Homeಸಿನಿಮಾಕ್ರೀಡೆರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

- Advertisement -
- Advertisement -

ವಿಶ್ವದ ಅತ್ಯಂತ ಪ್ರಸಿದ್ಧ ಮತ್ತು ಅಗ್ರ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ,
ಪೋರ್ಚುಗಲ್ ಫುಟ್ಬಾಲ್ ತಂಡದ ನಾಯಕ ಹಾಗು ಪ್ರಸಿದ್ಧ ಫಿಟ್ನೆಸ್ ಉತ್ಸಾಹಿ ಕ್ರಿಸ್ಟಿಯಾನೊ ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ ಪಾನೀಯ ತಯಾರಿಕ ಕಂಪನಿ ಕೋಕೊ-ಕೋಲಾ ಬಹು ದೊಡ್ಡ ಬೆಲೆ ತೆರಬೇಕಾಗಿ ಬಂದಿದೆ.

ಸಾಮಾನ್ಯವಾಗಿ ಕ್ರೀಡಾಪಟುಗಳು ಮತ್ತು ಸಿನಿಮಾ ತಾರೆಯರು ಹಣಕ್ಕಾಗಿ ಯಾವ ಕಂಪನಿಯ ಜಾಹೀರಾತಿನಲ್ಲಿ ಬೇಕಾದರೂ ನಟಿಸುತ್ತಾರೆ, ಅವುಗಳನ್ನು ಪ್ರಚಾರ ಮಾಡುತ್ತಾರೆ ಎಂಬ ಆಪಾದನೆಯಿದೆ. ಅದಕ್ಕೆ ವಿರುದ್ಧವಾಗಿ ವರ್ತಿಸಿದ ಕ್ರಿಸ್ಟಿಯಾನೊ ರೊನಾಲ್ಡೊ ಹಲವರ ಕಣ್ಣಲ್ಲಿ ಒಬ್ಬ ಉತ್ತಮ ವ್ಯಕ್ತಿಯೆನಿಸಿಕೊಂಡರೆ ಆತ ಮಾಡಿದ ಕೆಲಸದಿಂದ ಕೋಕೊ-ಕೋಲಾ ಕಂಪನಿ 4 ಬಿಲಿಯನ್ ಡಾಲರ್ ಕಳೆದುಕೊಂಡು ಶಪಿಸುತ್ತಿದೆ.

ಅಷ್ಟಕ್ಕೂ ಅಷ್ಟೊಂದು ಹಣ ಕಳೆದುಕೊಳ್ಳುವಂತೆ ಆತ ಮಾಡಿದ್ದಾದೂ ಏನು? ಯುರೋ 2020 ರಲ್ಲಿ ಪೋರ್ಚುಗಲ್ ತಂಡವು ಹಂಗೇರಿ ವಿರುದ್ಧ ಕಾದಾಡುವ ಮೊದಲು ಸೋಮವಾರ ಬುಡಾಪೆಸ್ಟ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಟೇಬಲ್ ಮೇಲಿದ್ದ ಎರಡು ಕೋಕೊ-ಕೋಲಾ ಬಾಟಲಿಗಳನ್ನು ತೆಗೆದು ಕಾಣದಂತೆ ಕೆಳಗಿಟ್ಟಿದ್ದು ಮತ್ತು ನೀರಿನ ಬಾಟಲಿಯನ್ನು ತನ್ನ ಮುಂದಿಟ್ಟುಕೊಂಡಿದ್ದು…!

ಕ್ರಿಸ್ಟಿಯಾನೊ ರೊನಾಲ್ಡೊ ಪತ್ರಿಕಾಗೋಷ್ಠಿಗೆ ಆಗಮಿಸುವ ಮೊದಲು ಆತನ ಟೇಬಲ್ ಮೇಲೆ ಎರಡು ಕೋಕೊ-ಕೋಲಾ ಬಾಟಲಿಗಳನ್ನು ಇಡಲಾಗಿತ್ತು. ಆತ ಬಂದವನೆ ಅದನ್ನು ನೋಡಿ ತೆಗೆದು ಕೆಳಗಿಟ್ಟ. ನಂತರ ನೀರಿನ ಬಾಟಲಿಯನ್ನು ಮೇಲೆತ್ತಿ ಇದನ್ನು ಕುಡಿಯಿರಿ ಎಂದು ಸನ್ಹೆ ಮಾಡಿದ ಅಷ್ಟೇ.. ಈ ವಿಡಿಯೋ ಪ್ರಪಂಚಾದ್ಯಂತ ವೈರಲ್ ಆಯಿತು. ಅಷ್ಟಕ್ಕೆ ಪತ್ರಿಕಾಗೋಷ್ಠಿಯ ಅಂತ್ಯದ ವೇಳೆಗೆ ಕೋಕಾ-ಕೋಲಾದ ಷೇರು ಬೆಲೆ $56.10 ರಿಂದ $55.22 ಕ್ಕೆ ಇಳಿದಿತ್ತು. ಅಂದರೆ ಶೇಕಡಾ 1.6 ರಷ್ಟು ಕುಸಿತ. ಇದು ಈಗ ಅದರ ಬೆಲೆ $55.41 ಕ್ಕೆ ಏರಿದೆ.

ಕೋಕಾ-ಕೋಲಾದ ಮಾರುಕಟ್ಟೆ ಮೌಲ್ಯವು $242 ಬಿಲಿಯನ್‌ನಿಂದ $238 ಶತಕೋಟಿಗೆ ಇಳಿದಿದೆ. ಅಂದರೆ 4 ಬಿಲಿಯನ್‌ ಡಾಲರ್ ಕುಸಿತ ಕಂಡಿದೆ.

ಕೋಕಾ-ಕೋಲಾ ಯುರೋ 2020 ರ ಅಧಿಕೃತ ಪ್ರಾಯೋಜಕರಲ್ಲಿ ಒಬ್ಬರು. ಹಾಗಾಗಿ ಆ ಬಾಟಲಿಗಳನ್ನು ಮೇಜಿನ ಮೇಲೆ ಪ್ರಚಾರ ಮಾಡಲು ಇರಿಸಲಾಗಿತ್ತು ಎಂದು ಹೇಳಿಕೊಂಡಿದೆ. ಪ್ರತಿಯೊಬ್ಬರೂ ತಮ್ಮ ಪಾನೀಯ ಆದ್ಯತೆಗಳಿಗೆ ಅರ್ಹರಾಗಿದ್ದಾರೆ ಎಂದು ಹೇಳುವ ಮೂಲಕ ಕೋಕಾ-ಕೋಲಾ ತನ್ನ ಅಸಮಾಧಾನ ಹೊರ ಹಾಕಿದೆ.

ವಿಶ್ವದ ಅತ್ಯಂತ ಪ್ರಸಿದ್ಧ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ರೊನಾಲ್ಡೊಗೆ ಇನ್ಸ್ಟಾಗ್ರಾಮ್‌ನಲ್ಲಿ ಸುಮಾರು 300 ಮಿಲಿಯನ್ ಅನುಯಾಯಿಗಳಿದ್ದಾರೆ. ಮಂಗಳವಾರ, ಹಂಗೇರಿ ವಿರುದ್ಧ ಪೋರ್ಚುಗಲ್ 3-0 ಗೋಲುಗಳಿಂದ ಗೆಲುವು ಸಾಧಿಸಿತು. ಎರಡು ಗೋಲು ಗಳಿಸಿ ರೊನಾಲ್ಡೊ ಮಿಂಚಿದರು. ಅಲ್ಲದೇ ಯುರೋಪಿಯನ್ ಚಾಂಪಿಯನ್‌ಶಿಪ್ ನಲ್ಲಿ 11 ಗೋಲುಗಳೊಂದಿಗೆ ದಾಖಲೆ ನಿರ್ಮಿಸಿದರು.


ಇದನ್ನೂ ಓದಿ; ನೇಮಕಾತಿಯಲ್ಲಿ ಹಿನ್ನಡೆ ಕಾರಣ: ಹೊಸ ಸಿಬಿಐ ನಿರ್ದೇಶಕರ ಅಧಿಕಾರವಧಿ ಕಡಿತಕ್ಕೆ ಮುಂದಾದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...