Homeಕರ್ನಾಟಕಕರಾವಳಿಯಲ್ಲಿ ಮತ್ತೊಬ್ಬ ಯುವಕನ ಹತ್ಯೆ: ಕೋಮುವಾದಕ್ಕೆ ಕಡಿವಾಣ ಹಾಕದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ಕರಾವಳಿಯಲ್ಲಿ ಮತ್ತೊಬ್ಬ ಯುವಕನ ಹತ್ಯೆ: ಕೋಮುವಾದಕ್ಕೆ ಕಡಿವಾಣ ಹಾಕದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

'ಖಂಡನೆಯ ತೇಪೆ ಸಾಕು, ಕಠಿಣ ಕ್ರಮ ಬೇಕು' ಎಂದ ಜನರು

- Advertisement -
- Advertisement -

ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬ ಯುವಕನ ಹತ್ಯೆಯಾಗಿದೆ. ಮೇ 1ರಂದು ಗುರುವಾರ ಸಂಜೆ ಮಂಗಳೂರಿನ ಹೊರವಲಯ ಬಜ್ಪೆ ಬಳಿ ರೌಡಿ ಶೀಟರ್ ಸುಹಾಸ್ ಎಂಬಾತನ ಹತ್ಯೆಯಾಗಿತ್ತು. ಅದಾಗಿ ತಿಂಗಳು ಕಳೆಯುವುದೊರಳಗೆ, ಅಂದರೆ ಮೇ 27ರಂದು ಸಂಜೆ ಬಂಟ್ವಾಳದ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಅವರ ಕೊಲೆ ನಡೆದಿದೆ.

ಸುಹಾಸ್ ಹತ್ಯೆಗೂ ನಾಲ್ಕು ದಿನ ಮುಂಚೆ, ಅಂದರೆ 27 ಏಪ್ರಿಲ್ 2025ರಂದು ಮಂಗಳೂರು ನಗರದ ಹೊರವಲಯ ಕುಡುಪು ಬಳಿಯ ಭಟ್ರ ಕಲ್ಲುರ್ಟಿ ದೇವಸ್ಥಾನ ಸಮೀಪ ಕೇರಳದ ವಯನಾಡ್ ಮೂಲದ ಅಶ್ರಫ್ ಎಂಬ 36 ವರ್ಷದ ಯವಕನ ಗುಂಪು ಹತ್ಯೆ ನಡೆದಿತ್ತು.

ಈ ಎಲ್ಲಾ ಹತ್ಯೆಗಳಿಗೆ ಕೋಮು ವೈಷಮ್ಯವೇ ಕಾರಣ ಎಂಬುವುದು ಜಿಲ್ಲೆಯ ಜನರ ಆರೋಪವಾಗಿದೆ. ಕೆಲ ಪ್ರಕರಣಗಳ ಹಿನ್ನೆಲೆ ಕೂಡ ಕೋಮು ಕಾರಣಕ್ಕೇ ಕೊಲೆಗಳು ನಡೆಯುತ್ತಿವೆ ಎಂಬುವುದನ್ನು ಸಾಬೀತುಪಡಿಸಿವೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ಬಂಧನ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರು “ಫಾಝಿಲ್ ಹತ್ಯೆಗೆ ಪ್ರತೀಕಾರವಾಗಿ ಸುಹಾಸ್ ಹತ್ಯೆ ನಡೆದಿದೆ”ಎಂದು ಹೇಳಿದ್ದರು.

ಮಂಗಳವಾರ ನಡೆದ ಅಬ್ದುಲ್ ರಹಿಮಾನ್ ಕೊಲೆ ಸುಹಾಸ್ ಹತ್ಯೆಗೆ ಪ್ರತೀಕಾರ ಆಗಿರಬಹುದು ಎಂಬುವುದು ಜನರ ಅನುಮಾನವಾಗಿದೆ. ಇದು ಕೋಮು ವೈಷ್ಯಮ್ಯದ ಕೊಲೆಯೇ ಎಂಬುವುದು ಇನ್ನೂ ಖಚಿತವಾಗಿಲ್ಲ.

ಒಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ತಿಂಗಳೊಳಗೆ ಮೂವರು ಯುವಕರ ಹತ್ಯೆ ನಡೆದು ಹೋಗಿದೆ. ತಂದೆ-ತಾಯಿಗೆ ಮಕ್ಕಳು, ಹೆಂಡತಿಗೆ ಗಂಡ, ಮಕ್ಕಳಿಗೆ ಅಪ್ಪ, ಸಹೋದರರಿಗೆ ಸಹೋದರ ಇಲ್ಲವಾಗಿದ್ದಾರೆ.

ಕೋಮುವಾದಕ್ಕೆ ಕಡಿವಾಣ ಹಾಕದ ಸರ್ಕಾರ, ಜನರಿಂದ ತೀವ್ರ ಆಕ್ರೋಶ

ಅಶ್ರಫ್ ಅವರ ಗುಂಪು ಹತ್ಯೆ, ರೌಡಿ ಶೀಟರ್ ಸುಹಾಸ್ ಅವರನ್ನು ದುಷ್ಕರ್ಮಿಗಳು ಜನನಿಬಿಡ ಪ್ರದೇಶದ ರಸ್ತೆ ಮಧ್ಯೆಯೇ ಯಾವುದೇ ಭಯವಿಲ್ಲದೆ ಬರ್ಬರವಾಗಿ ಹತ್ಯೆಗೈದ ಬಳಿಕ, ಹದಗೆಟ್ಟ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅತಿಥಿಯಂತೆ ಆಗಾಗ ಜಿಲ್ಲೆಗೆ ಭೇಟಿ ನೀಡುವ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಜನ ಆಗ್ರಹಿಸಿದ್ದಾರೆ.

ಅಶ್ರಫ್ ಮತ್ತು ಸುಹಾಸ್ ಅವರ ಹತ್ಯೆಯ ಕೆಲ ದಿನಗಳ ಬಳಿಕ ಮಂಗಳೂರಿಗೆ ಭೇಟಿ ನೀಡಿದ್ದ ಗೃಹ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಉನ್ನತ ಅಧಿಕಾರಿಗಳ ಸಭೆ ನಡೆಸಿದ್ದರು. ಆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಗೃಹ ಸಚಿವರು, ಜಿಲ್ಲೆಯಲ್ಲಿ ಕೋಮುವಾದಕ್ಕೆ ಕಡಿವಾಣ ಹಾಕುವ ಮಾತುಗಳನ್ನು ಆಡಿದ್ದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ‘ಕೋಮುದ್ವೇಷ ನಿಗ್ರಹ ದಳ (Anti Communal Force)’ ಆರಂಭಿಸುವುದಾಗಿ ಘೋಷಿಸಿದ್ದರು.

ಗೃಹ ಸಚಿವರು ಸುದ್ದಿಗೋಷ್ಠಿ ನಡೆಸಿ ತೆರಳಿದ ಬೆನ್ನಿಗೇ ಜಿಲ್ಲೆಯ ಜನಪ್ರತಿನಿಧಿಯೊಬ್ಬರು ಸೇರಿದಂತೆ ಕೆಲ ಸಂಘಟನೆಗಳ ಮುಖಂಡರು ಬಹಿರಂಗವಾಗಿ ಕೋಮುದ್ವೇಷದ ಭಾಷಣ ಮಾಡಿದ್ದಾರೆ. ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷ ಹರಡುವ ಪ್ರಯತ್ನ ಮಾಡಿದ್ದಾರೆ.

ಈ ಎಲ್ಲದರ ನಡುವೆ ಮಂಗಳವಾರ ಬಂಟ್ವಾಳದ ಅಬ್ದುಲ್ ರಹಿಮಾನ್ ಅವರ ಕೊಲೆ ನಡೆದು ಹೋಗಿದೆ. ಅವರ ಜೊತೆಗಿದ್ದ ಮತ್ತೊಬ್ಬ ಯುವಕನ ಕೊಲೆಯತ್ನ ನಡೆದಿದೆ.

ಈ ಬೆಳವಣಿಗೆಯಿಂದ ಜಿಲ್ಲೆಯ ಜನರು ಬೇಸತ್ತು ಹೋಗಿದ್ದು, ಕೋಮುವಾದಕ್ಕೆ ಕಡಿವಾಣ ಹಾಕಲು ಸಾಧ್ಯವಾಗದ ರಾಜ್ಯ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

“ಖಂಡನೆಯ ತೇಪೆ ಸಾಕು, ಕಠಿಣ ಕ್ರಮ ಬೇಕು” ಜನರ ಆಗ್ರಹ

ಮಂಗಳವಾರ ಅಬ್ದುಲ್ ರಹಿಮಾನ್ ಅವರ ಕೊಲೆ ನಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪೊಲೀಸರಿಗೆ ಹೇಳಿದ್ದೇನೆ” ಎಂದಿದ್ದರು.

ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸಾಮಾಜಿ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿ “ಮಂಗಳೂರಿನ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿಯ ಹತ್ಯೆ ಖಂಡನೀಯ. ಘಟನೆಗೆ ನೈಜ ಕಾರಣ ತಿಳಿದಿಲ್ಲ. ಈ ಸಂಬಂಧ ಈಗಾಗಲೇ ಗೃಹ ಸಚಿವರಾದ ಡಾ.ಜಿ ಪರಮೇಶ್ವರ್, ಡಿಜಿಪಿ ಕರ್ನಾಟ ಹಾಗೂ ಕಾನೂನು ಸುವ್ಯವಸ್ಥೆ ಎಡಿಜಿಪಿ ಜೊತೆ ಮಾತಾಡಿದ್ದೇನೆ.”

“ದ.ಕನ್ನಡ ಜಿಲ್ಲೆಯ ಶಾಂತಿ ಹಾಳು ಮಾಡುವ ದುಷ್ಟ ಯತ್ನವೊಂದು ವ್ಯವಸ್ಥಿತವಾಗಿ ನಡೆಯುತ್ತಿದೆ. ಈ ಘಟನೆಯು ಇದರ ಒಂದು ಭಾಗದಂತೆ ಕಾಣಿಸುತ್ತಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತಕ್ಕೆ ಕಠಿಣ ಸೂಚನೆ ನೀಡಿದ್ದೇನೆ‌. ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ‌.” ಎಂದು ಬರೆದುಕೊಂಡಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಈ ಪೋಸ್ಟ್ ಕೆಳಗಡೆ ಜನರು ಆಕ್ರೋಶದ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಜಿಲ್ಲೆಯಲ್ಲಿ ಕೋಮುವಾದಕ್ಕೆ ಕಡಿವಾಣ ಹಾಕಲು ಸಾಧ್ಯವಾಗದ ಉಸ್ತುವಾರು ಸಚಿವರು ಮತ್ತು ಪೊಲೀಸ್ ಅಧಿಕಾರಿಗಳು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

 

 

 

 

 

 

 

ಕರಾವಳಿಯ ಹಲವು ಪಕ್ಷ, ಸಂಘಟನೆಗಳು ಕೂಡ ಸರಣಿ ಕೊಲೆಗಳು ಮತ್ತು ಹದೆಗೆಟ್ಟ ಕಾನೂನು ಸುವ್ಯವಸ್ಥೆಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ಬಿಜೆಪಿ, ಸಂಘಪರಿವಾರದ ದ್ವೇಷ ಭಾಷಣ, ಸರ್ಕಾರ ಬೇಜವಾಬ್ದಾರಿ ನಡೆ ಜಿಲ್ಲೆಯ ಇಂದಿನ ಸ್ಥಿತಿಗೆ ಕಾರಣ ಎಂದು ಸಿಪಿಐಎಂ ಜಿಲ್ಲಾ ಘಟಕ ಆರೋಪಿಸಿದೆ.

ಪ್ರಚೋದನಕಾರಿ ಭಾಷಣಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ.
ಜನಪ್ರತಿನಿಧಿಗಳೇ, ಓಲೈಕೆ ರಾಜಕಾರಣ ನಿಲ್ಲಿಸಿ. ಕೊಲೆಗೆ ಪ್ರಚೋದನೆ ನೀಡಿದ ಭಯೋತ್ಪಾದಕರಿಗೆ ಕಠಿಣ ಶಿಕ್ಷೆ ವಿಧಿಸಿ. ರಾಜ್ಯದ ಜನತೆಯನ್ನು ಕಾಪಾಡಿ ಎಂದು ಎಸ್ಎಸ್‌ಎಫ್‌ ಕರ್ನಾಟಕ ಆಗ್ರಹಿಸಿದೆ.

ಅಬ್ದುಲ್ ರಹಿಮಾನ್ ಅವರ ಕೊಲೆಗೆ ರಾಜ್ಯದ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಕೋಮು ಗಲಭೆ ನಿಯಂತ್ರಿಸಲು ಸಾಧ್ಯವಾಗದಿದ್ದರೆ ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ ಎಂದು ಎಸ್‌ಕೆಎಸ್‌ಎಸ್‌ಎಫ್‌ ಸಂಘಟನೆ ಒತ್ತಾಯಿಸಿದೆ.

ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಎಕ್ಸ್‌, ಇನ್‌ಸ್ಟಾಗ್ರಾಂ ಮತ್ತು ವಾಟ್ಸಾಪ್‌ ಮೆಸೆಂಜರ್‌ಗಳಲ್ಲಿ ಜಿಲ್ಲೆಯ ಧಾರ್ಮಿಕ ನಾಯಕರು, ಇತರ ಜನರು ಸರ್ಕಾರ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಂದು ಕೊಲೆ ನಡೆದ ಬಳಿಕ ಅದಕ್ಕೆ ಪ್ರತೀಕಾತ ತೀರಿಸುತ್ತೇವೆ ಎಂದು ಕೆಲವರು ಬಹಿರಂಗವಾಗಿ ವೇದಿಕೆ ಕಟ್ಟಿ ಬೆದರಿಕೆ ಹಾಕುವಾಗ ಪೊಲೀಸರು ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಕರಾವಳಿಯ ಕೋಮುವಾದಕ್ಕೆ ಕಡಿವಾಣ ಹಾಕಲು ಸರ್ಕಾರಕ್ಕೆ ಏಕೆ ಸಾಧ್ಯವಾಗುತ್ತಿಲ್ಲ ಎಂಬುವುದು ಜನರ ಪ್ರಶ್ನೆಯಾಗಿದೆ.

ಅಬ್ದುಲ್ ರಹಿಮಾನ್ ಹತ್ಯೆ:15 ಮಂದಿ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳದ ಅಬ್ದುಲ್ ರಹಿಮಾನ್ ಅವರ‌ ಕೊಲೆ ಮತ್ತು ಕಲಂದರ್ ಶಾಫಿ ಅವರ ಕೊಲೆಯತ್ನ ಪ್ರಕರಣ ಸಂಬಂಧ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ದೀಪಕ್ ಮತ್ತು ಸುಮಿತ್ ಎಂಬವರು ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರಿಗೆ ಪರಿಚಯಸ್ಥರೇ ಆಗಿದ್ದಾರೆ ಎಂದು ಸುದ್ದಿ ಸಂಸ್ಥೆ ವಾರ್ತಾಭಾರತಿ ಇತ್ತೀಚಿನ ವರದಿಯಲ್ಲಿ ಹೇಳಿದೆ.

ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದಿದ್ದ ಬಿಜೆಪಿ ನಾಯಕ | ಪ್ರಕರಣ ದಾಖಲಾಗುತ್ತಿದ್ದಂತೆ ಕ್ಷಮೆ ಯಾಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...