Homeಕರ್ನಾಟಕಬಿಜೆಪಿ ವಿರುದ್ಧ ತೆಂಗು ಬೆಳೆಗಾರರ ಆಕ್ರೋಶ

ಬಿಜೆಪಿ ವಿರುದ್ಧ ತೆಂಗು ಬೆಳೆಗಾರರ ಆಕ್ರೋಶ

- Advertisement -
|  ಆಣೆಕಟ್ಟೆ ವಿಶ್ವನಾಥ್ |
ತೆಂಗು ಬೆಳೆಗಾರರ ಸಂಘ
ತೆಂಗು ಬೆಳೆಗಾರರ ಮಟ್ಟಿಗೆ ರಾಜ್ಯದಲ್ಲಿ ಒಂದು ಸಹಕಾರಿ ಚಳವಳಿ ಗುಪ್ತಗಾಮಿನಿಯಾಗಿ ಹರಿಯುತ್ತಿದ್ದ ಸಂಕ್ರಮಣ ಕಾಲ ಇದು. ಇದಕ್ಕೆ ಮುಖ್ಯ ಕಾರಣ ಶ್ರೀ ಟಿ.ಕೆ.ಜೋಶ್ ಎಂಬ ದೂರಗಾಮಿ ದೃಷ್ಟಿ ಹೊಂದಿದ್ದ ಐಎಎಸ್ ಅಧಿಕಾರಿ 2002ರಲ್ಲಿ ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಬಂದಿದ್ದು. ಇವರು ಕೇರಳ ಸರ್ಕಾರದಲ್ಲಿ ಕುಟುಂಬಶ್ರೀ ಎಂಬ ಮಹಿಳಾ ಸ್ವ ಸಹಾಯ ಸಂಘಗಳ ಯೋಜನೆ ಪ್ರಾರಂಭಿಸಿ ಯಶಸ್ವಿ ಯಾಗಿದ್ದವರು. ಭಾರತ ದೇಶವನ್ನು ತೆಂಗು ಕ್ಷೇತ್ರದಲ್ಲಿ ಜಾಗತಿಕ ಮುಂದಾಳಾಗಿಸುವ ದೂರದೃಷ್ಟಿ ಹೊಂದಿದ್ದರು. ಅದಕ್ಕಾಗಿ ದೇಶದಾದ್ಯಂತ ತೆಂಗು ಉತ್ಪಾದಕರ ಕಂಪನಿ ಮತ್ತು ಒಕ್ಕೂಟ ಸ್ಥಾಪಿಸಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಮೌಲ್ಯವರ್ಧನೆ ಮೂಲಕ ಸಶಕ್ತೀಕರಣಕ್ಕೆ ಮುಂದಾಗಿದ್ದರು. ಇವರು ಎಷ್ಟೊಂದು ಸಕಾರಾತ್ಮಕ ವಾಗಿದ್ದರೆಂದರೆ, ಇವರ ಜೊತೆಗೆ ಒಂದು ದಿನ ಕಳೆದರೆ ನಮಗೆಲ್ಲ ಒಂದು ವರ್ಷಕ್ಕಾಗುವಷ್ಟು ಎನರ್ಜಿ ಸಿಗುತ್ತಿತ್ತು. ಕೇರಳ ಸರ್ಕಾರ ನೀರಾ ನೀತಿ ರೂಪಿಸಲು ಉಮ್ಮನ್ ಚಾಂಡಿ ಜೊತೆಗೆ ಸೇರಿ ಯಶಸ್ವಿಯಾಗಿ ಮಾಡಿದ್ದರು. ಕರ್ನಾಟಕದಲ್ಲಿ ನೀರಾ ನೀತಿ ರೂಪಿಸಲು ನಮ್ಮ ಬೆನ್ನು ತಟ್ಟಿ ಸರ್ಕಾರದ ಜೊತೆಯಲ್ಲಿ ಮಾತುಕತೆ ನಡೆಸಲು ಅವಶ್ಯಕ ಎಲ್ಲಾ ಬೆಂಬಲ ನೀಡಿದ್ದರು. ಇದರಿಂದ ಕರ್ನಾಟಕದಲ್ಲಿಯೂ ಸಿಹಿ ನೀರಾ ನೀತಿ ಜಾರಿಗೆ ಬಂತು.
ತೆಂಗು ಬೆಳೆಗಾರರ ಸಂಘದ ಉದ್ಘಾಟನೆ
ಕರ್ನಾಟಕದ ತೆಂಗು ಕ್ಷೇತ್ರದಲ್ಲಿ ಕೇರಳದಲ್ಲಿ ಆದಂತಹ ಬದಲಾವಣೆ ಆಗಲಿಲ್ಲ. ಅದಕ್ಕೆ ಮುಖ್ಯ ಕಾರಣ ಕರ್ನಾಟಕದ ನಿರ್ದೇಶಕರು ಅಂತಹ ದಕ್ಷ ಅಧಿಕಾರಿಗಳಾಗಿರಲಿಲ್ಲ. ಕೇರಳದಲ್ಲಿ ತೆಂಗು ಅಭಿವೃದ್ಧಿ ಮಂಡಳಿಯ ಕೇಂದ್ರ ಕಛೇರಿ ಇದ್ದದ್ದು ಕೇರಳ ರೈತರಿಗೆ ಪೂರಕವಾಗಿತ್ತು. ಇಂತಹ ಸಂದರ್ಭದಲ್ಲಿ ನಮ್ಮ ಹೋರಾಟದ ಫಲವಾಗಿ ರಾಜ್ಯದಲ್ಲಿ ಸುಮಾರು ಹದಿನಾಲ್ಕು ತೆಂಗು ಉತ್ಪಾದಕರ ಕಂಪನಿಗಳು ನೂರೈವತ್ತಕ್ಕು ಅಧಿಕ ಒಕ್ಕೂಟಗಳು ರಾಜ್ಯದಾದ್ಯಂತ ಸ್ಥಾಪನೆಯಾದವು. ಇವುಗಳ ಅಷ್ಟೊಂದು ಪರಿಣಾಮಕಾರಿಯಾಗಿ  ಕೆಲಸ ಮಾಡಲು ದಕ್ಷ ಅಧಿಕಾರಿಯ ಕೊರತೆಯನ್ನು ಮನಗಂಡು ತನ್ನ ಬಲಗೈನಂತಿದ್ದ ಶ್ರೀ ಹೇಮಚಂದ್ರ ಅವರನ್ನು ಕರ್ನಾಟಕಕ್ಕೆ ನಿರ್ದೇಶಕರಾಗಿ ಶ್ರೀ ಟಿ ಕೆ ಜೋಶ್ ಕಳಿಸಿಕೊಟ್ಟರು.
ಶ್ರೀ ಹೇಮಚಂದ್ರ ಕರ್ನಾಟಕಕ್ಕೆ ಬಂದ ಮೇಲೆ ತೆಂಗು ಬೆಳೆಗಾರರ ಒಕ್ಕೂಟ ಮತ್ತು ಕಂಪನಿಗಳಿಗೆ ಆನೆ ಬಲ ಬಂತು. ಜಾತ್ಯಾತೀತ ವಾಗಿ ಮತ್ತು ಪ್ರದೇಶಾತೀತವಾಗಿ ಎಲ್ಲರ ಬೆನ್ನು ತಟ್ಟಿ ಬೆಂಬಲಿಸಿದರು. ಇದರ ಪರಿಣಾಮವಾಗಿ ತೆಂಗು ಉತ್ಪಾದಕರ ಕಂಪನಿ ಮತ್ತು ಒಕ್ಕೂಟಗಳಿಗೆ ಆನೆ ಬಲ ಬಂತು. ಐತಿಹಾಸಿಕವಾಗಿ ಕೇಂದ್ರದಿಂದ ಕರ್ನಾಟಕ ರಾಜ್ಯಕ್ಕೆ ಅತೀ ಹೆಚ್ಚು ಅನುದಾನ ಹರಿದು ಬಂದವು. ವರ್ಷಕ್ಕೆ ಸರಾಸರಿ ನಾಲ್ಕು ಕೋಟಿ ಬರುತ್ತಿದ್ದ ಅನುದಾನ ಎಂಬತ್ತು ಕೋಟಿಗೆ ಏರಿತು.  ಇದೇ ಸಮಯದಲ್ಲಿ ಟಿಕೆ ಜೋಶ್ ಅವರನ್ನು ಬಿಜೆಪಿ ಸರ್ಕಾರ ತೆಗೆದು ಹಾಕಿತು. ಈ ಸ್ಥಾನಕ್ಕೆ ಬಿಜೆಪಿ ವಿಚಾರದಲ್ಲಿ ನಂಬಿಕೆ ಉಳ್ಳ ರಾಜು ನಾರಾಯಣ ಸ್ವಾಮಿ ಅಧಿಕಾರವಹಿಸಿಕೊಂಡರು.
ಹೇಮಚಂದ್ರ ಅವರು ತಮ್ಮ ಕೆಲಸಗಳನ್ನು ಪ್ರಾಮಾಣಿಕ ವಾಗಿ ನಡೆಸುತ್ತಿದ್ದರು. ನಮಗೆ ಟಿಕೆ ಜೋಶ್ ಇಲ್ಲ ಎಂಬ ಭಾವನೆ ಬರದಂತೆ ವೈಯಕ್ತಿಕವಾಗಿ ನಮ್ಮ ಜೊತೆ ನಿಂತರು. ಯಾವುದೇ ಒಕ್ಕೂಟ ಕಂಪನಿ ಯಾವುದೇ ಕೆಲಸ ಕಾರ್ಯ ಕೇಳಿದರೂ ಪ್ರಾಮಾಣಿಕವಾಗಿ ಬೆಂಬಲ ನೀಡುತ್ತಿದ್ದರು. ಯೋಜನೆಗಳ ಅನುಷ್ಠಾನದಲ್ಲಿ ಇದ್ದ ನ್ಯೂನತೆಗಳನ್ನು ನಿವಾರಿಸಲು ಅನೇಕ ಬಗೆಯ ಬದಲಾವಣೆ ತಂದರು.
ಹೇಮಚಂದ್ರ
ಇದೇ ಸಮಯದಲ್ಲಿ ಬಿಜೆಪಿಯ ಕಣ್ಣು ಇವರ ಮೇಲೆ ಬಿತ್ತು. ಬಿಜೆಪಿಯ ಮಾಜಿ ಎಂಎಲ್ ಸಿ ಮನೋಹರ ಮಸ್ಕಿ ಗುಂಪು ಇವರ ಮೇಲೆ ಒತ್ತಡ ಹೇರಿ ತಮಗೆ ಬೇಕಾದಂತೆ ಲಾಬಿ ನಡೆಸಲು ಪ್ರಯತ್ನಿಸಿದರು. ಇದ್ಯಾವುದಕ್ಕೂ ಜಗ್ಗದ ಹೇಮಚಂದ್ರ “ತೆಂಗು ಅಭಿವೃದ್ಧಿ ಮಂಡಳಿಯ ಕಛೇರಿಯನ್ನು ಬಿಜೆಪಿಯ ಕಛೇರಿಯನ್ನಾಗಿ ಮಾಡಿಕೊಳ್ಳಲು ಬಿಡೆನು” ಎಂಬ ಸಂದೇಶ ರವಾನಿಸಿದರು. ಇದರ ಪರಿಣಾಮವಾಗಿ ಮನೋರ ಮಸ್ಕಿಯವರು (ಇವರ ಬಗ್ಗೆ ತಿಳಿಯಲು ಆರ್ ಎಸ್ ಎಸ್ ಹಿರಿಯರಾದ ಬೇಳೂರು ಸುದರ್ಶನ ಅವರನ್ನು ಕೇಳಿರಿ. ಅವರು ತಮ್ಮ ಮಿತ್ರಮಾಧ್ಯಮ ವೆಬ್ ಸೈಟ್ ನಲ್ಲಿ ಮಸ್ಕಿಯ ಸ್ಕೀಮುಗಳ ಬಗ್ಗೆ ಬರೆದಿದ್ದಾರೆ. ) ಚಿಕ್ಕನಾಯಕನಹಳ್ಳಿ ಎಮ್.ಎಲ್.ಎ ಜೆ.ಸಿ ಮಾಧುಸ್ವಾಮಿ ಜೊತೆ ಸೇರಿ ಹೇಮಚಂದ್ರ ವಿರುದ್ಧ ತಿರುಗಿ ಬಿದ್ದರು.
ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷರ ಮೂಲಕ ಹೇಮಚಂದ್ರ ವಿರುದ್ಧ ಪಿತೂರಿ ನಡೆಸಿ ಅವರನ್ನು ಅಮಾನತುಗೊಳಿಸುವಲ್ಲಿ ಯಶಸ್ವಿಯಾದರು. ಈ ವಿಚಾರವನ್ನು ಸ್ವತಃ ಮಾಧುಸ್ವಾಮಿಯೇ  ವಿಧಾನಸಭೆಯಲ್ಲಿ ಮಾತನಾಡಿದ್ದಾರೆ. ಇಲ್ಲಿಂದ ತೆಂಗು ಬೆಳೆಗಾರರ ಯಶಸ್ಸಿಗೆ ದುಡಿಯುತ್ತಿದ್ದ ಮಹಾಚೇತನವೊಂದು ನಮ್ಮಿಂದ ದೂರವಾಯಿತು. ಈಗ ಇದರ ವಿರುದ್ಧ ತೆಂಗು ಬೆಳೆಗಾರರು ಚಳವಳಿ ನಡೆಸುತ್ತಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸುವ ಪಣ ತೊಟ್ಟಿದ್ದಾರೆ. ಕರ್ನಾಟಕದ ತೆಂಗು ಬೆಳೆಗಾರರ ಅಸ್ಮಿತೆಯಂತಿದ್ದ ಹೇಮಚಂದ್ರ ಮರಳಿ ಬರಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದಾರೆ.
(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...