Homeಮುಖಪುಟತೆಂಗು-ಅಡಿಕೆ ತೋಟ ಕಳೆದುಕೊಂಡ ಸಿದ್ದಮ್ಮನಿಗೆ ಮೊದಲು ಪರಿಹಾರ ಕೊಡಿ, ನಂತರ ತನಿಖೆ ಮಾಡಿ

ತೆಂಗು-ಅಡಿಕೆ ತೋಟ ಕಳೆದುಕೊಂಡ ಸಿದ್ದಮ್ಮನಿಗೆ ಮೊದಲು ಪರಿಹಾರ ಕೊಡಿ, ನಂತರ ತನಿಖೆ ಮಾಡಿ

ಹೋದಲ್ಲಿ ಬಂದಲ್ಲಿ ರೈತರ ನೆರವಿಗೆ ಸದಾಸಿದ್ದ ಎಂದು ಹೇಳುವ ಯಡಿಯೂರಪ್ಪ ಗುಬ್ಬಿಯ ತಿಪ್ಪೂರು ಘಟನೆಯ ಬಗ್ಗೆ ಒಂದು ಚಕಾರವೂ ಇಲ್ಲ. ಭರವಸೆಗಳು ಬರೀ ಭಾಷಣಕ್ಕೆ ಸೀಮಿತವಾಗಬಾರದು.

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ತಿಪ್ಪೂರು ಗ್ರಾಮದಲ್ಲಿ ಸಿದ್ದಮ್ಮ ಎಂಬುವವರಿಗೆ ಸೇರಿದ ನೂರಾರು ತೆಂಗು, ಅಡಿಕೆ ಗಿಡಗಳನ್ನು ಕತ್ತರಿಸಿದ ಅಧಿಕಾರಿಗಳ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಜೊತೆಗೆ ಮೊದಲು ತೋಟ ಕಳೆದುಕೊಂಡಿರುವ ಸಿದ್ದಮ್ಮ ಅವರಿಗೆ ಪರಿಹಾರ ಕೊಡಿ, ಅನಂತರ ತಪ್ಪಿತಸ್ಥರ ವಿರುದ್ಧ ತನಿಖೆ ಮಾಡಿ ಕಾರಣರಾದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮುಂದಾಗಿ ಎಂಬ ಕೂಗು ಜಿಲ್ಲೆಯಾದ್ಯಂತ ಜೋರಾಗಿ ಕೇಳಿಬಂದಿದೆ.

ಪರಿಹಾರವನ್ನು ತಪ್ಪಿತಸ್ಥ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು. ಏಕೆಂದರೆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ, ತೆಂಗು ಮತ್ತು ಅಡಿಕೆ ಗಿಡ ಗಳನ್ನು ಕಡಿಸಿ ಹಾಕಿಸಿರುವುದು ಅಕ್ಷಮ್ಯ ಅಪರಾಧ. ರೈತರು ಗಿಡಗಳನ್ನು ಕಡಿಯುವಾಗ ನಿಯಮಗಳು ಅಡ್ಡ ಬರುತ್ತವೆ. ಅಧಿಕಾರಿಗಳು ಆ ಕೆಲಸ ಮಾಡಿದಾಗ ನಿಯಮಗಳು ಅಡ್ಡಬರಲಿಲ್ಲವೇ ಎಂಬ ಪ್ರಶ್ನೆ ಜನರಿಂದ ವ್ಯಕ್ತವಾಗಿದೆ.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ಕಾನೂನು ಎಲ್ಲರಿಗೂ ಒಂದೇ ಇರಬೇಕು. ಶ್ರೀಮಂತರಿಗೊಂದು, ಬಡವರಿಗೊಂದು ನ್ಯಾಯ ಇರಬಾರದು. ರೈತರು ಮರಗಳನ್ನು ಕಡಿದರೆ ಅಧಿಕಾರಿಗಳು ಇನ್ನಿಲ್ಲದ ಕಿರುಕುಳ ನೀಡುತ್ತಾರೆ. ಆಗ ಯಾವುದ್ಯಾವುದೋ ನಿಯಮಗಳು ನುಸುಳುತ್ತವೆ. ಅದೇ ಅಧಿಕಾರಿಗಳು ಮುಂದೆ ನಿಂತು ಗಿಡಗಳನ್ನು ಕಡಿಯುವಾಗ ತೋಟಗಾರಿಕೆ ಇಲಾಖೆಯ ನಿಯಮಗಳು ಅಡ್ಡಿಬರಲಿಲ್ಲವೇ? ಈಗ ಕಡಿದು ಹಾಕಿರುವ ಮರಗಳು ಮಧ್ಯವಯಸ್ಕ ಮರಗಳು. ತೋಟಗಾರಿಕೆ ಇಲಾಖೆ ಪಂಚನಾಮೆ ಮಾಡಬೇಕು. ಯಾವ ಪ್ರಭಾವಿಯ ಒತ್ತಡಕ್ಕೂ ಒಳಗಾಗಬಾರದು. 150 ಅಡಿಕೆ ಗಿಡಗಳು ಮತ್ತು 50 ತೆಂಗಿನ ಮರಗಳಿಗೆ ಭೂಪರಿಹಾರ ಕಾಯ್ದೆ ರೀತಿ ಲೆಕ್ಕಾಚಾರ ಹಾಕಿ ನಷ್ಟಪರಿಹಾರದ ಹಲವುಪಟ್ಟು ಪರಿಹಾರ ನೀಡಬೇಕು. ಈ ಪರಿಹಾರವನ್ನು ತಪ್ಪಿತಸ್ಥ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು ಎನ್ನುತ್ತಾರೆ ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಬಿ.ಉಮೇಶ್.

ಸಿದ್ದಮ್ಮ ಅಡಿಕೆ ಮತ್ತು ತೆಂಗಿನ ಗಿಡಗಳನ್ನು ಮಕ್ಕಳು ಬೆಳೆಸಿದಂತೆ ಬೆಳೆಸಿದ್ದರು. ಭೋಗವಾಗಿ ಬೆಳೆದಿದ್ದವು. ಜೀವತೇದು ಬೆಳೆಸಿದ ಮರಗಳನ್ನು ಕತ್ತರಿಸಿ ಹಾಕಿದರೆ ಎಂಥವರಿಗೂ ಹೊಟ್ಟೆ ಉರಿದುಹೋಗುತ್ತದೆ. ಅವು ಸಿದ್ದಮ್ಮನ ಜೀವನಾಧಾರವಾಗಿದ್ದವು. 50 ತೆಂಗಿನ ಮರಗಳು 150 ವರ್ಷ ಫಲ ಕೊಡುತ್ತವೆ. ವರ್ಷಕ್ಕೆ ಒಂದು ಮರ 250 ಕಾಯಿ ಕೊಡುತ್ತದೆಂದು ಲೆಕ್ಕಹಾಕಿದರೂ 50 ಮರಕ್ಕೆ 12,500 ಕಾಯಿ ಆಗುತ್ತದೆ. ಕಾಯಿಗೆ 20 ರೂನಂತೆ ಲೆಕ್ಕಹಾಕಿದರೂ ವರ್ಷಕ್ಕೆ 2 ಲಕ್ಷ 50 ಸಾವಿರ ಆದಾಯ ಬರುತ್ತದೆ. ಹಾಗಾಗಿ ಮುಂದಿನ 50 ವರ್ಷಗಳಿಗೆ ಅಡಿಕೆ ಮತ್ತು ತೆಂಗಿನ ಜೀವಿತಾವಧಿ ಎಂದು ಭಾವಿಸಿದರೂ 12 ಕೋಟಿ ಪರಿಹಾರ ನೀಡಬೇಕು. ಅವುಗಳನ್ನು ಶ್ರಮಪಟ್ಟು ಬೆಳೆಸಿಲ್ಲವೇ? ಹಾರೈಕೆ ಮಾಡಿಲ್ಲವೇ? ಎಂದು ರೈತರು ಪ್ರಶ್ನಿಸುತ್ತಾರೆ.

ಮರಗಳನ್ನು ಕಡಿದು ಹಾಕಿದ ಮೇಲೆ ಸಿದ್ದಮ್ಮರನ್ನು ಅಧಿಕಾರಿಗಳು ದಾಖಲೆ ಕೇಳಲು ಶುರುಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ತಹಶೀಲ್ದಾರ್ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡುತ್ತಿದ್ದಾರೆ. ಆದರೆ ಏಕೆ ಹೀಗಾಯ್ತು ಎಂಬುದನ್ನು ಸ್ಥಳೀಯ ಶಾಸಕರಾಗಲೀ, ಸಂಸದರಾಗಲೀ, ಜಿಲ್ಲಾ ಉಸ್ತುವಾರಿ ಸಚಿವರಾಗಲೀ ಸ್ಪಷ್ಟೀಕರಣ ಕೇಳುತ್ತಿಲ್ಲ. ಕಂದಾಯ ಅಧಿಕಾರಿ, ಗ್ರಾಮ ಲೆಕ್ಕಿಗರು ಹಾಗೂ ತಹಶೀಲ್ದಾರ್ ಬೇಜವಾಬ್ದಾರಿತನ ಈ ಪ್ರಕರಣದಲ್ಲಿ ಎದ್ದುಕಾಣುತ್ತಿದೆ. ಮರ ಕಡಿಯುವ ಸಂದರ್ಭದಲ್ಲಿ ದಾಖಲೆಗಳನ್ನು ಕೇಳಬಹುದಿತ್ತು. ಅದನ್ನು ಅಧಿಕಾರಿಗಳು ಮಾಡಿಲ್ಲ. ಮೊದಲೇ ದಾಖಲೆ ಪರಿಶೀಲಿಸಿದ್ದರೆ ಮರಗಳನ್ನು ಉಳಿಸಲು ಸಾಧ್ಯವಿತ್ತು. ಆದರೆ ಸಮಾಧಾನದಿಂದ ಪರಿಶೀಲಿಸುವ ಗೋಜಿಗೂ ಹೋಗಿಲ್ಲ ಅಂದರೆ ಅಧಿಕಾರಿಗಳ ತಪ್ಪು ಎದ್ದುಕಾಣುತ್ತಿದೆ. ಈ ತಪ್ಪಿಗೆ ಶಿಕ್ಷೆಯಾಗುವ ಮೊದಲು ಅವರಿಂದಲೇ ಪರಿಹಾರ ಕೊಡಿಸಬೇಕು. ಆಗ ಈ ಪ್ರಕರಣದ ಹಿಂದೆ ಯಾರು ಇದ್ದಾರೆ ಎಂಬುದು ಬಯಲಿಗೆ ಬರುತ್ತದೆ.


ಇದನ್ನೂ ಓದಿ: ನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ : ಧರಣಿ ಕೂತ ಮಹಿಳೆ, ಗ್ರಾಮಸ್ಥರ ಬೆಂಬಲ


ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿನ್ನೆ ಟ್ವೀಟ್ ಮಾಡಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ. ಅವರದೇ ಪಕ್ಷದ ಮಾಜಿ ಸಚಿವರು ಹಾಲಿ ಶಾಸಕ ಶ್ರೀನಿವಾಸ್ ಆ ಕ್ಷೇತ್ರದವರೇ ಆಗಿದ್ದಾರೆ. ಹಾಗಾಗಿ ಇದು ಕೇವಲ ಕಣ್ಣೊರೆಸುವ ತಂತ್ರವಾಗಬಾರದು. ಪ್ರಾಮಾಣಿಕ ಪ್ರಯತ್ನಗಳು ನಡೆಯಬೇಕು. ಬಿಜೆಪಿ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಹೋದಲ್ಲಿ ಬಂದಲ್ಲಿ ರೈತರ ನೆರವಿಗೆ ಸದಾಸಿದ್ದ ಎಂದು ಹೇಳುತ್ತಿದ್ದಾರೆ. ಆದರೆ ಗುಬ್ಬಿಯ ತಿಪ್ಪೂರು ಘಟನೆಯ ಬಗ್ಗೆ ಒಂದು ಚಕಾರವೂ ಇಲ್ಲ. ಭರವಸೆಗಳು ಬರೀ ಭಾಷಣಕ್ಕೆ ಸೀಮಿತವಾಗಬಾರದು. ಅದು ಅನುಷ್ಠಾನಕ್ಕೆ ಬರಬೇಕು ಅಷ್ಟೇ ಅನ್ನುತ್ತಾರೆ ರೈತರು.

ತೋಟ ಕಳೆದುಕೊಂಡಿರುವ ಸಿದ್ದಮ್ಮ ನಡೆಸುತ್ತಿರುವ ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಯುವ ಕಾಂಗ್ರೆಸ್ ಮುಖಂಡ ಆರ್ ರಾಜೇಂದ್ರ ಭೇಟಿ ನೀಡಿ ಇನ್ನು ಮೂರು ದಿನಗಳಲ್ಲಿ ಸೂಕ್ತ ಪರಿಹಾರ ನೀಡದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ ನೀಡಿ ಬಂದಿದ್ದಾರೆ. ಇಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಸಂತ್ರಸ್ಥೆಯ ನೆರವಿಗೆ ಧಾವಿಸಬೇಕು. ಮೊದಲು ಪರಿಹಾರ ಸಿಗಬೇಕು. ಆನಂತರ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಈ ಘಟನೆಯ ಹಿಂದೆ ಎಂಥಾ ಪ್ರಭಾವಿಯೇ ಇದ್ದ ಶಿಕ್ಷೆಗೆ ಗುರಿಪಡಿಸಬೇಕು. ಸಿದ್ದಮ್ಮ ಅವರಿಗೆ ಸೂಕ್ತ ನ್ಯಾಯ ದೊರೆಯಬೇಕು ಕೇವಲ ಅಧಿಕಾರಿಗಳನ್ನು ವರ್ಗ ಮಾಡುವುದರಿಂದ ನ್ಯಾಯ ದೊರೆಯುವುದಿಲ್ಲ ಎಂಬ ಸತ್ಯ ಹಲವು ಪ್ರಕರಣ ಗಳಲ್ಲಿ ಸ್ಪಷ್ಟವಾಗಿದೆ. ಈಗ ಸಂಸದ ಬಸವರಾಜು, ಸ್ಥಳೀಯ ಶಾಸಕ ಎಸ್.ಆರ್. ಶ್ರೀನಿವಾಸ್ ಪರಿಹಾರ ಕೊಡಿಸಲು ಮುಂದಾಗಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...