Homeಕರ್ನಾಟಕಬಿಜೆಪಿ ವಿರುದ್ಧ ತೆಂಗು ಬೆಳೆಗಾರರ ಆಕ್ರೋಶ

ಬಿಜೆಪಿ ವಿರುದ್ಧ ತೆಂಗು ಬೆಳೆಗಾರರ ಆಕ್ರೋಶ

- Advertisement -
|  ಆಣೆಕಟ್ಟೆ ವಿಶ್ವನಾಥ್ |
ತೆಂಗು ಬೆಳೆಗಾರರ ಸಂಘ
ತೆಂಗು ಬೆಳೆಗಾರರ ಮಟ್ಟಿಗೆ ರಾಜ್ಯದಲ್ಲಿ ಒಂದು ಸಹಕಾರಿ ಚಳವಳಿ ಗುಪ್ತಗಾಮಿನಿಯಾಗಿ ಹರಿಯುತ್ತಿದ್ದ ಸಂಕ್ರಮಣ ಕಾಲ ಇದು. ಇದಕ್ಕೆ ಮುಖ್ಯ ಕಾರಣ ಶ್ರೀ ಟಿ.ಕೆ.ಜೋಶ್ ಎಂಬ ದೂರಗಾಮಿ ದೃಷ್ಟಿ ಹೊಂದಿದ್ದ ಐಎಎಸ್ ಅಧಿಕಾರಿ 2002ರಲ್ಲಿ ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಬಂದಿದ್ದು. ಇವರು ಕೇರಳ ಸರ್ಕಾರದಲ್ಲಿ ಕುಟುಂಬಶ್ರೀ ಎಂಬ ಮಹಿಳಾ ಸ್ವ ಸಹಾಯ ಸಂಘಗಳ ಯೋಜನೆ ಪ್ರಾರಂಭಿಸಿ ಯಶಸ್ವಿ ಯಾಗಿದ್ದವರು. ಭಾರತ ದೇಶವನ್ನು ತೆಂಗು ಕ್ಷೇತ್ರದಲ್ಲಿ ಜಾಗತಿಕ ಮುಂದಾಳಾಗಿಸುವ ದೂರದೃಷ್ಟಿ ಹೊಂದಿದ್ದರು. ಅದಕ್ಕಾಗಿ ದೇಶದಾದ್ಯಂತ ತೆಂಗು ಉತ್ಪಾದಕರ ಕಂಪನಿ ಮತ್ತು ಒಕ್ಕೂಟ ಸ್ಥಾಪಿಸಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಮೌಲ್ಯವರ್ಧನೆ ಮೂಲಕ ಸಶಕ್ತೀಕರಣಕ್ಕೆ ಮುಂದಾಗಿದ್ದರು. ಇವರು ಎಷ್ಟೊಂದು ಸಕಾರಾತ್ಮಕ ವಾಗಿದ್ದರೆಂದರೆ, ಇವರ ಜೊತೆಗೆ ಒಂದು ದಿನ ಕಳೆದರೆ ನಮಗೆಲ್ಲ ಒಂದು ವರ್ಷಕ್ಕಾಗುವಷ್ಟು ಎನರ್ಜಿ ಸಿಗುತ್ತಿತ್ತು. ಕೇರಳ ಸರ್ಕಾರ ನೀರಾ ನೀತಿ ರೂಪಿಸಲು ಉಮ್ಮನ್ ಚಾಂಡಿ ಜೊತೆಗೆ ಸೇರಿ ಯಶಸ್ವಿಯಾಗಿ ಮಾಡಿದ್ದರು. ಕರ್ನಾಟಕದಲ್ಲಿ ನೀರಾ ನೀತಿ ರೂಪಿಸಲು ನಮ್ಮ ಬೆನ್ನು ತಟ್ಟಿ ಸರ್ಕಾರದ ಜೊತೆಯಲ್ಲಿ ಮಾತುಕತೆ ನಡೆಸಲು ಅವಶ್ಯಕ ಎಲ್ಲಾ ಬೆಂಬಲ ನೀಡಿದ್ದರು. ಇದರಿಂದ ಕರ್ನಾಟಕದಲ್ಲಿಯೂ ಸಿಹಿ ನೀರಾ ನೀತಿ ಜಾರಿಗೆ ಬಂತು.
ತೆಂಗು ಬೆಳೆಗಾರರ ಸಂಘದ ಉದ್ಘಾಟನೆ
ಕರ್ನಾಟಕದ ತೆಂಗು ಕ್ಷೇತ್ರದಲ್ಲಿ ಕೇರಳದಲ್ಲಿ ಆದಂತಹ ಬದಲಾವಣೆ ಆಗಲಿಲ್ಲ. ಅದಕ್ಕೆ ಮುಖ್ಯ ಕಾರಣ ಕರ್ನಾಟಕದ ನಿರ್ದೇಶಕರು ಅಂತಹ ದಕ್ಷ ಅಧಿಕಾರಿಗಳಾಗಿರಲಿಲ್ಲ. ಕೇರಳದಲ್ಲಿ ತೆಂಗು ಅಭಿವೃದ್ಧಿ ಮಂಡಳಿಯ ಕೇಂದ್ರ ಕಛೇರಿ ಇದ್ದದ್ದು ಕೇರಳ ರೈತರಿಗೆ ಪೂರಕವಾಗಿತ್ತು. ಇಂತಹ ಸಂದರ್ಭದಲ್ಲಿ ನಮ್ಮ ಹೋರಾಟದ ಫಲವಾಗಿ ರಾಜ್ಯದಲ್ಲಿ ಸುಮಾರು ಹದಿನಾಲ್ಕು ತೆಂಗು ಉತ್ಪಾದಕರ ಕಂಪನಿಗಳು ನೂರೈವತ್ತಕ್ಕು ಅಧಿಕ ಒಕ್ಕೂಟಗಳು ರಾಜ್ಯದಾದ್ಯಂತ ಸ್ಥಾಪನೆಯಾದವು. ಇವುಗಳ ಅಷ್ಟೊಂದು ಪರಿಣಾಮಕಾರಿಯಾಗಿ  ಕೆಲಸ ಮಾಡಲು ದಕ್ಷ ಅಧಿಕಾರಿಯ ಕೊರತೆಯನ್ನು ಮನಗಂಡು ತನ್ನ ಬಲಗೈನಂತಿದ್ದ ಶ್ರೀ ಹೇಮಚಂದ್ರ ಅವರನ್ನು ಕರ್ನಾಟಕಕ್ಕೆ ನಿರ್ದೇಶಕರಾಗಿ ಶ್ರೀ ಟಿ ಕೆ ಜೋಶ್ ಕಳಿಸಿಕೊಟ್ಟರು.
ಶ್ರೀ ಹೇಮಚಂದ್ರ ಕರ್ನಾಟಕಕ್ಕೆ ಬಂದ ಮೇಲೆ ತೆಂಗು ಬೆಳೆಗಾರರ ಒಕ್ಕೂಟ ಮತ್ತು ಕಂಪನಿಗಳಿಗೆ ಆನೆ ಬಲ ಬಂತು. ಜಾತ್ಯಾತೀತ ವಾಗಿ ಮತ್ತು ಪ್ರದೇಶಾತೀತವಾಗಿ ಎಲ್ಲರ ಬೆನ್ನು ತಟ್ಟಿ ಬೆಂಬಲಿಸಿದರು. ಇದರ ಪರಿಣಾಮವಾಗಿ ತೆಂಗು ಉತ್ಪಾದಕರ ಕಂಪನಿ ಮತ್ತು ಒಕ್ಕೂಟಗಳಿಗೆ ಆನೆ ಬಲ ಬಂತು. ಐತಿಹಾಸಿಕವಾಗಿ ಕೇಂದ್ರದಿಂದ ಕರ್ನಾಟಕ ರಾಜ್ಯಕ್ಕೆ ಅತೀ ಹೆಚ್ಚು ಅನುದಾನ ಹರಿದು ಬಂದವು. ವರ್ಷಕ್ಕೆ ಸರಾಸರಿ ನಾಲ್ಕು ಕೋಟಿ ಬರುತ್ತಿದ್ದ ಅನುದಾನ ಎಂಬತ್ತು ಕೋಟಿಗೆ ಏರಿತು.  ಇದೇ ಸಮಯದಲ್ಲಿ ಟಿಕೆ ಜೋಶ್ ಅವರನ್ನು ಬಿಜೆಪಿ ಸರ್ಕಾರ ತೆಗೆದು ಹಾಕಿತು. ಈ ಸ್ಥಾನಕ್ಕೆ ಬಿಜೆಪಿ ವಿಚಾರದಲ್ಲಿ ನಂಬಿಕೆ ಉಳ್ಳ ರಾಜು ನಾರಾಯಣ ಸ್ವಾಮಿ ಅಧಿಕಾರವಹಿಸಿಕೊಂಡರು.
ಹೇಮಚಂದ್ರ ಅವರು ತಮ್ಮ ಕೆಲಸಗಳನ್ನು ಪ್ರಾಮಾಣಿಕ ವಾಗಿ ನಡೆಸುತ್ತಿದ್ದರು. ನಮಗೆ ಟಿಕೆ ಜೋಶ್ ಇಲ್ಲ ಎಂಬ ಭಾವನೆ ಬರದಂತೆ ವೈಯಕ್ತಿಕವಾಗಿ ನಮ್ಮ ಜೊತೆ ನಿಂತರು. ಯಾವುದೇ ಒಕ್ಕೂಟ ಕಂಪನಿ ಯಾವುದೇ ಕೆಲಸ ಕಾರ್ಯ ಕೇಳಿದರೂ ಪ್ರಾಮಾಣಿಕವಾಗಿ ಬೆಂಬಲ ನೀಡುತ್ತಿದ್ದರು. ಯೋಜನೆಗಳ ಅನುಷ್ಠಾನದಲ್ಲಿ ಇದ್ದ ನ್ಯೂನತೆಗಳನ್ನು ನಿವಾರಿಸಲು ಅನೇಕ ಬಗೆಯ ಬದಲಾವಣೆ ತಂದರು.
ಹೇಮಚಂದ್ರ
ಇದೇ ಸಮಯದಲ್ಲಿ ಬಿಜೆಪಿಯ ಕಣ್ಣು ಇವರ ಮೇಲೆ ಬಿತ್ತು. ಬಿಜೆಪಿಯ ಮಾಜಿ ಎಂಎಲ್ ಸಿ ಮನೋಹರ ಮಸ್ಕಿ ಗುಂಪು ಇವರ ಮೇಲೆ ಒತ್ತಡ ಹೇರಿ ತಮಗೆ ಬೇಕಾದಂತೆ ಲಾಬಿ ನಡೆಸಲು ಪ್ರಯತ್ನಿಸಿದರು. ಇದ್ಯಾವುದಕ್ಕೂ ಜಗ್ಗದ ಹೇಮಚಂದ್ರ “ತೆಂಗು ಅಭಿವೃದ್ಧಿ ಮಂಡಳಿಯ ಕಛೇರಿಯನ್ನು ಬಿಜೆಪಿಯ ಕಛೇರಿಯನ್ನಾಗಿ ಮಾಡಿಕೊಳ್ಳಲು ಬಿಡೆನು” ಎಂಬ ಸಂದೇಶ ರವಾನಿಸಿದರು. ಇದರ ಪರಿಣಾಮವಾಗಿ ಮನೋರ ಮಸ್ಕಿಯವರು (ಇವರ ಬಗ್ಗೆ ತಿಳಿಯಲು ಆರ್ ಎಸ್ ಎಸ್ ಹಿರಿಯರಾದ ಬೇಳೂರು ಸುದರ್ಶನ ಅವರನ್ನು ಕೇಳಿರಿ. ಅವರು ತಮ್ಮ ಮಿತ್ರಮಾಧ್ಯಮ ವೆಬ್ ಸೈಟ್ ನಲ್ಲಿ ಮಸ್ಕಿಯ ಸ್ಕೀಮುಗಳ ಬಗ್ಗೆ ಬರೆದಿದ್ದಾರೆ. ) ಚಿಕ್ಕನಾಯಕನಹಳ್ಳಿ ಎಮ್.ಎಲ್.ಎ ಜೆ.ಸಿ ಮಾಧುಸ್ವಾಮಿ ಜೊತೆ ಸೇರಿ ಹೇಮಚಂದ್ರ ವಿರುದ್ಧ ತಿರುಗಿ ಬಿದ್ದರು.
ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷರ ಮೂಲಕ ಹೇಮಚಂದ್ರ ವಿರುದ್ಧ ಪಿತೂರಿ ನಡೆಸಿ ಅವರನ್ನು ಅಮಾನತುಗೊಳಿಸುವಲ್ಲಿ ಯಶಸ್ವಿಯಾದರು. ಈ ವಿಚಾರವನ್ನು ಸ್ವತಃ ಮಾಧುಸ್ವಾಮಿಯೇ  ವಿಧಾನಸಭೆಯಲ್ಲಿ ಮಾತನಾಡಿದ್ದಾರೆ. ಇಲ್ಲಿಂದ ತೆಂಗು ಬೆಳೆಗಾರರ ಯಶಸ್ಸಿಗೆ ದುಡಿಯುತ್ತಿದ್ದ ಮಹಾಚೇತನವೊಂದು ನಮ್ಮಿಂದ ದೂರವಾಯಿತು. ಈಗ ಇದರ ವಿರುದ್ಧ ತೆಂಗು ಬೆಳೆಗಾರರು ಚಳವಳಿ ನಡೆಸುತ್ತಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸುವ ಪಣ ತೊಟ್ಟಿದ್ದಾರೆ. ಕರ್ನಾಟಕದ ತೆಂಗು ಬೆಳೆಗಾರರ ಅಸ್ಮಿತೆಯಂತಿದ್ದ ಹೇಮಚಂದ್ರ ಮರಳಿ ಬರಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದಾರೆ.
(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...