Homeಸಿನಿಮಾಕ್ರೀಡೆರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

- Advertisement -
- Advertisement -

ವಿಶ್ವದ ಅತ್ಯಂತ ಪ್ರಸಿದ್ಧ ಮತ್ತು ಅಗ್ರ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ,
ಪೋರ್ಚುಗಲ್ ಫುಟ್ಬಾಲ್ ತಂಡದ ನಾಯಕ ಹಾಗು ಪ್ರಸಿದ್ಧ ಫಿಟ್ನೆಸ್ ಉತ್ಸಾಹಿ ಕ್ರಿಸ್ಟಿಯಾನೊ ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ ಪಾನೀಯ ತಯಾರಿಕ ಕಂಪನಿ ಕೋಕೊ-ಕೋಲಾ ಬಹು ದೊಡ್ಡ ಬೆಲೆ ತೆರಬೇಕಾಗಿ ಬಂದಿದೆ.

ಸಾಮಾನ್ಯವಾಗಿ ಕ್ರೀಡಾಪಟುಗಳು ಮತ್ತು ಸಿನಿಮಾ ತಾರೆಯರು ಹಣಕ್ಕಾಗಿ ಯಾವ ಕಂಪನಿಯ ಜಾಹೀರಾತಿನಲ್ಲಿ ಬೇಕಾದರೂ ನಟಿಸುತ್ತಾರೆ, ಅವುಗಳನ್ನು ಪ್ರಚಾರ ಮಾಡುತ್ತಾರೆ ಎಂಬ ಆಪಾದನೆಯಿದೆ. ಅದಕ್ಕೆ ವಿರುದ್ಧವಾಗಿ ವರ್ತಿಸಿದ ಕ್ರಿಸ್ಟಿಯಾನೊ ರೊನಾಲ್ಡೊ ಹಲವರ ಕಣ್ಣಲ್ಲಿ ಒಬ್ಬ ಉತ್ತಮ ವ್ಯಕ್ತಿಯೆನಿಸಿಕೊಂಡರೆ ಆತ ಮಾಡಿದ ಕೆಲಸದಿಂದ ಕೋಕೊ-ಕೋಲಾ ಕಂಪನಿ 4 ಬಿಲಿಯನ್ ಡಾಲರ್ ಕಳೆದುಕೊಂಡು ಶಪಿಸುತ್ತಿದೆ.

ಅಷ್ಟಕ್ಕೂ ಅಷ್ಟೊಂದು ಹಣ ಕಳೆದುಕೊಳ್ಳುವಂತೆ ಆತ ಮಾಡಿದ್ದಾದೂ ಏನು? ಯುರೋ 2020 ರಲ್ಲಿ ಪೋರ್ಚುಗಲ್ ತಂಡವು ಹಂಗೇರಿ ವಿರುದ್ಧ ಕಾದಾಡುವ ಮೊದಲು ಸೋಮವಾರ ಬುಡಾಪೆಸ್ಟ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಟೇಬಲ್ ಮೇಲಿದ್ದ ಎರಡು ಕೋಕೊ-ಕೋಲಾ ಬಾಟಲಿಗಳನ್ನು ತೆಗೆದು ಕಾಣದಂತೆ ಕೆಳಗಿಟ್ಟಿದ್ದು ಮತ್ತು ನೀರಿನ ಬಾಟಲಿಯನ್ನು ತನ್ನ ಮುಂದಿಟ್ಟುಕೊಂಡಿದ್ದು…!

ಕ್ರಿಸ್ಟಿಯಾನೊ ರೊನಾಲ್ಡೊ ಪತ್ರಿಕಾಗೋಷ್ಠಿಗೆ ಆಗಮಿಸುವ ಮೊದಲು ಆತನ ಟೇಬಲ್ ಮೇಲೆ ಎರಡು ಕೋಕೊ-ಕೋಲಾ ಬಾಟಲಿಗಳನ್ನು ಇಡಲಾಗಿತ್ತು. ಆತ ಬಂದವನೆ ಅದನ್ನು ನೋಡಿ ತೆಗೆದು ಕೆಳಗಿಟ್ಟ. ನಂತರ ನೀರಿನ ಬಾಟಲಿಯನ್ನು ಮೇಲೆತ್ತಿ ಇದನ್ನು ಕುಡಿಯಿರಿ ಎಂದು ಸನ್ಹೆ ಮಾಡಿದ ಅಷ್ಟೇ.. ಈ ವಿಡಿಯೋ ಪ್ರಪಂಚಾದ್ಯಂತ ವೈರಲ್ ಆಯಿತು. ಅಷ್ಟಕ್ಕೆ ಪತ್ರಿಕಾಗೋಷ್ಠಿಯ ಅಂತ್ಯದ ವೇಳೆಗೆ ಕೋಕಾ-ಕೋಲಾದ ಷೇರು ಬೆಲೆ $56.10 ರಿಂದ $55.22 ಕ್ಕೆ ಇಳಿದಿತ್ತು. ಅಂದರೆ ಶೇಕಡಾ 1.6 ರಷ್ಟು ಕುಸಿತ. ಇದು ಈಗ ಅದರ ಬೆಲೆ $55.41 ಕ್ಕೆ ಏರಿದೆ.

ಕೋಕಾ-ಕೋಲಾದ ಮಾರುಕಟ್ಟೆ ಮೌಲ್ಯವು $242 ಬಿಲಿಯನ್‌ನಿಂದ $238 ಶತಕೋಟಿಗೆ ಇಳಿದಿದೆ. ಅಂದರೆ 4 ಬಿಲಿಯನ್‌ ಡಾಲರ್ ಕುಸಿತ ಕಂಡಿದೆ.

ಕೋಕಾ-ಕೋಲಾ ಯುರೋ 2020 ರ ಅಧಿಕೃತ ಪ್ರಾಯೋಜಕರಲ್ಲಿ ಒಬ್ಬರು. ಹಾಗಾಗಿ ಆ ಬಾಟಲಿಗಳನ್ನು ಮೇಜಿನ ಮೇಲೆ ಪ್ರಚಾರ ಮಾಡಲು ಇರಿಸಲಾಗಿತ್ತು ಎಂದು ಹೇಳಿಕೊಂಡಿದೆ. ಪ್ರತಿಯೊಬ್ಬರೂ ತಮ್ಮ ಪಾನೀಯ ಆದ್ಯತೆಗಳಿಗೆ ಅರ್ಹರಾಗಿದ್ದಾರೆ ಎಂದು ಹೇಳುವ ಮೂಲಕ ಕೋಕಾ-ಕೋಲಾ ತನ್ನ ಅಸಮಾಧಾನ ಹೊರ ಹಾಕಿದೆ.

ವಿಶ್ವದ ಅತ್ಯಂತ ಪ್ರಸಿದ್ಧ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ರೊನಾಲ್ಡೊಗೆ ಇನ್ಸ್ಟಾಗ್ರಾಮ್‌ನಲ್ಲಿ ಸುಮಾರು 300 ಮಿಲಿಯನ್ ಅನುಯಾಯಿಗಳಿದ್ದಾರೆ. ಮಂಗಳವಾರ, ಹಂಗೇರಿ ವಿರುದ್ಧ ಪೋರ್ಚುಗಲ್ 3-0 ಗೋಲುಗಳಿಂದ ಗೆಲುವು ಸಾಧಿಸಿತು. ಎರಡು ಗೋಲು ಗಳಿಸಿ ರೊನಾಲ್ಡೊ ಮಿಂಚಿದರು. ಅಲ್ಲದೇ ಯುರೋಪಿಯನ್ ಚಾಂಪಿಯನ್‌ಶಿಪ್ ನಲ್ಲಿ 11 ಗೋಲುಗಳೊಂದಿಗೆ ದಾಖಲೆ ನಿರ್ಮಿಸಿದರು.


ಇದನ್ನೂ ಓದಿ; ನೇಮಕಾತಿಯಲ್ಲಿ ಹಿನ್ನಡೆ ಕಾರಣ: ಹೊಸ ಸಿಬಿಐ ನಿರ್ದೇಶಕರ ಅಧಿಕಾರವಧಿ ಕಡಿತಕ್ಕೆ ಮುಂದಾದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...