಕ್ಕೆಟ್ಟಿದ್ದಾರೆ. ಸಹಜವಾಗಿಯೇ ಇದು ಸರಕಾರದ ವಿರುದ್ದ ಅತೃಪ್ತಿಯಾಗಿ ಪರಿವರ್ತನೆಗೊಳ್ಳುತ್ತಿದೆ. ಇದರ ಅಪಾಯವನ್ನು ಮನಗಂಡಿರುವ ಬಿಜೆಪಿ ಮತೀಯ ಧ್ರುವೀಕರಣದ ತನ್ನ ಹಳೆಯ ಅಜೆಂಡಾವನ್ನು ಮುನ್ನಲೆಗೆ ತಂದು ಆಡಳಿತ ವಿರೋಧಿ ಅಲೆಯಿಂದ ಪಾರಾಗುವುದು, ಮುಂಬರುವ ಚುನಾವಣೆಯನ್ನು ಗೆಲ್ಲುವುದು ಗುರಿಯಾಗಿ ಇರಿಸಿಕೊಂಡಿದೆ” ಎಂದು ಹೇಳಿದ್ದಾರೆ.

“ಈ ಎಲ್ಲಾ ವಿಚಾರಕ್ಕಾಗಿ ಸಂಘ ಪರಿವಾರದ ಸಂಘಟನೆಗಳಿಂದ ವಿವಿಧ ರೀತಿಯ ಪ್ರಚೋದಕ ಕಾರ್ಯಗಳು ನಡೆಯುತ್ತಿವೆ. ಅನೈತಿಕ ಪೊಲೀಸ್ ಗಿರಿ, ದ್ವೇಷ ಭಾಷಣ, ಮುಖ್ಯಮಂತ್ರಿಯ ಕ್ರಿಯೆ, ಪ್ರತಿಕ್ರಿಯೆ ಹೇಳಿಕೆ ಎಲ್ಲವೂ ಯೋಜಿತ ರೀತಿಯಲ್ಲಿ ನಡೆಯುತ್ತಿದೆ. ಈಗ ಆಯುಧ ಪೂಜೆಯ ದಿನ ನಡೆದಿರುವ ತ್ರಿಶೂಲ ಧೀಕ್ಷೆ ಅದರ ಒಂದು ಭಾಗ. ಸರಕಾರ ನಡೆಸುತ್ತಿರುವ ಪಕ್ಷ ಸ್ವತಹ ಇಂತಹ ಸಂವಿಧಾನ ವಿರೋಧಿ, ಕಾನೂನು ವಿರೋಧಿ ಕೃತ್ಯಗಳನ್ನು ಹಮ್ಮಿಕೊಳ್ಳುತ್ತಿರುವುದರ ಹಿಂದಿನ ಹುನ್ನಾರಗಳನ್ನು ಜನ ಅರ್ಥ ಮಾಡಿಕೊಳ್ಳದಿದ್ದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ” ಎಂದು ಎಚ್ಚರಿಕೆ ನೀಡಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯೆಗಾಗಿ ಮಂಗಳೂರು ಕಮಿಷನರ್‌ ಶಶಿಕುಮಾರ್‌ ಅವರಿಗೆ ನಾನುಗೌರಿ.ಕಾಂ ಕರೆ ಮಾಡಿದ್ದು ಅವರು ಕರೆಯನ್ನು ಸ್ವೀಕರಿಸಿಲ್ಲ. ಅವರು ಪ್ರತಿಕ್ರಿಯೆ ನೀಡಿದ ಕೂಡಲೇ ಸುದ್ದಿಯನ್ನು ಅಪ್‌ಡೇಟ್ ಮಾಡಲಾಗುವುದು.

ಇದನ್ನೂ ಓದಿ: ನೈತಿಕತೆ ಮತ್ತು ಪೊಲೀಸ್‌ಗಿರಿ ಕೂಡಿಕೊಂಡರೆ ಅದು ಅನೈತಿಕ ಮನಸ್ಥಿತಿಗಳ ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...