Homeಮುಖಪುಟತೆಂಗು-ಅಡಿಕೆ ತೋಟ ಕಳೆದುಕೊಂಡ ಸಿದ್ದಮ್ಮನಿಗೆ ಮೊದಲು ಪರಿಹಾರ ಕೊಡಿ, ನಂತರ ತನಿಖೆ ಮಾಡಿ

ತೆಂಗು-ಅಡಿಕೆ ತೋಟ ಕಳೆದುಕೊಂಡ ಸಿದ್ದಮ್ಮನಿಗೆ ಮೊದಲು ಪರಿಹಾರ ಕೊಡಿ, ನಂತರ ತನಿಖೆ ಮಾಡಿ

ಹೋದಲ್ಲಿ ಬಂದಲ್ಲಿ ರೈತರ ನೆರವಿಗೆ ಸದಾಸಿದ್ದ ಎಂದು ಹೇಳುವ ಯಡಿಯೂರಪ್ಪ ಗುಬ್ಬಿಯ ತಿಪ್ಪೂರು ಘಟನೆಯ ಬಗ್ಗೆ ಒಂದು ಚಕಾರವೂ ಇಲ್ಲ. ಭರವಸೆಗಳು ಬರೀ ಭಾಷಣಕ್ಕೆ ಸೀಮಿತವಾಗಬಾರದು.

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ತಿಪ್ಪೂರು ಗ್ರಾಮದಲ್ಲಿ ಸಿದ್ದಮ್ಮ ಎಂಬುವವರಿಗೆ ಸೇರಿದ ನೂರಾರು ತೆಂಗು, ಅಡಿಕೆ ಗಿಡಗಳನ್ನು ಕತ್ತರಿಸಿದ ಅಧಿಕಾರಿಗಳ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಜೊತೆಗೆ ಮೊದಲು ತೋಟ ಕಳೆದುಕೊಂಡಿರುವ ಸಿದ್ದಮ್ಮ ಅವರಿಗೆ ಪರಿಹಾರ ಕೊಡಿ, ಅನಂತರ ತಪ್ಪಿತಸ್ಥರ ವಿರುದ್ಧ ತನಿಖೆ ಮಾಡಿ ಕಾರಣರಾದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮುಂದಾಗಿ ಎಂಬ ಕೂಗು ಜಿಲ್ಲೆಯಾದ್ಯಂತ ಜೋರಾಗಿ ಕೇಳಿಬಂದಿದೆ.

ಪರಿಹಾರವನ್ನು ತಪ್ಪಿತಸ್ಥ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು. ಏಕೆಂದರೆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ, ತೆಂಗು ಮತ್ತು ಅಡಿಕೆ ಗಿಡ ಗಳನ್ನು ಕಡಿಸಿ ಹಾಕಿಸಿರುವುದು ಅಕ್ಷಮ್ಯ ಅಪರಾಧ. ರೈತರು ಗಿಡಗಳನ್ನು ಕಡಿಯುವಾಗ ನಿಯಮಗಳು ಅಡ್ಡ ಬರುತ್ತವೆ. ಅಧಿಕಾರಿಗಳು ಆ ಕೆಲಸ ಮಾಡಿದಾಗ ನಿಯಮಗಳು ಅಡ್ಡಬರಲಿಲ್ಲವೇ ಎಂಬ ಪ್ರಶ್ನೆ ಜನರಿಂದ ವ್ಯಕ್ತವಾಗಿದೆ.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ಕಾನೂನು ಎಲ್ಲರಿಗೂ ಒಂದೇ ಇರಬೇಕು. ಶ್ರೀಮಂತರಿಗೊಂದು, ಬಡವರಿಗೊಂದು ನ್ಯಾಯ ಇರಬಾರದು. ರೈತರು ಮರಗಳನ್ನು ಕಡಿದರೆ ಅಧಿಕಾರಿಗಳು ಇನ್ನಿಲ್ಲದ ಕಿರುಕುಳ ನೀಡುತ್ತಾರೆ. ಆಗ ಯಾವುದ್ಯಾವುದೋ ನಿಯಮಗಳು ನುಸುಳುತ್ತವೆ. ಅದೇ ಅಧಿಕಾರಿಗಳು ಮುಂದೆ ನಿಂತು ಗಿಡಗಳನ್ನು ಕಡಿಯುವಾಗ ತೋಟಗಾರಿಕೆ ಇಲಾಖೆಯ ನಿಯಮಗಳು ಅಡ್ಡಿಬರಲಿಲ್ಲವೇ? ಈಗ ಕಡಿದು ಹಾಕಿರುವ ಮರಗಳು ಮಧ್ಯವಯಸ್ಕ ಮರಗಳು. ತೋಟಗಾರಿಕೆ ಇಲಾಖೆ ಪಂಚನಾಮೆ ಮಾಡಬೇಕು. ಯಾವ ಪ್ರಭಾವಿಯ ಒತ್ತಡಕ್ಕೂ ಒಳಗಾಗಬಾರದು. 150 ಅಡಿಕೆ ಗಿಡಗಳು ಮತ್ತು 50 ತೆಂಗಿನ ಮರಗಳಿಗೆ ಭೂಪರಿಹಾರ ಕಾಯ್ದೆ ರೀತಿ ಲೆಕ್ಕಾಚಾರ ಹಾಕಿ ನಷ್ಟಪರಿಹಾರದ ಹಲವುಪಟ್ಟು ಪರಿಹಾರ ನೀಡಬೇಕು. ಈ ಪರಿಹಾರವನ್ನು ತಪ್ಪಿತಸ್ಥ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು ಎನ್ನುತ್ತಾರೆ ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಬಿ.ಉಮೇಶ್.

ಸಿದ್ದಮ್ಮ ಅಡಿಕೆ ಮತ್ತು ತೆಂಗಿನ ಗಿಡಗಳನ್ನು ಮಕ್ಕಳು ಬೆಳೆಸಿದಂತೆ ಬೆಳೆಸಿದ್ದರು. ಭೋಗವಾಗಿ ಬೆಳೆದಿದ್ದವು. ಜೀವತೇದು ಬೆಳೆಸಿದ ಮರಗಳನ್ನು ಕತ್ತರಿಸಿ ಹಾಕಿದರೆ ಎಂಥವರಿಗೂ ಹೊಟ್ಟೆ ಉರಿದುಹೋಗುತ್ತದೆ. ಅವು ಸಿದ್ದಮ್ಮನ ಜೀವನಾಧಾರವಾಗಿದ್ದವು. 50 ತೆಂಗಿನ ಮರಗಳು 150 ವರ್ಷ ಫಲ ಕೊಡುತ್ತವೆ. ವರ್ಷಕ್ಕೆ ಒಂದು ಮರ 250 ಕಾಯಿ ಕೊಡುತ್ತದೆಂದು ಲೆಕ್ಕಹಾಕಿದರೂ 50 ಮರಕ್ಕೆ 12,500 ಕಾಯಿ ಆಗುತ್ತದೆ. ಕಾಯಿಗೆ 20 ರೂನಂತೆ ಲೆಕ್ಕಹಾಕಿದರೂ ವರ್ಷಕ್ಕೆ 2 ಲಕ್ಷ 50 ಸಾವಿರ ಆದಾಯ ಬರುತ್ತದೆ. ಹಾಗಾಗಿ ಮುಂದಿನ 50 ವರ್ಷಗಳಿಗೆ ಅಡಿಕೆ ಮತ್ತು ತೆಂಗಿನ ಜೀವಿತಾವಧಿ ಎಂದು ಭಾವಿಸಿದರೂ 12 ಕೋಟಿ ಪರಿಹಾರ ನೀಡಬೇಕು. ಅವುಗಳನ್ನು ಶ್ರಮಪಟ್ಟು ಬೆಳೆಸಿಲ್ಲವೇ? ಹಾರೈಕೆ ಮಾಡಿಲ್ಲವೇ? ಎಂದು ರೈತರು ಪ್ರಶ್ನಿಸುತ್ತಾರೆ.

ಮರಗಳನ್ನು ಕಡಿದು ಹಾಕಿದ ಮೇಲೆ ಸಿದ್ದಮ್ಮರನ್ನು ಅಧಿಕಾರಿಗಳು ದಾಖಲೆ ಕೇಳಲು ಶುರುಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ತಹಶೀಲ್ದಾರ್ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡುತ್ತಿದ್ದಾರೆ. ಆದರೆ ಏಕೆ ಹೀಗಾಯ್ತು ಎಂಬುದನ್ನು ಸ್ಥಳೀಯ ಶಾಸಕರಾಗಲೀ, ಸಂಸದರಾಗಲೀ, ಜಿಲ್ಲಾ ಉಸ್ತುವಾರಿ ಸಚಿವರಾಗಲೀ ಸ್ಪಷ್ಟೀಕರಣ ಕೇಳುತ್ತಿಲ್ಲ. ಕಂದಾಯ ಅಧಿಕಾರಿ, ಗ್ರಾಮ ಲೆಕ್ಕಿಗರು ಹಾಗೂ ತಹಶೀಲ್ದಾರ್ ಬೇಜವಾಬ್ದಾರಿತನ ಈ ಪ್ರಕರಣದಲ್ಲಿ ಎದ್ದುಕಾಣುತ್ತಿದೆ. ಮರ ಕಡಿಯುವ ಸಂದರ್ಭದಲ್ಲಿ ದಾಖಲೆಗಳನ್ನು ಕೇಳಬಹುದಿತ್ತು. ಅದನ್ನು ಅಧಿಕಾರಿಗಳು ಮಾಡಿಲ್ಲ. ಮೊದಲೇ ದಾಖಲೆ ಪರಿಶೀಲಿಸಿದ್ದರೆ ಮರಗಳನ್ನು ಉಳಿಸಲು ಸಾಧ್ಯವಿತ್ತು. ಆದರೆ ಸಮಾಧಾನದಿಂದ ಪರಿಶೀಲಿಸುವ ಗೋಜಿಗೂ ಹೋಗಿಲ್ಲ ಅಂದರೆ ಅಧಿಕಾರಿಗಳ ತಪ್ಪು ಎದ್ದುಕಾಣುತ್ತಿದೆ. ಈ ತಪ್ಪಿಗೆ ಶಿಕ್ಷೆಯಾಗುವ ಮೊದಲು ಅವರಿಂದಲೇ ಪರಿಹಾರ ಕೊಡಿಸಬೇಕು. ಆಗ ಈ ಪ್ರಕರಣದ ಹಿಂದೆ ಯಾರು ಇದ್ದಾರೆ ಎಂಬುದು ಬಯಲಿಗೆ ಬರುತ್ತದೆ.


ಇದನ್ನೂ ಓದಿ: ನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ : ಧರಣಿ ಕೂತ ಮಹಿಳೆ, ಗ್ರಾಮಸ್ಥರ ಬೆಂಬಲ


ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿನ್ನೆ ಟ್ವೀಟ್ ಮಾಡಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ. ಅವರದೇ ಪಕ್ಷದ ಮಾಜಿ ಸಚಿವರು ಹಾಲಿ ಶಾಸಕ ಶ್ರೀನಿವಾಸ್ ಆ ಕ್ಷೇತ್ರದವರೇ ಆಗಿದ್ದಾರೆ. ಹಾಗಾಗಿ ಇದು ಕೇವಲ ಕಣ್ಣೊರೆಸುವ ತಂತ್ರವಾಗಬಾರದು. ಪ್ರಾಮಾಣಿಕ ಪ್ರಯತ್ನಗಳು ನಡೆಯಬೇಕು. ಬಿಜೆಪಿ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಹೋದಲ್ಲಿ ಬಂದಲ್ಲಿ ರೈತರ ನೆರವಿಗೆ ಸದಾಸಿದ್ದ ಎಂದು ಹೇಳುತ್ತಿದ್ದಾರೆ. ಆದರೆ ಗುಬ್ಬಿಯ ತಿಪ್ಪೂರು ಘಟನೆಯ ಬಗ್ಗೆ ಒಂದು ಚಕಾರವೂ ಇಲ್ಲ. ಭರವಸೆಗಳು ಬರೀ ಭಾಷಣಕ್ಕೆ ಸೀಮಿತವಾಗಬಾರದು. ಅದು ಅನುಷ್ಠಾನಕ್ಕೆ ಬರಬೇಕು ಅಷ್ಟೇ ಅನ್ನುತ್ತಾರೆ ರೈತರು.

ತೋಟ ಕಳೆದುಕೊಂಡಿರುವ ಸಿದ್ದಮ್ಮ ನಡೆಸುತ್ತಿರುವ ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಯುವ ಕಾಂಗ್ರೆಸ್ ಮುಖಂಡ ಆರ್ ರಾಜೇಂದ್ರ ಭೇಟಿ ನೀಡಿ ಇನ್ನು ಮೂರು ದಿನಗಳಲ್ಲಿ ಸೂಕ್ತ ಪರಿಹಾರ ನೀಡದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ ನೀಡಿ ಬಂದಿದ್ದಾರೆ. ಇಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಸಂತ್ರಸ್ಥೆಯ ನೆರವಿಗೆ ಧಾವಿಸಬೇಕು. ಮೊದಲು ಪರಿಹಾರ ಸಿಗಬೇಕು. ಆನಂತರ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಈ ಘಟನೆಯ ಹಿಂದೆ ಎಂಥಾ ಪ್ರಭಾವಿಯೇ ಇದ್ದ ಶಿಕ್ಷೆಗೆ ಗುರಿಪಡಿಸಬೇಕು. ಸಿದ್ದಮ್ಮ ಅವರಿಗೆ ಸೂಕ್ತ ನ್ಯಾಯ ದೊರೆಯಬೇಕು ಕೇವಲ ಅಧಿಕಾರಿಗಳನ್ನು ವರ್ಗ ಮಾಡುವುದರಿಂದ ನ್ಯಾಯ ದೊರೆಯುವುದಿಲ್ಲ ಎಂಬ ಸತ್ಯ ಹಲವು ಪ್ರಕರಣ ಗಳಲ್ಲಿ ಸ್ಪಷ್ಟವಾಗಿದೆ. ಈಗ ಸಂಸದ ಬಸವರಾಜು, ಸ್ಥಳೀಯ ಶಾಸಕ ಎಸ್.ಆರ್. ಶ್ರೀನಿವಾಸ್ ಪರಿಹಾರ ಕೊಡಿಸಲು ಮುಂದಾಗಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...