Homeಕರ್ನಾಟಕಬಿಜೆಪಿ ವಿರುದ್ಧ ತೆಂಗು ಬೆಳೆಗಾರರ ಆಕ್ರೋಶ

ಬಿಜೆಪಿ ವಿರುದ್ಧ ತೆಂಗು ಬೆಳೆಗಾರರ ಆಕ್ರೋಶ

- Advertisement -
|  ಆಣೆಕಟ್ಟೆ ವಿಶ್ವನಾಥ್ |
ತೆಂಗು ಬೆಳೆಗಾರರ ಸಂಘ
ತೆಂಗು ಬೆಳೆಗಾರರ ಮಟ್ಟಿಗೆ ರಾಜ್ಯದಲ್ಲಿ ಒಂದು ಸಹಕಾರಿ ಚಳವಳಿ ಗುಪ್ತಗಾಮಿನಿಯಾಗಿ ಹರಿಯುತ್ತಿದ್ದ ಸಂಕ್ರಮಣ ಕಾಲ ಇದು. ಇದಕ್ಕೆ ಮುಖ್ಯ ಕಾರಣ ಶ್ರೀ ಟಿ.ಕೆ.ಜೋಶ್ ಎಂಬ ದೂರಗಾಮಿ ದೃಷ್ಟಿ ಹೊಂದಿದ್ದ ಐಎಎಸ್ ಅಧಿಕಾರಿ 2002ರಲ್ಲಿ ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಬಂದಿದ್ದು. ಇವರು ಕೇರಳ ಸರ್ಕಾರದಲ್ಲಿ ಕುಟುಂಬಶ್ರೀ ಎಂಬ ಮಹಿಳಾ ಸ್ವ ಸಹಾಯ ಸಂಘಗಳ ಯೋಜನೆ ಪ್ರಾರಂಭಿಸಿ ಯಶಸ್ವಿ ಯಾಗಿದ್ದವರು. ಭಾರತ ದೇಶವನ್ನು ತೆಂಗು ಕ್ಷೇತ್ರದಲ್ಲಿ ಜಾಗತಿಕ ಮುಂದಾಳಾಗಿಸುವ ದೂರದೃಷ್ಟಿ ಹೊಂದಿದ್ದರು. ಅದಕ್ಕಾಗಿ ದೇಶದಾದ್ಯಂತ ತೆಂಗು ಉತ್ಪಾದಕರ ಕಂಪನಿ ಮತ್ತು ಒಕ್ಕೂಟ ಸ್ಥಾಪಿಸಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಮೌಲ್ಯವರ್ಧನೆ ಮೂಲಕ ಸಶಕ್ತೀಕರಣಕ್ಕೆ ಮುಂದಾಗಿದ್ದರು. ಇವರು ಎಷ್ಟೊಂದು ಸಕಾರಾತ್ಮಕ ವಾಗಿದ್ದರೆಂದರೆ, ಇವರ ಜೊತೆಗೆ ಒಂದು ದಿನ ಕಳೆದರೆ ನಮಗೆಲ್ಲ ಒಂದು ವರ್ಷಕ್ಕಾಗುವಷ್ಟು ಎನರ್ಜಿ ಸಿಗುತ್ತಿತ್ತು. ಕೇರಳ ಸರ್ಕಾರ ನೀರಾ ನೀತಿ ರೂಪಿಸಲು ಉಮ್ಮನ್ ಚಾಂಡಿ ಜೊತೆಗೆ ಸೇರಿ ಯಶಸ್ವಿಯಾಗಿ ಮಾಡಿದ್ದರು. ಕರ್ನಾಟಕದಲ್ಲಿ ನೀರಾ ನೀತಿ ರೂಪಿಸಲು ನಮ್ಮ ಬೆನ್ನು ತಟ್ಟಿ ಸರ್ಕಾರದ ಜೊತೆಯಲ್ಲಿ ಮಾತುಕತೆ ನಡೆಸಲು ಅವಶ್ಯಕ ಎಲ್ಲಾ ಬೆಂಬಲ ನೀಡಿದ್ದರು. ಇದರಿಂದ ಕರ್ನಾಟಕದಲ್ಲಿಯೂ ಸಿಹಿ ನೀರಾ ನೀತಿ ಜಾರಿಗೆ ಬಂತು.
ತೆಂಗು ಬೆಳೆಗಾರರ ಸಂಘದ ಉದ್ಘಾಟನೆ
ಕರ್ನಾಟಕದ ತೆಂಗು ಕ್ಷೇತ್ರದಲ್ಲಿ ಕೇರಳದಲ್ಲಿ ಆದಂತಹ ಬದಲಾವಣೆ ಆಗಲಿಲ್ಲ. ಅದಕ್ಕೆ ಮುಖ್ಯ ಕಾರಣ ಕರ್ನಾಟಕದ ನಿರ್ದೇಶಕರು ಅಂತಹ ದಕ್ಷ ಅಧಿಕಾರಿಗಳಾಗಿರಲಿಲ್ಲ. ಕೇರಳದಲ್ಲಿ ತೆಂಗು ಅಭಿವೃದ್ಧಿ ಮಂಡಳಿಯ ಕೇಂದ್ರ ಕಛೇರಿ ಇದ್ದದ್ದು ಕೇರಳ ರೈತರಿಗೆ ಪೂರಕವಾಗಿತ್ತು. ಇಂತಹ ಸಂದರ್ಭದಲ್ಲಿ ನಮ್ಮ ಹೋರಾಟದ ಫಲವಾಗಿ ರಾಜ್ಯದಲ್ಲಿ ಸುಮಾರು ಹದಿನಾಲ್ಕು ತೆಂಗು ಉತ್ಪಾದಕರ ಕಂಪನಿಗಳು ನೂರೈವತ್ತಕ್ಕು ಅಧಿಕ ಒಕ್ಕೂಟಗಳು ರಾಜ್ಯದಾದ್ಯಂತ ಸ್ಥಾಪನೆಯಾದವು. ಇವುಗಳ ಅಷ್ಟೊಂದು ಪರಿಣಾಮಕಾರಿಯಾಗಿ  ಕೆಲಸ ಮಾಡಲು ದಕ್ಷ ಅಧಿಕಾರಿಯ ಕೊರತೆಯನ್ನು ಮನಗಂಡು ತನ್ನ ಬಲಗೈನಂತಿದ್ದ ಶ್ರೀ ಹೇಮಚಂದ್ರ ಅವರನ್ನು ಕರ್ನಾಟಕಕ್ಕೆ ನಿರ್ದೇಶಕರಾಗಿ ಶ್ರೀ ಟಿ ಕೆ ಜೋಶ್ ಕಳಿಸಿಕೊಟ್ಟರು.
ಶ್ರೀ ಹೇಮಚಂದ್ರ ಕರ್ನಾಟಕಕ್ಕೆ ಬಂದ ಮೇಲೆ ತೆಂಗು ಬೆಳೆಗಾರರ ಒಕ್ಕೂಟ ಮತ್ತು ಕಂಪನಿಗಳಿಗೆ ಆನೆ ಬಲ ಬಂತು. ಜಾತ್ಯಾತೀತ ವಾಗಿ ಮತ್ತು ಪ್ರದೇಶಾತೀತವಾಗಿ ಎಲ್ಲರ ಬೆನ್ನು ತಟ್ಟಿ ಬೆಂಬಲಿಸಿದರು. ಇದರ ಪರಿಣಾಮವಾಗಿ ತೆಂಗು ಉತ್ಪಾದಕರ ಕಂಪನಿ ಮತ್ತು ಒಕ್ಕೂಟಗಳಿಗೆ ಆನೆ ಬಲ ಬಂತು. ಐತಿಹಾಸಿಕವಾಗಿ ಕೇಂದ್ರದಿಂದ ಕರ್ನಾಟಕ ರಾಜ್ಯಕ್ಕೆ ಅತೀ ಹೆಚ್ಚು ಅನುದಾನ ಹರಿದು ಬಂದವು. ವರ್ಷಕ್ಕೆ ಸರಾಸರಿ ನಾಲ್ಕು ಕೋಟಿ ಬರುತ್ತಿದ್ದ ಅನುದಾನ ಎಂಬತ್ತು ಕೋಟಿಗೆ ಏರಿತು.  ಇದೇ ಸಮಯದಲ್ಲಿ ಟಿಕೆ ಜೋಶ್ ಅವರನ್ನು ಬಿಜೆಪಿ ಸರ್ಕಾರ ತೆಗೆದು ಹಾಕಿತು. ಈ ಸ್ಥಾನಕ್ಕೆ ಬಿಜೆಪಿ ವಿಚಾರದಲ್ಲಿ ನಂಬಿಕೆ ಉಳ್ಳ ರಾಜು ನಾರಾಯಣ ಸ್ವಾಮಿ ಅಧಿಕಾರವಹಿಸಿಕೊಂಡರು.
ಹೇಮಚಂದ್ರ ಅವರು ತಮ್ಮ ಕೆಲಸಗಳನ್ನು ಪ್ರಾಮಾಣಿಕ ವಾಗಿ ನಡೆಸುತ್ತಿದ್ದರು. ನಮಗೆ ಟಿಕೆ ಜೋಶ್ ಇಲ್ಲ ಎಂಬ ಭಾವನೆ ಬರದಂತೆ ವೈಯಕ್ತಿಕವಾಗಿ ನಮ್ಮ ಜೊತೆ ನಿಂತರು. ಯಾವುದೇ ಒಕ್ಕೂಟ ಕಂಪನಿ ಯಾವುದೇ ಕೆಲಸ ಕಾರ್ಯ ಕೇಳಿದರೂ ಪ್ರಾಮಾಣಿಕವಾಗಿ ಬೆಂಬಲ ನೀಡುತ್ತಿದ್ದರು. ಯೋಜನೆಗಳ ಅನುಷ್ಠಾನದಲ್ಲಿ ಇದ್ದ ನ್ಯೂನತೆಗಳನ್ನು ನಿವಾರಿಸಲು ಅನೇಕ ಬಗೆಯ ಬದಲಾವಣೆ ತಂದರು.
ಹೇಮಚಂದ್ರ
ಇದೇ ಸಮಯದಲ್ಲಿ ಬಿಜೆಪಿಯ ಕಣ್ಣು ಇವರ ಮೇಲೆ ಬಿತ್ತು. ಬಿಜೆಪಿಯ ಮಾಜಿ ಎಂಎಲ್ ಸಿ ಮನೋಹರ ಮಸ್ಕಿ ಗುಂಪು ಇವರ ಮೇಲೆ ಒತ್ತಡ ಹೇರಿ ತಮಗೆ ಬೇಕಾದಂತೆ ಲಾಬಿ ನಡೆಸಲು ಪ್ರಯತ್ನಿಸಿದರು. ಇದ್ಯಾವುದಕ್ಕೂ ಜಗ್ಗದ ಹೇಮಚಂದ್ರ “ತೆಂಗು ಅಭಿವೃದ್ಧಿ ಮಂಡಳಿಯ ಕಛೇರಿಯನ್ನು ಬಿಜೆಪಿಯ ಕಛೇರಿಯನ್ನಾಗಿ ಮಾಡಿಕೊಳ್ಳಲು ಬಿಡೆನು” ಎಂಬ ಸಂದೇಶ ರವಾನಿಸಿದರು. ಇದರ ಪರಿಣಾಮವಾಗಿ ಮನೋರ ಮಸ್ಕಿಯವರು (ಇವರ ಬಗ್ಗೆ ತಿಳಿಯಲು ಆರ್ ಎಸ್ ಎಸ್ ಹಿರಿಯರಾದ ಬೇಳೂರು ಸುದರ್ಶನ ಅವರನ್ನು ಕೇಳಿರಿ. ಅವರು ತಮ್ಮ ಮಿತ್ರಮಾಧ್ಯಮ ವೆಬ್ ಸೈಟ್ ನಲ್ಲಿ ಮಸ್ಕಿಯ ಸ್ಕೀಮುಗಳ ಬಗ್ಗೆ ಬರೆದಿದ್ದಾರೆ. ) ಚಿಕ್ಕನಾಯಕನಹಳ್ಳಿ ಎಮ್.ಎಲ್.ಎ ಜೆ.ಸಿ ಮಾಧುಸ್ವಾಮಿ ಜೊತೆ ಸೇರಿ ಹೇಮಚಂದ್ರ ವಿರುದ್ಧ ತಿರುಗಿ ಬಿದ್ದರು.
ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷರ ಮೂಲಕ ಹೇಮಚಂದ್ರ ವಿರುದ್ಧ ಪಿತೂರಿ ನಡೆಸಿ ಅವರನ್ನು ಅಮಾನತುಗೊಳಿಸುವಲ್ಲಿ ಯಶಸ್ವಿಯಾದರು. ಈ ವಿಚಾರವನ್ನು ಸ್ವತಃ ಮಾಧುಸ್ವಾಮಿಯೇ  ವಿಧಾನಸಭೆಯಲ್ಲಿ ಮಾತನಾಡಿದ್ದಾರೆ. ಇಲ್ಲಿಂದ ತೆಂಗು ಬೆಳೆಗಾರರ ಯಶಸ್ಸಿಗೆ ದುಡಿಯುತ್ತಿದ್ದ ಮಹಾಚೇತನವೊಂದು ನಮ್ಮಿಂದ ದೂರವಾಯಿತು. ಈಗ ಇದರ ವಿರುದ್ಧ ತೆಂಗು ಬೆಳೆಗಾರರು ಚಳವಳಿ ನಡೆಸುತ್ತಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸುವ ಪಣ ತೊಟ್ಟಿದ್ದಾರೆ. ಕರ್ನಾಟಕದ ತೆಂಗು ಬೆಳೆಗಾರರ ಅಸ್ಮಿತೆಯಂತಿದ್ದ ಹೇಮಚಂದ್ರ ಮರಳಿ ಬರಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದಾರೆ.
(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...