Homeಮುಖಪುಟಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

- Advertisement -
- Advertisement -

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ಗೆ ನೋಟಿಸ್ ಜಾರಿ ಮಾಡಿದೆ.

ಕೇಂದ್ರದ ನಿರ್ದೇಶನಗಳು ಮತ್ತು ಗುಪ್ತಚರ ಬ್ಯೂರೋದ “ರಾಷ್ಟ್ರೀಯ ಭದ್ರತಾ ಕಾಳಜಿ”ಗಳನ್ನು ಪರಿಗಣಿಸಿ, ವಿಡಂಬನಾತ್ಮಕ ಡಿಜಿಟಲ್ ಸಂಘಟನೆಯ ಎಕ್ಸ್ ಹ್ಯಾಂಡಲ್ ಅನ್ನು ಮೇ 21 ರಂದು ಭಾರತದಲ್ಲಿ ತಡೆಹಿಡಿಯಲಾಯಿತು. ಈ ಸಂಘಟನೆಯು ಜಾಲತಾಣದಲ್ಲಿ ತ್ವರಿತವಾಗಿ ಪ್ರಸಿದ್ದಿಯಾಯಿತು. ಇನ್‌ಸ್ಟಾಗ್ರಾಮ್‌ನಲ್ಲಿ 22 ಮಿಲಿಯನ್‌ಗಿಂತಲೂ ಹೆಚ್ಚು ಅನುಯಾಯಿಗಳೊಂದಿಗೆ ಆನ್‌ಲೈನ್‌ನಲ್ಲಿ ವೈರಲ್ ಆಯಿತು.

ಅದರ ಎಕ್ಸ್ ಹ್ಯಾಂಡಲ್ ಅನ್ನು ನಿರ್ಬಂಧಿಸಿದ ನಂತರವೂ, ತಕ್ಷಣವೇ “ಜಿರಳೆಗಳು ಸಾಯುವುದಿಲ್ಲ” ಎಂಬ ಟ್ಯಾಗ್‌ಲೈನ್‌ನೊಂದಿಗೆ “ಜಿರಳೆ ಹಿಂತಿರುಗಿದೆ” ಎಂಬ ಮತ್ತೊಂದು ಖಾತೆಯನ್ನು ಪ್ರಾರಂಭಿಸಿತು.

ಆದರೆ, ಹಿನ್ನಡೆ ಎದುರಿಸಿದ ಏಕೈಕ ಸಾಮಾಜಿಕ ಮಾಧ್ಯಮ ಖಾತೆ ಅದರ ಎಕ್ಸ್ ಹ್ಯಾಂಡಲ್ ಮಾತ್ರಲ್ಲ. ದಿಪ್ಕೆ ಪ್ರಕಾರ, ಅವರ ಎಕ್ಸ್ ಖಾತೆ ಮತ್ತು ಸಿಜೆಪಿಯ ಅಧಿಕೃತ ಇನ್‌ಸ್ಟಾಗ್ರಾಮ್ ಪುಟವನ್ನು ಹ್ಯಾಕ್ ಮಾಡಲಾಗಿದೆ. ಸಂಘಟನೆಯ ಬ್ಯಾಕಪ್ ಇನ್‌ಸ್ಟಾಗ್ರಾಮ್ ಖಾತೆಯನ್ನು ಸಹ ತೆಗೆದುಹಾಕಲಾಗಿದೆ. ಅದರ ಎಕ್ಸ್‌ ಹ್ಯಾಂಡಲ್ ಅನ್ನು ತಡೆಹಿಡಿದ ಎರಡು ದಿನಗಳಲ್ಲಿ ವೆಬ್‌ಸೈಟ್ ಅನ್ನು ಸಹ ಮುಚ್ಚಲಾಯಿತು.

ಡಿಜಿಟಲ್ ಕ್ರಮದ ನಂತರ, ಸಿಜೆಪಿ ಸಂಸ್ಥಾಪಕರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿ, ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು “ಸರ್ವಾಧಿಕಾರಿ” ಎಂದು ಕರೆದರು.

ಏನಿದು ಜಿರಳೆ ಜನತಾ ಪಾರ್ಟಿ?

ಜಿರಳೆ ಜನತಾ ಪಾರ್ಟಿ (Cockroach Janta Party – CJP) ಎಂಬುದು ಚುನಾವಣಾ ಆಯೋಗದಿಂದ ನೋಂದಾಯಿಸಲ್ಪಟ್ಟ ನಿಜವಾದ ರಾಜಕೀಯ ಪಕ್ಷವಲ್ಲ; ಇದೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹುಟ್ಟಿಕೊಂಡ ವಿಡಂಬನಾತ್ಮಕ ಯುವ ಆಂದೋಲನ. ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಕೇವಲ ಕೆಲವೇ ದಿನಗಳಲ್ಲಿ ಕೋಟ್ಯಂತರ ಫಾಲೋವರ್ಸ್ ಗಳಿಸುವ ಮೂಲಕ ಇದು ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಅವರು ಇತ್ತೀಚಿನ ನ್ಯಾಯಾಲಯದ ವಿಚಾರಣೆಯೊಂದರಲ್ಲಿ ಕೆಲವು ನಿರುದ್ಯೋಗಿ ಯುವಕರು ಮತ್ತು ಆನ್‌ಲೈನ್ ಕಾರ್ಯಕರ್ತರನ್ನು “ಜಿರಳೆಗಳಿಗೆ” ಹೋಲಿಸಿ ಮಾತನಾಡಿದ್ದರು. ಉದ್ಯೋಗವಿಲ್ಲದ ಇಂತಹ ಯುವಕರು ನಂತರ ಪತ್ರಕರ್ತರೋ ಅಥವಾ ಸಾಮಾಜಿಕ ಮಾಧ್ಯಮ ಕಾರ್ಯಕರ್ತರೋ ಆಗಿ ಎಲ್ಲರ ಮೇಲೆ ದಾಳಿ ಮಾಡಲು ಪ್ರಾರಂಭಿಸುತ್ತಾರೆ ಎಂದು ಅವರು ಟೀಕಿಸಿದ್ದರು.

ಸಿಜೆಐ ಹೇಳಿಕೆಯಿಂದ ಬೇಸತ್ತ ಭಾರತದ ‘ಜೆನ್-ಝೀ’ (ಜೆನ್‌ ಜಿ) ಯುವ ಪೀಳಿಗೆಯು, ತಮ್ಮ ಮೇಲಿನ ಆ ವ್ಯಂಗ್ಯವನ್ನೇ ಒಂದು ಪ್ರತಿಭಟನೆಯ ಅಸ್ತ್ರವನ್ನಾಗಿ ಮಾಡಿಕೊಂಡಿತು.

ಈ ಆಕ್ರೋಶವನ್ನು ಗಮನಿಸಿದ ಡಿಜಿಟಲ್ ಮೀಡಿಯಾ ತಂತ್ರಜ್ಞ ಮತ್ತು ಬೋಸ್ಟನ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯಾದ ಅಭಿಜೀತ್ ದಿಪ್ಕೆ ಎಂಬುವವರು ಮೇ 16, 2026 ರಂದು ಜಿರಳೆ ಜನತಾ ಪಾರ್ಟಿ (ಸಿಜೆಪಿ) ಹೆಸರಿನಲ್ಲಿ ಒಂದು ವೆಬ್‌ಸೈಟ್ ಮತ್ತು ಸಾಮಾಜಿಕ ಮಾಧ್ಯಮ ಖಾತೆಗಳನ್ನು ಪ್ರಾರಂಭಿಸಿದರು.

ದೇಶದಲ್ಲಿ ಹೆಚ್ಚುತ್ತಿರುವ ಯುವ ನಿರುದ್ಯೋಗ ಮತ್ತು ಆರ್ಥಿಕ ಸಂಕಷ್ಟಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ತೀಕ್ಷ್ಣವಾದ ವ್ಯಂಗ್ಯ ಹಾಗೂ ಮೀಮ್ಸ್ ಗಳ ಮೂಲಕ ಈ ವೇದಿಕೆಯನ್ನು ಬಳಸಲಾಗುತ್ತಿದೆ. ದೇಶದ ಯುವಜನತೆಯ ಹತಾಶೆಗಳು ಮತ್ತು ವ್ಯವಸ್ಥೆಯ ವಿರುದ್ಧದ ಅಸಮಾಧಾನಕ್ಕೆ ಈ ಆಂದೋಲನವು ಒಂದು ಮುಖ್ಯ ಮುಖವಾಣಿಯಾಗಿ ಮಾರ್ಪಟ್ಟಿದೆ.

ಪ್ರಾರಂಭವಾದ ಕೆಲವೇ ದಿನಗಳಲ್ಲಿ ಈ ಕಾಕ್ರೋಚ್ ಜನತಾ ಪಾರ್ಟಿಯು ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್‌ನಂತಹ ದೊಡ್ಡ ದೊಡ್ಡ ರಾಜಕೀಯ ಪಕ್ಷಗಳ ಅಧಿಕೃತ ಖಾತೆಗಳಿಗಿಂತಲೂ ವೇಗವಾಗಿ ಬೆಳೆದು, ಇನ್‌ಸ್ಟಾಗ್ರಾಮ್‌ನಲ್ಲಿ 2 ಕೋಟಿಗೂ (20 ಮಿಲಿಯನ್) ಹೆಚ್ಚು ಫಾಲೋವರ್ಸ್ ಪಡೆದು ಜಾಗತಿಕ ಮಟ್ಟದಲ್ಲಿ ಇಂಟರ್ನೆಟ್ ಸೆನ್ಸೇಷನ್ ಆಗಿದೆ. ದೇಶದ ಹಲವು ಪ್ರಮುಖ ರಾಜಕಾರಣಿಗಳು ಸಹ ಇದರ ಅಧಿಕೃತ ವೆಬ್‌ಸೈಟ್‌ನಲ್ಲಿ ತಮಾಷೆಯಾಗಿ ಸದಸ್ಯತ್ವಕ್ಕೆ ಸಹಿ ಹಾಕಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಈ ಪಕ್ಷದ ಖಾತೆಗಳ ಮೂಲಕ ಹಂಚಿಕೊಳ್ಳಲಾಗುತ್ತಿದ್ದ ಕೆಲವು ತೀಕ್ಷ್ಣ ವಿಷಯಗಳಿಂದಾಗಿ ರಾಷ್ಟ್ರೀಯ ಭದ್ರತೆಯ ಕಾರಣಗಳನ್ನು ನೀಡಿ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಇದರ ಎಕ್ಸ್ (ಟ್ವಿಟರ್) ಖಾತೆಯನ್ನು ತಡೆಹಿಡಿಯಲಾಗಿದೆ.

ಕುತೂಹಲ ಮೂಡಿಸಿದ ಸಿಜೆಪಿ ‘ಮ್ಯಾನಿಫೆಸ್ಟೋ

ಜಿರಳೆ ಜನತಾ ಪಾರ್ಟಿ (ಸಿಜೆಪಿ) ಬಿಡುಗಡೆ ಮಾಡಿರುವ ಐದು ಅಂಶಗಳ ಮ್ಯಾನಿಫೆಸ್ಟೋ ಭಾರತದ ಇಂಟರ್ನೆಟ್ ಜಗತ್ತಿನಲ್ಲಿ ಭಾರಿ ಸದ್ದು ಮಾಡುತ್ತಿದೆ. ಇದು ಮೇಲ್ನೋಟಕ್ಕೆ ತಮಾಷೆ ಹಾಗೂ ತೀಕ್ಷ್ಣ ವ್ಯಂಗ್ಯದಿಂದ ಕೂಡಿದ್ದರೂ, ದೇಶದ ಪ್ರಸ್ತುತ ರಾಜಕೀಯ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ನೇರವಾಗಿ ಪ್ರಶ್ನಿಸುವ ಗಂಭೀರ ಆಶಯಗಳನ್ನು ಒಳಗೊಂಡಿದೆ.

ನ್ಯಾಯಾಧೀಶರ ನಿವೃತ್ತಿ ನಂತರದ ಹುದ್ದೆಗಳಿಗೆ ನಿಷೇಧ

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು (ಸಿಜೆಐ) ನಿವೃತ್ತಿಯಾದ ತಕ್ಷಣ ಅವರಿಗೆ ರಾಜ್ಯಸಭಾ ಸೀಟು ಅಥವಾ ಯಾವುದೇ ರಾಜಕೀಯ ಹುದ್ದೆಗಳನ್ನು ಬಹುಮಾನವಾಗಿ ನೀಡಬಾರದು. ಇದು ನ್ಯಾಯಾಂಗದ ಸ್ವತಂತ್ರತೆಯನ್ನು ಕಾಪಾಡಲು ಅತ್ಯಗತ್ಯ ಎಂದು ಪ್ರಣಾಳಿಕೆ ಪ್ರತಿಪಾದಿಸುತ್ತದೆ.

ಸಂಸತ್ತಿನ ಒಟ್ಟು ಸದಸ್ಯರ ಬಲವನ್ನು ಹೆಚ್ಚಿಸದೆಯೇ, ಸಂಸತ್ತು ಮತ್ತು ಕೇಂದ್ರ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಶೇಕಡಾ 50 ರಷ್ಟು ಸೀಟುಗಳನ್ನು ಕಡ್ಡಾಯವಾಗಿ ಮೀಸಲಿಡಬೇಕು.

ಚುನಾವಣೆಯಲ್ಲಿ ಗೆದ್ದ ನಂತರ ಒಂದು ರಾಜಕೀಯ ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುವ (ಪಕ್ಷಾಂತರ ಮಾಡುವ) ಯಾವುದೇ ಶಾಸಕ ಅಥವಾ ಸಂಸದನನ್ನು ಮುಂದಿನ 20 ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಮತ್ತು ಸಾರ್ವಜನಿಕ ಹುದ್ದೆ ವಹಿಸಿಕೊಳ್ಳದಂತೆ ನಿರ್ಬಂಧಿಸಬೇಕು.

ಕಾರ್ಪೊರೇಟ್ ಸಂಸ್ಥೆಗಳ (ಅಂಬಾನಿ, ಅದಾನಿ ಗ್ರೂಪ್ಸ್) ಮಾಲೀಕತ್ವದಲ್ಲಿರುವ ಮಾಧ್ಯಮ ಸಂಸ್ಥೆಗಳ ಪರವಾನಗಿಯನ್ನು ರದ್ದುಗೊಳಿಸಬೇಕು. ಪಕ್ಷಪಾತ ಧೋರಣೆ ಹೊಂದಿರುವ ‘ಗೋದಿ ಮೀಡಿಯಾ’ ಆಂಕರ್‌ಗಳ ಬ್ಯಾಂಕ್ ಖಾತೆಗಳ ಬಗ್ಗೆ ತನಿಖೆ ನಡೆಸಬೇಕು.

ದೇಶದ ಯಾವುದೇ ರಾಜ್ಯದಲ್ಲಿ ಕಾನೂನುಬದ್ಧ ಮತದಾರನ ಹೆಸರನ್ನು ವೋಟರ್ ಲಿಸ್ಟ್‌ನಿಂದ ಅಳಿಸಿಹಾಕಿದರೆ, ಅದಕ್ಕೆ ನೇರ ಹೊಣೆಯಾಗಿಸಿ ಮುಖ್ಯ ಚುನಾವಣಾ ಆಯುಕ್ತರನ್ನು (ಸಿಇಸಿ) ಕಠಿಣವಾದ ಯುಎಪಿಎ ಕಾಯ್ದೆಯಡಿ ಬಂಧಿಸಬೇಕು.

ಇವರು ತಮ್ಮ ಪಕ್ಷದ ಸಿದ್ಧಾಂತವನ್ನು ಜಾತ್ಯತೀತ, ಸಮಾಜವಾದಿ, ಪ್ರಜಾಸತ್ತಾತ್ಮಕ ಮತ್ತು ಸೋಮಾರಿ ಎಂದು ಕರೆದುಕೊಂಡಿದ್ದಾರೆ.

ಈ ಪಕ್ಷಕ್ಕೆ ಸೇರಲು ಅಭ್ಯರ್ಥಿಯು “ನಿರುದ್ಯೋಗಿ, ಸೋಮಾರಿ, ಸದಾ ಇಂಟರ್‌ನೆಟ್‌ನಲ್ಲಿ ಮುಳುಗಿರುವವನು ಮತ್ತು ವೃತ್ತಿಪರರಂತೆ ಆನ್‌ಲೈನ್‌ನಲ್ಲಿ ಹತಾಶೆ ಹೊರಹಾಕುವ ಕಲೆ ಬಲ್ಲವನಾಗಿರಬೇಕು” ಎಂದು ತಮಾಷೆಯಾಗಿ ವೆಬ್‌ಸೈಟ್‌ನಲ್ಲಿ ಬರೆಯಲಾಗಿದೆ.

ಪಕ್ಷದ ಪ್ರಧಾನ ಕಚೇರಿ ಎಲ್ಲಿದೆ ಎಂಬ ಪ್ರಶ್ನೆಗೆ, “ಎಲ್ಲಿ ವೈಫೈ (WiFi) ಸಿಗುತ್ತದೋ ಅದೇ ನಮ್ಮ ಹೆಡ್‌ಕ್ವಾರ್ಟರ್ಸ್” ಎಂದು ಉತ್ತರಿಸಿದ್ದಾರೆ. ಸಾಂಪ್ರದಾಯಿಕ ಗುರುತುಗಳನ್ನು ಬಿಟ್ಟು ಇವರು “ಸ್ಮಾರ್ಟ್‌ಫೋನ್” ಅನ್ನು ತಮ್ಮ ಪಕ್ಷದ ಚಿಹ್ನೆಯನ್ನಾಗಿ ಘೋಷಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...