Homeಮುಖಪುಟತೆಂಗು-ಅಡಿಕೆ ತೋಟ ಕಳೆದುಕೊಂಡ ಸಿದ್ದಮ್ಮನಿಗೆ ಮೊದಲು ಪರಿಹಾರ ಕೊಡಿ, ನಂತರ ತನಿಖೆ ಮಾಡಿ

ತೆಂಗು-ಅಡಿಕೆ ತೋಟ ಕಳೆದುಕೊಂಡ ಸಿದ್ದಮ್ಮನಿಗೆ ಮೊದಲು ಪರಿಹಾರ ಕೊಡಿ, ನಂತರ ತನಿಖೆ ಮಾಡಿ

ಹೋದಲ್ಲಿ ಬಂದಲ್ಲಿ ರೈತರ ನೆರವಿಗೆ ಸದಾಸಿದ್ದ ಎಂದು ಹೇಳುವ ಯಡಿಯೂರಪ್ಪ ಗುಬ್ಬಿಯ ತಿಪ್ಪೂರು ಘಟನೆಯ ಬಗ್ಗೆ ಒಂದು ಚಕಾರವೂ ಇಲ್ಲ. ಭರವಸೆಗಳು ಬರೀ ಭಾಷಣಕ್ಕೆ ಸೀಮಿತವಾಗಬಾರದು.

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ತಿಪ್ಪೂರು ಗ್ರಾಮದಲ್ಲಿ ಸಿದ್ದಮ್ಮ ಎಂಬುವವರಿಗೆ ಸೇರಿದ ನೂರಾರು ತೆಂಗು, ಅಡಿಕೆ ಗಿಡಗಳನ್ನು ಕತ್ತರಿಸಿದ ಅಧಿಕಾರಿಗಳ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಜೊತೆಗೆ ಮೊದಲು ತೋಟ ಕಳೆದುಕೊಂಡಿರುವ ಸಿದ್ದಮ್ಮ ಅವರಿಗೆ ಪರಿಹಾರ ಕೊಡಿ, ಅನಂತರ ತಪ್ಪಿತಸ್ಥರ ವಿರುದ್ಧ ತನಿಖೆ ಮಾಡಿ ಕಾರಣರಾದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮುಂದಾಗಿ ಎಂಬ ಕೂಗು ಜಿಲ್ಲೆಯಾದ್ಯಂತ ಜೋರಾಗಿ ಕೇಳಿಬಂದಿದೆ.

ಪರಿಹಾರವನ್ನು ತಪ್ಪಿತಸ್ಥ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು. ಏಕೆಂದರೆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ, ತೆಂಗು ಮತ್ತು ಅಡಿಕೆ ಗಿಡ ಗಳನ್ನು ಕಡಿಸಿ ಹಾಕಿಸಿರುವುದು ಅಕ್ಷಮ್ಯ ಅಪರಾಧ. ರೈತರು ಗಿಡಗಳನ್ನು ಕಡಿಯುವಾಗ ನಿಯಮಗಳು ಅಡ್ಡ ಬರುತ್ತವೆ. ಅಧಿಕಾರಿಗಳು ಆ ಕೆಲಸ ಮಾಡಿದಾಗ ನಿಯಮಗಳು ಅಡ್ಡಬರಲಿಲ್ಲವೇ ಎಂಬ ಪ್ರಶ್ನೆ ಜನರಿಂದ ವ್ಯಕ್ತವಾಗಿದೆ.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ಕಾನೂನು ಎಲ್ಲರಿಗೂ ಒಂದೇ ಇರಬೇಕು. ಶ್ರೀಮಂತರಿಗೊಂದು, ಬಡವರಿಗೊಂದು ನ್ಯಾಯ ಇರಬಾರದು. ರೈತರು ಮರಗಳನ್ನು ಕಡಿದರೆ ಅಧಿಕಾರಿಗಳು ಇನ್ನಿಲ್ಲದ ಕಿರುಕುಳ ನೀಡುತ್ತಾರೆ. ಆಗ ಯಾವುದ್ಯಾವುದೋ ನಿಯಮಗಳು ನುಸುಳುತ್ತವೆ. ಅದೇ ಅಧಿಕಾರಿಗಳು ಮುಂದೆ ನಿಂತು ಗಿಡಗಳನ್ನು ಕಡಿಯುವಾಗ ತೋಟಗಾರಿಕೆ ಇಲಾಖೆಯ ನಿಯಮಗಳು ಅಡ್ಡಿಬರಲಿಲ್ಲವೇ? ಈಗ ಕಡಿದು ಹಾಕಿರುವ ಮರಗಳು ಮಧ್ಯವಯಸ್ಕ ಮರಗಳು. ತೋಟಗಾರಿಕೆ ಇಲಾಖೆ ಪಂಚನಾಮೆ ಮಾಡಬೇಕು. ಯಾವ ಪ್ರಭಾವಿಯ ಒತ್ತಡಕ್ಕೂ ಒಳಗಾಗಬಾರದು. 150 ಅಡಿಕೆ ಗಿಡಗಳು ಮತ್ತು 50 ತೆಂಗಿನ ಮರಗಳಿಗೆ ಭೂಪರಿಹಾರ ಕಾಯ್ದೆ ರೀತಿ ಲೆಕ್ಕಾಚಾರ ಹಾಕಿ ನಷ್ಟಪರಿಹಾರದ ಹಲವುಪಟ್ಟು ಪರಿಹಾರ ನೀಡಬೇಕು. ಈ ಪರಿಹಾರವನ್ನು ತಪ್ಪಿತಸ್ಥ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು ಎನ್ನುತ್ತಾರೆ ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಬಿ.ಉಮೇಶ್.

ಸಿದ್ದಮ್ಮ ಅಡಿಕೆ ಮತ್ತು ತೆಂಗಿನ ಗಿಡಗಳನ್ನು ಮಕ್ಕಳು ಬೆಳೆಸಿದಂತೆ ಬೆಳೆಸಿದ್ದರು. ಭೋಗವಾಗಿ ಬೆಳೆದಿದ್ದವು. ಜೀವತೇದು ಬೆಳೆಸಿದ ಮರಗಳನ್ನು ಕತ್ತರಿಸಿ ಹಾಕಿದರೆ ಎಂಥವರಿಗೂ ಹೊಟ್ಟೆ ಉರಿದುಹೋಗುತ್ತದೆ. ಅವು ಸಿದ್ದಮ್ಮನ ಜೀವನಾಧಾರವಾಗಿದ್ದವು. 50 ತೆಂಗಿನ ಮರಗಳು 150 ವರ್ಷ ಫಲ ಕೊಡುತ್ತವೆ. ವರ್ಷಕ್ಕೆ ಒಂದು ಮರ 250 ಕಾಯಿ ಕೊಡುತ್ತದೆಂದು ಲೆಕ್ಕಹಾಕಿದರೂ 50 ಮರಕ್ಕೆ 12,500 ಕಾಯಿ ಆಗುತ್ತದೆ. ಕಾಯಿಗೆ 20 ರೂನಂತೆ ಲೆಕ್ಕಹಾಕಿದರೂ ವರ್ಷಕ್ಕೆ 2 ಲಕ್ಷ 50 ಸಾವಿರ ಆದಾಯ ಬರುತ್ತದೆ. ಹಾಗಾಗಿ ಮುಂದಿನ 50 ವರ್ಷಗಳಿಗೆ ಅಡಿಕೆ ಮತ್ತು ತೆಂಗಿನ ಜೀವಿತಾವಧಿ ಎಂದು ಭಾವಿಸಿದರೂ 12 ಕೋಟಿ ಪರಿಹಾರ ನೀಡಬೇಕು. ಅವುಗಳನ್ನು ಶ್ರಮಪಟ್ಟು ಬೆಳೆಸಿಲ್ಲವೇ? ಹಾರೈಕೆ ಮಾಡಿಲ್ಲವೇ? ಎಂದು ರೈತರು ಪ್ರಶ್ನಿಸುತ್ತಾರೆ.

ಮರಗಳನ್ನು ಕಡಿದು ಹಾಕಿದ ಮೇಲೆ ಸಿದ್ದಮ್ಮರನ್ನು ಅಧಿಕಾರಿಗಳು ದಾಖಲೆ ಕೇಳಲು ಶುರುಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ತಹಶೀಲ್ದಾರ್ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡುತ್ತಿದ್ದಾರೆ. ಆದರೆ ಏಕೆ ಹೀಗಾಯ್ತು ಎಂಬುದನ್ನು ಸ್ಥಳೀಯ ಶಾಸಕರಾಗಲೀ, ಸಂಸದರಾಗಲೀ, ಜಿಲ್ಲಾ ಉಸ್ತುವಾರಿ ಸಚಿವರಾಗಲೀ ಸ್ಪಷ್ಟೀಕರಣ ಕೇಳುತ್ತಿಲ್ಲ. ಕಂದಾಯ ಅಧಿಕಾರಿ, ಗ್ರಾಮ ಲೆಕ್ಕಿಗರು ಹಾಗೂ ತಹಶೀಲ್ದಾರ್ ಬೇಜವಾಬ್ದಾರಿತನ ಈ ಪ್ರಕರಣದಲ್ಲಿ ಎದ್ದುಕಾಣುತ್ತಿದೆ. ಮರ ಕಡಿಯುವ ಸಂದರ್ಭದಲ್ಲಿ ದಾಖಲೆಗಳನ್ನು ಕೇಳಬಹುದಿತ್ತು. ಅದನ್ನು ಅಧಿಕಾರಿಗಳು ಮಾಡಿಲ್ಲ. ಮೊದಲೇ ದಾಖಲೆ ಪರಿಶೀಲಿಸಿದ್ದರೆ ಮರಗಳನ್ನು ಉಳಿಸಲು ಸಾಧ್ಯವಿತ್ತು. ಆದರೆ ಸಮಾಧಾನದಿಂದ ಪರಿಶೀಲಿಸುವ ಗೋಜಿಗೂ ಹೋಗಿಲ್ಲ ಅಂದರೆ ಅಧಿಕಾರಿಗಳ ತಪ್ಪು ಎದ್ದುಕಾಣುತ್ತಿದೆ. ಈ ತಪ್ಪಿಗೆ ಶಿಕ್ಷೆಯಾಗುವ ಮೊದಲು ಅವರಿಂದಲೇ ಪರಿಹಾರ ಕೊಡಿಸಬೇಕು. ಆಗ ಈ ಪ್ರಕರಣದ ಹಿಂದೆ ಯಾರು ಇದ್ದಾರೆ ಎಂಬುದು ಬಯಲಿಗೆ ಬರುತ್ತದೆ.


ಇದನ್ನೂ ಓದಿ: ನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ : ಧರಣಿ ಕೂತ ಮಹಿಳೆ, ಗ್ರಾಮಸ್ಥರ ಬೆಂಬಲ


ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿನ್ನೆ ಟ್ವೀಟ್ ಮಾಡಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ. ಅವರದೇ ಪಕ್ಷದ ಮಾಜಿ ಸಚಿವರು ಹಾಲಿ ಶಾಸಕ ಶ್ರೀನಿವಾಸ್ ಆ ಕ್ಷೇತ್ರದವರೇ ಆಗಿದ್ದಾರೆ. ಹಾಗಾಗಿ ಇದು ಕೇವಲ ಕಣ್ಣೊರೆಸುವ ತಂತ್ರವಾಗಬಾರದು. ಪ್ರಾಮಾಣಿಕ ಪ್ರಯತ್ನಗಳು ನಡೆಯಬೇಕು. ಬಿಜೆಪಿ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಹೋದಲ್ಲಿ ಬಂದಲ್ಲಿ ರೈತರ ನೆರವಿಗೆ ಸದಾಸಿದ್ದ ಎಂದು ಹೇಳುತ್ತಿದ್ದಾರೆ. ಆದರೆ ಗುಬ್ಬಿಯ ತಿಪ್ಪೂರು ಘಟನೆಯ ಬಗ್ಗೆ ಒಂದು ಚಕಾರವೂ ಇಲ್ಲ. ಭರವಸೆಗಳು ಬರೀ ಭಾಷಣಕ್ಕೆ ಸೀಮಿತವಾಗಬಾರದು. ಅದು ಅನುಷ್ಠಾನಕ್ಕೆ ಬರಬೇಕು ಅಷ್ಟೇ ಅನ್ನುತ್ತಾರೆ ರೈತರು.

ತೋಟ ಕಳೆದುಕೊಂಡಿರುವ ಸಿದ್ದಮ್ಮ ನಡೆಸುತ್ತಿರುವ ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಯುವ ಕಾಂಗ್ರೆಸ್ ಮುಖಂಡ ಆರ್ ರಾಜೇಂದ್ರ ಭೇಟಿ ನೀಡಿ ಇನ್ನು ಮೂರು ದಿನಗಳಲ್ಲಿ ಸೂಕ್ತ ಪರಿಹಾರ ನೀಡದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ ನೀಡಿ ಬಂದಿದ್ದಾರೆ. ಇಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಸಂತ್ರಸ್ಥೆಯ ನೆರವಿಗೆ ಧಾವಿಸಬೇಕು. ಮೊದಲು ಪರಿಹಾರ ಸಿಗಬೇಕು. ಆನಂತರ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಈ ಘಟನೆಯ ಹಿಂದೆ ಎಂಥಾ ಪ್ರಭಾವಿಯೇ ಇದ್ದ ಶಿಕ್ಷೆಗೆ ಗುರಿಪಡಿಸಬೇಕು. ಸಿದ್ದಮ್ಮ ಅವರಿಗೆ ಸೂಕ್ತ ನ್ಯಾಯ ದೊರೆಯಬೇಕು ಕೇವಲ ಅಧಿಕಾರಿಗಳನ್ನು ವರ್ಗ ಮಾಡುವುದರಿಂದ ನ್ಯಾಯ ದೊರೆಯುವುದಿಲ್ಲ ಎಂಬ ಸತ್ಯ ಹಲವು ಪ್ರಕರಣ ಗಳಲ್ಲಿ ಸ್ಪಷ್ಟವಾಗಿದೆ. ಈಗ ಸಂಸದ ಬಸವರಾಜು, ಸ್ಥಳೀಯ ಶಾಸಕ ಎಸ್.ಆರ್. ಶ್ರೀನಿವಾಸ್ ಪರಿಹಾರ ಕೊಡಿಸಲು ಮುಂದಾಗಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...