Homeಕರ್ನಾಟಕಬಿಜೆಪಿ ವಿರುದ್ಧ ತೆಂಗು ಬೆಳೆಗಾರರ ಆಕ್ರೋಶ

ಬಿಜೆಪಿ ವಿರುದ್ಧ ತೆಂಗು ಬೆಳೆಗಾರರ ಆಕ್ರೋಶ

- Advertisement -
|  ಆಣೆಕಟ್ಟೆ ವಿಶ್ವನಾಥ್ |
ತೆಂಗು ಬೆಳೆಗಾರರ ಸಂಘ
ತೆಂಗು ಬೆಳೆಗಾರರ ಮಟ್ಟಿಗೆ ರಾಜ್ಯದಲ್ಲಿ ಒಂದು ಸಹಕಾರಿ ಚಳವಳಿ ಗುಪ್ತಗಾಮಿನಿಯಾಗಿ ಹರಿಯುತ್ತಿದ್ದ ಸಂಕ್ರಮಣ ಕಾಲ ಇದು. ಇದಕ್ಕೆ ಮುಖ್ಯ ಕಾರಣ ಶ್ರೀ ಟಿ.ಕೆ.ಜೋಶ್ ಎಂಬ ದೂರಗಾಮಿ ದೃಷ್ಟಿ ಹೊಂದಿದ್ದ ಐಎಎಸ್ ಅಧಿಕಾರಿ 2002ರಲ್ಲಿ ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಬಂದಿದ್ದು. ಇವರು ಕೇರಳ ಸರ್ಕಾರದಲ್ಲಿ ಕುಟುಂಬಶ್ರೀ ಎಂಬ ಮಹಿಳಾ ಸ್ವ ಸಹಾಯ ಸಂಘಗಳ ಯೋಜನೆ ಪ್ರಾರಂಭಿಸಿ ಯಶಸ್ವಿ ಯಾಗಿದ್ದವರು. ಭಾರತ ದೇಶವನ್ನು ತೆಂಗು ಕ್ಷೇತ್ರದಲ್ಲಿ ಜಾಗತಿಕ ಮುಂದಾಳಾಗಿಸುವ ದೂರದೃಷ್ಟಿ ಹೊಂದಿದ್ದರು. ಅದಕ್ಕಾಗಿ ದೇಶದಾದ್ಯಂತ ತೆಂಗು ಉತ್ಪಾದಕರ ಕಂಪನಿ ಮತ್ತು ಒಕ್ಕೂಟ ಸ್ಥಾಪಿಸಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಮೌಲ್ಯವರ್ಧನೆ ಮೂಲಕ ಸಶಕ್ತೀಕರಣಕ್ಕೆ ಮುಂದಾಗಿದ್ದರು. ಇವರು ಎಷ್ಟೊಂದು ಸಕಾರಾತ್ಮಕ ವಾಗಿದ್ದರೆಂದರೆ, ಇವರ ಜೊತೆಗೆ ಒಂದು ದಿನ ಕಳೆದರೆ ನಮಗೆಲ್ಲ ಒಂದು ವರ್ಷಕ್ಕಾಗುವಷ್ಟು ಎನರ್ಜಿ ಸಿಗುತ್ತಿತ್ತು. ಕೇರಳ ಸರ್ಕಾರ ನೀರಾ ನೀತಿ ರೂಪಿಸಲು ಉಮ್ಮನ್ ಚಾಂಡಿ ಜೊತೆಗೆ ಸೇರಿ ಯಶಸ್ವಿಯಾಗಿ ಮಾಡಿದ್ದರು. ಕರ್ನಾಟಕದಲ್ಲಿ ನೀರಾ ನೀತಿ ರೂಪಿಸಲು ನಮ್ಮ ಬೆನ್ನು ತಟ್ಟಿ ಸರ್ಕಾರದ ಜೊತೆಯಲ್ಲಿ ಮಾತುಕತೆ ನಡೆಸಲು ಅವಶ್ಯಕ ಎಲ್ಲಾ ಬೆಂಬಲ ನೀಡಿದ್ದರು. ಇದರಿಂದ ಕರ್ನಾಟಕದಲ್ಲಿಯೂ ಸಿಹಿ ನೀರಾ ನೀತಿ ಜಾರಿಗೆ ಬಂತು.
ತೆಂಗು ಬೆಳೆಗಾರರ ಸಂಘದ ಉದ್ಘಾಟನೆ
ಕರ್ನಾಟಕದ ತೆಂಗು ಕ್ಷೇತ್ರದಲ್ಲಿ ಕೇರಳದಲ್ಲಿ ಆದಂತಹ ಬದಲಾವಣೆ ಆಗಲಿಲ್ಲ. ಅದಕ್ಕೆ ಮುಖ್ಯ ಕಾರಣ ಕರ್ನಾಟಕದ ನಿರ್ದೇಶಕರು ಅಂತಹ ದಕ್ಷ ಅಧಿಕಾರಿಗಳಾಗಿರಲಿಲ್ಲ. ಕೇರಳದಲ್ಲಿ ತೆಂಗು ಅಭಿವೃದ್ಧಿ ಮಂಡಳಿಯ ಕೇಂದ್ರ ಕಛೇರಿ ಇದ್ದದ್ದು ಕೇರಳ ರೈತರಿಗೆ ಪೂರಕವಾಗಿತ್ತು. ಇಂತಹ ಸಂದರ್ಭದಲ್ಲಿ ನಮ್ಮ ಹೋರಾಟದ ಫಲವಾಗಿ ರಾಜ್ಯದಲ್ಲಿ ಸುಮಾರು ಹದಿನಾಲ್ಕು ತೆಂಗು ಉತ್ಪಾದಕರ ಕಂಪನಿಗಳು ನೂರೈವತ್ತಕ್ಕು ಅಧಿಕ ಒಕ್ಕೂಟಗಳು ರಾಜ್ಯದಾದ್ಯಂತ ಸ್ಥಾಪನೆಯಾದವು. ಇವುಗಳ ಅಷ್ಟೊಂದು ಪರಿಣಾಮಕಾರಿಯಾಗಿ  ಕೆಲಸ ಮಾಡಲು ದಕ್ಷ ಅಧಿಕಾರಿಯ ಕೊರತೆಯನ್ನು ಮನಗಂಡು ತನ್ನ ಬಲಗೈನಂತಿದ್ದ ಶ್ರೀ ಹೇಮಚಂದ್ರ ಅವರನ್ನು ಕರ್ನಾಟಕಕ್ಕೆ ನಿರ್ದೇಶಕರಾಗಿ ಶ್ರೀ ಟಿ ಕೆ ಜೋಶ್ ಕಳಿಸಿಕೊಟ್ಟರು.
ಶ್ರೀ ಹೇಮಚಂದ್ರ ಕರ್ನಾಟಕಕ್ಕೆ ಬಂದ ಮೇಲೆ ತೆಂಗು ಬೆಳೆಗಾರರ ಒಕ್ಕೂಟ ಮತ್ತು ಕಂಪನಿಗಳಿಗೆ ಆನೆ ಬಲ ಬಂತು. ಜಾತ್ಯಾತೀತ ವಾಗಿ ಮತ್ತು ಪ್ರದೇಶಾತೀತವಾಗಿ ಎಲ್ಲರ ಬೆನ್ನು ತಟ್ಟಿ ಬೆಂಬಲಿಸಿದರು. ಇದರ ಪರಿಣಾಮವಾಗಿ ತೆಂಗು ಉತ್ಪಾದಕರ ಕಂಪನಿ ಮತ್ತು ಒಕ್ಕೂಟಗಳಿಗೆ ಆನೆ ಬಲ ಬಂತು. ಐತಿಹಾಸಿಕವಾಗಿ ಕೇಂದ್ರದಿಂದ ಕರ್ನಾಟಕ ರಾಜ್ಯಕ್ಕೆ ಅತೀ ಹೆಚ್ಚು ಅನುದಾನ ಹರಿದು ಬಂದವು. ವರ್ಷಕ್ಕೆ ಸರಾಸರಿ ನಾಲ್ಕು ಕೋಟಿ ಬರುತ್ತಿದ್ದ ಅನುದಾನ ಎಂಬತ್ತು ಕೋಟಿಗೆ ಏರಿತು.  ಇದೇ ಸಮಯದಲ್ಲಿ ಟಿಕೆ ಜೋಶ್ ಅವರನ್ನು ಬಿಜೆಪಿ ಸರ್ಕಾರ ತೆಗೆದು ಹಾಕಿತು. ಈ ಸ್ಥಾನಕ್ಕೆ ಬಿಜೆಪಿ ವಿಚಾರದಲ್ಲಿ ನಂಬಿಕೆ ಉಳ್ಳ ರಾಜು ನಾರಾಯಣ ಸ್ವಾಮಿ ಅಧಿಕಾರವಹಿಸಿಕೊಂಡರು.
ಹೇಮಚಂದ್ರ ಅವರು ತಮ್ಮ ಕೆಲಸಗಳನ್ನು ಪ್ರಾಮಾಣಿಕ ವಾಗಿ ನಡೆಸುತ್ತಿದ್ದರು. ನಮಗೆ ಟಿಕೆ ಜೋಶ್ ಇಲ್ಲ ಎಂಬ ಭಾವನೆ ಬರದಂತೆ ವೈಯಕ್ತಿಕವಾಗಿ ನಮ್ಮ ಜೊತೆ ನಿಂತರು. ಯಾವುದೇ ಒಕ್ಕೂಟ ಕಂಪನಿ ಯಾವುದೇ ಕೆಲಸ ಕಾರ್ಯ ಕೇಳಿದರೂ ಪ್ರಾಮಾಣಿಕವಾಗಿ ಬೆಂಬಲ ನೀಡುತ್ತಿದ್ದರು. ಯೋಜನೆಗಳ ಅನುಷ್ಠಾನದಲ್ಲಿ ಇದ್ದ ನ್ಯೂನತೆಗಳನ್ನು ನಿವಾರಿಸಲು ಅನೇಕ ಬಗೆಯ ಬದಲಾವಣೆ ತಂದರು.
ಹೇಮಚಂದ್ರ
ಇದೇ ಸಮಯದಲ್ಲಿ ಬಿಜೆಪಿಯ ಕಣ್ಣು ಇವರ ಮೇಲೆ ಬಿತ್ತು. ಬಿಜೆಪಿಯ ಮಾಜಿ ಎಂಎಲ್ ಸಿ ಮನೋಹರ ಮಸ್ಕಿ ಗುಂಪು ಇವರ ಮೇಲೆ ಒತ್ತಡ ಹೇರಿ ತಮಗೆ ಬೇಕಾದಂತೆ ಲಾಬಿ ನಡೆಸಲು ಪ್ರಯತ್ನಿಸಿದರು. ಇದ್ಯಾವುದಕ್ಕೂ ಜಗ್ಗದ ಹೇಮಚಂದ್ರ “ತೆಂಗು ಅಭಿವೃದ್ಧಿ ಮಂಡಳಿಯ ಕಛೇರಿಯನ್ನು ಬಿಜೆಪಿಯ ಕಛೇರಿಯನ್ನಾಗಿ ಮಾಡಿಕೊಳ್ಳಲು ಬಿಡೆನು” ಎಂಬ ಸಂದೇಶ ರವಾನಿಸಿದರು. ಇದರ ಪರಿಣಾಮವಾಗಿ ಮನೋರ ಮಸ್ಕಿಯವರು (ಇವರ ಬಗ್ಗೆ ತಿಳಿಯಲು ಆರ್ ಎಸ್ ಎಸ್ ಹಿರಿಯರಾದ ಬೇಳೂರು ಸುದರ್ಶನ ಅವರನ್ನು ಕೇಳಿರಿ. ಅವರು ತಮ್ಮ ಮಿತ್ರಮಾಧ್ಯಮ ವೆಬ್ ಸೈಟ್ ನಲ್ಲಿ ಮಸ್ಕಿಯ ಸ್ಕೀಮುಗಳ ಬಗ್ಗೆ ಬರೆದಿದ್ದಾರೆ. ) ಚಿಕ್ಕನಾಯಕನಹಳ್ಳಿ ಎಮ್.ಎಲ್.ಎ ಜೆ.ಸಿ ಮಾಧುಸ್ವಾಮಿ ಜೊತೆ ಸೇರಿ ಹೇಮಚಂದ್ರ ವಿರುದ್ಧ ತಿರುಗಿ ಬಿದ್ದರು.
ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷರ ಮೂಲಕ ಹೇಮಚಂದ್ರ ವಿರುದ್ಧ ಪಿತೂರಿ ನಡೆಸಿ ಅವರನ್ನು ಅಮಾನತುಗೊಳಿಸುವಲ್ಲಿ ಯಶಸ್ವಿಯಾದರು. ಈ ವಿಚಾರವನ್ನು ಸ್ವತಃ ಮಾಧುಸ್ವಾಮಿಯೇ  ವಿಧಾನಸಭೆಯಲ್ಲಿ ಮಾತನಾಡಿದ್ದಾರೆ. ಇಲ್ಲಿಂದ ತೆಂಗು ಬೆಳೆಗಾರರ ಯಶಸ್ಸಿಗೆ ದುಡಿಯುತ್ತಿದ್ದ ಮಹಾಚೇತನವೊಂದು ನಮ್ಮಿಂದ ದೂರವಾಯಿತು. ಈಗ ಇದರ ವಿರುದ್ಧ ತೆಂಗು ಬೆಳೆಗಾರರು ಚಳವಳಿ ನಡೆಸುತ್ತಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸುವ ಪಣ ತೊಟ್ಟಿದ್ದಾರೆ. ಕರ್ನಾಟಕದ ತೆಂಗು ಬೆಳೆಗಾರರ ಅಸ್ಮಿತೆಯಂತಿದ್ದ ಹೇಮಚಂದ್ರ ಮರಳಿ ಬರಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದಾರೆ.
(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...