Homeಸಿನಿಮಾಕ್ರೀಡೆರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

- Advertisement -
- Advertisement -

ವಿಶ್ವದ ಅತ್ಯಂತ ಪ್ರಸಿದ್ಧ ಮತ್ತು ಅಗ್ರ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ,
ಪೋರ್ಚುಗಲ್ ಫುಟ್ಬಾಲ್ ತಂಡದ ನಾಯಕ ಹಾಗು ಪ್ರಸಿದ್ಧ ಫಿಟ್ನೆಸ್ ಉತ್ಸಾಹಿ ಕ್ರಿಸ್ಟಿಯಾನೊ ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ ಪಾನೀಯ ತಯಾರಿಕ ಕಂಪನಿ ಕೋಕೊ-ಕೋಲಾ ಬಹು ದೊಡ್ಡ ಬೆಲೆ ತೆರಬೇಕಾಗಿ ಬಂದಿದೆ.

ಸಾಮಾನ್ಯವಾಗಿ ಕ್ರೀಡಾಪಟುಗಳು ಮತ್ತು ಸಿನಿಮಾ ತಾರೆಯರು ಹಣಕ್ಕಾಗಿ ಯಾವ ಕಂಪನಿಯ ಜಾಹೀರಾತಿನಲ್ಲಿ ಬೇಕಾದರೂ ನಟಿಸುತ್ತಾರೆ, ಅವುಗಳನ್ನು ಪ್ರಚಾರ ಮಾಡುತ್ತಾರೆ ಎಂಬ ಆಪಾದನೆಯಿದೆ. ಅದಕ್ಕೆ ವಿರುದ್ಧವಾಗಿ ವರ್ತಿಸಿದ ಕ್ರಿಸ್ಟಿಯಾನೊ ರೊನಾಲ್ಡೊ ಹಲವರ ಕಣ್ಣಲ್ಲಿ ಒಬ್ಬ ಉತ್ತಮ ವ್ಯಕ್ತಿಯೆನಿಸಿಕೊಂಡರೆ ಆತ ಮಾಡಿದ ಕೆಲಸದಿಂದ ಕೋಕೊ-ಕೋಲಾ ಕಂಪನಿ 4 ಬಿಲಿಯನ್ ಡಾಲರ್ ಕಳೆದುಕೊಂಡು ಶಪಿಸುತ್ತಿದೆ.

ಅಷ್ಟಕ್ಕೂ ಅಷ್ಟೊಂದು ಹಣ ಕಳೆದುಕೊಳ್ಳುವಂತೆ ಆತ ಮಾಡಿದ್ದಾದೂ ಏನು? ಯುರೋ 2020 ರಲ್ಲಿ ಪೋರ್ಚುಗಲ್ ತಂಡವು ಹಂಗೇರಿ ವಿರುದ್ಧ ಕಾದಾಡುವ ಮೊದಲು ಸೋಮವಾರ ಬುಡಾಪೆಸ್ಟ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಟೇಬಲ್ ಮೇಲಿದ್ದ ಎರಡು ಕೋಕೊ-ಕೋಲಾ ಬಾಟಲಿಗಳನ್ನು ತೆಗೆದು ಕಾಣದಂತೆ ಕೆಳಗಿಟ್ಟಿದ್ದು ಮತ್ತು ನೀರಿನ ಬಾಟಲಿಯನ್ನು ತನ್ನ ಮುಂದಿಟ್ಟುಕೊಂಡಿದ್ದು…!

ಕ್ರಿಸ್ಟಿಯಾನೊ ರೊನಾಲ್ಡೊ ಪತ್ರಿಕಾಗೋಷ್ಠಿಗೆ ಆಗಮಿಸುವ ಮೊದಲು ಆತನ ಟೇಬಲ್ ಮೇಲೆ ಎರಡು ಕೋಕೊ-ಕೋಲಾ ಬಾಟಲಿಗಳನ್ನು ಇಡಲಾಗಿತ್ತು. ಆತ ಬಂದವನೆ ಅದನ್ನು ನೋಡಿ ತೆಗೆದು ಕೆಳಗಿಟ್ಟ. ನಂತರ ನೀರಿನ ಬಾಟಲಿಯನ್ನು ಮೇಲೆತ್ತಿ ಇದನ್ನು ಕುಡಿಯಿರಿ ಎಂದು ಸನ್ಹೆ ಮಾಡಿದ ಅಷ್ಟೇ.. ಈ ವಿಡಿಯೋ ಪ್ರಪಂಚಾದ್ಯಂತ ವೈರಲ್ ಆಯಿತು. ಅಷ್ಟಕ್ಕೆ ಪತ್ರಿಕಾಗೋಷ್ಠಿಯ ಅಂತ್ಯದ ವೇಳೆಗೆ ಕೋಕಾ-ಕೋಲಾದ ಷೇರು ಬೆಲೆ $56.10 ರಿಂದ $55.22 ಕ್ಕೆ ಇಳಿದಿತ್ತು. ಅಂದರೆ ಶೇಕಡಾ 1.6 ರಷ್ಟು ಕುಸಿತ. ಇದು ಈಗ ಅದರ ಬೆಲೆ $55.41 ಕ್ಕೆ ಏರಿದೆ.

ಕೋಕಾ-ಕೋಲಾದ ಮಾರುಕಟ್ಟೆ ಮೌಲ್ಯವು $242 ಬಿಲಿಯನ್‌ನಿಂದ $238 ಶತಕೋಟಿಗೆ ಇಳಿದಿದೆ. ಅಂದರೆ 4 ಬಿಲಿಯನ್‌ ಡಾಲರ್ ಕುಸಿತ ಕಂಡಿದೆ.

ಕೋಕಾ-ಕೋಲಾ ಯುರೋ 2020 ರ ಅಧಿಕೃತ ಪ್ರಾಯೋಜಕರಲ್ಲಿ ಒಬ್ಬರು. ಹಾಗಾಗಿ ಆ ಬಾಟಲಿಗಳನ್ನು ಮೇಜಿನ ಮೇಲೆ ಪ್ರಚಾರ ಮಾಡಲು ಇರಿಸಲಾಗಿತ್ತು ಎಂದು ಹೇಳಿಕೊಂಡಿದೆ. ಪ್ರತಿಯೊಬ್ಬರೂ ತಮ್ಮ ಪಾನೀಯ ಆದ್ಯತೆಗಳಿಗೆ ಅರ್ಹರಾಗಿದ್ದಾರೆ ಎಂದು ಹೇಳುವ ಮೂಲಕ ಕೋಕಾ-ಕೋಲಾ ತನ್ನ ಅಸಮಾಧಾನ ಹೊರ ಹಾಕಿದೆ.

ವಿಶ್ವದ ಅತ್ಯಂತ ಪ್ರಸಿದ್ಧ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ರೊನಾಲ್ಡೊಗೆ ಇನ್ಸ್ಟಾಗ್ರಾಮ್‌ನಲ್ಲಿ ಸುಮಾರು 300 ಮಿಲಿಯನ್ ಅನುಯಾಯಿಗಳಿದ್ದಾರೆ. ಮಂಗಳವಾರ, ಹಂಗೇರಿ ವಿರುದ್ಧ ಪೋರ್ಚುಗಲ್ 3-0 ಗೋಲುಗಳಿಂದ ಗೆಲುವು ಸಾಧಿಸಿತು. ಎರಡು ಗೋಲು ಗಳಿಸಿ ರೊನಾಲ್ಡೊ ಮಿಂಚಿದರು. ಅಲ್ಲದೇ ಯುರೋಪಿಯನ್ ಚಾಂಪಿಯನ್‌ಶಿಪ್ ನಲ್ಲಿ 11 ಗೋಲುಗಳೊಂದಿಗೆ ದಾಖಲೆ ನಿರ್ಮಿಸಿದರು.


ಇದನ್ನೂ ಓದಿ; ನೇಮಕಾತಿಯಲ್ಲಿ ಹಿನ್ನಡೆ ಕಾರಣ: ಹೊಸ ಸಿಬಿಐ ನಿರ್ದೇಶಕರ ಅಧಿಕಾರವಧಿ ಕಡಿತಕ್ಕೆ ಮುಂದಾದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...