Homeಮುಖಪುಟಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

- Advertisement -
- Advertisement -

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ಗೆ ನೋಟಿಸ್ ಜಾರಿ ಮಾಡಿದೆ.

ಕೇಂದ್ರದ ನಿರ್ದೇಶನಗಳು ಮತ್ತು ಗುಪ್ತಚರ ಬ್ಯೂರೋದ “ರಾಷ್ಟ್ರೀಯ ಭದ್ರತಾ ಕಾಳಜಿ”ಗಳನ್ನು ಪರಿಗಣಿಸಿ, ವಿಡಂಬನಾತ್ಮಕ ಡಿಜಿಟಲ್ ಸಂಘಟನೆಯ ಎಕ್ಸ್ ಹ್ಯಾಂಡಲ್ ಅನ್ನು ಮೇ 21 ರಂದು ಭಾರತದಲ್ಲಿ ತಡೆಹಿಡಿಯಲಾಯಿತು. ಈ ಸಂಘಟನೆಯು ಜಾಲತಾಣದಲ್ಲಿ ತ್ವರಿತವಾಗಿ ಪ್ರಸಿದ್ದಿಯಾಯಿತು. ಇನ್‌ಸ್ಟಾಗ್ರಾಮ್‌ನಲ್ಲಿ 22 ಮಿಲಿಯನ್‌ಗಿಂತಲೂ ಹೆಚ್ಚು ಅನುಯಾಯಿಗಳೊಂದಿಗೆ ಆನ್‌ಲೈನ್‌ನಲ್ಲಿ ವೈರಲ್ ಆಯಿತು.

ಅದರ ಎಕ್ಸ್ ಹ್ಯಾಂಡಲ್ ಅನ್ನು ನಿರ್ಬಂಧಿಸಿದ ನಂತರವೂ, ತಕ್ಷಣವೇ “ಜಿರಳೆಗಳು ಸಾಯುವುದಿಲ್ಲ” ಎಂಬ ಟ್ಯಾಗ್‌ಲೈನ್‌ನೊಂದಿಗೆ “ಜಿರಳೆ ಹಿಂತಿರುಗಿದೆ” ಎಂಬ ಮತ್ತೊಂದು ಖಾತೆಯನ್ನು ಪ್ರಾರಂಭಿಸಿತು.

ಆದರೆ, ಹಿನ್ನಡೆ ಎದುರಿಸಿದ ಏಕೈಕ ಸಾಮಾಜಿಕ ಮಾಧ್ಯಮ ಖಾತೆ ಅದರ ಎಕ್ಸ್ ಹ್ಯಾಂಡಲ್ ಮಾತ್ರಲ್ಲ. ದಿಪ್ಕೆ ಪ್ರಕಾರ, ಅವರ ಎಕ್ಸ್ ಖಾತೆ ಮತ್ತು ಸಿಜೆಪಿಯ ಅಧಿಕೃತ ಇನ್‌ಸ್ಟಾಗ್ರಾಮ್ ಪುಟವನ್ನು ಹ್ಯಾಕ್ ಮಾಡಲಾಗಿದೆ. ಸಂಘಟನೆಯ ಬ್ಯಾಕಪ್ ಇನ್‌ಸ್ಟಾಗ್ರಾಮ್ ಖಾತೆಯನ್ನು ಸಹ ತೆಗೆದುಹಾಕಲಾಗಿದೆ. ಅದರ ಎಕ್ಸ್‌ ಹ್ಯಾಂಡಲ್ ಅನ್ನು ತಡೆಹಿಡಿದ ಎರಡು ದಿನಗಳಲ್ಲಿ ವೆಬ್‌ಸೈಟ್ ಅನ್ನು ಸಹ ಮುಚ್ಚಲಾಯಿತು.

ಡಿಜಿಟಲ್ ಕ್ರಮದ ನಂತರ, ಸಿಜೆಪಿ ಸಂಸ್ಥಾಪಕರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿ, ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು “ಸರ್ವಾಧಿಕಾರಿ” ಎಂದು ಕರೆದರು.

ಏನಿದು ಜಿರಳೆ ಜನತಾ ಪಾರ್ಟಿ?

ಜಿರಳೆ ಜನತಾ ಪಾರ್ಟಿ (Cockroach Janta Party – CJP) ಎಂಬುದು ಚುನಾವಣಾ ಆಯೋಗದಿಂದ ನೋಂದಾಯಿಸಲ್ಪಟ್ಟ ನಿಜವಾದ ರಾಜಕೀಯ ಪಕ್ಷವಲ್ಲ; ಇದೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹುಟ್ಟಿಕೊಂಡ ವಿಡಂಬನಾತ್ಮಕ ಯುವ ಆಂದೋಲನ. ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಕೇವಲ ಕೆಲವೇ ದಿನಗಳಲ್ಲಿ ಕೋಟ್ಯಂತರ ಫಾಲೋವರ್ಸ್ ಗಳಿಸುವ ಮೂಲಕ ಇದು ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಅವರು ಇತ್ತೀಚಿನ ನ್ಯಾಯಾಲಯದ ವಿಚಾರಣೆಯೊಂದರಲ್ಲಿ ಕೆಲವು ನಿರುದ್ಯೋಗಿ ಯುವಕರು ಮತ್ತು ಆನ್‌ಲೈನ್ ಕಾರ್ಯಕರ್ತರನ್ನು “ಜಿರಳೆಗಳಿಗೆ” ಹೋಲಿಸಿ ಮಾತನಾಡಿದ್ದರು. ಉದ್ಯೋಗವಿಲ್ಲದ ಇಂತಹ ಯುವಕರು ನಂತರ ಪತ್ರಕರ್ತರೋ ಅಥವಾ ಸಾಮಾಜಿಕ ಮಾಧ್ಯಮ ಕಾರ್ಯಕರ್ತರೋ ಆಗಿ ಎಲ್ಲರ ಮೇಲೆ ದಾಳಿ ಮಾಡಲು ಪ್ರಾರಂಭಿಸುತ್ತಾರೆ ಎಂದು ಅವರು ಟೀಕಿಸಿದ್ದರು.

ಸಿಜೆಐ ಹೇಳಿಕೆಯಿಂದ ಬೇಸತ್ತ ಭಾರತದ ‘ಜೆನ್-ಝೀ’ (ಜೆನ್‌ ಜಿ) ಯುವ ಪೀಳಿಗೆಯು, ತಮ್ಮ ಮೇಲಿನ ಆ ವ್ಯಂಗ್ಯವನ್ನೇ ಒಂದು ಪ್ರತಿಭಟನೆಯ ಅಸ್ತ್ರವನ್ನಾಗಿ ಮಾಡಿಕೊಂಡಿತು.

ಈ ಆಕ್ರೋಶವನ್ನು ಗಮನಿಸಿದ ಡಿಜಿಟಲ್ ಮೀಡಿಯಾ ತಂತ್ರಜ್ಞ ಮತ್ತು ಬೋಸ್ಟನ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯಾದ ಅಭಿಜೀತ್ ದಿಪ್ಕೆ ಎಂಬುವವರು ಮೇ 16, 2026 ರಂದು ಜಿರಳೆ ಜನತಾ ಪಾರ್ಟಿ (ಸಿಜೆಪಿ) ಹೆಸರಿನಲ್ಲಿ ಒಂದು ವೆಬ್‌ಸೈಟ್ ಮತ್ತು ಸಾಮಾಜಿಕ ಮಾಧ್ಯಮ ಖಾತೆಗಳನ್ನು ಪ್ರಾರಂಭಿಸಿದರು.

ದೇಶದಲ್ಲಿ ಹೆಚ್ಚುತ್ತಿರುವ ಯುವ ನಿರುದ್ಯೋಗ ಮತ್ತು ಆರ್ಥಿಕ ಸಂಕಷ್ಟಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ತೀಕ್ಷ್ಣವಾದ ವ್ಯಂಗ್ಯ ಹಾಗೂ ಮೀಮ್ಸ್ ಗಳ ಮೂಲಕ ಈ ವೇದಿಕೆಯನ್ನು ಬಳಸಲಾಗುತ್ತಿದೆ. ದೇಶದ ಯುವಜನತೆಯ ಹತಾಶೆಗಳು ಮತ್ತು ವ್ಯವಸ್ಥೆಯ ವಿರುದ್ಧದ ಅಸಮಾಧಾನಕ್ಕೆ ಈ ಆಂದೋಲನವು ಒಂದು ಮುಖ್ಯ ಮುಖವಾಣಿಯಾಗಿ ಮಾರ್ಪಟ್ಟಿದೆ.

ಪ್ರಾರಂಭವಾದ ಕೆಲವೇ ದಿನಗಳಲ್ಲಿ ಈ ಕಾಕ್ರೋಚ್ ಜನತಾ ಪಾರ್ಟಿಯು ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್‌ನಂತಹ ದೊಡ್ಡ ದೊಡ್ಡ ರಾಜಕೀಯ ಪಕ್ಷಗಳ ಅಧಿಕೃತ ಖಾತೆಗಳಿಗಿಂತಲೂ ವೇಗವಾಗಿ ಬೆಳೆದು, ಇನ್‌ಸ್ಟಾಗ್ರಾಮ್‌ನಲ್ಲಿ 2 ಕೋಟಿಗೂ (20 ಮಿಲಿಯನ್) ಹೆಚ್ಚು ಫಾಲೋವರ್ಸ್ ಪಡೆದು ಜಾಗತಿಕ ಮಟ್ಟದಲ್ಲಿ ಇಂಟರ್ನೆಟ್ ಸೆನ್ಸೇಷನ್ ಆಗಿದೆ. ದೇಶದ ಹಲವು ಪ್ರಮುಖ ರಾಜಕಾರಣಿಗಳು ಸಹ ಇದರ ಅಧಿಕೃತ ವೆಬ್‌ಸೈಟ್‌ನಲ್ಲಿ ತಮಾಷೆಯಾಗಿ ಸದಸ್ಯತ್ವಕ್ಕೆ ಸಹಿ ಹಾಕಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಈ ಪಕ್ಷದ ಖಾತೆಗಳ ಮೂಲಕ ಹಂಚಿಕೊಳ್ಳಲಾಗುತ್ತಿದ್ದ ಕೆಲವು ತೀಕ್ಷ್ಣ ವಿಷಯಗಳಿಂದಾಗಿ ರಾಷ್ಟ್ರೀಯ ಭದ್ರತೆಯ ಕಾರಣಗಳನ್ನು ನೀಡಿ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಇದರ ಎಕ್ಸ್ (ಟ್ವಿಟರ್) ಖಾತೆಯನ್ನು ತಡೆಹಿಡಿಯಲಾಗಿದೆ.

ಕುತೂಹಲ ಮೂಡಿಸಿದ ಸಿಜೆಪಿ ‘ಮ್ಯಾನಿಫೆಸ್ಟೋ

ಜಿರಳೆ ಜನತಾ ಪಾರ್ಟಿ (ಸಿಜೆಪಿ) ಬಿಡುಗಡೆ ಮಾಡಿರುವ ಐದು ಅಂಶಗಳ ಮ್ಯಾನಿಫೆಸ್ಟೋ ಭಾರತದ ಇಂಟರ್ನೆಟ್ ಜಗತ್ತಿನಲ್ಲಿ ಭಾರಿ ಸದ್ದು ಮಾಡುತ್ತಿದೆ. ಇದು ಮೇಲ್ನೋಟಕ್ಕೆ ತಮಾಷೆ ಹಾಗೂ ತೀಕ್ಷ್ಣ ವ್ಯಂಗ್ಯದಿಂದ ಕೂಡಿದ್ದರೂ, ದೇಶದ ಪ್ರಸ್ತುತ ರಾಜಕೀಯ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ನೇರವಾಗಿ ಪ್ರಶ್ನಿಸುವ ಗಂಭೀರ ಆಶಯಗಳನ್ನು ಒಳಗೊಂಡಿದೆ.

ನ್ಯಾಯಾಧೀಶರ ನಿವೃತ್ತಿ ನಂತರದ ಹುದ್ದೆಗಳಿಗೆ ನಿಷೇಧ

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು (ಸಿಜೆಐ) ನಿವೃತ್ತಿಯಾದ ತಕ್ಷಣ ಅವರಿಗೆ ರಾಜ್ಯಸಭಾ ಸೀಟು ಅಥವಾ ಯಾವುದೇ ರಾಜಕೀಯ ಹುದ್ದೆಗಳನ್ನು ಬಹುಮಾನವಾಗಿ ನೀಡಬಾರದು. ಇದು ನ್ಯಾಯಾಂಗದ ಸ್ವತಂತ್ರತೆಯನ್ನು ಕಾಪಾಡಲು ಅತ್ಯಗತ್ಯ ಎಂದು ಪ್ರಣಾಳಿಕೆ ಪ್ರತಿಪಾದಿಸುತ್ತದೆ.

ಸಂಸತ್ತಿನ ಒಟ್ಟು ಸದಸ್ಯರ ಬಲವನ್ನು ಹೆಚ್ಚಿಸದೆಯೇ, ಸಂಸತ್ತು ಮತ್ತು ಕೇಂದ್ರ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಶೇಕಡಾ 50 ರಷ್ಟು ಸೀಟುಗಳನ್ನು ಕಡ್ಡಾಯವಾಗಿ ಮೀಸಲಿಡಬೇಕು.

ಚುನಾವಣೆಯಲ್ಲಿ ಗೆದ್ದ ನಂತರ ಒಂದು ರಾಜಕೀಯ ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುವ (ಪಕ್ಷಾಂತರ ಮಾಡುವ) ಯಾವುದೇ ಶಾಸಕ ಅಥವಾ ಸಂಸದನನ್ನು ಮುಂದಿನ 20 ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಮತ್ತು ಸಾರ್ವಜನಿಕ ಹುದ್ದೆ ವಹಿಸಿಕೊಳ್ಳದಂತೆ ನಿರ್ಬಂಧಿಸಬೇಕು.

ಕಾರ್ಪೊರೇಟ್ ಸಂಸ್ಥೆಗಳ (ಅಂಬಾನಿ, ಅದಾನಿ ಗ್ರೂಪ್ಸ್) ಮಾಲೀಕತ್ವದಲ್ಲಿರುವ ಮಾಧ್ಯಮ ಸಂಸ್ಥೆಗಳ ಪರವಾನಗಿಯನ್ನು ರದ್ದುಗೊಳಿಸಬೇಕು. ಪಕ್ಷಪಾತ ಧೋರಣೆ ಹೊಂದಿರುವ ‘ಗೋದಿ ಮೀಡಿಯಾ’ ಆಂಕರ್‌ಗಳ ಬ್ಯಾಂಕ್ ಖಾತೆಗಳ ಬಗ್ಗೆ ತನಿಖೆ ನಡೆಸಬೇಕು.

ದೇಶದ ಯಾವುದೇ ರಾಜ್ಯದಲ್ಲಿ ಕಾನೂನುಬದ್ಧ ಮತದಾರನ ಹೆಸರನ್ನು ವೋಟರ್ ಲಿಸ್ಟ್‌ನಿಂದ ಅಳಿಸಿಹಾಕಿದರೆ, ಅದಕ್ಕೆ ನೇರ ಹೊಣೆಯಾಗಿಸಿ ಮುಖ್ಯ ಚುನಾವಣಾ ಆಯುಕ್ತರನ್ನು (ಸಿಇಸಿ) ಕಠಿಣವಾದ ಯುಎಪಿಎ ಕಾಯ್ದೆಯಡಿ ಬಂಧಿಸಬೇಕು.

ಇವರು ತಮ್ಮ ಪಕ್ಷದ ಸಿದ್ಧಾಂತವನ್ನು ಜಾತ್ಯತೀತ, ಸಮಾಜವಾದಿ, ಪ್ರಜಾಸತ್ತಾತ್ಮಕ ಮತ್ತು ಸೋಮಾರಿ ಎಂದು ಕರೆದುಕೊಂಡಿದ್ದಾರೆ.

ಈ ಪಕ್ಷಕ್ಕೆ ಸೇರಲು ಅಭ್ಯರ್ಥಿಯು “ನಿರುದ್ಯೋಗಿ, ಸೋಮಾರಿ, ಸದಾ ಇಂಟರ್‌ನೆಟ್‌ನಲ್ಲಿ ಮುಳುಗಿರುವವನು ಮತ್ತು ವೃತ್ತಿಪರರಂತೆ ಆನ್‌ಲೈನ್‌ನಲ್ಲಿ ಹತಾಶೆ ಹೊರಹಾಕುವ ಕಲೆ ಬಲ್ಲವನಾಗಿರಬೇಕು” ಎಂದು ತಮಾಷೆಯಾಗಿ ವೆಬ್‌ಸೈಟ್‌ನಲ್ಲಿ ಬರೆಯಲಾಗಿದೆ.

ಪಕ್ಷದ ಪ್ರಧಾನ ಕಚೇರಿ ಎಲ್ಲಿದೆ ಎಂಬ ಪ್ರಶ್ನೆಗೆ, “ಎಲ್ಲಿ ವೈಫೈ (WiFi) ಸಿಗುತ್ತದೋ ಅದೇ ನಮ್ಮ ಹೆಡ್‌ಕ್ವಾರ್ಟರ್ಸ್” ಎಂದು ಉತ್ತರಿಸಿದ್ದಾರೆ. ಸಾಂಪ್ರದಾಯಿಕ ಗುರುತುಗಳನ್ನು ಬಿಟ್ಟು ಇವರು “ಸ್ಮಾರ್ಟ್‌ಫೋನ್” ಅನ್ನು ತಮ್ಮ ಪಕ್ಷದ ಚಿಹ್ನೆಯನ್ನಾಗಿ ಘೋಷಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...