Homeಕರ್ನಾಟಕಕರಾವಳಿ ಕಾಂಗ್ರೆಸ್‌ನಲ್ಲಿ ’ಪ್ರಮೋದ್ ಮಧ್ವರಾಜ್ ಮನಸ್ಥಿತಿ’ ದಂಡು!

ಕರಾವಳಿ ಕಾಂಗ್ರೆಸ್‌ನಲ್ಲಿ ’ಪ್ರಮೋದ್ ಮಧ್ವರಾಜ್ ಮನಸ್ಥಿತಿ’ ದಂಡು!

- Advertisement -
- Advertisement -

ಸಂಘ ಪರಿವಾರದ ’ದೂರನಿಯಂತ್ರಿತ ಆಡಳಿತ’ ದೇಶದಲ್ಲಿ ಶುರುವಾದ ಬಳಿಕ ಅಪ್ಪಟ ಸಮಯಸಾಧಕತನವೆ ರಾಜಕೀಯ ಸಿದ್ಧಾಂತ ಎಂಬಂತಾಗಿಬಿಟ್ಟಿದೆ. ಹಿಂದುತ್ವದ ಹೆಸರಲ್ಲಿ ಅವಕಾಶವಾದಿ ರಾಜಕಾರಣ ಪೋಷಿಸುತ್ತಿರುವ ಬಿಜೆಪಿ ಸೈಕಲಾಜಿಕಲ್ ವಾರ್‌ಅನ್ನು ಸದ್ದಿಲ್ಲದೆ ಶುರುಹಚ್ಚಿಕೊಂಡಂತಿದೆ. ದೇಶದಲ್ಲಿ ವಿರೋಧ ಪಕ್ಷಗಳು ಖಾಲಿಯಾಗುತ್ತಿವೆ; ಬಿಜೆಪಿ ಸೇರಿದರೆ ಅಧಿಕಾರದ ಸ್ಥಾನ-ಮಾನಪಡೆಯಬಹುದು; ಐಟಿ ರೇಡು ತಪ್ಪಿಸಿಕೊಂಡು ನಿರಾತಂಕವಾಗಿ ಮುನ್ನಡೆಯಬಹುದು; ಇಲ್ಲದಿದ್ದರೆ ಉದ್ಯೋಗ-ಉದ್ಯಮ ನಷ್ಟವಾಗಿ ಜೈಲು ಸೇರಬೇಕಾಗುತ್ತದೆ ಎಂಬಂಥ ಭಯಾನಕ ರಾಜಕೀಯ ಸಂದೇಶಗಳು ಬಿತ್ತರಗೊಳ್ಳುತ್ತಿವೆ.

ಸಂಘಪರಿವಾರದ ಹಿಂದುತ್ವ ತಂತ್ರಗಾರಿಕೆಗೆ ಪೂರಕವಾದ ಪರಿಸ್ಥಿತಿ ಕಾಂಗ್ರೆಸ್, ಜನತಾದಳ ಮತ್ತಿತರ ಪಕ್ಷದಲ್ಲಿದೆ. ವಿರೋಧ ಪಕ್ಷದಲ್ಲಿದ್ದು ಅಧಿಕಾರ, ಅಂತಸ್ತು ಅನುಭವಿಸಿದ ಮತ್ತು ಅನುಭವಿಸುತ್ತಿರುವ ಹಿಡನ್ ಹಿಂದುತ್ವ ಸಿದ್ಧಾಂತಿಗಳು ಬಿಜೆಪಿ ಬೆಳೆಯಲು ಸಹಕರಿಸುತ್ತಿದ್ದಾರೆ.

ಕೆಲವು ದಿನಗಳ ಹಿಂದೆ ಬಿಜೆಪಿ ಸೇರಿದ ಉಡುಪಿಯ ’ದೊಡ್ಡ’ ರಾಜಕಾರಣಿ ಪ್ರಮೋದ್ ಮಧ್ವರಾಜ್ ಅವಶ್ಯಕತೆ ಬಿಜೆಪಿಗಿತ್ತಾ? ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಯಾಂಡಿಡೇಟಾಗಿ ಸ್ವಜಾತಿ (ಮೊಗವೀರ) ಮತಗಳನ್ನೇ ಪಡೆಯಲಾಗದ ಪ್ರಮೋದ್‌ರಿಂದ ಬಿಜೆಪಿಗೆ ಪ್ರಯೋಜನ ಇಲ್ಲವೆಂಬುದು ಸಂಘ ಸೂತ್ರಧಾರರಿಗೆ ಗೊತ್ತಿಲ್ಲದ ಸಂಗತಿಯೆ? ಪ್ರಮೋದ್ ಅವರು ಸೇರಿರುವ ಮೊಗವೀರ ಸಮುದಾಯದ ಮುಕ್ಕಾಲು ಪಾಲು ಓಟುಗಳು ಬಿಜೆಪಿಗೆ ಬೀಳುತ್ತಿರುವಾಗ ಅವರನ್ನು ನಾಲ್ಕು ವರ್ಷಗಳ ಕಾಲ ಬಿಜೆಪಿಯ ಮಂತ್ರಿ-ಶಾಸಕರ ಮತ್ತು ಕರಾವಳಿಯ ಸರ್ವೋಚ್ಚ ನಾಯಕನ ಮನೆ ಬಾಗಿಲು ಕಾಯುವಂತೆ ಮಾಡಿ ಸತಾಯಿಸಿ ಪಾರ್ಟಿಗೆ ಸೇರಿಸಿಕೊಂಡ ಸಂಘದ ಉದ್ದೇಶವಾದರೂ ಏನಿರಬಹುದು?

ಇದಕ್ಕೆಲ್ಲ ಸರಳ ಉತ್ತರಗಳು ರಾಜಕೀಯ ವಲಯದಲ್ಲಿದೆ. ಕಾಂಗ್ರೆಸ್ ಹೈರಾಣಾಗುತ್ತಿದೆ; ಬಿಜೆಪಿ ಕಡೆ ಹೋಗುವ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗುತ್ತಿದೆ ಎಂದು ಬಿಂಬಿಸಿ ಓಟ್ ಬ್ಯಾಂಕ್ ಸೃಷ್ಟಿಸಿಕೊಳ್ಳುವ ತಂತ್ರಗಾರಿಕೆಯ ಭಾಗವಾಗಿ ದೀರ್ಘಕಾಲದವರೆಗೆ ಪ್ರಮೋದ್ ಬಿಜೆಪಿ ಗೇಟಿನ ಮುಂದೆ ನಿಲ್ಲುವಂತೆ ಮಾಡಲಾಗಿತ್ತಂತೆ.
ಉಡುಪಿಯಲ್ಲಿರುವ ಮತ್ತೊಂದು ಸುದ್ದಿಯ ಪ್ರಕಾರ ಪ್ರಮೋದ್ ಮಧ್ವರಾಜ್ ನಡೆಸುತ್ತಿರುವ ಕೋಟ್ಯಂತರ ರುಪಾಯಿ ವಹಿವಾಟಿನ ಫಿಶ್ ಮಿಲ್‌ನಿಂದ ಮಲ್ಪೆಯಲ್ಲಿ ಪರಿಸರ ಮಾಲಿನ್ಯವಾಗುತ್ತಿದೆ. ಆ ಫ್ಯಾಕ್ಟರಿ ಬಂದ್ ಮಾಡಿಸುವ ಬೆದರಿಕೆಗೆ ಕಂಗಾಲಾಗಿರುವ ಪ್ರಮೋದ್ ಬಿಜೆಪಿ ಸೇರಬೇಕಾಗಿ ಬಂತೆನ್ನಲಾಗಿದೆ. ಮತ್ತೊಂದು ತರ್ಕದ ಪ್ರಕಾರ, ಬಿಜೆಪಿ ಸೇರಿದರೆ ಕೇಂದ್ರ ರಕ್ಷಣಾ ಮಂತ್ರಿ, ರಾಜ್ಯದ ಮುಖ್ಯಮಂತ್ರಿ ಆಗುವ ಯೋಗ ಖುಲಾಯಿಸಲಿದೆ ಎಂದು ಜ್ಯೋತಿಷಿಯೊಬ್ಬರು ಹೇಳಿದ್ದರಿಂದ ಪ್ರಮೋದ್ ಅತ್ತೂ ಕರೆದು ಬಿಜೆಪಿ ಸೇರ್ಪಡೆಯಾಗಿದ್ದಾರಂತೆ!

ಇದು ರಾಜಕೀಯ ಮತ್ತು ಔದ್ಯೋಗಿಕ ವಿಶ್ಲೇಷಣೆಯಾದರೆ, ಮೂಲಭೂತವಾಗಿ ಪ್ರಮೋದ್ ಸಂಘ ತತ್ವಾದರ್ಶದ ರಾಜಕಾರಣಿಯೆಂಬ ವ್ಯಾಖ್ಯಾನಗಳೂ ಬರಲಾರಂಭಿಸಿವೆ. ಸಿದ್ದರಾಮಯ್ಯ ಸರಕಾರದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದ ಪ್ರಮೋದ್ ಬುದ್ಧಿಪೂರ್ವಕವಾಗೆ ಟಿಪ್ಪು ಜಯಂತಿಗೆ ಚಕ್ಕರ್ ಹಾಕಿದ್ದರೆಂದು ಅಂದು ಸುದ್ದಿಯಾಗಿತ್ತು. ಮಾಜಿ ಶಾಸಕನಾಗಿ ಸಂಘ ಶ್ರೇಷ್ಠರ ಮನ ಒಲಿಸುವ ಪ್ರಯತ್ನದಲ್ಲಿದ್ದ ಪ್ರಮೋದ್ ಕಾರ್ಯಕ್ರಮ ಒಂದರಲ್ಲಿ ತಾನು ಟಿಪ್ಪು ಜಯಂತಿಗೆ ಹೋಗದಂಥ ’ಸುಸಂದರ್ಭ’ ಒದಗಿಬಂದುದನ್ನು ವಿವರಿಸಿ ತನ್ನ ಅಸಹಿಷ್ಣು ರೀತಿ-ನೀತಿ ಬಹಿರಂಗ ಮಾಡಿಕೊಂಡಿದ್ದರು. ಅಷ್ಟ ಮಠದ ಕಾರ್ಯಕ್ರಮದಲ್ಲಿ- ’ಉಡುಪಿಯ ಕೃಷ್ಣ ದೇವಾಲಯವನ್ನು ಸಿದ್ದರಾಮಯ್ಯ ಸರಕಾರ ವಶಪಡಿಸಿಕೊಳ್ಳಲು ಪ್ರಯತ್ನಿಸಿದಾಗ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಸಿಎಂಗೆ ಫೋನ್ ಮಾಡಿ ತಡೆಯೊಡ್ಡಿದ್ದೆ’ ಎಂದು ಹೇಳಿದ್ದರು. ಅಲ್ಲಿಗೆ ಪ್ರಮೋದ್ ತಾವಿದ್ದ ಪಕ್ಷದ ಸಿದ್ಧಾಂತಕ್ಕೆ ಯಾವದೇ ನಿಷ್ಠೆ-ನಿಯತ್ತುಗಳಿಲ್ಲದೆ ಕೇವಲ ಅಧಿಕಾರ ಲಾಲಸೆಗಾಗಿ ಮಾತ್ರ ಕಾಂಗ್ರೆಸ್‌ನಲ್ಲಿದ್ದ ಸಂಘ ಪರಿವಾರ ಮನಸ್ಥಿತಿಯವರು ಎಂದು ಸ್ವಯಂ ಸಾಬೀತುಪಡಿಸಿಕೊಂಡಿದ್ದರೆನ್ನಲಾಗಿದೆ.

ಇಂಥ ಕನಿಷ್ಟ ಬದ್ಧತೆಯಿಲ್ಲದ ದೊಡ್ಡ ದಂಡೇ ಕರಾವಳಿ ಕಾಂಗ್ರೆಸ್ ಪಕ್ಷದಲ್ಲಿದೆ. ಕಾರವಾರದ ಮಾಜಿ ಶಾಸಕ-ಗಣಿ ಹಗರಣದಲ್ಲಿ ಜೈಲಿಗೆ ಹೋಗಿಬಂದಿರುವ ಸತೀಶ್ ಸೈಲ್ ಮತ್ತು ಜನತಾ ದಳದ ಮಾಜಿ ಮಂತ್ರಿ ಆನಂದ ಅಸ್ನೋಟಿಕರ್ ಬಿಜೆಪಿ ಪ್ರವೇಶಿಸಲು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್-ಜನತಾದಳದ ಅಭ್ಯರ್ಥಿಯಾಗಿದ್ದ ಆನಂದ ಅಸ್ನೋಟಿಕರ್ ತಮ್ಮ ಬಿಜೆಪಿ-ಸಂಘಪರಿವಾರದ ಎದುರಾಳಿ, ಶೂದ್ರ ವಿರೋಧಿ ಅನಂತಕುಮಾರ್ ಹೆಗಡೆ ಮತಾಂಧ ಮಸಲತ್ತುಗಾರನೆಂದು ನೇರಾನೇರ ಟೀಕಿಸಿದ್ದರು. ಆದರೆ ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಪಕ್ಷಾಂತರ ಮಾಡಿದ ಮೊಟ್ಟಮೊದಲ ತಂಡದಲ್ಲಿದ್ದ ಆನಂದ ಅಲ್ಲಿ ಮಂತ್ರಿಯಾಗಿ, ಶಾಸಕ ಸ್ಥಾನದಿಂದಲೆ ಅನರ್ಹನಾಗಿ ಆ ಪಾರ್ಟಿಯಿಂದ ಹೊರಬಂದಿದ್ದರು. ಕಾಂಗ್ರೆಸ್ ಸೇರಲು ಆರ್.ವಿ.ದೇಶಪಾಂಡೆ ಬಿಡದಿದ್ದಾಗ ಜನತಾ ದಳಕ್ಕೆ ಹೋಗಿದ್ದರು. ಈಗ ಮತ್ತೆ ಬಿಜೆಪಿ ಸೇರಲು ಹವಣಿಸುತ್ತಿರುವ ಅಸ್ನೋಟಿಕರ್ ಬದ್ಧತೆಯೆ ಪ್ರಶ್ನಾರ್ಹವೆಂದು ಜನರು ಆಡಿಕೊಳ್ಳುತ್ತಿದ್ದಾರೆ.

ಸತೀಶ್ ಸೈಲ್

ಮಾಜಿ ಶಾಸಕ ಸತೀಶ್ ಸೈಲ್ ದೈಹಿಕವಾಗಿ ಕಾಂಗ್ರೆಸ್‌ನಲ್ಲಿದ್ದರೂ ಮಾನಸಿಕವಾಗಿ ಬಿಜೆಪಿಯಲ್ಲಿದ್ದಾರೆ. ಶಾಸಕಿ ರೂಪಾಲಿ ನಾಯ್ಕ್‌ರಿಗೆ ಟಿಕೆಟ್ ತಪ್ಪಿಸಿ ತಾನೆ ಬಿಜೆಪಿ ಶಾಸಕನಾಗುವ ಆಸೆಯಲ್ಲಿದ್ದಾರೆನ್ನಲಾಗಿದೆ. 2018ರ ಅಸೆಂಬ್ಲಿ ಚುನಾವಣಾ ಸಂದರ್ಭದಿಂದ ಗಣಿ ಲಾಬಿ ಮುಖಾಂತರ ಬಿಜೆಪಿ ಪ್ರವೇಶಿಸುವ ಎಲ್ಲ ತಂತ್ರಗಾರಿಕೆಯನ್ನೂ ಪ್ರಯೋಗಿಸುತ್ತಿದ್ದಾರೆ. ಆದರೆ ಮಾಜಿ ಸಿಎಂ ಯಡಿಯೂರಪ್ಪ ಕೃಪಾಶೀರ್ವಾದದ ರೂಪಾಲಿ ನಾಯ್ಕ್ ಅಡ್ಡಗಾಲು ಹಾಕಿರುವುದು ಕಾರವಾರದಲ್ಲಿ ಬಹಿರಂಗ ರಹಸ್ಯ. ಬ್ರಾಹ್ಮಣರಿಗೂ ಮೀಸಲಾತಿ ಬೇಕೆನ್ನುವ ಮಂತ್ರಿ ಶಿವರಾಮ ಹೆಬ್ಬಾರ್, ಕಾಂಗ್ರೆಸ್‌ನಲ್ಲಿದ್ದಾಗ ಸಂಘ ತತ್ವ ಪರಿಪಾಲಕರಾಗಿದ್ದರು.

ಬಾಂಬೈ ಬಾಯ್ಸ್‌ಗೆ ಬಿಜೆಪಿ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ಕೊಡುವುದಿಲ್ಲ ಎನ್ನಲಾಗಿರುವ ಹಿನ್ನೆಲೆಯಲ್ಲಿ ಹೆಬ್ಬಾರ್ ಚಿತ್ತ ಕಾಂಗ್ರೆಸ್‌ನತ್ತ ಹರಿದಿದೆ ಎನ್ನಲಾಗುತ್ತಿದೆ. ಹೆಬ್ಬಾರ್ ಕಾಂಗ್ರೆಸ್‌ಗೆ ಬಂದರೆ ಬಿಜೆಪಿಗೇ ಲಾಭವೆಂದು ನಿಷ್ಠಾವಂತ ಕಾಂಗ್ರೆಸ್ಸಿಗರು ಹೇಳುತ್ತಾರೆ. ಪಕ್ಷಾಂತರ ಮತ್ತು ಎಂಟಿ ಇನ್‌ಕಂಬೆನ್ಸ್‌ನಿಂದ ಜನರ ತಾತ್ಸಾರಕ್ಕೆ ತುತ್ತಾಗಿರುವ ಹೆಬ್ಬಾರ್‌ಗೆ ಆನಂದ್ ಅಸ್ನೋಟಿಕರ್ ಪರಿಸ್ಥಿತಿ ಬಂದರೆ ಅಚ್ಚರಿ ಇಲ್ಲವೆನ್ನಲಾಗುತ್ತಿದೆ. ಹಳಿಯಾಳದ ಮಾಜಿ ಎಮ್ಮೆಲ್ಸಿ ಶ್ರೀಕಾಂತ ಘೋಟನೇಕರ್ ಬಿಜೆಪಿ ಮೇಲೆ ಕಣ್ಣಿಟ್ಟು ’ಶಿವಾಜಿ ಮಹಾರಾಜ್ ಕಿ ಜೈ’ ಎನ್ನುತ್ತಿದ್ದಾರೆ. ಮರಾಠರು ಹೆಚ್ಚಿರುವ ಹಳಿಯಾಳದಲ್ಲಿ ಕೇಸರಿ ಹವಾ ಬೀಸುತ್ತಿರುವುದನ್ನು ಅರಿತಿರುವ ಘೋಟನೇಕರ್ ಪರೋಕ್ಷವಾಗಿ ಕೇಸರಿ ಅಭಿಯಾನಕ್ಕೆ ಅನುವು ಮಾಡಿ ಕೊಡುತ್ತ ಮುಂದೊಂದು ದಿನ ಅದರ ಲಾಭ ತನಗೆ ಅಥವಾ ತನ್ನ ಮಗನಿಗೆ ದಕ್ಕುವ ದೂ(ದು)ರಾಲೋಚನೆ ನಡೆಸಿದ್ದಾರೆಂಬ ಚರ್ಚೆಗಳು ನಡೆದಿದೆ.

ಒಂದು ಗಮನಾರ್ಹ ಅಂಶವೆಂದರೆ ಬಿಜೆಪಿಗೆ ಹೋಗುವವರು ರಸಭರಿತ ಕಬ್ಬಾಗಿ ಹೋಗುತ್ತಾರೆ; ರಸ ಹಿಂಡಿದ ಜಲ್ಲೆಯಾಗಿ ಹೊರಬರುತ್ತಿದ್ದಾರೆ. ಬಿಜೆಪಿಯಲ್ಲಿ ಇರುವಷ್ಟು ದಿನ ಸಂಘ ಸೂತ್ರಧಾರರ ಆಜ್ಞಾನುಧಾರಿಗಳಾಗಿ ತಮ್ಮದೇ ಅಸ್ತಿತ್ವಕ್ಕೆ ಮುಳುವಾಗುವಷ್ಟು ಹಿಂದುತ್ವ ಮತ್ತು ಮತೋನ್ಮತ್ತ ಮಸಲತ್ತು ಮಾಡುತ್ತ ಭಸ್ಮಾಸುರರಾಗುತ್ತಿದ್ದಾರೆ. ಅಷ್ಟೇ ಅಲ್ಲ, ಸಮಾಜದ ನೆಮ್ಮದಿಗೂ ಭಂಗ ತರುತ್ತಿರುವುದು ದುರಂತವೆಂದು ಪ್ರಜ್ಞಾವಂತರು ಕಳವಳ ಪಡುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಪಕ್ಷಾಂತರಗಳು: ಕಾಂಗ್ರೆಸ್ ಪಕ್ಷದವರಲ್ಲಿ ಪರಿಹಾರವಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...