Homeಕರ್ನಾಟಕಕರಾವಳಿ ಕಾಂಗ್ರೆಸ್‌ನಲ್ಲಿ ’ಪ್ರಮೋದ್ ಮಧ್ವರಾಜ್ ಮನಸ್ಥಿತಿ’ ದಂಡು!

ಕರಾವಳಿ ಕಾಂಗ್ರೆಸ್‌ನಲ್ಲಿ ’ಪ್ರಮೋದ್ ಮಧ್ವರಾಜ್ ಮನಸ್ಥಿತಿ’ ದಂಡು!

- Advertisement -
- Advertisement -

ಸಂಘ ಪರಿವಾರದ ’ದೂರನಿಯಂತ್ರಿತ ಆಡಳಿತ’ ದೇಶದಲ್ಲಿ ಶುರುವಾದ ಬಳಿಕ ಅಪ್ಪಟ ಸಮಯಸಾಧಕತನವೆ ರಾಜಕೀಯ ಸಿದ್ಧಾಂತ ಎಂಬಂತಾಗಿಬಿಟ್ಟಿದೆ. ಹಿಂದುತ್ವದ ಹೆಸರಲ್ಲಿ ಅವಕಾಶವಾದಿ ರಾಜಕಾರಣ ಪೋಷಿಸುತ್ತಿರುವ ಬಿಜೆಪಿ ಸೈಕಲಾಜಿಕಲ್ ವಾರ್‌ಅನ್ನು ಸದ್ದಿಲ್ಲದೆ ಶುರುಹಚ್ಚಿಕೊಂಡಂತಿದೆ. ದೇಶದಲ್ಲಿ ವಿರೋಧ ಪಕ್ಷಗಳು ಖಾಲಿಯಾಗುತ್ತಿವೆ; ಬಿಜೆಪಿ ಸೇರಿದರೆ ಅಧಿಕಾರದ ಸ್ಥಾನ-ಮಾನಪಡೆಯಬಹುದು; ಐಟಿ ರೇಡು ತಪ್ಪಿಸಿಕೊಂಡು ನಿರಾತಂಕವಾಗಿ ಮುನ್ನಡೆಯಬಹುದು; ಇಲ್ಲದಿದ್ದರೆ ಉದ್ಯೋಗ-ಉದ್ಯಮ ನಷ್ಟವಾಗಿ ಜೈಲು ಸೇರಬೇಕಾಗುತ್ತದೆ ಎಂಬಂಥ ಭಯಾನಕ ರಾಜಕೀಯ ಸಂದೇಶಗಳು ಬಿತ್ತರಗೊಳ್ಳುತ್ತಿವೆ.

ಸಂಘಪರಿವಾರದ ಹಿಂದುತ್ವ ತಂತ್ರಗಾರಿಕೆಗೆ ಪೂರಕವಾದ ಪರಿಸ್ಥಿತಿ ಕಾಂಗ್ರೆಸ್, ಜನತಾದಳ ಮತ್ತಿತರ ಪಕ್ಷದಲ್ಲಿದೆ. ವಿರೋಧ ಪಕ್ಷದಲ್ಲಿದ್ದು ಅಧಿಕಾರ, ಅಂತಸ್ತು ಅನುಭವಿಸಿದ ಮತ್ತು ಅನುಭವಿಸುತ್ತಿರುವ ಹಿಡನ್ ಹಿಂದುತ್ವ ಸಿದ್ಧಾಂತಿಗಳು ಬಿಜೆಪಿ ಬೆಳೆಯಲು ಸಹಕರಿಸುತ್ತಿದ್ದಾರೆ.

ಕೆಲವು ದಿನಗಳ ಹಿಂದೆ ಬಿಜೆಪಿ ಸೇರಿದ ಉಡುಪಿಯ ’ದೊಡ್ಡ’ ರಾಜಕಾರಣಿ ಪ್ರಮೋದ್ ಮಧ್ವರಾಜ್ ಅವಶ್ಯಕತೆ ಬಿಜೆಪಿಗಿತ್ತಾ? ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಯಾಂಡಿಡೇಟಾಗಿ ಸ್ವಜಾತಿ (ಮೊಗವೀರ) ಮತಗಳನ್ನೇ ಪಡೆಯಲಾಗದ ಪ್ರಮೋದ್‌ರಿಂದ ಬಿಜೆಪಿಗೆ ಪ್ರಯೋಜನ ಇಲ್ಲವೆಂಬುದು ಸಂಘ ಸೂತ್ರಧಾರರಿಗೆ ಗೊತ್ತಿಲ್ಲದ ಸಂಗತಿಯೆ? ಪ್ರಮೋದ್ ಅವರು ಸೇರಿರುವ ಮೊಗವೀರ ಸಮುದಾಯದ ಮುಕ್ಕಾಲು ಪಾಲು ಓಟುಗಳು ಬಿಜೆಪಿಗೆ ಬೀಳುತ್ತಿರುವಾಗ ಅವರನ್ನು ನಾಲ್ಕು ವರ್ಷಗಳ ಕಾಲ ಬಿಜೆಪಿಯ ಮಂತ್ರಿ-ಶಾಸಕರ ಮತ್ತು ಕರಾವಳಿಯ ಸರ್ವೋಚ್ಚ ನಾಯಕನ ಮನೆ ಬಾಗಿಲು ಕಾಯುವಂತೆ ಮಾಡಿ ಸತಾಯಿಸಿ ಪಾರ್ಟಿಗೆ ಸೇರಿಸಿಕೊಂಡ ಸಂಘದ ಉದ್ದೇಶವಾದರೂ ಏನಿರಬಹುದು?

ಇದಕ್ಕೆಲ್ಲ ಸರಳ ಉತ್ತರಗಳು ರಾಜಕೀಯ ವಲಯದಲ್ಲಿದೆ. ಕಾಂಗ್ರೆಸ್ ಹೈರಾಣಾಗುತ್ತಿದೆ; ಬಿಜೆಪಿ ಕಡೆ ಹೋಗುವ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗುತ್ತಿದೆ ಎಂದು ಬಿಂಬಿಸಿ ಓಟ್ ಬ್ಯಾಂಕ್ ಸೃಷ್ಟಿಸಿಕೊಳ್ಳುವ ತಂತ್ರಗಾರಿಕೆಯ ಭಾಗವಾಗಿ ದೀರ್ಘಕಾಲದವರೆಗೆ ಪ್ರಮೋದ್ ಬಿಜೆಪಿ ಗೇಟಿನ ಮುಂದೆ ನಿಲ್ಲುವಂತೆ ಮಾಡಲಾಗಿತ್ತಂತೆ.
ಉಡುಪಿಯಲ್ಲಿರುವ ಮತ್ತೊಂದು ಸುದ್ದಿಯ ಪ್ರಕಾರ ಪ್ರಮೋದ್ ಮಧ್ವರಾಜ್ ನಡೆಸುತ್ತಿರುವ ಕೋಟ್ಯಂತರ ರುಪಾಯಿ ವಹಿವಾಟಿನ ಫಿಶ್ ಮಿಲ್‌ನಿಂದ ಮಲ್ಪೆಯಲ್ಲಿ ಪರಿಸರ ಮಾಲಿನ್ಯವಾಗುತ್ತಿದೆ. ಆ ಫ್ಯಾಕ್ಟರಿ ಬಂದ್ ಮಾಡಿಸುವ ಬೆದರಿಕೆಗೆ ಕಂಗಾಲಾಗಿರುವ ಪ್ರಮೋದ್ ಬಿಜೆಪಿ ಸೇರಬೇಕಾಗಿ ಬಂತೆನ್ನಲಾಗಿದೆ. ಮತ್ತೊಂದು ತರ್ಕದ ಪ್ರಕಾರ, ಬಿಜೆಪಿ ಸೇರಿದರೆ ಕೇಂದ್ರ ರಕ್ಷಣಾ ಮಂತ್ರಿ, ರಾಜ್ಯದ ಮುಖ್ಯಮಂತ್ರಿ ಆಗುವ ಯೋಗ ಖುಲಾಯಿಸಲಿದೆ ಎಂದು ಜ್ಯೋತಿಷಿಯೊಬ್ಬರು ಹೇಳಿದ್ದರಿಂದ ಪ್ರಮೋದ್ ಅತ್ತೂ ಕರೆದು ಬಿಜೆಪಿ ಸೇರ್ಪಡೆಯಾಗಿದ್ದಾರಂತೆ!

ಇದು ರಾಜಕೀಯ ಮತ್ತು ಔದ್ಯೋಗಿಕ ವಿಶ್ಲೇಷಣೆಯಾದರೆ, ಮೂಲಭೂತವಾಗಿ ಪ್ರಮೋದ್ ಸಂಘ ತತ್ವಾದರ್ಶದ ರಾಜಕಾರಣಿಯೆಂಬ ವ್ಯಾಖ್ಯಾನಗಳೂ ಬರಲಾರಂಭಿಸಿವೆ. ಸಿದ್ದರಾಮಯ್ಯ ಸರಕಾರದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದ ಪ್ರಮೋದ್ ಬುದ್ಧಿಪೂರ್ವಕವಾಗೆ ಟಿಪ್ಪು ಜಯಂತಿಗೆ ಚಕ್ಕರ್ ಹಾಕಿದ್ದರೆಂದು ಅಂದು ಸುದ್ದಿಯಾಗಿತ್ತು. ಮಾಜಿ ಶಾಸಕನಾಗಿ ಸಂಘ ಶ್ರೇಷ್ಠರ ಮನ ಒಲಿಸುವ ಪ್ರಯತ್ನದಲ್ಲಿದ್ದ ಪ್ರಮೋದ್ ಕಾರ್ಯಕ್ರಮ ಒಂದರಲ್ಲಿ ತಾನು ಟಿಪ್ಪು ಜಯಂತಿಗೆ ಹೋಗದಂಥ ’ಸುಸಂದರ್ಭ’ ಒದಗಿಬಂದುದನ್ನು ವಿವರಿಸಿ ತನ್ನ ಅಸಹಿಷ್ಣು ರೀತಿ-ನೀತಿ ಬಹಿರಂಗ ಮಾಡಿಕೊಂಡಿದ್ದರು. ಅಷ್ಟ ಮಠದ ಕಾರ್ಯಕ್ರಮದಲ್ಲಿ- ’ಉಡುಪಿಯ ಕೃಷ್ಣ ದೇವಾಲಯವನ್ನು ಸಿದ್ದರಾಮಯ್ಯ ಸರಕಾರ ವಶಪಡಿಸಿಕೊಳ್ಳಲು ಪ್ರಯತ್ನಿಸಿದಾಗ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಸಿಎಂಗೆ ಫೋನ್ ಮಾಡಿ ತಡೆಯೊಡ್ಡಿದ್ದೆ’ ಎಂದು ಹೇಳಿದ್ದರು. ಅಲ್ಲಿಗೆ ಪ್ರಮೋದ್ ತಾವಿದ್ದ ಪಕ್ಷದ ಸಿದ್ಧಾಂತಕ್ಕೆ ಯಾವದೇ ನಿಷ್ಠೆ-ನಿಯತ್ತುಗಳಿಲ್ಲದೆ ಕೇವಲ ಅಧಿಕಾರ ಲಾಲಸೆಗಾಗಿ ಮಾತ್ರ ಕಾಂಗ್ರೆಸ್‌ನಲ್ಲಿದ್ದ ಸಂಘ ಪರಿವಾರ ಮನಸ್ಥಿತಿಯವರು ಎಂದು ಸ್ವಯಂ ಸಾಬೀತುಪಡಿಸಿಕೊಂಡಿದ್ದರೆನ್ನಲಾಗಿದೆ.

ಇಂಥ ಕನಿಷ್ಟ ಬದ್ಧತೆಯಿಲ್ಲದ ದೊಡ್ಡ ದಂಡೇ ಕರಾವಳಿ ಕಾಂಗ್ರೆಸ್ ಪಕ್ಷದಲ್ಲಿದೆ. ಕಾರವಾರದ ಮಾಜಿ ಶಾಸಕ-ಗಣಿ ಹಗರಣದಲ್ಲಿ ಜೈಲಿಗೆ ಹೋಗಿಬಂದಿರುವ ಸತೀಶ್ ಸೈಲ್ ಮತ್ತು ಜನತಾ ದಳದ ಮಾಜಿ ಮಂತ್ರಿ ಆನಂದ ಅಸ್ನೋಟಿಕರ್ ಬಿಜೆಪಿ ಪ್ರವೇಶಿಸಲು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್-ಜನತಾದಳದ ಅಭ್ಯರ್ಥಿಯಾಗಿದ್ದ ಆನಂದ ಅಸ್ನೋಟಿಕರ್ ತಮ್ಮ ಬಿಜೆಪಿ-ಸಂಘಪರಿವಾರದ ಎದುರಾಳಿ, ಶೂದ್ರ ವಿರೋಧಿ ಅನಂತಕುಮಾರ್ ಹೆಗಡೆ ಮತಾಂಧ ಮಸಲತ್ತುಗಾರನೆಂದು ನೇರಾನೇರ ಟೀಕಿಸಿದ್ದರು. ಆದರೆ ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಪಕ್ಷಾಂತರ ಮಾಡಿದ ಮೊಟ್ಟಮೊದಲ ತಂಡದಲ್ಲಿದ್ದ ಆನಂದ ಅಲ್ಲಿ ಮಂತ್ರಿಯಾಗಿ, ಶಾಸಕ ಸ್ಥಾನದಿಂದಲೆ ಅನರ್ಹನಾಗಿ ಆ ಪಾರ್ಟಿಯಿಂದ ಹೊರಬಂದಿದ್ದರು. ಕಾಂಗ್ರೆಸ್ ಸೇರಲು ಆರ್.ವಿ.ದೇಶಪಾಂಡೆ ಬಿಡದಿದ್ದಾಗ ಜನತಾ ದಳಕ್ಕೆ ಹೋಗಿದ್ದರು. ಈಗ ಮತ್ತೆ ಬಿಜೆಪಿ ಸೇರಲು ಹವಣಿಸುತ್ತಿರುವ ಅಸ್ನೋಟಿಕರ್ ಬದ್ಧತೆಯೆ ಪ್ರಶ್ನಾರ್ಹವೆಂದು ಜನರು ಆಡಿಕೊಳ್ಳುತ್ತಿದ್ದಾರೆ.

ಸತೀಶ್ ಸೈಲ್

ಮಾಜಿ ಶಾಸಕ ಸತೀಶ್ ಸೈಲ್ ದೈಹಿಕವಾಗಿ ಕಾಂಗ್ರೆಸ್‌ನಲ್ಲಿದ್ದರೂ ಮಾನಸಿಕವಾಗಿ ಬಿಜೆಪಿಯಲ್ಲಿದ್ದಾರೆ. ಶಾಸಕಿ ರೂಪಾಲಿ ನಾಯ್ಕ್‌ರಿಗೆ ಟಿಕೆಟ್ ತಪ್ಪಿಸಿ ತಾನೆ ಬಿಜೆಪಿ ಶಾಸಕನಾಗುವ ಆಸೆಯಲ್ಲಿದ್ದಾರೆನ್ನಲಾಗಿದೆ. 2018ರ ಅಸೆಂಬ್ಲಿ ಚುನಾವಣಾ ಸಂದರ್ಭದಿಂದ ಗಣಿ ಲಾಬಿ ಮುಖಾಂತರ ಬಿಜೆಪಿ ಪ್ರವೇಶಿಸುವ ಎಲ್ಲ ತಂತ್ರಗಾರಿಕೆಯನ್ನೂ ಪ್ರಯೋಗಿಸುತ್ತಿದ್ದಾರೆ. ಆದರೆ ಮಾಜಿ ಸಿಎಂ ಯಡಿಯೂರಪ್ಪ ಕೃಪಾಶೀರ್ವಾದದ ರೂಪಾಲಿ ನಾಯ್ಕ್ ಅಡ್ಡಗಾಲು ಹಾಕಿರುವುದು ಕಾರವಾರದಲ್ಲಿ ಬಹಿರಂಗ ರಹಸ್ಯ. ಬ್ರಾಹ್ಮಣರಿಗೂ ಮೀಸಲಾತಿ ಬೇಕೆನ್ನುವ ಮಂತ್ರಿ ಶಿವರಾಮ ಹೆಬ್ಬಾರ್, ಕಾಂಗ್ರೆಸ್‌ನಲ್ಲಿದ್ದಾಗ ಸಂಘ ತತ್ವ ಪರಿಪಾಲಕರಾಗಿದ್ದರು.

ಬಾಂಬೈ ಬಾಯ್ಸ್‌ಗೆ ಬಿಜೆಪಿ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ಕೊಡುವುದಿಲ್ಲ ಎನ್ನಲಾಗಿರುವ ಹಿನ್ನೆಲೆಯಲ್ಲಿ ಹೆಬ್ಬಾರ್ ಚಿತ್ತ ಕಾಂಗ್ರೆಸ್‌ನತ್ತ ಹರಿದಿದೆ ಎನ್ನಲಾಗುತ್ತಿದೆ. ಹೆಬ್ಬಾರ್ ಕಾಂಗ್ರೆಸ್‌ಗೆ ಬಂದರೆ ಬಿಜೆಪಿಗೇ ಲಾಭವೆಂದು ನಿಷ್ಠಾವಂತ ಕಾಂಗ್ರೆಸ್ಸಿಗರು ಹೇಳುತ್ತಾರೆ. ಪಕ್ಷಾಂತರ ಮತ್ತು ಎಂಟಿ ಇನ್‌ಕಂಬೆನ್ಸ್‌ನಿಂದ ಜನರ ತಾತ್ಸಾರಕ್ಕೆ ತುತ್ತಾಗಿರುವ ಹೆಬ್ಬಾರ್‌ಗೆ ಆನಂದ್ ಅಸ್ನೋಟಿಕರ್ ಪರಿಸ್ಥಿತಿ ಬಂದರೆ ಅಚ್ಚರಿ ಇಲ್ಲವೆನ್ನಲಾಗುತ್ತಿದೆ. ಹಳಿಯಾಳದ ಮಾಜಿ ಎಮ್ಮೆಲ್ಸಿ ಶ್ರೀಕಾಂತ ಘೋಟನೇಕರ್ ಬಿಜೆಪಿ ಮೇಲೆ ಕಣ್ಣಿಟ್ಟು ’ಶಿವಾಜಿ ಮಹಾರಾಜ್ ಕಿ ಜೈ’ ಎನ್ನುತ್ತಿದ್ದಾರೆ. ಮರಾಠರು ಹೆಚ್ಚಿರುವ ಹಳಿಯಾಳದಲ್ಲಿ ಕೇಸರಿ ಹವಾ ಬೀಸುತ್ತಿರುವುದನ್ನು ಅರಿತಿರುವ ಘೋಟನೇಕರ್ ಪರೋಕ್ಷವಾಗಿ ಕೇಸರಿ ಅಭಿಯಾನಕ್ಕೆ ಅನುವು ಮಾಡಿ ಕೊಡುತ್ತ ಮುಂದೊಂದು ದಿನ ಅದರ ಲಾಭ ತನಗೆ ಅಥವಾ ತನ್ನ ಮಗನಿಗೆ ದಕ್ಕುವ ದೂ(ದು)ರಾಲೋಚನೆ ನಡೆಸಿದ್ದಾರೆಂಬ ಚರ್ಚೆಗಳು ನಡೆದಿದೆ.

ಒಂದು ಗಮನಾರ್ಹ ಅಂಶವೆಂದರೆ ಬಿಜೆಪಿಗೆ ಹೋಗುವವರು ರಸಭರಿತ ಕಬ್ಬಾಗಿ ಹೋಗುತ್ತಾರೆ; ರಸ ಹಿಂಡಿದ ಜಲ್ಲೆಯಾಗಿ ಹೊರಬರುತ್ತಿದ್ದಾರೆ. ಬಿಜೆಪಿಯಲ್ಲಿ ಇರುವಷ್ಟು ದಿನ ಸಂಘ ಸೂತ್ರಧಾರರ ಆಜ್ಞಾನುಧಾರಿಗಳಾಗಿ ತಮ್ಮದೇ ಅಸ್ತಿತ್ವಕ್ಕೆ ಮುಳುವಾಗುವಷ್ಟು ಹಿಂದುತ್ವ ಮತ್ತು ಮತೋನ್ಮತ್ತ ಮಸಲತ್ತು ಮಾಡುತ್ತ ಭಸ್ಮಾಸುರರಾಗುತ್ತಿದ್ದಾರೆ. ಅಷ್ಟೇ ಅಲ್ಲ, ಸಮಾಜದ ನೆಮ್ಮದಿಗೂ ಭಂಗ ತರುತ್ತಿರುವುದು ದುರಂತವೆಂದು ಪ್ರಜ್ಞಾವಂತರು ಕಳವಳ ಪಡುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಪಕ್ಷಾಂತರಗಳು: ಕಾಂಗ್ರೆಸ್ ಪಕ್ಷದವರಲ್ಲಿ ಪರಿಹಾರವಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...