Homeಸಿನಿಮಾಕ್ರೀಡೆರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

- Advertisement -
- Advertisement -

ವಿಶ್ವದ ಅತ್ಯಂತ ಪ್ರಸಿದ್ಧ ಮತ್ತು ಅಗ್ರ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ,
ಪೋರ್ಚುಗಲ್ ಫುಟ್ಬಾಲ್ ತಂಡದ ನಾಯಕ ಹಾಗು ಪ್ರಸಿದ್ಧ ಫಿಟ್ನೆಸ್ ಉತ್ಸಾಹಿ ಕ್ರಿಸ್ಟಿಯಾನೊ ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ ಪಾನೀಯ ತಯಾರಿಕ ಕಂಪನಿ ಕೋಕೊ-ಕೋಲಾ ಬಹು ದೊಡ್ಡ ಬೆಲೆ ತೆರಬೇಕಾಗಿ ಬಂದಿದೆ.

ಸಾಮಾನ್ಯವಾಗಿ ಕ್ರೀಡಾಪಟುಗಳು ಮತ್ತು ಸಿನಿಮಾ ತಾರೆಯರು ಹಣಕ್ಕಾಗಿ ಯಾವ ಕಂಪನಿಯ ಜಾಹೀರಾತಿನಲ್ಲಿ ಬೇಕಾದರೂ ನಟಿಸುತ್ತಾರೆ, ಅವುಗಳನ್ನು ಪ್ರಚಾರ ಮಾಡುತ್ತಾರೆ ಎಂಬ ಆಪಾದನೆಯಿದೆ. ಅದಕ್ಕೆ ವಿರುದ್ಧವಾಗಿ ವರ್ತಿಸಿದ ಕ್ರಿಸ್ಟಿಯಾನೊ ರೊನಾಲ್ಡೊ ಹಲವರ ಕಣ್ಣಲ್ಲಿ ಒಬ್ಬ ಉತ್ತಮ ವ್ಯಕ್ತಿಯೆನಿಸಿಕೊಂಡರೆ ಆತ ಮಾಡಿದ ಕೆಲಸದಿಂದ ಕೋಕೊ-ಕೋಲಾ ಕಂಪನಿ 4 ಬಿಲಿಯನ್ ಡಾಲರ್ ಕಳೆದುಕೊಂಡು ಶಪಿಸುತ್ತಿದೆ.

ಅಷ್ಟಕ್ಕೂ ಅಷ್ಟೊಂದು ಹಣ ಕಳೆದುಕೊಳ್ಳುವಂತೆ ಆತ ಮಾಡಿದ್ದಾದೂ ಏನು? ಯುರೋ 2020 ರಲ್ಲಿ ಪೋರ್ಚುಗಲ್ ತಂಡವು ಹಂಗೇರಿ ವಿರುದ್ಧ ಕಾದಾಡುವ ಮೊದಲು ಸೋಮವಾರ ಬುಡಾಪೆಸ್ಟ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಟೇಬಲ್ ಮೇಲಿದ್ದ ಎರಡು ಕೋಕೊ-ಕೋಲಾ ಬಾಟಲಿಗಳನ್ನು ತೆಗೆದು ಕಾಣದಂತೆ ಕೆಳಗಿಟ್ಟಿದ್ದು ಮತ್ತು ನೀರಿನ ಬಾಟಲಿಯನ್ನು ತನ್ನ ಮುಂದಿಟ್ಟುಕೊಂಡಿದ್ದು…!

ಕ್ರಿಸ್ಟಿಯಾನೊ ರೊನಾಲ್ಡೊ ಪತ್ರಿಕಾಗೋಷ್ಠಿಗೆ ಆಗಮಿಸುವ ಮೊದಲು ಆತನ ಟೇಬಲ್ ಮೇಲೆ ಎರಡು ಕೋಕೊ-ಕೋಲಾ ಬಾಟಲಿಗಳನ್ನು ಇಡಲಾಗಿತ್ತು. ಆತ ಬಂದವನೆ ಅದನ್ನು ನೋಡಿ ತೆಗೆದು ಕೆಳಗಿಟ್ಟ. ನಂತರ ನೀರಿನ ಬಾಟಲಿಯನ್ನು ಮೇಲೆತ್ತಿ ಇದನ್ನು ಕುಡಿಯಿರಿ ಎಂದು ಸನ್ಹೆ ಮಾಡಿದ ಅಷ್ಟೇ.. ಈ ವಿಡಿಯೋ ಪ್ರಪಂಚಾದ್ಯಂತ ವೈರಲ್ ಆಯಿತು. ಅಷ್ಟಕ್ಕೆ ಪತ್ರಿಕಾಗೋಷ್ಠಿಯ ಅಂತ್ಯದ ವೇಳೆಗೆ ಕೋಕಾ-ಕೋಲಾದ ಷೇರು ಬೆಲೆ $56.10 ರಿಂದ $55.22 ಕ್ಕೆ ಇಳಿದಿತ್ತು. ಅಂದರೆ ಶೇಕಡಾ 1.6 ರಷ್ಟು ಕುಸಿತ. ಇದು ಈಗ ಅದರ ಬೆಲೆ $55.41 ಕ್ಕೆ ಏರಿದೆ.

ಕೋಕಾ-ಕೋಲಾದ ಮಾರುಕಟ್ಟೆ ಮೌಲ್ಯವು $242 ಬಿಲಿಯನ್‌ನಿಂದ $238 ಶತಕೋಟಿಗೆ ಇಳಿದಿದೆ. ಅಂದರೆ 4 ಬಿಲಿಯನ್‌ ಡಾಲರ್ ಕುಸಿತ ಕಂಡಿದೆ.

ಕೋಕಾ-ಕೋಲಾ ಯುರೋ 2020 ರ ಅಧಿಕೃತ ಪ್ರಾಯೋಜಕರಲ್ಲಿ ಒಬ್ಬರು. ಹಾಗಾಗಿ ಆ ಬಾಟಲಿಗಳನ್ನು ಮೇಜಿನ ಮೇಲೆ ಪ್ರಚಾರ ಮಾಡಲು ಇರಿಸಲಾಗಿತ್ತು ಎಂದು ಹೇಳಿಕೊಂಡಿದೆ. ಪ್ರತಿಯೊಬ್ಬರೂ ತಮ್ಮ ಪಾನೀಯ ಆದ್ಯತೆಗಳಿಗೆ ಅರ್ಹರಾಗಿದ್ದಾರೆ ಎಂದು ಹೇಳುವ ಮೂಲಕ ಕೋಕಾ-ಕೋಲಾ ತನ್ನ ಅಸಮಾಧಾನ ಹೊರ ಹಾಕಿದೆ.

ವಿಶ್ವದ ಅತ್ಯಂತ ಪ್ರಸಿದ್ಧ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ರೊನಾಲ್ಡೊಗೆ ಇನ್ಸ್ಟಾಗ್ರಾಮ್‌ನಲ್ಲಿ ಸುಮಾರು 300 ಮಿಲಿಯನ್ ಅನುಯಾಯಿಗಳಿದ್ದಾರೆ. ಮಂಗಳವಾರ, ಹಂಗೇರಿ ವಿರುದ್ಧ ಪೋರ್ಚುಗಲ್ 3-0 ಗೋಲುಗಳಿಂದ ಗೆಲುವು ಸಾಧಿಸಿತು. ಎರಡು ಗೋಲು ಗಳಿಸಿ ರೊನಾಲ್ಡೊ ಮಿಂಚಿದರು. ಅಲ್ಲದೇ ಯುರೋಪಿಯನ್ ಚಾಂಪಿಯನ್‌ಶಿಪ್ ನಲ್ಲಿ 11 ಗೋಲುಗಳೊಂದಿಗೆ ದಾಖಲೆ ನಿರ್ಮಿಸಿದರು.


ಇದನ್ನೂ ಓದಿ; ನೇಮಕಾತಿಯಲ್ಲಿ ಹಿನ್ನಡೆ ಕಾರಣ: ಹೊಸ ಸಿಬಿಐ ನಿರ್ದೇಶಕರ ಅಧಿಕಾರವಧಿ ಕಡಿತಕ್ಕೆ ಮುಂದಾದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...