Homeಮುಖಪುಟತೆಂಗು-ಅಡಿಕೆ ತೋಟ ಕಳೆದುಕೊಂಡ ಸಿದ್ದಮ್ಮನಿಗೆ ಮೊದಲು ಪರಿಹಾರ ಕೊಡಿ, ನಂತರ ತನಿಖೆ ಮಾಡಿ

ತೆಂಗು-ಅಡಿಕೆ ತೋಟ ಕಳೆದುಕೊಂಡ ಸಿದ್ದಮ್ಮನಿಗೆ ಮೊದಲು ಪರಿಹಾರ ಕೊಡಿ, ನಂತರ ತನಿಖೆ ಮಾಡಿ

ಹೋದಲ್ಲಿ ಬಂದಲ್ಲಿ ರೈತರ ನೆರವಿಗೆ ಸದಾಸಿದ್ದ ಎಂದು ಹೇಳುವ ಯಡಿಯೂರಪ್ಪ ಗುಬ್ಬಿಯ ತಿಪ್ಪೂರು ಘಟನೆಯ ಬಗ್ಗೆ ಒಂದು ಚಕಾರವೂ ಇಲ್ಲ. ಭರವಸೆಗಳು ಬರೀ ಭಾಷಣಕ್ಕೆ ಸೀಮಿತವಾಗಬಾರದು.

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ತಿಪ್ಪೂರು ಗ್ರಾಮದಲ್ಲಿ ಸಿದ್ದಮ್ಮ ಎಂಬುವವರಿಗೆ ಸೇರಿದ ನೂರಾರು ತೆಂಗು, ಅಡಿಕೆ ಗಿಡಗಳನ್ನು ಕತ್ತರಿಸಿದ ಅಧಿಕಾರಿಗಳ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಜೊತೆಗೆ ಮೊದಲು ತೋಟ ಕಳೆದುಕೊಂಡಿರುವ ಸಿದ್ದಮ್ಮ ಅವರಿಗೆ ಪರಿಹಾರ ಕೊಡಿ, ಅನಂತರ ತಪ್ಪಿತಸ್ಥರ ವಿರುದ್ಧ ತನಿಖೆ ಮಾಡಿ ಕಾರಣರಾದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮುಂದಾಗಿ ಎಂಬ ಕೂಗು ಜಿಲ್ಲೆಯಾದ್ಯಂತ ಜೋರಾಗಿ ಕೇಳಿಬಂದಿದೆ.

ಪರಿಹಾರವನ್ನು ತಪ್ಪಿತಸ್ಥ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು. ಏಕೆಂದರೆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ, ತೆಂಗು ಮತ್ತು ಅಡಿಕೆ ಗಿಡ ಗಳನ್ನು ಕಡಿಸಿ ಹಾಕಿಸಿರುವುದು ಅಕ್ಷಮ್ಯ ಅಪರಾಧ. ರೈತರು ಗಿಡಗಳನ್ನು ಕಡಿಯುವಾಗ ನಿಯಮಗಳು ಅಡ್ಡ ಬರುತ್ತವೆ. ಅಧಿಕಾರಿಗಳು ಆ ಕೆಲಸ ಮಾಡಿದಾಗ ನಿಯಮಗಳು ಅಡ್ಡಬರಲಿಲ್ಲವೇ ಎಂಬ ಪ್ರಶ್ನೆ ಜನರಿಂದ ವ್ಯಕ್ತವಾಗಿದೆ.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ಕಾನೂನು ಎಲ್ಲರಿಗೂ ಒಂದೇ ಇರಬೇಕು. ಶ್ರೀಮಂತರಿಗೊಂದು, ಬಡವರಿಗೊಂದು ನ್ಯಾಯ ಇರಬಾರದು. ರೈತರು ಮರಗಳನ್ನು ಕಡಿದರೆ ಅಧಿಕಾರಿಗಳು ಇನ್ನಿಲ್ಲದ ಕಿರುಕುಳ ನೀಡುತ್ತಾರೆ. ಆಗ ಯಾವುದ್ಯಾವುದೋ ನಿಯಮಗಳು ನುಸುಳುತ್ತವೆ. ಅದೇ ಅಧಿಕಾರಿಗಳು ಮುಂದೆ ನಿಂತು ಗಿಡಗಳನ್ನು ಕಡಿಯುವಾಗ ತೋಟಗಾರಿಕೆ ಇಲಾಖೆಯ ನಿಯಮಗಳು ಅಡ್ಡಿಬರಲಿಲ್ಲವೇ? ಈಗ ಕಡಿದು ಹಾಕಿರುವ ಮರಗಳು ಮಧ್ಯವಯಸ್ಕ ಮರಗಳು. ತೋಟಗಾರಿಕೆ ಇಲಾಖೆ ಪಂಚನಾಮೆ ಮಾಡಬೇಕು. ಯಾವ ಪ್ರಭಾವಿಯ ಒತ್ತಡಕ್ಕೂ ಒಳಗಾಗಬಾರದು. 150 ಅಡಿಕೆ ಗಿಡಗಳು ಮತ್ತು 50 ತೆಂಗಿನ ಮರಗಳಿಗೆ ಭೂಪರಿಹಾರ ಕಾಯ್ದೆ ರೀತಿ ಲೆಕ್ಕಾಚಾರ ಹಾಕಿ ನಷ್ಟಪರಿಹಾರದ ಹಲವುಪಟ್ಟು ಪರಿಹಾರ ನೀಡಬೇಕು. ಈ ಪರಿಹಾರವನ್ನು ತಪ್ಪಿತಸ್ಥ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು ಎನ್ನುತ್ತಾರೆ ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಬಿ.ಉಮೇಶ್.

ಸಿದ್ದಮ್ಮ ಅಡಿಕೆ ಮತ್ತು ತೆಂಗಿನ ಗಿಡಗಳನ್ನು ಮಕ್ಕಳು ಬೆಳೆಸಿದಂತೆ ಬೆಳೆಸಿದ್ದರು. ಭೋಗವಾಗಿ ಬೆಳೆದಿದ್ದವು. ಜೀವತೇದು ಬೆಳೆಸಿದ ಮರಗಳನ್ನು ಕತ್ತರಿಸಿ ಹಾಕಿದರೆ ಎಂಥವರಿಗೂ ಹೊಟ್ಟೆ ಉರಿದುಹೋಗುತ್ತದೆ. ಅವು ಸಿದ್ದಮ್ಮನ ಜೀವನಾಧಾರವಾಗಿದ್ದವು. 50 ತೆಂಗಿನ ಮರಗಳು 150 ವರ್ಷ ಫಲ ಕೊಡುತ್ತವೆ. ವರ್ಷಕ್ಕೆ ಒಂದು ಮರ 250 ಕಾಯಿ ಕೊಡುತ್ತದೆಂದು ಲೆಕ್ಕಹಾಕಿದರೂ 50 ಮರಕ್ಕೆ 12,500 ಕಾಯಿ ಆಗುತ್ತದೆ. ಕಾಯಿಗೆ 20 ರೂನಂತೆ ಲೆಕ್ಕಹಾಕಿದರೂ ವರ್ಷಕ್ಕೆ 2 ಲಕ್ಷ 50 ಸಾವಿರ ಆದಾಯ ಬರುತ್ತದೆ. ಹಾಗಾಗಿ ಮುಂದಿನ 50 ವರ್ಷಗಳಿಗೆ ಅಡಿಕೆ ಮತ್ತು ತೆಂಗಿನ ಜೀವಿತಾವಧಿ ಎಂದು ಭಾವಿಸಿದರೂ 12 ಕೋಟಿ ಪರಿಹಾರ ನೀಡಬೇಕು. ಅವುಗಳನ್ನು ಶ್ರಮಪಟ್ಟು ಬೆಳೆಸಿಲ್ಲವೇ? ಹಾರೈಕೆ ಮಾಡಿಲ್ಲವೇ? ಎಂದು ರೈತರು ಪ್ರಶ್ನಿಸುತ್ತಾರೆ.

ಮರಗಳನ್ನು ಕಡಿದು ಹಾಕಿದ ಮೇಲೆ ಸಿದ್ದಮ್ಮರನ್ನು ಅಧಿಕಾರಿಗಳು ದಾಖಲೆ ಕೇಳಲು ಶುರುಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ತಹಶೀಲ್ದಾರ್ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡುತ್ತಿದ್ದಾರೆ. ಆದರೆ ಏಕೆ ಹೀಗಾಯ್ತು ಎಂಬುದನ್ನು ಸ್ಥಳೀಯ ಶಾಸಕರಾಗಲೀ, ಸಂಸದರಾಗಲೀ, ಜಿಲ್ಲಾ ಉಸ್ತುವಾರಿ ಸಚಿವರಾಗಲೀ ಸ್ಪಷ್ಟೀಕರಣ ಕೇಳುತ್ತಿಲ್ಲ. ಕಂದಾಯ ಅಧಿಕಾರಿ, ಗ್ರಾಮ ಲೆಕ್ಕಿಗರು ಹಾಗೂ ತಹಶೀಲ್ದಾರ್ ಬೇಜವಾಬ್ದಾರಿತನ ಈ ಪ್ರಕರಣದಲ್ಲಿ ಎದ್ದುಕಾಣುತ್ತಿದೆ. ಮರ ಕಡಿಯುವ ಸಂದರ್ಭದಲ್ಲಿ ದಾಖಲೆಗಳನ್ನು ಕೇಳಬಹುದಿತ್ತು. ಅದನ್ನು ಅಧಿಕಾರಿಗಳು ಮಾಡಿಲ್ಲ. ಮೊದಲೇ ದಾಖಲೆ ಪರಿಶೀಲಿಸಿದ್ದರೆ ಮರಗಳನ್ನು ಉಳಿಸಲು ಸಾಧ್ಯವಿತ್ತು. ಆದರೆ ಸಮಾಧಾನದಿಂದ ಪರಿಶೀಲಿಸುವ ಗೋಜಿಗೂ ಹೋಗಿಲ್ಲ ಅಂದರೆ ಅಧಿಕಾರಿಗಳ ತಪ್ಪು ಎದ್ದುಕಾಣುತ್ತಿದೆ. ಈ ತಪ್ಪಿಗೆ ಶಿಕ್ಷೆಯಾಗುವ ಮೊದಲು ಅವರಿಂದಲೇ ಪರಿಹಾರ ಕೊಡಿಸಬೇಕು. ಆಗ ಈ ಪ್ರಕರಣದ ಹಿಂದೆ ಯಾರು ಇದ್ದಾರೆ ಎಂಬುದು ಬಯಲಿಗೆ ಬರುತ್ತದೆ.


ಇದನ್ನೂ ಓದಿ: ನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ : ಧರಣಿ ಕೂತ ಮಹಿಳೆ, ಗ್ರಾಮಸ್ಥರ ಬೆಂಬಲ


ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿನ್ನೆ ಟ್ವೀಟ್ ಮಾಡಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ. ಅವರದೇ ಪಕ್ಷದ ಮಾಜಿ ಸಚಿವರು ಹಾಲಿ ಶಾಸಕ ಶ್ರೀನಿವಾಸ್ ಆ ಕ್ಷೇತ್ರದವರೇ ಆಗಿದ್ದಾರೆ. ಹಾಗಾಗಿ ಇದು ಕೇವಲ ಕಣ್ಣೊರೆಸುವ ತಂತ್ರವಾಗಬಾರದು. ಪ್ರಾಮಾಣಿಕ ಪ್ರಯತ್ನಗಳು ನಡೆಯಬೇಕು. ಬಿಜೆಪಿ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಹೋದಲ್ಲಿ ಬಂದಲ್ಲಿ ರೈತರ ನೆರವಿಗೆ ಸದಾಸಿದ್ದ ಎಂದು ಹೇಳುತ್ತಿದ್ದಾರೆ. ಆದರೆ ಗುಬ್ಬಿಯ ತಿಪ್ಪೂರು ಘಟನೆಯ ಬಗ್ಗೆ ಒಂದು ಚಕಾರವೂ ಇಲ್ಲ. ಭರವಸೆಗಳು ಬರೀ ಭಾಷಣಕ್ಕೆ ಸೀಮಿತವಾಗಬಾರದು. ಅದು ಅನುಷ್ಠಾನಕ್ಕೆ ಬರಬೇಕು ಅಷ್ಟೇ ಅನ್ನುತ್ತಾರೆ ರೈತರು.

ತೋಟ ಕಳೆದುಕೊಂಡಿರುವ ಸಿದ್ದಮ್ಮ ನಡೆಸುತ್ತಿರುವ ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಯುವ ಕಾಂಗ್ರೆಸ್ ಮುಖಂಡ ಆರ್ ರಾಜೇಂದ್ರ ಭೇಟಿ ನೀಡಿ ಇನ್ನು ಮೂರು ದಿನಗಳಲ್ಲಿ ಸೂಕ್ತ ಪರಿಹಾರ ನೀಡದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ ನೀಡಿ ಬಂದಿದ್ದಾರೆ. ಇಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಸಂತ್ರಸ್ಥೆಯ ನೆರವಿಗೆ ಧಾವಿಸಬೇಕು. ಮೊದಲು ಪರಿಹಾರ ಸಿಗಬೇಕು. ಆನಂತರ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಈ ಘಟನೆಯ ಹಿಂದೆ ಎಂಥಾ ಪ್ರಭಾವಿಯೇ ಇದ್ದ ಶಿಕ್ಷೆಗೆ ಗುರಿಪಡಿಸಬೇಕು. ಸಿದ್ದಮ್ಮ ಅವರಿಗೆ ಸೂಕ್ತ ನ್ಯಾಯ ದೊರೆಯಬೇಕು ಕೇವಲ ಅಧಿಕಾರಿಗಳನ್ನು ವರ್ಗ ಮಾಡುವುದರಿಂದ ನ್ಯಾಯ ದೊರೆಯುವುದಿಲ್ಲ ಎಂಬ ಸತ್ಯ ಹಲವು ಪ್ರಕರಣ ಗಳಲ್ಲಿ ಸ್ಪಷ್ಟವಾಗಿದೆ. ಈಗ ಸಂಸದ ಬಸವರಾಜು, ಸ್ಥಳೀಯ ಶಾಸಕ ಎಸ್.ಆರ್. ಶ್ರೀನಿವಾಸ್ ಪರಿಹಾರ ಕೊಡಿಸಲು ಮುಂದಾಗಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...