Homeಮುಖಪುಟದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

- Advertisement -
- Advertisement -

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ ಜಮಾಯಿಸುವಂತೆ ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ.

ಇದಕ್ಕೂ ಮುನ್ನ, ಪ್ರತಿಭಟನೆಗೆ ಜಂಟಿಯಾಗಿ ಅನುಮತಿ ಕೋರಲು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಬರುವಂತೆ ಸಿಜೆಪಿ ಬೆಂಬಲಿಗರಿಗೆ ಮನವಿ ಮಾಡಲಾಗಿತ್ತು. ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಈ ಪ್ರತಿಭಟನೆಯನ್ನು ಘೋಷಿಸಿದೆ.

“ದೆಹಲಿ ಪೊಲೀಸರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಿದ್ದಾರೆ. ಹಾಗಾಗಿ ನಾವು ಈಗ ನೇರವಾಗಿ ಜಂತರ್ ಮಂತರ್‌ನಲ್ಲಿಯೇ ಜಮಾಯಿಸಬಹುದು.ಈ ಮೊದಲು ಯೋಜಿಸಿದಂತೆ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಹೋಗುವ ಅಗತ್ಯವಿಲ್ಲ” ಎಂದು ಸಿಜೆಪಿ ತನ್ನ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.

“ಕಾಕ್ರೋಚ್‌ಗಳು ಬರುತ್ತಿದ್ದಾರೆ, ಧರ್ಮೇಂದ್ರ ಪ್ರಧಾನ್ ಹೋಗುತ್ತಿದ್ದಾರೆ” ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ.

ಅಮೆರಿಕದಿಂದ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ದೀಪ್ಕೆ ತಮ್ಮ ಎಕ್ಸ್ ಖಾತೆಯಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದು, “ಪ್ರೀತಿ ಮತ್ತು ಶಾಂತಿಯಿಂದ” ಪ್ರತಿಭಟನೆಯನ್ನು ಮುನ್ನಡೆಸುವಂತೆ ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ.

ಪ್ರತಿಭಟನೆಗೆ ಪುಸ್ತಕ ಮತ್ತು ತ್ರಿವರ್ಣ ಧ್ವಜವನ್ನು ಕೊಂಡೊಯ್ಯುವಂತೆಯೂ ಅವರು ಮನವಿ ಮಾಡಿದ್ದಾರೆ.

“ಬಂದಿಳಿದಿದ್ದೇನೆ. ಜಂತರ್ ಮಂತರ್‌ನಲ್ಲಿ ನಿಮ್ಮನ್ನೆಲ್ಲಾ ಭೇಟಿಯಾಗಲು ಎದುರು ನೋಡುತ್ತಿದ್ದೇನೆ. ಒಂದು ಪುಸ್ತಕ ಮತ್ತು ನಮ್ಮ ತಿರಂಗಾವನ್ನು ಕೊಂಡೊಯ್ಯುವುದನ್ನು ಮರೆಯಬೇಡಿ! ಕರುಣೆ ಮತ್ತು ಕೃತಜ್ಞತೆಯ ಸಂಕೇತವಾಗಿ ಪೊಲೀಸ್ ಸಿಬ್ಬಂದಿಗೆ ಹೂವುಗಳನ್ನು ನೀಡಿ. ಈ ಚಳವಳಿಯನ್ನು ನಾವು ಪ್ರೀತಿ ಮತ್ತು ಶಾಂತಿಯಿಂದ ಮುನ್ನಡೆಸಬೇಕಾಗಿದೆ!” ಎಂದು ದೀಪ್ಕೆ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ಭಾರತಕ್ಕೆ ಬರುತ್ತಿದ್ದೇನೆ… ನನ್ನ ಭವಿಷ್ಯವನ್ನು ಸಂವಿಧಾನದ ಕೈಗೆ ಒಪ್ಪಿಸುತ್ತಿದ್ದೇನೆ. #ಜೈಭೀಮ್,” ಎಂದು ದೀಪ್ಕೆ ತಮ್ಮ ಹಿಂದಿನ ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು.

ದೀಪ್ಕೆ ಅವರು ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ಪ್ರತಿಕ್ರಿಯೆಯಾಗಿ ಪ್ರಾರಂಭಿಸಿದ ಡಿಜಿಟಲ್ ವೇದಿಕೆಯಾದ ಸಿಜೆಪಿ, ಮುಖ್ಯವಾಗಿ ದೇಶದ ಯುವಜನತೆಯಿಂದ ಆನ್‌ಲೈನ್‌ನಲ್ಲಿ ಗಮನಾರ್ಹ ಬೆಂಬಲವನ್ನು ಗಳಿಸಿದೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೀಟ್, ಸಿಬಿಎಸ್ಇ, ಸಿಯುಇಟಿ ಮತ್ತು ಎಸ್‌ಎಸ್‌ಸಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಅಕ್ರಮಗಳ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯನ್ನು ನಡೆಸುವ ಮೂಲಕ, ಸಿಜೆಪಿ ಒಂದು ವ್ಯಂಗ್ಯಭರಿತ ಆನ್‌ಲೈನ್ ವೇದಿಕೆಯಿಂದ ಸಂಘಟಿತ ಆಂದೋಲನವಾಗಿ ಹೊರಹೊಮ್ಮುವ ಗುರಿಯನ್ನು ಹೊಂದಿದೆ.

ಹವಾಮಾನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ಈ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದು, ಒಂದು ವೇಳೆ ದೀಪ್ಕೆ ಅವರನ್ನು ಬಂಧಿಸಿದರೆ ತಾವು ಆರು ವಾರಗಳ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಕಾಕ್ರೋಚ್‌ಗಳ ಪ್ರತಿಭಟನೆ ಹಿನ್ನೆಲೆ, ದೆಹಲಿ ವಿಮಾನ ನಿಲ್ದಾಣ, ಪ್ರಮುಖ ರೈಲ್ವೆ ನಿಲ್ದಾಣಗಳು, ಅಂತಾರಾಜ್ಯ ಬಸ್ ನಿಲ್ದಾಣಗಳು ಮತ್ತು ದೆಹಲಿಯನ್ನು ನೆರೆಹೊರೆಯ ರಾಜ್ಯಗಳೊಂದಿಗೆ ಸಂಪರ್ಕಿಸುವ ಗಡಿ ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಬಲಪಡಿಸಲಾಗಿದೆ.

ಮುನ್ನೆಚ್ಚರಿಕೆ ಭದ್ರತಾ ಕ್ರಮಗಳ ಭಾಗವಾಗಿ ನವದೆಹಲಿ ಜಿಲ್ಲೆ ಮತ್ತು ಇತರ ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲು 1,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಮೀಸಲಿಡಲಾಗಿದೆ ಎಂದು ವರದಿಯಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪ್ರಮುಖ ಜಂಕ್ಷನ್‌ಗಳು, ಮಾರುಕಟ್ಟೆ ಪ್ರದೇಶಗಳು ಮತ್ತು ಇತರ ಸೂಕ್ಷ್ಮ ಸ್ಥಳಗಳಲ್ಲಿಯೂ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ವರದಿಗಳು ಹೇಳಿವೆ.

ಹೆಚ್ಚುವರಿ ಭದ್ರತಾ ಕ್ರಮಗಳ ಭಾಗವಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದ ಹೊರಗೆ ಹಲವಾರು ಪದರಗಳ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ, ಹಾಗೆಯೇ ಗಡಿ ಪ್ರದೇಶಗಳಲ್ಲಿ ಮತ್ತು ಮಧ್ಯ ದೆಹಲಿಗೆ ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿ ವಾಹನ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ವ್ಯವಸ್ಥೆಗಳ ಭಾಗವಾಗಿ, ಶುಕ್ರವಾರ ದೆಹಲಿ ವಿಮಾನ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಪ್ರಮಾಣದ ಪೊಲೀಸ್ ಸಿಬ್ಬಂದಿ ನಿಯೋಜನೆ ಕಂಡುಬಂದಿತ್ತು.








 




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...