Homeಸಿನಿಮಾಕ್ರೀಡೆರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

- Advertisement -
- Advertisement -

ವಿಶ್ವದ ಅತ್ಯಂತ ಪ್ರಸಿದ್ಧ ಮತ್ತು ಅಗ್ರ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ,
ಪೋರ್ಚುಗಲ್ ಫುಟ್ಬಾಲ್ ತಂಡದ ನಾಯಕ ಹಾಗು ಪ್ರಸಿದ್ಧ ಫಿಟ್ನೆಸ್ ಉತ್ಸಾಹಿ ಕ್ರಿಸ್ಟಿಯಾನೊ ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ ಪಾನೀಯ ತಯಾರಿಕ ಕಂಪನಿ ಕೋಕೊ-ಕೋಲಾ ಬಹು ದೊಡ್ಡ ಬೆಲೆ ತೆರಬೇಕಾಗಿ ಬಂದಿದೆ.

ಸಾಮಾನ್ಯವಾಗಿ ಕ್ರೀಡಾಪಟುಗಳು ಮತ್ತು ಸಿನಿಮಾ ತಾರೆಯರು ಹಣಕ್ಕಾಗಿ ಯಾವ ಕಂಪನಿಯ ಜಾಹೀರಾತಿನಲ್ಲಿ ಬೇಕಾದರೂ ನಟಿಸುತ್ತಾರೆ, ಅವುಗಳನ್ನು ಪ್ರಚಾರ ಮಾಡುತ್ತಾರೆ ಎಂಬ ಆಪಾದನೆಯಿದೆ. ಅದಕ್ಕೆ ವಿರುದ್ಧವಾಗಿ ವರ್ತಿಸಿದ ಕ್ರಿಸ್ಟಿಯಾನೊ ರೊನಾಲ್ಡೊ ಹಲವರ ಕಣ್ಣಲ್ಲಿ ಒಬ್ಬ ಉತ್ತಮ ವ್ಯಕ್ತಿಯೆನಿಸಿಕೊಂಡರೆ ಆತ ಮಾಡಿದ ಕೆಲಸದಿಂದ ಕೋಕೊ-ಕೋಲಾ ಕಂಪನಿ 4 ಬಿಲಿಯನ್ ಡಾಲರ್ ಕಳೆದುಕೊಂಡು ಶಪಿಸುತ್ತಿದೆ.

ಅಷ್ಟಕ್ಕೂ ಅಷ್ಟೊಂದು ಹಣ ಕಳೆದುಕೊಳ್ಳುವಂತೆ ಆತ ಮಾಡಿದ್ದಾದೂ ಏನು? ಯುರೋ 2020 ರಲ್ಲಿ ಪೋರ್ಚುಗಲ್ ತಂಡವು ಹಂಗೇರಿ ವಿರುದ್ಧ ಕಾದಾಡುವ ಮೊದಲು ಸೋಮವಾರ ಬುಡಾಪೆಸ್ಟ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಟೇಬಲ್ ಮೇಲಿದ್ದ ಎರಡು ಕೋಕೊ-ಕೋಲಾ ಬಾಟಲಿಗಳನ್ನು ತೆಗೆದು ಕಾಣದಂತೆ ಕೆಳಗಿಟ್ಟಿದ್ದು ಮತ್ತು ನೀರಿನ ಬಾಟಲಿಯನ್ನು ತನ್ನ ಮುಂದಿಟ್ಟುಕೊಂಡಿದ್ದು…!

ಕ್ರಿಸ್ಟಿಯಾನೊ ರೊನಾಲ್ಡೊ ಪತ್ರಿಕಾಗೋಷ್ಠಿಗೆ ಆಗಮಿಸುವ ಮೊದಲು ಆತನ ಟೇಬಲ್ ಮೇಲೆ ಎರಡು ಕೋಕೊ-ಕೋಲಾ ಬಾಟಲಿಗಳನ್ನು ಇಡಲಾಗಿತ್ತು. ಆತ ಬಂದವನೆ ಅದನ್ನು ನೋಡಿ ತೆಗೆದು ಕೆಳಗಿಟ್ಟ. ನಂತರ ನೀರಿನ ಬಾಟಲಿಯನ್ನು ಮೇಲೆತ್ತಿ ಇದನ್ನು ಕುಡಿಯಿರಿ ಎಂದು ಸನ್ಹೆ ಮಾಡಿದ ಅಷ್ಟೇ.. ಈ ವಿಡಿಯೋ ಪ್ರಪಂಚಾದ್ಯಂತ ವೈರಲ್ ಆಯಿತು. ಅಷ್ಟಕ್ಕೆ ಪತ್ರಿಕಾಗೋಷ್ಠಿಯ ಅಂತ್ಯದ ವೇಳೆಗೆ ಕೋಕಾ-ಕೋಲಾದ ಷೇರು ಬೆಲೆ $56.10 ರಿಂದ $55.22 ಕ್ಕೆ ಇಳಿದಿತ್ತು. ಅಂದರೆ ಶೇಕಡಾ 1.6 ರಷ್ಟು ಕುಸಿತ. ಇದು ಈಗ ಅದರ ಬೆಲೆ $55.41 ಕ್ಕೆ ಏರಿದೆ.

ಕೋಕಾ-ಕೋಲಾದ ಮಾರುಕಟ್ಟೆ ಮೌಲ್ಯವು $242 ಬಿಲಿಯನ್‌ನಿಂದ $238 ಶತಕೋಟಿಗೆ ಇಳಿದಿದೆ. ಅಂದರೆ 4 ಬಿಲಿಯನ್‌ ಡಾಲರ್ ಕುಸಿತ ಕಂಡಿದೆ.

ಕೋಕಾ-ಕೋಲಾ ಯುರೋ 2020 ರ ಅಧಿಕೃತ ಪ್ರಾಯೋಜಕರಲ್ಲಿ ಒಬ್ಬರು. ಹಾಗಾಗಿ ಆ ಬಾಟಲಿಗಳನ್ನು ಮೇಜಿನ ಮೇಲೆ ಪ್ರಚಾರ ಮಾಡಲು ಇರಿಸಲಾಗಿತ್ತು ಎಂದು ಹೇಳಿಕೊಂಡಿದೆ. ಪ್ರತಿಯೊಬ್ಬರೂ ತಮ್ಮ ಪಾನೀಯ ಆದ್ಯತೆಗಳಿಗೆ ಅರ್ಹರಾಗಿದ್ದಾರೆ ಎಂದು ಹೇಳುವ ಮೂಲಕ ಕೋಕಾ-ಕೋಲಾ ತನ್ನ ಅಸಮಾಧಾನ ಹೊರ ಹಾಕಿದೆ.

ವಿಶ್ವದ ಅತ್ಯಂತ ಪ್ರಸಿದ್ಧ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ರೊನಾಲ್ಡೊಗೆ ಇನ್ಸ್ಟಾಗ್ರಾಮ್‌ನಲ್ಲಿ ಸುಮಾರು 300 ಮಿಲಿಯನ್ ಅನುಯಾಯಿಗಳಿದ್ದಾರೆ. ಮಂಗಳವಾರ, ಹಂಗೇರಿ ವಿರುದ್ಧ ಪೋರ್ಚುಗಲ್ 3-0 ಗೋಲುಗಳಿಂದ ಗೆಲುವು ಸಾಧಿಸಿತು. ಎರಡು ಗೋಲು ಗಳಿಸಿ ರೊನಾಲ್ಡೊ ಮಿಂಚಿದರು. ಅಲ್ಲದೇ ಯುರೋಪಿಯನ್ ಚಾಂಪಿಯನ್‌ಶಿಪ್ ನಲ್ಲಿ 11 ಗೋಲುಗಳೊಂದಿಗೆ ದಾಖಲೆ ನಿರ್ಮಿಸಿದರು.


ಇದನ್ನೂ ಓದಿ; ನೇಮಕಾತಿಯಲ್ಲಿ ಹಿನ್ನಡೆ ಕಾರಣ: ಹೊಸ ಸಿಬಿಐ ನಿರ್ದೇಶಕರ ಅಧಿಕಾರವಧಿ ಕಡಿತಕ್ಕೆ ಮುಂದಾದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...