Homeಮುಖಪುಟತೆಂಗು-ಅಡಿಕೆ ತೋಟ ಕಳೆದುಕೊಂಡ ಸಿದ್ದಮ್ಮನಿಗೆ ಮೊದಲು ಪರಿಹಾರ ಕೊಡಿ, ನಂತರ ತನಿಖೆ ಮಾಡಿ

ತೆಂಗು-ಅಡಿಕೆ ತೋಟ ಕಳೆದುಕೊಂಡ ಸಿದ್ದಮ್ಮನಿಗೆ ಮೊದಲು ಪರಿಹಾರ ಕೊಡಿ, ನಂತರ ತನಿಖೆ ಮಾಡಿ

ಹೋದಲ್ಲಿ ಬಂದಲ್ಲಿ ರೈತರ ನೆರವಿಗೆ ಸದಾಸಿದ್ದ ಎಂದು ಹೇಳುವ ಯಡಿಯೂರಪ್ಪ ಗುಬ್ಬಿಯ ತಿಪ್ಪೂರು ಘಟನೆಯ ಬಗ್ಗೆ ಒಂದು ಚಕಾರವೂ ಇಲ್ಲ. ಭರವಸೆಗಳು ಬರೀ ಭಾಷಣಕ್ಕೆ ಸೀಮಿತವಾಗಬಾರದು.

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ತಿಪ್ಪೂರು ಗ್ರಾಮದಲ್ಲಿ ಸಿದ್ದಮ್ಮ ಎಂಬುವವರಿಗೆ ಸೇರಿದ ನೂರಾರು ತೆಂಗು, ಅಡಿಕೆ ಗಿಡಗಳನ್ನು ಕತ್ತರಿಸಿದ ಅಧಿಕಾರಿಗಳ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಜೊತೆಗೆ ಮೊದಲು ತೋಟ ಕಳೆದುಕೊಂಡಿರುವ ಸಿದ್ದಮ್ಮ ಅವರಿಗೆ ಪರಿಹಾರ ಕೊಡಿ, ಅನಂತರ ತಪ್ಪಿತಸ್ಥರ ವಿರುದ್ಧ ತನಿಖೆ ಮಾಡಿ ಕಾರಣರಾದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮುಂದಾಗಿ ಎಂಬ ಕೂಗು ಜಿಲ್ಲೆಯಾದ್ಯಂತ ಜೋರಾಗಿ ಕೇಳಿಬಂದಿದೆ.

ಪರಿಹಾರವನ್ನು ತಪ್ಪಿತಸ್ಥ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು. ಏಕೆಂದರೆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ, ತೆಂಗು ಮತ್ತು ಅಡಿಕೆ ಗಿಡ ಗಳನ್ನು ಕಡಿಸಿ ಹಾಕಿಸಿರುವುದು ಅಕ್ಷಮ್ಯ ಅಪರಾಧ. ರೈತರು ಗಿಡಗಳನ್ನು ಕಡಿಯುವಾಗ ನಿಯಮಗಳು ಅಡ್ಡ ಬರುತ್ತವೆ. ಅಧಿಕಾರಿಗಳು ಆ ಕೆಲಸ ಮಾಡಿದಾಗ ನಿಯಮಗಳು ಅಡ್ಡಬರಲಿಲ್ಲವೇ ಎಂಬ ಪ್ರಶ್ನೆ ಜನರಿಂದ ವ್ಯಕ್ತವಾಗಿದೆ.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ಕಾನೂನು ಎಲ್ಲರಿಗೂ ಒಂದೇ ಇರಬೇಕು. ಶ್ರೀಮಂತರಿಗೊಂದು, ಬಡವರಿಗೊಂದು ನ್ಯಾಯ ಇರಬಾರದು. ರೈತರು ಮರಗಳನ್ನು ಕಡಿದರೆ ಅಧಿಕಾರಿಗಳು ಇನ್ನಿಲ್ಲದ ಕಿರುಕುಳ ನೀಡುತ್ತಾರೆ. ಆಗ ಯಾವುದ್ಯಾವುದೋ ನಿಯಮಗಳು ನುಸುಳುತ್ತವೆ. ಅದೇ ಅಧಿಕಾರಿಗಳು ಮುಂದೆ ನಿಂತು ಗಿಡಗಳನ್ನು ಕಡಿಯುವಾಗ ತೋಟಗಾರಿಕೆ ಇಲಾಖೆಯ ನಿಯಮಗಳು ಅಡ್ಡಿಬರಲಿಲ್ಲವೇ? ಈಗ ಕಡಿದು ಹಾಕಿರುವ ಮರಗಳು ಮಧ್ಯವಯಸ್ಕ ಮರಗಳು. ತೋಟಗಾರಿಕೆ ಇಲಾಖೆ ಪಂಚನಾಮೆ ಮಾಡಬೇಕು. ಯಾವ ಪ್ರಭಾವಿಯ ಒತ್ತಡಕ್ಕೂ ಒಳಗಾಗಬಾರದು. 150 ಅಡಿಕೆ ಗಿಡಗಳು ಮತ್ತು 50 ತೆಂಗಿನ ಮರಗಳಿಗೆ ಭೂಪರಿಹಾರ ಕಾಯ್ದೆ ರೀತಿ ಲೆಕ್ಕಾಚಾರ ಹಾಕಿ ನಷ್ಟಪರಿಹಾರದ ಹಲವುಪಟ್ಟು ಪರಿಹಾರ ನೀಡಬೇಕು. ಈ ಪರಿಹಾರವನ್ನು ತಪ್ಪಿತಸ್ಥ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು ಎನ್ನುತ್ತಾರೆ ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಬಿ.ಉಮೇಶ್.

ಸಿದ್ದಮ್ಮ ಅಡಿಕೆ ಮತ್ತು ತೆಂಗಿನ ಗಿಡಗಳನ್ನು ಮಕ್ಕಳು ಬೆಳೆಸಿದಂತೆ ಬೆಳೆಸಿದ್ದರು. ಭೋಗವಾಗಿ ಬೆಳೆದಿದ್ದವು. ಜೀವತೇದು ಬೆಳೆಸಿದ ಮರಗಳನ್ನು ಕತ್ತರಿಸಿ ಹಾಕಿದರೆ ಎಂಥವರಿಗೂ ಹೊಟ್ಟೆ ಉರಿದುಹೋಗುತ್ತದೆ. ಅವು ಸಿದ್ದಮ್ಮನ ಜೀವನಾಧಾರವಾಗಿದ್ದವು. 50 ತೆಂಗಿನ ಮರಗಳು 150 ವರ್ಷ ಫಲ ಕೊಡುತ್ತವೆ. ವರ್ಷಕ್ಕೆ ಒಂದು ಮರ 250 ಕಾಯಿ ಕೊಡುತ್ತದೆಂದು ಲೆಕ್ಕಹಾಕಿದರೂ 50 ಮರಕ್ಕೆ 12,500 ಕಾಯಿ ಆಗುತ್ತದೆ. ಕಾಯಿಗೆ 20 ರೂನಂತೆ ಲೆಕ್ಕಹಾಕಿದರೂ ವರ್ಷಕ್ಕೆ 2 ಲಕ್ಷ 50 ಸಾವಿರ ಆದಾಯ ಬರುತ್ತದೆ. ಹಾಗಾಗಿ ಮುಂದಿನ 50 ವರ್ಷಗಳಿಗೆ ಅಡಿಕೆ ಮತ್ತು ತೆಂಗಿನ ಜೀವಿತಾವಧಿ ಎಂದು ಭಾವಿಸಿದರೂ 12 ಕೋಟಿ ಪರಿಹಾರ ನೀಡಬೇಕು. ಅವುಗಳನ್ನು ಶ್ರಮಪಟ್ಟು ಬೆಳೆಸಿಲ್ಲವೇ? ಹಾರೈಕೆ ಮಾಡಿಲ್ಲವೇ? ಎಂದು ರೈತರು ಪ್ರಶ್ನಿಸುತ್ತಾರೆ.

ಮರಗಳನ್ನು ಕಡಿದು ಹಾಕಿದ ಮೇಲೆ ಸಿದ್ದಮ್ಮರನ್ನು ಅಧಿಕಾರಿಗಳು ದಾಖಲೆ ಕೇಳಲು ಶುರುಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ತಹಶೀಲ್ದಾರ್ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡುತ್ತಿದ್ದಾರೆ. ಆದರೆ ಏಕೆ ಹೀಗಾಯ್ತು ಎಂಬುದನ್ನು ಸ್ಥಳೀಯ ಶಾಸಕರಾಗಲೀ, ಸಂಸದರಾಗಲೀ, ಜಿಲ್ಲಾ ಉಸ್ತುವಾರಿ ಸಚಿವರಾಗಲೀ ಸ್ಪಷ್ಟೀಕರಣ ಕೇಳುತ್ತಿಲ್ಲ. ಕಂದಾಯ ಅಧಿಕಾರಿ, ಗ್ರಾಮ ಲೆಕ್ಕಿಗರು ಹಾಗೂ ತಹಶೀಲ್ದಾರ್ ಬೇಜವಾಬ್ದಾರಿತನ ಈ ಪ್ರಕರಣದಲ್ಲಿ ಎದ್ದುಕಾಣುತ್ತಿದೆ. ಮರ ಕಡಿಯುವ ಸಂದರ್ಭದಲ್ಲಿ ದಾಖಲೆಗಳನ್ನು ಕೇಳಬಹುದಿತ್ತು. ಅದನ್ನು ಅಧಿಕಾರಿಗಳು ಮಾಡಿಲ್ಲ. ಮೊದಲೇ ದಾಖಲೆ ಪರಿಶೀಲಿಸಿದ್ದರೆ ಮರಗಳನ್ನು ಉಳಿಸಲು ಸಾಧ್ಯವಿತ್ತು. ಆದರೆ ಸಮಾಧಾನದಿಂದ ಪರಿಶೀಲಿಸುವ ಗೋಜಿಗೂ ಹೋಗಿಲ್ಲ ಅಂದರೆ ಅಧಿಕಾರಿಗಳ ತಪ್ಪು ಎದ್ದುಕಾಣುತ್ತಿದೆ. ಈ ತಪ್ಪಿಗೆ ಶಿಕ್ಷೆಯಾಗುವ ಮೊದಲು ಅವರಿಂದಲೇ ಪರಿಹಾರ ಕೊಡಿಸಬೇಕು. ಆಗ ಈ ಪ್ರಕರಣದ ಹಿಂದೆ ಯಾರು ಇದ್ದಾರೆ ಎಂಬುದು ಬಯಲಿಗೆ ಬರುತ್ತದೆ.


ಇದನ್ನೂ ಓದಿ: ನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ : ಧರಣಿ ಕೂತ ಮಹಿಳೆ, ಗ್ರಾಮಸ್ಥರ ಬೆಂಬಲ


ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿನ್ನೆ ಟ್ವೀಟ್ ಮಾಡಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ. ಅವರದೇ ಪಕ್ಷದ ಮಾಜಿ ಸಚಿವರು ಹಾಲಿ ಶಾಸಕ ಶ್ರೀನಿವಾಸ್ ಆ ಕ್ಷೇತ್ರದವರೇ ಆಗಿದ್ದಾರೆ. ಹಾಗಾಗಿ ಇದು ಕೇವಲ ಕಣ್ಣೊರೆಸುವ ತಂತ್ರವಾಗಬಾರದು. ಪ್ರಾಮಾಣಿಕ ಪ್ರಯತ್ನಗಳು ನಡೆಯಬೇಕು. ಬಿಜೆಪಿ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಹೋದಲ್ಲಿ ಬಂದಲ್ಲಿ ರೈತರ ನೆರವಿಗೆ ಸದಾಸಿದ್ದ ಎಂದು ಹೇಳುತ್ತಿದ್ದಾರೆ. ಆದರೆ ಗುಬ್ಬಿಯ ತಿಪ್ಪೂರು ಘಟನೆಯ ಬಗ್ಗೆ ಒಂದು ಚಕಾರವೂ ಇಲ್ಲ. ಭರವಸೆಗಳು ಬರೀ ಭಾಷಣಕ್ಕೆ ಸೀಮಿತವಾಗಬಾರದು. ಅದು ಅನುಷ್ಠಾನಕ್ಕೆ ಬರಬೇಕು ಅಷ್ಟೇ ಅನ್ನುತ್ತಾರೆ ರೈತರು.

ತೋಟ ಕಳೆದುಕೊಂಡಿರುವ ಸಿದ್ದಮ್ಮ ನಡೆಸುತ್ತಿರುವ ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಯುವ ಕಾಂಗ್ರೆಸ್ ಮುಖಂಡ ಆರ್ ರಾಜೇಂದ್ರ ಭೇಟಿ ನೀಡಿ ಇನ್ನು ಮೂರು ದಿನಗಳಲ್ಲಿ ಸೂಕ್ತ ಪರಿಹಾರ ನೀಡದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ ನೀಡಿ ಬಂದಿದ್ದಾರೆ. ಇಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಸಂತ್ರಸ್ಥೆಯ ನೆರವಿಗೆ ಧಾವಿಸಬೇಕು. ಮೊದಲು ಪರಿಹಾರ ಸಿಗಬೇಕು. ಆನಂತರ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಈ ಘಟನೆಯ ಹಿಂದೆ ಎಂಥಾ ಪ್ರಭಾವಿಯೇ ಇದ್ದ ಶಿಕ್ಷೆಗೆ ಗುರಿಪಡಿಸಬೇಕು. ಸಿದ್ದಮ್ಮ ಅವರಿಗೆ ಸೂಕ್ತ ನ್ಯಾಯ ದೊರೆಯಬೇಕು ಕೇವಲ ಅಧಿಕಾರಿಗಳನ್ನು ವರ್ಗ ಮಾಡುವುದರಿಂದ ನ್ಯಾಯ ದೊರೆಯುವುದಿಲ್ಲ ಎಂಬ ಸತ್ಯ ಹಲವು ಪ್ರಕರಣ ಗಳಲ್ಲಿ ಸ್ಪಷ್ಟವಾಗಿದೆ. ಈಗ ಸಂಸದ ಬಸವರಾಜು, ಸ್ಥಳೀಯ ಶಾಸಕ ಎಸ್.ಆರ್. ಶ್ರೀನಿವಾಸ್ ಪರಿಹಾರ ಕೊಡಿಸಲು ಮುಂದಾಗಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....