Homeಮುಖಪುಟತೆಂಗು-ಅಡಿಕೆ ತೋಟ ಕಳೆದುಕೊಂಡ ಸಿದ್ದಮ್ಮನಿಗೆ ಮೊದಲು ಪರಿಹಾರ ಕೊಡಿ, ನಂತರ ತನಿಖೆ ಮಾಡಿ

ತೆಂಗು-ಅಡಿಕೆ ತೋಟ ಕಳೆದುಕೊಂಡ ಸಿದ್ದಮ್ಮನಿಗೆ ಮೊದಲು ಪರಿಹಾರ ಕೊಡಿ, ನಂತರ ತನಿಖೆ ಮಾಡಿ

ಹೋದಲ್ಲಿ ಬಂದಲ್ಲಿ ರೈತರ ನೆರವಿಗೆ ಸದಾಸಿದ್ದ ಎಂದು ಹೇಳುವ ಯಡಿಯೂರಪ್ಪ ಗುಬ್ಬಿಯ ತಿಪ್ಪೂರು ಘಟನೆಯ ಬಗ್ಗೆ ಒಂದು ಚಕಾರವೂ ಇಲ್ಲ. ಭರವಸೆಗಳು ಬರೀ ಭಾಷಣಕ್ಕೆ ಸೀಮಿತವಾಗಬಾರದು.

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ತಿಪ್ಪೂರು ಗ್ರಾಮದಲ್ಲಿ ಸಿದ್ದಮ್ಮ ಎಂಬುವವರಿಗೆ ಸೇರಿದ ನೂರಾರು ತೆಂಗು, ಅಡಿಕೆ ಗಿಡಗಳನ್ನು ಕತ್ತರಿಸಿದ ಅಧಿಕಾರಿಗಳ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಜೊತೆಗೆ ಮೊದಲು ತೋಟ ಕಳೆದುಕೊಂಡಿರುವ ಸಿದ್ದಮ್ಮ ಅವರಿಗೆ ಪರಿಹಾರ ಕೊಡಿ, ಅನಂತರ ತಪ್ಪಿತಸ್ಥರ ವಿರುದ್ಧ ತನಿಖೆ ಮಾಡಿ ಕಾರಣರಾದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮುಂದಾಗಿ ಎಂಬ ಕೂಗು ಜಿಲ್ಲೆಯಾದ್ಯಂತ ಜೋರಾಗಿ ಕೇಳಿಬಂದಿದೆ.

ಪರಿಹಾರವನ್ನು ತಪ್ಪಿತಸ್ಥ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು. ಏಕೆಂದರೆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ, ತೆಂಗು ಮತ್ತು ಅಡಿಕೆ ಗಿಡ ಗಳನ್ನು ಕಡಿಸಿ ಹಾಕಿಸಿರುವುದು ಅಕ್ಷಮ್ಯ ಅಪರಾಧ. ರೈತರು ಗಿಡಗಳನ್ನು ಕಡಿಯುವಾಗ ನಿಯಮಗಳು ಅಡ್ಡ ಬರುತ್ತವೆ. ಅಧಿಕಾರಿಗಳು ಆ ಕೆಲಸ ಮಾಡಿದಾಗ ನಿಯಮಗಳು ಅಡ್ಡಬರಲಿಲ್ಲವೇ ಎಂಬ ಪ್ರಶ್ನೆ ಜನರಿಂದ ವ್ಯಕ್ತವಾಗಿದೆ.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ಕಾನೂನು ಎಲ್ಲರಿಗೂ ಒಂದೇ ಇರಬೇಕು. ಶ್ರೀಮಂತರಿಗೊಂದು, ಬಡವರಿಗೊಂದು ನ್ಯಾಯ ಇರಬಾರದು. ರೈತರು ಮರಗಳನ್ನು ಕಡಿದರೆ ಅಧಿಕಾರಿಗಳು ಇನ್ನಿಲ್ಲದ ಕಿರುಕುಳ ನೀಡುತ್ತಾರೆ. ಆಗ ಯಾವುದ್ಯಾವುದೋ ನಿಯಮಗಳು ನುಸುಳುತ್ತವೆ. ಅದೇ ಅಧಿಕಾರಿಗಳು ಮುಂದೆ ನಿಂತು ಗಿಡಗಳನ್ನು ಕಡಿಯುವಾಗ ತೋಟಗಾರಿಕೆ ಇಲಾಖೆಯ ನಿಯಮಗಳು ಅಡ್ಡಿಬರಲಿಲ್ಲವೇ? ಈಗ ಕಡಿದು ಹಾಕಿರುವ ಮರಗಳು ಮಧ್ಯವಯಸ್ಕ ಮರಗಳು. ತೋಟಗಾರಿಕೆ ಇಲಾಖೆ ಪಂಚನಾಮೆ ಮಾಡಬೇಕು. ಯಾವ ಪ್ರಭಾವಿಯ ಒತ್ತಡಕ್ಕೂ ಒಳಗಾಗಬಾರದು. 150 ಅಡಿಕೆ ಗಿಡಗಳು ಮತ್ತು 50 ತೆಂಗಿನ ಮರಗಳಿಗೆ ಭೂಪರಿಹಾರ ಕಾಯ್ದೆ ರೀತಿ ಲೆಕ್ಕಾಚಾರ ಹಾಕಿ ನಷ್ಟಪರಿಹಾರದ ಹಲವುಪಟ್ಟು ಪರಿಹಾರ ನೀಡಬೇಕು. ಈ ಪರಿಹಾರವನ್ನು ತಪ್ಪಿತಸ್ಥ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು ಎನ್ನುತ್ತಾರೆ ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಬಿ.ಉಮೇಶ್.

ಸಿದ್ದಮ್ಮ ಅಡಿಕೆ ಮತ್ತು ತೆಂಗಿನ ಗಿಡಗಳನ್ನು ಮಕ್ಕಳು ಬೆಳೆಸಿದಂತೆ ಬೆಳೆಸಿದ್ದರು. ಭೋಗವಾಗಿ ಬೆಳೆದಿದ್ದವು. ಜೀವತೇದು ಬೆಳೆಸಿದ ಮರಗಳನ್ನು ಕತ್ತರಿಸಿ ಹಾಕಿದರೆ ಎಂಥವರಿಗೂ ಹೊಟ್ಟೆ ಉರಿದುಹೋಗುತ್ತದೆ. ಅವು ಸಿದ್ದಮ್ಮನ ಜೀವನಾಧಾರವಾಗಿದ್ದವು. 50 ತೆಂಗಿನ ಮರಗಳು 150 ವರ್ಷ ಫಲ ಕೊಡುತ್ತವೆ. ವರ್ಷಕ್ಕೆ ಒಂದು ಮರ 250 ಕಾಯಿ ಕೊಡುತ್ತದೆಂದು ಲೆಕ್ಕಹಾಕಿದರೂ 50 ಮರಕ್ಕೆ 12,500 ಕಾಯಿ ಆಗುತ್ತದೆ. ಕಾಯಿಗೆ 20 ರೂನಂತೆ ಲೆಕ್ಕಹಾಕಿದರೂ ವರ್ಷಕ್ಕೆ 2 ಲಕ್ಷ 50 ಸಾವಿರ ಆದಾಯ ಬರುತ್ತದೆ. ಹಾಗಾಗಿ ಮುಂದಿನ 50 ವರ್ಷಗಳಿಗೆ ಅಡಿಕೆ ಮತ್ತು ತೆಂಗಿನ ಜೀವಿತಾವಧಿ ಎಂದು ಭಾವಿಸಿದರೂ 12 ಕೋಟಿ ಪರಿಹಾರ ನೀಡಬೇಕು. ಅವುಗಳನ್ನು ಶ್ರಮಪಟ್ಟು ಬೆಳೆಸಿಲ್ಲವೇ? ಹಾರೈಕೆ ಮಾಡಿಲ್ಲವೇ? ಎಂದು ರೈತರು ಪ್ರಶ್ನಿಸುತ್ತಾರೆ.

ಮರಗಳನ್ನು ಕಡಿದು ಹಾಕಿದ ಮೇಲೆ ಸಿದ್ದಮ್ಮರನ್ನು ಅಧಿಕಾರಿಗಳು ದಾಖಲೆ ಕೇಳಲು ಶುರುಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ತಹಶೀಲ್ದಾರ್ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡುತ್ತಿದ್ದಾರೆ. ಆದರೆ ಏಕೆ ಹೀಗಾಯ್ತು ಎಂಬುದನ್ನು ಸ್ಥಳೀಯ ಶಾಸಕರಾಗಲೀ, ಸಂಸದರಾಗಲೀ, ಜಿಲ್ಲಾ ಉಸ್ತುವಾರಿ ಸಚಿವರಾಗಲೀ ಸ್ಪಷ್ಟೀಕರಣ ಕೇಳುತ್ತಿಲ್ಲ. ಕಂದಾಯ ಅಧಿಕಾರಿ, ಗ್ರಾಮ ಲೆಕ್ಕಿಗರು ಹಾಗೂ ತಹಶೀಲ್ದಾರ್ ಬೇಜವಾಬ್ದಾರಿತನ ಈ ಪ್ರಕರಣದಲ್ಲಿ ಎದ್ದುಕಾಣುತ್ತಿದೆ. ಮರ ಕಡಿಯುವ ಸಂದರ್ಭದಲ್ಲಿ ದಾಖಲೆಗಳನ್ನು ಕೇಳಬಹುದಿತ್ತು. ಅದನ್ನು ಅಧಿಕಾರಿಗಳು ಮಾಡಿಲ್ಲ. ಮೊದಲೇ ದಾಖಲೆ ಪರಿಶೀಲಿಸಿದ್ದರೆ ಮರಗಳನ್ನು ಉಳಿಸಲು ಸಾಧ್ಯವಿತ್ತು. ಆದರೆ ಸಮಾಧಾನದಿಂದ ಪರಿಶೀಲಿಸುವ ಗೋಜಿಗೂ ಹೋಗಿಲ್ಲ ಅಂದರೆ ಅಧಿಕಾರಿಗಳ ತಪ್ಪು ಎದ್ದುಕಾಣುತ್ತಿದೆ. ಈ ತಪ್ಪಿಗೆ ಶಿಕ್ಷೆಯಾಗುವ ಮೊದಲು ಅವರಿಂದಲೇ ಪರಿಹಾರ ಕೊಡಿಸಬೇಕು. ಆಗ ಈ ಪ್ರಕರಣದ ಹಿಂದೆ ಯಾರು ಇದ್ದಾರೆ ಎಂಬುದು ಬಯಲಿಗೆ ಬರುತ್ತದೆ.


ಇದನ್ನೂ ಓದಿ: ನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ : ಧರಣಿ ಕೂತ ಮಹಿಳೆ, ಗ್ರಾಮಸ್ಥರ ಬೆಂಬಲ


ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿನ್ನೆ ಟ್ವೀಟ್ ಮಾಡಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ. ಅವರದೇ ಪಕ್ಷದ ಮಾಜಿ ಸಚಿವರು ಹಾಲಿ ಶಾಸಕ ಶ್ರೀನಿವಾಸ್ ಆ ಕ್ಷೇತ್ರದವರೇ ಆಗಿದ್ದಾರೆ. ಹಾಗಾಗಿ ಇದು ಕೇವಲ ಕಣ್ಣೊರೆಸುವ ತಂತ್ರವಾಗಬಾರದು. ಪ್ರಾಮಾಣಿಕ ಪ್ರಯತ್ನಗಳು ನಡೆಯಬೇಕು. ಬಿಜೆಪಿ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಹೋದಲ್ಲಿ ಬಂದಲ್ಲಿ ರೈತರ ನೆರವಿಗೆ ಸದಾಸಿದ್ದ ಎಂದು ಹೇಳುತ್ತಿದ್ದಾರೆ. ಆದರೆ ಗುಬ್ಬಿಯ ತಿಪ್ಪೂರು ಘಟನೆಯ ಬಗ್ಗೆ ಒಂದು ಚಕಾರವೂ ಇಲ್ಲ. ಭರವಸೆಗಳು ಬರೀ ಭಾಷಣಕ್ಕೆ ಸೀಮಿತವಾಗಬಾರದು. ಅದು ಅನುಷ್ಠಾನಕ್ಕೆ ಬರಬೇಕು ಅಷ್ಟೇ ಅನ್ನುತ್ತಾರೆ ರೈತರು.

ತೋಟ ಕಳೆದುಕೊಂಡಿರುವ ಸಿದ್ದಮ್ಮ ನಡೆಸುತ್ತಿರುವ ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಯುವ ಕಾಂಗ್ರೆಸ್ ಮುಖಂಡ ಆರ್ ರಾಜೇಂದ್ರ ಭೇಟಿ ನೀಡಿ ಇನ್ನು ಮೂರು ದಿನಗಳಲ್ಲಿ ಸೂಕ್ತ ಪರಿಹಾರ ನೀಡದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ ನೀಡಿ ಬಂದಿದ್ದಾರೆ. ಇಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಸಂತ್ರಸ್ಥೆಯ ನೆರವಿಗೆ ಧಾವಿಸಬೇಕು. ಮೊದಲು ಪರಿಹಾರ ಸಿಗಬೇಕು. ಆನಂತರ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಈ ಘಟನೆಯ ಹಿಂದೆ ಎಂಥಾ ಪ್ರಭಾವಿಯೇ ಇದ್ದ ಶಿಕ್ಷೆಗೆ ಗುರಿಪಡಿಸಬೇಕು. ಸಿದ್ದಮ್ಮ ಅವರಿಗೆ ಸೂಕ್ತ ನ್ಯಾಯ ದೊರೆಯಬೇಕು ಕೇವಲ ಅಧಿಕಾರಿಗಳನ್ನು ವರ್ಗ ಮಾಡುವುದರಿಂದ ನ್ಯಾಯ ದೊರೆಯುವುದಿಲ್ಲ ಎಂಬ ಸತ್ಯ ಹಲವು ಪ್ರಕರಣ ಗಳಲ್ಲಿ ಸ್ಪಷ್ಟವಾಗಿದೆ. ಈಗ ಸಂಸದ ಬಸವರಾಜು, ಸ್ಥಳೀಯ ಶಾಸಕ ಎಸ್.ಆರ್. ಶ್ರೀನಿವಾಸ್ ಪರಿಹಾರ ಕೊಡಿಸಲು ಮುಂದಾಗಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...