Homeಕರ್ನಾಟಕಬಿಜೆಪಿ ವಿರುದ್ಧ ತೆಂಗು ಬೆಳೆಗಾರರ ಆಕ್ರೋಶ

ಬಿಜೆಪಿ ವಿರುದ್ಧ ತೆಂಗು ಬೆಳೆಗಾರರ ಆಕ್ರೋಶ

- Advertisement -
|  ಆಣೆಕಟ್ಟೆ ವಿಶ್ವನಾಥ್ |
ತೆಂಗು ಬೆಳೆಗಾರರ ಸಂಘ
ತೆಂಗು ಬೆಳೆಗಾರರ ಮಟ್ಟಿಗೆ ರಾಜ್ಯದಲ್ಲಿ ಒಂದು ಸಹಕಾರಿ ಚಳವಳಿ ಗುಪ್ತಗಾಮಿನಿಯಾಗಿ ಹರಿಯುತ್ತಿದ್ದ ಸಂಕ್ರಮಣ ಕಾಲ ಇದು. ಇದಕ್ಕೆ ಮುಖ್ಯ ಕಾರಣ ಶ್ರೀ ಟಿ.ಕೆ.ಜೋಶ್ ಎಂಬ ದೂರಗಾಮಿ ದೃಷ್ಟಿ ಹೊಂದಿದ್ದ ಐಎಎಸ್ ಅಧಿಕಾರಿ 2002ರಲ್ಲಿ ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಬಂದಿದ್ದು. ಇವರು ಕೇರಳ ಸರ್ಕಾರದಲ್ಲಿ ಕುಟುಂಬಶ್ರೀ ಎಂಬ ಮಹಿಳಾ ಸ್ವ ಸಹಾಯ ಸಂಘಗಳ ಯೋಜನೆ ಪ್ರಾರಂಭಿಸಿ ಯಶಸ್ವಿ ಯಾಗಿದ್ದವರು. ಭಾರತ ದೇಶವನ್ನು ತೆಂಗು ಕ್ಷೇತ್ರದಲ್ಲಿ ಜಾಗತಿಕ ಮುಂದಾಳಾಗಿಸುವ ದೂರದೃಷ್ಟಿ ಹೊಂದಿದ್ದರು. ಅದಕ್ಕಾಗಿ ದೇಶದಾದ್ಯಂತ ತೆಂಗು ಉತ್ಪಾದಕರ ಕಂಪನಿ ಮತ್ತು ಒಕ್ಕೂಟ ಸ್ಥಾಪಿಸಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಮೌಲ್ಯವರ್ಧನೆ ಮೂಲಕ ಸಶಕ್ತೀಕರಣಕ್ಕೆ ಮುಂದಾಗಿದ್ದರು. ಇವರು ಎಷ್ಟೊಂದು ಸಕಾರಾತ್ಮಕ ವಾಗಿದ್ದರೆಂದರೆ, ಇವರ ಜೊತೆಗೆ ಒಂದು ದಿನ ಕಳೆದರೆ ನಮಗೆಲ್ಲ ಒಂದು ವರ್ಷಕ್ಕಾಗುವಷ್ಟು ಎನರ್ಜಿ ಸಿಗುತ್ತಿತ್ತು. ಕೇರಳ ಸರ್ಕಾರ ನೀರಾ ನೀತಿ ರೂಪಿಸಲು ಉಮ್ಮನ್ ಚಾಂಡಿ ಜೊತೆಗೆ ಸೇರಿ ಯಶಸ್ವಿಯಾಗಿ ಮಾಡಿದ್ದರು. ಕರ್ನಾಟಕದಲ್ಲಿ ನೀರಾ ನೀತಿ ರೂಪಿಸಲು ನಮ್ಮ ಬೆನ್ನು ತಟ್ಟಿ ಸರ್ಕಾರದ ಜೊತೆಯಲ್ಲಿ ಮಾತುಕತೆ ನಡೆಸಲು ಅವಶ್ಯಕ ಎಲ್ಲಾ ಬೆಂಬಲ ನೀಡಿದ್ದರು. ಇದರಿಂದ ಕರ್ನಾಟಕದಲ್ಲಿಯೂ ಸಿಹಿ ನೀರಾ ನೀತಿ ಜಾರಿಗೆ ಬಂತು.
ತೆಂಗು ಬೆಳೆಗಾರರ ಸಂಘದ ಉದ್ಘಾಟನೆ
ಕರ್ನಾಟಕದ ತೆಂಗು ಕ್ಷೇತ್ರದಲ್ಲಿ ಕೇರಳದಲ್ಲಿ ಆದಂತಹ ಬದಲಾವಣೆ ಆಗಲಿಲ್ಲ. ಅದಕ್ಕೆ ಮುಖ್ಯ ಕಾರಣ ಕರ್ನಾಟಕದ ನಿರ್ದೇಶಕರು ಅಂತಹ ದಕ್ಷ ಅಧಿಕಾರಿಗಳಾಗಿರಲಿಲ್ಲ. ಕೇರಳದಲ್ಲಿ ತೆಂಗು ಅಭಿವೃದ್ಧಿ ಮಂಡಳಿಯ ಕೇಂದ್ರ ಕಛೇರಿ ಇದ್ದದ್ದು ಕೇರಳ ರೈತರಿಗೆ ಪೂರಕವಾಗಿತ್ತು. ಇಂತಹ ಸಂದರ್ಭದಲ್ಲಿ ನಮ್ಮ ಹೋರಾಟದ ಫಲವಾಗಿ ರಾಜ್ಯದಲ್ಲಿ ಸುಮಾರು ಹದಿನಾಲ್ಕು ತೆಂಗು ಉತ್ಪಾದಕರ ಕಂಪನಿಗಳು ನೂರೈವತ್ತಕ್ಕು ಅಧಿಕ ಒಕ್ಕೂಟಗಳು ರಾಜ್ಯದಾದ್ಯಂತ ಸ್ಥಾಪನೆಯಾದವು. ಇವುಗಳ ಅಷ್ಟೊಂದು ಪರಿಣಾಮಕಾರಿಯಾಗಿ  ಕೆಲಸ ಮಾಡಲು ದಕ್ಷ ಅಧಿಕಾರಿಯ ಕೊರತೆಯನ್ನು ಮನಗಂಡು ತನ್ನ ಬಲಗೈನಂತಿದ್ದ ಶ್ರೀ ಹೇಮಚಂದ್ರ ಅವರನ್ನು ಕರ್ನಾಟಕಕ್ಕೆ ನಿರ್ದೇಶಕರಾಗಿ ಶ್ರೀ ಟಿ ಕೆ ಜೋಶ್ ಕಳಿಸಿಕೊಟ್ಟರು.
ಶ್ರೀ ಹೇಮಚಂದ್ರ ಕರ್ನಾಟಕಕ್ಕೆ ಬಂದ ಮೇಲೆ ತೆಂಗು ಬೆಳೆಗಾರರ ಒಕ್ಕೂಟ ಮತ್ತು ಕಂಪನಿಗಳಿಗೆ ಆನೆ ಬಲ ಬಂತು. ಜಾತ್ಯಾತೀತ ವಾಗಿ ಮತ್ತು ಪ್ರದೇಶಾತೀತವಾಗಿ ಎಲ್ಲರ ಬೆನ್ನು ತಟ್ಟಿ ಬೆಂಬಲಿಸಿದರು. ಇದರ ಪರಿಣಾಮವಾಗಿ ತೆಂಗು ಉತ್ಪಾದಕರ ಕಂಪನಿ ಮತ್ತು ಒಕ್ಕೂಟಗಳಿಗೆ ಆನೆ ಬಲ ಬಂತು. ಐತಿಹಾಸಿಕವಾಗಿ ಕೇಂದ್ರದಿಂದ ಕರ್ನಾಟಕ ರಾಜ್ಯಕ್ಕೆ ಅತೀ ಹೆಚ್ಚು ಅನುದಾನ ಹರಿದು ಬಂದವು. ವರ್ಷಕ್ಕೆ ಸರಾಸರಿ ನಾಲ್ಕು ಕೋಟಿ ಬರುತ್ತಿದ್ದ ಅನುದಾನ ಎಂಬತ್ತು ಕೋಟಿಗೆ ಏರಿತು.  ಇದೇ ಸಮಯದಲ್ಲಿ ಟಿಕೆ ಜೋಶ್ ಅವರನ್ನು ಬಿಜೆಪಿ ಸರ್ಕಾರ ತೆಗೆದು ಹಾಕಿತು. ಈ ಸ್ಥಾನಕ್ಕೆ ಬಿಜೆಪಿ ವಿಚಾರದಲ್ಲಿ ನಂಬಿಕೆ ಉಳ್ಳ ರಾಜು ನಾರಾಯಣ ಸ್ವಾಮಿ ಅಧಿಕಾರವಹಿಸಿಕೊಂಡರು.
ಹೇಮಚಂದ್ರ ಅವರು ತಮ್ಮ ಕೆಲಸಗಳನ್ನು ಪ್ರಾಮಾಣಿಕ ವಾಗಿ ನಡೆಸುತ್ತಿದ್ದರು. ನಮಗೆ ಟಿಕೆ ಜೋಶ್ ಇಲ್ಲ ಎಂಬ ಭಾವನೆ ಬರದಂತೆ ವೈಯಕ್ತಿಕವಾಗಿ ನಮ್ಮ ಜೊತೆ ನಿಂತರು. ಯಾವುದೇ ಒಕ್ಕೂಟ ಕಂಪನಿ ಯಾವುದೇ ಕೆಲಸ ಕಾರ್ಯ ಕೇಳಿದರೂ ಪ್ರಾಮಾಣಿಕವಾಗಿ ಬೆಂಬಲ ನೀಡುತ್ತಿದ್ದರು. ಯೋಜನೆಗಳ ಅನುಷ್ಠಾನದಲ್ಲಿ ಇದ್ದ ನ್ಯೂನತೆಗಳನ್ನು ನಿವಾರಿಸಲು ಅನೇಕ ಬಗೆಯ ಬದಲಾವಣೆ ತಂದರು.
ಹೇಮಚಂದ್ರ
ಇದೇ ಸಮಯದಲ್ಲಿ ಬಿಜೆಪಿಯ ಕಣ್ಣು ಇವರ ಮೇಲೆ ಬಿತ್ತು. ಬಿಜೆಪಿಯ ಮಾಜಿ ಎಂಎಲ್ ಸಿ ಮನೋಹರ ಮಸ್ಕಿ ಗುಂಪು ಇವರ ಮೇಲೆ ಒತ್ತಡ ಹೇರಿ ತಮಗೆ ಬೇಕಾದಂತೆ ಲಾಬಿ ನಡೆಸಲು ಪ್ರಯತ್ನಿಸಿದರು. ಇದ್ಯಾವುದಕ್ಕೂ ಜಗ್ಗದ ಹೇಮಚಂದ್ರ “ತೆಂಗು ಅಭಿವೃದ್ಧಿ ಮಂಡಳಿಯ ಕಛೇರಿಯನ್ನು ಬಿಜೆಪಿಯ ಕಛೇರಿಯನ್ನಾಗಿ ಮಾಡಿಕೊಳ್ಳಲು ಬಿಡೆನು” ಎಂಬ ಸಂದೇಶ ರವಾನಿಸಿದರು. ಇದರ ಪರಿಣಾಮವಾಗಿ ಮನೋರ ಮಸ್ಕಿಯವರು (ಇವರ ಬಗ್ಗೆ ತಿಳಿಯಲು ಆರ್ ಎಸ್ ಎಸ್ ಹಿರಿಯರಾದ ಬೇಳೂರು ಸುದರ್ಶನ ಅವರನ್ನು ಕೇಳಿರಿ. ಅವರು ತಮ್ಮ ಮಿತ್ರಮಾಧ್ಯಮ ವೆಬ್ ಸೈಟ್ ನಲ್ಲಿ ಮಸ್ಕಿಯ ಸ್ಕೀಮುಗಳ ಬಗ್ಗೆ ಬರೆದಿದ್ದಾರೆ. ) ಚಿಕ್ಕನಾಯಕನಹಳ್ಳಿ ಎಮ್.ಎಲ್.ಎ ಜೆ.ಸಿ ಮಾಧುಸ್ವಾಮಿ ಜೊತೆ ಸೇರಿ ಹೇಮಚಂದ್ರ ವಿರುದ್ಧ ತಿರುಗಿ ಬಿದ್ದರು.
ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷರ ಮೂಲಕ ಹೇಮಚಂದ್ರ ವಿರುದ್ಧ ಪಿತೂರಿ ನಡೆಸಿ ಅವರನ್ನು ಅಮಾನತುಗೊಳಿಸುವಲ್ಲಿ ಯಶಸ್ವಿಯಾದರು. ಈ ವಿಚಾರವನ್ನು ಸ್ವತಃ ಮಾಧುಸ್ವಾಮಿಯೇ  ವಿಧಾನಸಭೆಯಲ್ಲಿ ಮಾತನಾಡಿದ್ದಾರೆ. ಇಲ್ಲಿಂದ ತೆಂಗು ಬೆಳೆಗಾರರ ಯಶಸ್ಸಿಗೆ ದುಡಿಯುತ್ತಿದ್ದ ಮಹಾಚೇತನವೊಂದು ನಮ್ಮಿಂದ ದೂರವಾಯಿತು. ಈಗ ಇದರ ವಿರುದ್ಧ ತೆಂಗು ಬೆಳೆಗಾರರು ಚಳವಳಿ ನಡೆಸುತ್ತಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸುವ ಪಣ ತೊಟ್ಟಿದ್ದಾರೆ. ಕರ್ನಾಟಕದ ತೆಂಗು ಬೆಳೆಗಾರರ ಅಸ್ಮಿತೆಯಂತಿದ್ದ ಹೇಮಚಂದ್ರ ಮರಳಿ ಬರಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದಾರೆ.
(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...