Homeಸಿನಿಮಾಕ್ರೀಡೆರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

- Advertisement -
- Advertisement -

ವಿಶ್ವದ ಅತ್ಯಂತ ಪ್ರಸಿದ್ಧ ಮತ್ತು ಅಗ್ರ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ,
ಪೋರ್ಚುಗಲ್ ಫುಟ್ಬಾಲ್ ತಂಡದ ನಾಯಕ ಹಾಗು ಪ್ರಸಿದ್ಧ ಫಿಟ್ನೆಸ್ ಉತ್ಸಾಹಿ ಕ್ರಿಸ್ಟಿಯಾನೊ ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ ಪಾನೀಯ ತಯಾರಿಕ ಕಂಪನಿ ಕೋಕೊ-ಕೋಲಾ ಬಹು ದೊಡ್ಡ ಬೆಲೆ ತೆರಬೇಕಾಗಿ ಬಂದಿದೆ.

ಸಾಮಾನ್ಯವಾಗಿ ಕ್ರೀಡಾಪಟುಗಳು ಮತ್ತು ಸಿನಿಮಾ ತಾರೆಯರು ಹಣಕ್ಕಾಗಿ ಯಾವ ಕಂಪನಿಯ ಜಾಹೀರಾತಿನಲ್ಲಿ ಬೇಕಾದರೂ ನಟಿಸುತ್ತಾರೆ, ಅವುಗಳನ್ನು ಪ್ರಚಾರ ಮಾಡುತ್ತಾರೆ ಎಂಬ ಆಪಾದನೆಯಿದೆ. ಅದಕ್ಕೆ ವಿರುದ್ಧವಾಗಿ ವರ್ತಿಸಿದ ಕ್ರಿಸ್ಟಿಯಾನೊ ರೊನಾಲ್ಡೊ ಹಲವರ ಕಣ್ಣಲ್ಲಿ ಒಬ್ಬ ಉತ್ತಮ ವ್ಯಕ್ತಿಯೆನಿಸಿಕೊಂಡರೆ ಆತ ಮಾಡಿದ ಕೆಲಸದಿಂದ ಕೋಕೊ-ಕೋಲಾ ಕಂಪನಿ 4 ಬಿಲಿಯನ್ ಡಾಲರ್ ಕಳೆದುಕೊಂಡು ಶಪಿಸುತ್ತಿದೆ.

ಅಷ್ಟಕ್ಕೂ ಅಷ್ಟೊಂದು ಹಣ ಕಳೆದುಕೊಳ್ಳುವಂತೆ ಆತ ಮಾಡಿದ್ದಾದೂ ಏನು? ಯುರೋ 2020 ರಲ್ಲಿ ಪೋರ್ಚುಗಲ್ ತಂಡವು ಹಂಗೇರಿ ವಿರುದ್ಧ ಕಾದಾಡುವ ಮೊದಲು ಸೋಮವಾರ ಬುಡಾಪೆಸ್ಟ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಟೇಬಲ್ ಮೇಲಿದ್ದ ಎರಡು ಕೋಕೊ-ಕೋಲಾ ಬಾಟಲಿಗಳನ್ನು ತೆಗೆದು ಕಾಣದಂತೆ ಕೆಳಗಿಟ್ಟಿದ್ದು ಮತ್ತು ನೀರಿನ ಬಾಟಲಿಯನ್ನು ತನ್ನ ಮುಂದಿಟ್ಟುಕೊಂಡಿದ್ದು…!

ಕ್ರಿಸ್ಟಿಯಾನೊ ರೊನಾಲ್ಡೊ ಪತ್ರಿಕಾಗೋಷ್ಠಿಗೆ ಆಗಮಿಸುವ ಮೊದಲು ಆತನ ಟೇಬಲ್ ಮೇಲೆ ಎರಡು ಕೋಕೊ-ಕೋಲಾ ಬಾಟಲಿಗಳನ್ನು ಇಡಲಾಗಿತ್ತು. ಆತ ಬಂದವನೆ ಅದನ್ನು ನೋಡಿ ತೆಗೆದು ಕೆಳಗಿಟ್ಟ. ನಂತರ ನೀರಿನ ಬಾಟಲಿಯನ್ನು ಮೇಲೆತ್ತಿ ಇದನ್ನು ಕುಡಿಯಿರಿ ಎಂದು ಸನ್ಹೆ ಮಾಡಿದ ಅಷ್ಟೇ.. ಈ ವಿಡಿಯೋ ಪ್ರಪಂಚಾದ್ಯಂತ ವೈರಲ್ ಆಯಿತು. ಅಷ್ಟಕ್ಕೆ ಪತ್ರಿಕಾಗೋಷ್ಠಿಯ ಅಂತ್ಯದ ವೇಳೆಗೆ ಕೋಕಾ-ಕೋಲಾದ ಷೇರು ಬೆಲೆ $56.10 ರಿಂದ $55.22 ಕ್ಕೆ ಇಳಿದಿತ್ತು. ಅಂದರೆ ಶೇಕಡಾ 1.6 ರಷ್ಟು ಕುಸಿತ. ಇದು ಈಗ ಅದರ ಬೆಲೆ $55.41 ಕ್ಕೆ ಏರಿದೆ.

ಕೋಕಾ-ಕೋಲಾದ ಮಾರುಕಟ್ಟೆ ಮೌಲ್ಯವು $242 ಬಿಲಿಯನ್‌ನಿಂದ $238 ಶತಕೋಟಿಗೆ ಇಳಿದಿದೆ. ಅಂದರೆ 4 ಬಿಲಿಯನ್‌ ಡಾಲರ್ ಕುಸಿತ ಕಂಡಿದೆ.

ಕೋಕಾ-ಕೋಲಾ ಯುರೋ 2020 ರ ಅಧಿಕೃತ ಪ್ರಾಯೋಜಕರಲ್ಲಿ ಒಬ್ಬರು. ಹಾಗಾಗಿ ಆ ಬಾಟಲಿಗಳನ್ನು ಮೇಜಿನ ಮೇಲೆ ಪ್ರಚಾರ ಮಾಡಲು ಇರಿಸಲಾಗಿತ್ತು ಎಂದು ಹೇಳಿಕೊಂಡಿದೆ. ಪ್ರತಿಯೊಬ್ಬರೂ ತಮ್ಮ ಪಾನೀಯ ಆದ್ಯತೆಗಳಿಗೆ ಅರ್ಹರಾಗಿದ್ದಾರೆ ಎಂದು ಹೇಳುವ ಮೂಲಕ ಕೋಕಾ-ಕೋಲಾ ತನ್ನ ಅಸಮಾಧಾನ ಹೊರ ಹಾಕಿದೆ.

ವಿಶ್ವದ ಅತ್ಯಂತ ಪ್ರಸಿದ್ಧ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ರೊನಾಲ್ಡೊಗೆ ಇನ್ಸ್ಟಾಗ್ರಾಮ್‌ನಲ್ಲಿ ಸುಮಾರು 300 ಮಿಲಿಯನ್ ಅನುಯಾಯಿಗಳಿದ್ದಾರೆ. ಮಂಗಳವಾರ, ಹಂಗೇರಿ ವಿರುದ್ಧ ಪೋರ್ಚುಗಲ್ 3-0 ಗೋಲುಗಳಿಂದ ಗೆಲುವು ಸಾಧಿಸಿತು. ಎರಡು ಗೋಲು ಗಳಿಸಿ ರೊನಾಲ್ಡೊ ಮಿಂಚಿದರು. ಅಲ್ಲದೇ ಯುರೋಪಿಯನ್ ಚಾಂಪಿಯನ್‌ಶಿಪ್ ನಲ್ಲಿ 11 ಗೋಲುಗಳೊಂದಿಗೆ ದಾಖಲೆ ನಿರ್ಮಿಸಿದರು.


ಇದನ್ನೂ ಓದಿ; ನೇಮಕಾತಿಯಲ್ಲಿ ಹಿನ್ನಡೆ ಕಾರಣ: ಹೊಸ ಸಿಬಿಐ ನಿರ್ದೇಶಕರ ಅಧಿಕಾರವಧಿ ಕಡಿತಕ್ಕೆ ಮುಂದಾದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...